ಗಡಿಯಲ್ಲಿ ಉದ್ವಿಗ್ನತೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ, ಮಾಧ್ಯಮಗಳಿಗೂ ಸಲಹೆ

Tension at the border: Strict action against those spreading fake news

ಬೆಂಗಳೂರು: ಭಾರತ-ಪಾಕಿಸ್ತಾನ ಗಡಿ ಯಲ್ಲಿ ಉದ್ವಿಗ್ನ ವಾತಾವರಣ ತೀವ್ರ ಗೊಂಡಿದ್ದು, ಪೆಹಲಾಮ್‌ನಲ್ಲಿ ಉಗ್ರರ ದಾಳಿಗೆ ಭಾರತೀಯ ಸೇನೆಯಿಂದ ಆಪರೇಷನ್ ಸಿಂದೂರ (Operation Sindoor) ಮೂಲಕ ತಕ್ಕ ಉತ್ತರ ನೀಡಲಾಗಿದೆ.

ಈ ಬೆಳವಣಿಗೆಯಿಂದ ಎರಡು ದೇಶಗಳ ನಡುವೆ ಯುದ್ದದ ಭೀತಿ ಎದುರಾಗಿದೆ. ಈ ಸಂದರ್ಭದಲ್ಲಿ ಕರ್ನಾಟ ಕದಲ್ಲೂ ರಾಜ್ಯ ಪೊಲೀಸ್ ಇಲಾಖೆ ಎಚ್ಚರಿಕೆಯಿಂದ ಕಾರ್ಯನಿರ್ವ ಹಿಸುತ್ತಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಕಟ್ಟುನಿಟ್ಟಿನ ಭದ್ರತಾ ಕ್ರಮಗಳು: ನಗರದ ಮಾಸಿಕ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಆಯುಕ್ತ ದಯಾನಂದ್, ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು.

ಗಡಿಯಲ್ಲಿ ಅಗತ್ಯ ಸಾಮಗ್ರಿಗಳ ಶೇಖರಣೆ ನಡೆಯುತ್ತಿದೆ ಎಂಬ ವರದಿಗಳು ಬಂದಿವೆ. ಈ ಕಾರಣಕ್ಕೆ ಎಲ್ಲೆಡೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜನರಲ್ಲಿ ಆತಂಕ ಮೂಡ ದಂತೆ ಪೊಲೀಸರು ಸಾರ್ವ ಜನಿಕರಿಗೆ ಸರಿಯಾದ ಮಾಹಿತಿ ನೀಡಬೇಕು ಮತ್ತು ಸುಳ್ಳು ಸುದ್ದಿ ಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಸಿಬ್ಬಂದಿಗೆ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸುವಂತೆ ಸೂಚಿಸ ಲಾಗಿದ್ದು, ಬೆಂಗಳೂರಿನಲ್ಲಿ ಡಿಸಿಪಿಗಳು ಮತ್ತು ಎಸಿಪಿಗಳು ನಿಗಾ ವಹಿಸಬೇಕು.

ಕೇಂದ್ರ ಮತ್ತು ರಾಜ್ಯ ಸರಕಾರದ ಸೂಚನೆ ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜನರಿಗೆ ಮಾಕ್ ಡ್ರಿಲ್ ಬಗ್ಗೆ ಅರಿವು ಮೂಡಿಸುವ ಕೆಲಸವನ್ನೂ ಪೊಲೀಸರು ಮಾಡಬೇಕು ಎಂದು ದಯಾನಂದ್‌ ತಿಳಿಸಿದರು.

ಮಾಧ್ಯಮಗಳಿಗೂ ಸಲಹೆ

ಇನ್ನೂ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ಭವಿಸಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಸಾಮಾಜಿಕ ಜಾಲತಾಣಗಳು ಮತ್ತು ಇತರ ಮಾಧ್ಯಮಗಳ ಮೂಲಕ ನಕಲಿ ಸುದ್ದಿ ಹಾಗೂ ತಪ್ಪು ಮಾಹಿತಿಗಳ ಪ್ರಸರಣದ ಸಾಧ್ಯತೆಯು ಹೆಚ್ಚಾಗಿರುತ್ತದೆ.

ಇಂತಹ ಮಾಹಿತಿಗಳು ಸಾರ್ವಜನಿಕರಲ್ಲಿ ವಿನಾ ಕಾರಣ ಆತಂಕ ಮಾಡಬಹುದು ಮತ್ತು ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಶಾಂತಿಗೆ ಗಂಭೀರ ಹಾನಿ ಮಾಡಬಹುದು.

ಎಲ್ಲಾ ಮಾಧ್ಯಮ ಸಂಸ್ಥೆಗಳು, ಪತ್ರಕರ್ತರು, ಸಂಪಾದಕರು ಮತ್ತು ವಿಷಯ ಸೃಷ್ಟಿಕರ್ತರು ಪರಿಶೀಲನೆ ಇಲ್ಲದ ವರದಿಗಳು, ಚಿತ್ರಗಳು ಅಥವಾ ವಿಡಿಯೋಗಳನ್ನು ಬಳಸಿ ವರದಿ ಮಾಡುವಾಗ ಅತ್ಯಂತ ಜವಾಬ್ದಾರಿಯುತ ಮತ್ತು ಎಚ್ಚರಿಕೆಯಿಂದ ಕೆಳಕಂಡ ಮಾರ್ಗಸೂಚಿಗಳನ್ನು ಪಾಲಿಸುವಂತೆ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಹೇಳಿದ್ದಾರೆ.

1) ಸಂಪೂರ್ಣವಾಗಿ ಪರಿಶೀಲಿಸಿ: ಯಾವುದೇ ಮಾಹಿತಿ ನಂಬಲಾರ್ಹವಲ್ಲದ ಮೂಲಗಳಿಂದ ಮಾಹಿತಿ ಬಂದಿದ್ದರೆ ಅಥವಾ ದೃಢಪಡಿಸದಿದ್ದರೆ ಅದನ್ನು ಪ್ರಕಟಿಸಬೇಡಿ.

2) ನಂಬಲಾರ್ಹ ತತ್ವಪಾಲನಾ ಸಾಧನಗಳನ್ನು ಉಪಯೋಗಿಸಿ: (Official Fact Check Tools): PIB ಪ್ಯಾಕ್ಟ್ ಚೆಕ್ , Alt News, BOOM, Factly, Snopes & AFP Fact Check ಮುಂತಾದ ಅಧಿಕೃತ ತಾಣಗಳನ್ನು ಪರಿಶೀಲನೆಗಾಗಿ ಉಪಯೋಗಿಸಿ. ಮಾಹಿತಿಗಳ ನೈಜತೆಯನ್ನು ಖಚಿತ ಪಡಿಸಿಕೊಳ್ಳಿ.

3) ಸಂವೇದನಾಶೀಲ ಮತ್ತು ಉಪ್ಪೇಕ್ಷಣೀಯ ಅಥವಾ ಭಯ ಹುಟ್ಟಿಸುವ ಶೈಲಿ ತಪ್ಪಿಸಿ: ಪೋಸ್ಟ್ ಅಥವಾ ವರದಿಗಳನ್ನು ನಯಗೊಳಿಸಿ ಅಥವಾ ಉತ್ಕೃಷ್ಟಗೊಳಿಸಿ, ಭಯ ಉಂಟು ಮಾಡಬೇಡಿ.

4) ತಪ್ಪು ಮಾಹಿತಿ ನೀಡಿದ್ದರೆ ತಕ್ಷಣ ಸರಿಪಡಿಸಿ: ಅಜಾಗರೂಕತೆಯಿಂದ ತಪ್ಪು ಮಾಹಿತಿ ಹಂಚಲಾಗಿದ್ದರೆ, ಕೂಡಲೇ ತಪ್ಪು ಸರಿಪಡಿಸಿ ಮತ್ತು ತಪ್ಪಿನ ಬಗ್ಗೆ ಸ್ಪಷ್ಟನೆ ನೀಡಲು ಕ್ರಮ ಕೈಗೊಳ್ಳಿ.

5) ಕಾನೂನು ಹಾಗೂ ನೈತಿಕ ಮೌಲ್ಯಗಳನ್ನು ಪಾಲಿಸಿ: ಸಮುದಾಯ ಅಥವಾ ಅಂತಾರಾಷ್ಟ್ರೀಯ ವಿಷಯಗಳ ವರದಿಯಲ್ಲಿ ಪತ್ರಿಕೋದ್ಯಮದ ಮೌಲ್ಯ, ನೈತಿಕತೆ ಮತ್ತು ನಿಷ್ಪಕ್ಷಪಾತ ಮಾರ್ಗವನ್ನು ಕಾಯ್ದುಕೊಳ್ಳಿ.

ಈ ಸಂದರ್ಭದಲ್ಲಿ ಮಾಧ್ಯಮಗಳು ನಂಬಿಕೆಗೆ ಮತ್ತು ಜವಾಬ್ದಾರಿಗೆ ನಿಲುಕುವ ಆಧಾರಸ್ಥಂಬಗಳಾಗಬೇಕು. ದೃಢಪಡಿಸದ ಮಾಹಿತಿಗಳು ರಾಷ್ಟ್ರದ ಶಾಂತಿ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವಂತಾಗದಂತೆ ನಾವು ಎಚ್ಚರಿಕೆಯಿಂದ ವರ್ತಿಸುವಂತೆ ಮನವಿ ಮಾಡಿದ್ದಾರೆ.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!