ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ ಹುತಾತ್ಮರಾದ ಆಂಧ್ರ ಪ್ರದೇಶದ ಸೈನಿಕ ಮುರಳಿ ನಾಯಕ್ (Murali Nayak) ಅವರ ಪಾರ್ಥಿವ ಶರೀರ ಹುಟ್ಟೂರಾದ ಕಲ್ಲಿತಾಂಡಾಕ್ಕೆ ತೆರಳಿದೆ.
ದೆಹಲಿಯಿಂದ ಇಂಡಿಗೋ ವಿಮಾನದ ಮೂಲಕ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯೋಧನ ಪಾರ್ಥಿವ ಶರೀರ ತರಲಾಯಿತು.
ಏರ್ಪೋರ್ಟ್ನಲ್ಲಿ ಯೋಧರು ಅಂತಿಮ ನಮನ ಸಲ್ಲಿಸಿದ ಬಳಿಕ ರಸ್ತೆ ಮೂಲಕ ಸೇನಾ ವಾಹನದಲ್ಲಿ ಪಾರ್ಥಿವ ಶರೀರ ಕೊಂಡೋಯ್ಯಲಾಯಿತು.
ವೀರ ಸೈನಿಕನ ಪಾರ್ಥಿವ ಶರೀರ ಸಾಗುವ ಮಾರ್ಗದುದ್ದಕ್ಕೂ ಸಾರ್ವಜನಿಕರು ವೀರ ಯೋಧನ ಬಲಿದಾನಕ್ಕೆ ಜಯಘೋಷ ಕೂಗಿ ನಮನ ಸಲ್ಲಿಸಿದರು.
ಶ್ರೀಸತ್ಯಸಾಯಿ ಜಿಲ್ಲೆಯ ಸತ್ಯಸಾಯಿ ಜಿಲ್ಲೆಯ ಪೆನುಕೊಂಡದ ಕಲ್ಲಿಕೊಂಡ್ಲ ಗ್ರಾಮದ ಶ್ರೀರಾಮುಲು ನಾಯಕ್, ಪಾಕಿಸ್ತಾನ ಸೇನೆಯ ಅನಿಯಂತ್ರಿತ ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಆಂಧ್ರ ಪ್ರದೇಶಕ್ಕೆ ಸೇರಿದ ಕಲ್ಲಿಕೊಂಡ್ಲ ಗ್ರಾಮದ ಶ್ರೀರಾಮುಲು ನಾಯಕ್ ಹಾಗೂ ಜ್ಯೋತಿಬಾಯಿರವರ ಏಕೈಕ ಪುತ್ರ ಯೋಧ ಮುರಳಿ ನಾಯಕ್ ವೀರ ಮರಣ ಹೊಂದಿದ್ದಾರೆ.
ಮುರಳಿ ನಾಯಕ್ ಹುಟ್ಟೂರು ಕಲ್ಲಿತಾಂಡಾ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.