Tiranga Yatra held in Bengaluru to show support for the Indian Army

ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬೆಂಗಳೂರಲ್ಲಿ ನಡೆದ ತಿರಂಗಾ ಯಾತ್ರೆ.. ಸಾರ್ವಜನಿಕರಿಂದ ಭಾರಿ ಬೆಂಬಲ

ಬೆಂಗಳೂರು: ಪಹಲ್ಗಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸುತ್ತಿರುವ ಆಪರೇಷನ್ ಸಿಂಧೂರ (Operation Sindoora) ಕಾರ್ಯಾಚರಣೆಗೆ ಬೆಂಬಲ ಸೂಚಿಸಲು ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ನಡೆಸಿದ “ಜೈ ಹಿಂದ್ ತಿರಂಗಾ ಯಾತ್ರೆ”ಗೆ ಸಾರ್ವಜನಿಕರಿಂದ ಭಾರಿ ಬೆಂಬಲ ವ್ಯಕ್ತವಾಯಿತು.

ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ತಿರಂಗಾ ಯಾತ್ರೆ ನಡೆಸಲಾಯಿತು.

ಇದು ಪಕ್ಷಾತೀತ ಯಾತ್ರೆಯಾಗಿದ್ದರಿಂದ ಸರಕಾರಿ, ಖಾಸಗಿ ಉದ್ದಿಮೆಗಳ ನೌಕರರು, ಸಂಘ ಸಂಸ್ಥೆಗಳು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿತ್ತು.

ಈ ಯಾತ್ರೆಯಲ್ಲಿ ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸೇರಿದಂತೆ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿ, ತ್ರಿವರ್ಣ ಧ್ವಜ ಹಿಡಿದು ಭಾರತ ಹಾಗೂ ಸೈನಿಕರ ಪರ ಘೋಷಣೆಗಳನ್ನು ಕೂಗಿದರು.

ಆ ಮೂಲಕ ದೇಶದ ಭದ್ರತೆ ವಿಚಾರದಲ್ಲಿ ಎಲ್ಲರೂ ಒಟ್ಟಾಗಿ ನಿಲ್ಲುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನಾ ಪಡೆಗಳಿಗೆ ಸಂಪೂರ್ಣ ಬೆಂಬಲ ಸೂಚಿಸುತ್ತೇವೆ ಎಂಬ ಸಂದೇಶ ರವಾನಿಸಲಾಯಿತು.

ಭಾರತ ಬಲಿಷ್ಠವಾಗಿದೆ, ಪಾಕಿಸ್ತಾನವನ್ನು ಮಟ್ಟಹಾಕಲಿದೆ: ಡಿಸಿಎಂ ಡಿ.ಕೆ ಶಿವಕುಮಾರ್

“ಭಾರತ ಬಲಿಷ್ಠವಾಗಿದೆ, ಪಾಕಿಸ್ತಾನದ ದಾಳಿಯನ್ನು ಸಮರ್ಥವಾಗಿ ಎದುರಿಸಿ, ಮಟ್ಟಹಾಕಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ಕೆ.ಆರ್ ವೃತ್ತದಿಂದ ಮಿನ್ಸ್ಕ್ ಸ್ಕ್ವೇರ್ ವೃತ್ತದವರೆಗೂ ಶುಕ್ರವಾರ ನಡೆದ ಜೈ ಹಿಂದ್ ತಿರಂಗಾ ಯಾತ್ರೆ ವೇಳೆ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ನಿನ್ನೆ ರಾತ್ರಿ ಪಾಕಿಸ್ತಾನ ಜಮ್ಮು ಕಾಶ್ಮೀರದ ಮೇಲೆ ದಾಳಿ ಮಾಡಿರುವ ಬಗ್ಗೆ ಕೇಳಿದಾಗ, “ದೇಶ ಇದನ್ನು ಸಮರ್ಥವಾಗಿ ಎದುರಿಸಲಿದೆ. ಇಂದಿರಾ ಗಾಂಧಿ ಅವರ ಕಾಲದಲ್ಲಿ ಹೇಗೆ ಪಾಕಿಸ್ತಾನವನ್ನು ಬಗ್ಗುಬಡಿಯಲಾಗಿತ್ತೋ, ಅದೇ ರೀತಿ ಈ ಬಾರಿಯೂ ಭಾರತ ಈ ಪರಿಸ್ಥಿತಿಯನ್ನು ಎದುರಿಸಿ ಗೆಲ್ಲಲಿದೆ” ಎಂದು ತಿಳಿಸಿದರು.

ತಿರಂಗಾ ಯಾತ್ರೆ ಬಗ್ಗೆ ಕೇಳಿದಾಗ, “ಕರ್ನಾಟಕದಲ್ಲಿ ಜೈ ಹಿಂದ್ ತಿರಂಗ ಯಾತ್ರೆ ಆಯೋಜಿಸಲಾಗಿತ್ತು. ನಮ್ಮ ಸೇನೆಯ ಯೋಧರು ದೇಶ ರಕ್ಷಣೆಗೆ ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ತೀರ್ಮಾನವನ್ನು ಎಲ್ಲರೂ ಒಟ್ಟಾಗಿ ಬೆಂಬಲಿಸಬೇಕು. ಹೀಗಾಗಿ ಈ ಯಾತ್ರೆ ನಡೆಸಲಾಗಿದೆ. ಇದಕ್ಕೆ ಸಮಾಜದ ಎಲ್ಲಾ ವರ್ಗದವರನ್ನು ಆಹ್ವಾನಿಸಲಾಗಿತ್ತು. ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಂಘಸಂಸ್ಥೆಗಳು ಸೇರಿದಂತೆ ಎಲ್ಲರಿಗೂ ಆಹ್ವಾನಿಸಲಾಗಿತ್ತು. ಈ ಯಾತ್ರೆಗೆ ಕರೆ ಕೊಟ್ಟ ಅಲ್ಪಾವಧಿಯಲ್ಲಿ ಎಲ್ಲಾ ವರ್ಗದ ಜನರು ಭಾರಿ ಪ್ರಮಾಣದಲ್ಲಿ ಆಗಮಿಸಿರುವುದಕ್ಕೆ ಧನ್ಯವಾದಗಳು” ಎಂದು ತಿಳಿಸಿದರು.

ಭಯೋತ್ಪಾದನೆಗೆ ಇತಿಶ್ರೀ ಹಾಡಲು ಇದು ಸೂಕ್ತ ಸಮಯವೇ ಎಂದು ಕೇಳಿದಾಗ, “ನಮ್ಮ ಸೇನೆಯವರು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುತ್ತಿದ್ದಾರೆ. ಅವರ ಕಾರ್ಯವೈಖರಿ ಬಗ್ಗೆ ಬಹಳ ಹೆಮ್ಮೆ ಇದೆ. ಸೈನಿಕರು ನಮ್ಮ ಬಾವುಟವನ್ನು ಉತ್ತುಂಗದಲ್ಲಿ ಹಾರುವಂತೆ ಮಾಡಿದ್ದಾರೆ. ಅವರಿಗೆ ನಾವೆಲ್ಲರೂ ಒಟ್ಟಾಗಿ ಬೆಂಬಲ ಸೂಚಿಸಬೇಕು. ಭಯೋತ್ಪಾದನೆ ನಿರ್ಮೂಲನೆಯಾಗಬೇಕು” ಎಂದರು.

ಸೇನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಪ್ರವೇಶ ಮಾಡಬೇಕೆ ಎಂದು ಕೇಳಿದಾಗ, “ಈ ವಿಚಾರವಾಗಿ ನಾನು ಈಗ ಚರ್ಚೆ ಮಾಡುವುದಿಲ್ಲ. ಕೇಂದ್ರ ಸರ್ಕಾರ ಹಾಗೂ ಸೇನೆ ಈ ವಿಚಾರವಾಗಿ ತೀರ್ಮಾನ ಕೈಗೊಳ್ಳಲಿದೆ” ಎಂದು ತಿಳಿಸಿದರು.

ರಾಜಕೀಯ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು ನೀಡಿದ್ದೇವೆ: ಆರ್‌.ಅಶೋಕ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು

ಕಾಂಗ್ರೆಸ್‌ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

[ccc_my_favorite_select_button post_id="107616"]
ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ ಆಕ್ಷೇಪ

ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ

ರಾಜ್ಯ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಮೋಜು ಮಾಡುತ್ತಿದೆ: ಬಿ.ವೈ.ವಿಜಯೇಂದ್ರ (BY Vijayendra)

[ccc_my_favorite_select_button post_id="107498"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ಹರಡಲು, ದುರುದ್ದೇಶಪೂರಿತ ಕ್ರಿಮಿನಲ್ ಪಿತೂರಿಯ ಆರೋದಡಿಯಲ್ಲಿ ಪತ್ರಕರ್ತ ಅರ್ನಾಬ್ (Arnab Goswami) ಗೋಸ್ವಾಮಿ ವಿರುದ್ಧ

[ccc_my_favorite_select_button post_id="107623"]
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಇಂದು (ಮೇ.21) ಬೆಳ್ಳಂಬೆಳಗ್ಗೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ (Accident) ಜವರಾಯ ಅಟ್ಟಹಾಸ ಮೆರೆದಿದ್ದಾನೆ.

[ccc_my_favorite_select_button post_id="107558"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!