ಚಂಡೀಗಢ: ಪಾಕ್ ಉಗ್ರರ ದಾಳಿಯ ವಿರುದ್ಧ ಭಾರತದ ಸೇನೆ ನಡೆಸಿದ Operation Sindoora ಪ್ರತಿ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನ ಸೇನೆ ದಾಳಿ ಮಾಡುವ ಮುನ್ಸೂಚನೆ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ವಾಯು ಸೇನೆಯ ಸೂಚನೆಯಂತೆ ಏರ್ ಸೈರನ್ ಮೊಳಗಿಸಲಾಗಿದೆ.
ಜನರು ರಸ್ತೆಗಳಲ್ಲಿ ಓಡಾಡದಂತೆ, ಬಾಲ್ಕನಿಗಳಲ್ಲೂ ಕಾಣಿಸಿಕೊಳ್ಳದಂತೆ ಸೂಚಿಸಲಾಗಿದೆ.
ಕಳೆದ ರಾತ್ರಿ (ಗುರುವಾರ) ಪಾಕಿಸ್ತಾನ ಜಮ್ಮು, ಪಂಜಾಬ್, ಕಛ್, ಚಂಡೀಗಢದ ಹಲವು ಪ್ರದೇಶಗಳನ್ನು ಗುರಿಯಾಗಿಸಿ ಡೋನ್, ಕ್ಷಿಪಣಿ ದಾಳಿ ನಡೆಸಿತ್ತು.
ಈ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತೀಯ ಸೇನೆ ಪಾಕಿಸ್ತಾನದ ಕ್ಷಿಪಣಿ, ಡೋನ್ಗಳನ್ನು ಹೊಡೆದುರುಳಿಸಿದೆ.
ಪಂಜಾಬ್ ಮತ್ತು ಹರಿಯಾಣದ ರಾಜಧಾನಿ ಚಂಡೀಗಢದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಗಡಿ ಪ್ರದೇಶದಲ್ಲಿರುವ ಮೊಹಾಲಿಯಲ್ಲೂ ಜನತೆಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ.