Tension at the border: Strict action against those spreading fake news

ಗಡಿಯಲ್ಲಿ ಉದ್ವಿಗ್ನತೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ, ಮಾಧ್ಯಮಗಳಿಗೂ ಸಲಹೆ

ಬೆಂಗಳೂರು: ಭಾರತ-ಪಾಕಿಸ್ತಾನ ಗಡಿ ಯಲ್ಲಿ ಉದ್ವಿಗ್ನ ವಾತಾವರಣ ತೀವ್ರ ಗೊಂಡಿದ್ದು, ಪೆಹಲಾಮ್‌ನಲ್ಲಿ ಉಗ್ರರ ದಾಳಿಗೆ ಭಾರತೀಯ ಸೇನೆಯಿಂದ ಆಪರೇಷನ್ ಸಿಂದೂರ (Operation Sindoor) ಮೂಲಕ ತಕ್ಕ ಉತ್ತರ ನೀಡಲಾಗಿದೆ.

ಈ ಬೆಳವಣಿಗೆಯಿಂದ ಎರಡು ದೇಶಗಳ ನಡುವೆ ಯುದ್ದದ ಭೀತಿ ಎದುರಾಗಿದೆ. ಈ ಸಂದರ್ಭದಲ್ಲಿ ಕರ್ನಾಟ ಕದಲ್ಲೂ ರಾಜ್ಯ ಪೊಲೀಸ್ ಇಲಾಖೆ ಎಚ್ಚರಿಕೆಯಿಂದ ಕಾರ್ಯನಿರ್ವ ಹಿಸುತ್ತಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಕಟ್ಟುನಿಟ್ಟಿನ ಭದ್ರತಾ ಕ್ರಮಗಳು: ನಗರದ ಮಾಸಿಕ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಆಯುಕ್ತ ದಯಾನಂದ್, ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು.

ಗಡಿಯಲ್ಲಿ ಅಗತ್ಯ ಸಾಮಗ್ರಿಗಳ ಶೇಖರಣೆ ನಡೆಯುತ್ತಿದೆ ಎಂಬ ವರದಿಗಳು ಬಂದಿವೆ. ಈ ಕಾರಣಕ್ಕೆ ಎಲ್ಲೆಡೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜನರಲ್ಲಿ ಆತಂಕ ಮೂಡ ದಂತೆ ಪೊಲೀಸರು ಸಾರ್ವ ಜನಿಕರಿಗೆ ಸರಿಯಾದ ಮಾಹಿತಿ ನೀಡಬೇಕು ಮತ್ತು ಸುಳ್ಳು ಸುದ್ದಿ ಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಸಿಬ್ಬಂದಿಗೆ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸುವಂತೆ ಸೂಚಿಸ ಲಾಗಿದ್ದು, ಬೆಂಗಳೂರಿನಲ್ಲಿ ಡಿಸಿಪಿಗಳು ಮತ್ತು ಎಸಿಪಿಗಳು ನಿಗಾ ವಹಿಸಬೇಕು.

ಕೇಂದ್ರ ಮತ್ತು ರಾಜ್ಯ ಸರಕಾರದ ಸೂಚನೆ ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜನರಿಗೆ ಮಾಕ್ ಡ್ರಿಲ್ ಬಗ್ಗೆ ಅರಿವು ಮೂಡಿಸುವ ಕೆಲಸವನ್ನೂ ಪೊಲೀಸರು ಮಾಡಬೇಕು ಎಂದು ದಯಾನಂದ್‌ ತಿಳಿಸಿದರು.

ಮಾಧ್ಯಮಗಳಿಗೂ ಸಲಹೆ

ಇನ್ನೂ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ಭವಿಸಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಸಾಮಾಜಿಕ ಜಾಲತಾಣಗಳು ಮತ್ತು ಇತರ ಮಾಧ್ಯಮಗಳ ಮೂಲಕ ನಕಲಿ ಸುದ್ದಿ ಹಾಗೂ ತಪ್ಪು ಮಾಹಿತಿಗಳ ಪ್ರಸರಣದ ಸಾಧ್ಯತೆಯು ಹೆಚ್ಚಾಗಿರುತ್ತದೆ.

ಇಂತಹ ಮಾಹಿತಿಗಳು ಸಾರ್ವಜನಿಕರಲ್ಲಿ ವಿನಾ ಕಾರಣ ಆತಂಕ ಮಾಡಬಹುದು ಮತ್ತು ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಶಾಂತಿಗೆ ಗಂಭೀರ ಹಾನಿ ಮಾಡಬಹುದು.

ಎಲ್ಲಾ ಮಾಧ್ಯಮ ಸಂಸ್ಥೆಗಳು, ಪತ್ರಕರ್ತರು, ಸಂಪಾದಕರು ಮತ್ತು ವಿಷಯ ಸೃಷ್ಟಿಕರ್ತರು ಪರಿಶೀಲನೆ ಇಲ್ಲದ ವರದಿಗಳು, ಚಿತ್ರಗಳು ಅಥವಾ ವಿಡಿಯೋಗಳನ್ನು ಬಳಸಿ ವರದಿ ಮಾಡುವಾಗ ಅತ್ಯಂತ ಜವಾಬ್ದಾರಿಯುತ ಮತ್ತು ಎಚ್ಚರಿಕೆಯಿಂದ ಕೆಳಕಂಡ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಹೇಳಿದ್ದಾರೆ.

1) ಸಂಪೂರ್ಣವಾಗಿ ಪರಿಶೀಲಿಸಿ: ಯಾವುದೇ ಮಾಹಿತಿ ನಂಬಲಾರ್ಹವಲ್ಲದ ಮೂಲಗಳಿಂದ ಮಾಹಿತಿ ಬಂದಿದ್ದರೆ ಅಥವಾ ದೃಢಪಡಿಸದಿದ್ದರೆ ಅದನ್ನು ಪ್ರಕಟಿಸಬೇಡಿ.

2) ನಂಬಲಾರ್ಹ ತತ್ವಪಾಲನಾ ಸಾಧನಗಳನ್ನು ಉಪಯೋಗಿಸಿ: (Official Fact Check Tools): PIB ಪ್ಯಾಕ್ಟ್ ಚೆಕ್ , Alt News, BOOM, Factly, Snopes & AFP Fact Check ಮುಂತಾದ ಅಧಿಕೃತ ತಾಣಗಳನ್ನು ಪರಿಶೀಲನೆಗಾಗಿ ಉಪಯೋಗಿಸಿ. ಮಾಹಿತಿಗಳ ನೈಜತೆಯನ್ನು ಖಚಿತ ಪಡಿಸಿಕೊಳ್ಳಿ.

3) ಸಂವೇದನಾಶೀಲ ಮತ್ತು ಉಪ್ಪೇಕ್ಷಣೀಯ ಅಥವಾ ಭಯ ಹುಟ್ಟಿಸುವ ಶೈಲಿ ತಪ್ಪಿಸಿ: ಪೋಸ್ಟ್ ಅಥವಾ ವರದಿಗಳನ್ನು ನಯಗೊಳಿಸಿ ಅಥವಾ ಉತ್ಕೃಷ್ಟಗೊಳಿಸಿ, ಭಯ ಉಂಟು ಮಾಡಬೇಡಿ.

4) ತಪ್ಪು ಮಾಹಿತಿ ನೀಡಿದ್ದರೆ ತಕ್ಷಣ ಸರಿಪಡಿಸಿ: ಅಜಾಗರೂಕತೆಯಿಂದ ತಪ್ಪು ಮಾಹಿತಿ ಹಂಚಲಾಗಿದ್ದರೆ, ಕೂಡಲೇ ತಪ್ಪು ಸರಿಪಡಿಸಿ ಮತ್ತು ತಪ್ಪಿನ ಬಗ್ಗೆ ಸ್ಪಷ್ಟನೆ ನೀಡಲು ಕ್ರಮ ಕೈಗೊಳ್ಳಿ.

5) ಕಾನೂನು ಹಾಗೂ ನೈತಿಕ ಮೌಲ್ಯಗಳನ್ನು ಪಾಲಿಸಿ: ಸಮುದಾಯ ಅಥವಾ ಅಂತಾರಾಷ್ಟ್ರೀಯ ವಿಷಯಗಳ ವರದಿಯಲ್ಲಿ ಪತ್ರಿಕೋದ್ಯಮದ ಮೌಲ್ಯ, ನೈತಿಕತೆ ಮತ್ತು ನಿಷ್ಪಕ್ಷಪಾತ ಮಾರ್ಗವನ್ನು ಕಾಯ್ದುಕೊಳ್ಳಿ.

ಈ ಸಂದರ್ಭದಲ್ಲಿ ಮಾಧ್ಯಮಗಳು ನಂಬಿಕೆಗೆ ಮತ್ತು ಜವಾಬ್ದಾರಿಗೆ ನಿಲುಕುವ ಆಧಾರಸ್ಥಂಬಗಳಾಗಬೇಕು. ದೃಢಪಡಿಸದ ಮಾಹಿತಿಗಳು ರಾಷ್ಟ್ರದ ಶಾಂತಿ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವಂತಾಗದಂತೆ ನಾವು ಎಚ್ಚರಿಕೆಯಿಂದ ವರ್ತಿಸುವಂತೆ ಮನವಿ ಮಾಡಿದ್ದಾರೆ.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]