Harithalekhani story a day: horse that has become a slave..!

ಹರಿತಲೇಖನಿ ದಿನಕ್ಕೊಂದು ಕಥೆ: ಗುಲಾಮನಾದ ಕುದುರೆ..!

Harithalekhani story a day: ಅದೊಂದು ದೊಡ್ಡ ಕಾಡು. ಅಲ್ಲೊಂದು ಸರೋವರ, ಸಮೀಪವೇ ಸಾಕಷ್ಟು ಹಸಿರು ಹುಲ್ಲು ಬೆಳೆದಿತ್ತು. ಒಂದು ದಿನ ಅಲೆದಾಡುತ್ತಾ ಬರುತ್ತಿದ್ದ ಕುದುರೆಗೆ ಈ ಮೇವು ಕಂಡಿತು. ಅದು ಮೇವಿನ ರುಚಿ ಕಂಡು, ನೀರು ಕುಡಿದು ಅಲ್ಲೇ ಹಾಯಾಗಿರತೊಡಗಿತು.

ಮತ್ತೆ ಕೆಲವು ದಿನಗಳಲ್ಲಿ ಒಂದು ಕೋಣ ಬಂದು ಸೇರಿಕೊಂಡಿತು ಎರಡು ಗೆಳೆಯರಾದವು. ಸಾಕಷ್ಟು ಆಹಾರ ನೀರು ದೊರೆಯಿತು. ಕೋಣ ಮತ್ತು ಕುದುರೆ ತಿಂದು ಹಾಯಾಗಿ ಓಡಾಡಿಕೊಂಡು ಒಳ್ಳೆಯ ಸ್ನೇಹಿತರಾದವು. ಆದರೆ ಆ ವರ್ಷ ಸಾಕಷ್ಟು ಮಳೆ ಬರಲಿಲ್ಲ..! ಹಸಿರು ಹುಲ್ಲು ಸ್ವಲ್ಪ ಮಾತ್ರ ಬೆಳೆಯಿತು.

ಬೇಸಿಗೆಯಲ್ಲಿ ಅದೂ ಒಣಗಿ, ಸರೋವರವು ಬತ್ತಿತು. ಕುದುರೆ ಕೋಣಗಳಿಗೆ ಆಹಾರ ಸಾಕಾಗಲಿಲ್ಲ. ಇದರಿಂದ ಮನಸ್ತಾಪ ಉಂಟಾಯಿತು. ಒಂದು ದಿನ ಕೋಣ ಮೇವು ಮೇಯುತಿದ್ದಲ್ಲಿಗೆ ಬಂದ ಕುದುರೆ, ಕೋಣ ತಿನ್ನುತ್ತಿದ್ದ ಮೇವಿಗೆ ಬಾಯಿ ಹಾಕಿತು. ಕೋಣನಿಗೆ ಸಿಟ್ಟು ಬಂದು ತನ್ನ ಚೂಪಾದ ಕೋಡಿನಿಂದ ಕುದುರೆಯನ್ನು ತಿವಿಯಿತು. ಕುದುರೆಗೆ ಬಲವಾಗಿ ಪೆಟ್ಟಾಯಿತು. ಇದರಿಂದ ಕೋಣನ ಮೇಲೆ ಸಿಟ್ಟು ಬಂದಿತು.

ಕುದುರೆ ಕೋಣಕ್ಕೆ ಹೆದರಿಕೊಂಡು ಹತ್ತಿರ ಹೋಗಲು ಹೆದರಿತು. ಆಹಾರ ಇಲ್ಲವಾಯಿತು. ಏನಾದರೂ ಮಾಡಿ ಈ ಕೋಣವನ್ನು ಓಡಿಸಿದರೆ ಅಲ್ಲಿ ಬೆಳೆಯುವ ಹುಲ್ಲು ತನಗೆ ಸಾಕಾಗುತ್ತದೆ ಎಂದುಕೊಂಡಿತು. ಕೋಣನನ್ನು ಹೊಡೆದು ಸಾಯಿಸಬೇಕು ಇಲ್ಲ ಬೇರೆ ಕಡೆ ಓಡಿಸಬೇಕು ಏನು ಮಾಡಲಿ ಎಂದು ಯೋಚಿಸಿತು. ಕಾಡಿನ ಸಿಂಹಕ್ಕೆ ಹೇಳಬಹುದು ಆದರೆ ಕಾಡಿನ ಸಿಂಹ ತನ್ನನ್ನೇ ತಿಂದು ಬಿಟ್ಟರೆ, ಯೋಚನೆ ಬಂದ ಕೂಡಲೇ ಬೇಡ ಎಂದುಕೂಂಡು ಮತ್ತೊಂದು ಉಪಾಯ ಹುಡುಕಿತು.

ಕಾಡಿನ ಪ್ರಾಣಿಗಳ ಸಹವಾಸವೇ ಬೇಡ. ಕಾಡಿನ ಆಚೆ ಹಳ್ಳಿಗೆ ಹೋಗಿ ಮನುಷ್ಯನಿಗೆ ಹೇಳಿದರೆ ಈ ಕೆಲಸವಾಗುತ್ತದೆ ಎಂದು ಕೊಂಡು, ಒಂದು ಹಳ್ಳಿಗೆ ಬಂದಿತು.

ಅಲ್ಲೊಬ್ಬ ರೈತ ನೇಗಿಲಿಂದ ಹೊಲ ಉಳುತ್ತಿದ್ದ. ಅವನ ಹತ್ತಿರವಿದ್ದ ಒಂದೇ ಎತ್ತು, ಇನ್ನೊಂದು ಎತ್ತಿಗೆ ಬದಲಾಗಿ ಮಗನನ್ನೇ ನಿಲ್ಲಿಸಿ ಉಳುತ್ತಿದ್ದ. ಕುದುರೆ ನೋಡಿತು. ಈ ಮನುಷ್ಯ ಸರಿಯಾದ ವ್ಯಕ್ತಿ ಎಂದು ಅವನ ಬಳಿ ಬಂತು. ಮನುಷ್ಯ ನೀನು ಬಹಳಷ್ಟು ಕಷ್ಟ ಪಡುತ್ತಿರುವೆ. ನಿನಗೆ ನಾನೊಂದು ಉಪಾಯ ಹೇಳುತ್ತೇನೆ ನನ್ನ ಜೊತೆ ಬಲವಾದ ಕೋಣವಿದೆ. ನೀನು ಅದನ್ನು ತಂದುಕೊಂಡರೆ ಹೊಲ ಉಳಲು ಸಹಾಯವಾಗುತ್ತದೆ. ಆ ಕೋಣವನ್ನು ನಾನೇಕೆ ತರಬೇಕು ಎಂದ.

ಕುದುರೆ ತನ್ನ ಕಥೆಯನ್ನು ಹೇಳಿತು. ಆದರೆ ಆ ಕೋಣವನ್ನು ಅಲ್ಲಿಂದ ಹೇಗೆ ತರುವುದು ಎಂದು ಕೇಳಿದ. ಕುದುರೆ ಉಪಾಯ ಹೇಳಿತು. ಅದಕ್ಕೆ ಒಂದೆರಡು ಪೆಟ್ಟು ಕೊಟ್ಟರೆ ಕೆಳಗೆ ಬೀಳುತ್ತದೆ. ಹಗ್ಗ ಕಟ್ಟಿ ಮನೆಗೆ ತಂದರಾಯಿತು, ಮನುಷ್ಯನಿಗೆ ಮನಸ್ಸಿನಲ್ಲಿ ಸಂತೋಷವೋದರೂ, ತೋರ್ಪಡಿಸಿಕೊಳ್ಳದೆ ಹೌದು ಆ ಕೋಣವನ್ನು ತರುವುದರಿಂದ ನಿನಗೇನು ಅನುಕೂಲ ಎಂದನು. ಆಗ ಕುದುರೆ, ಮೇವಿಗಾಗಿ ಗುದ್ದಾಟವಾಗಿದ್ದು ಕೋಡಿನಿಂದ ಚುಚ್ಚಿದ್ದು, ಎಲ್ಲವನ್ನು ಒದರಿತು.

ರೈತ ಕೇಳಿದ. ನೀನು ಹೇಳುವುದು ಸರಿ. ಆದರೆ ಆ ಕಾಡುಕೋಣ ನನ್ನನ್ನೇ ಗುದ್ದಿದರೆ ನಾನೇನು ಮಾಡಲಿ ಎಂದು ಮನುಷ್ಯ ಕೇಳಿದ. ಕುದುರೆ ಉತ್ಸಾಹದಿಂದ ಹೇಳಿತು. ನೀನು ಚಿಂತಿಸಬೇಡ ನಾನು ನಿನಗೆ ಸಹಾಯ ಮಾಡುವೆ ನನ್ನ ಬೆನ್ನ ಮೇಲೆ ನೀನು ಕೂತರೆ, ನಾನು ಓಡುವೆ ಕೋಣನ ಹತ್ತಿರವೇ ಓಡುತ್ತೇನೆ ನೀನು ಬಾರುಕೋಲಿನಿಂದ ಹೊಡಿ, ನಾನು ಅಲ್ಲಿಂದ ಇಲ್ಲಿಗೆ ಓಡಾಡುತ್ತೇನೆ ಮತ್ತೆರಡು ಹೊಡೆತ ಹೊಡಿ, ಏಟು ತಾಳಲಾರದೆ ಬೀಳುತ್ತದೆ ನೀನು ತಂದು ಕೊಟ್ಟಿಗೆಯಲ್ಲಿ ಕಟ್ಟಿಕೊ ಎಂದಿತು.

ರೈತನಿಗೆ ಅದರ ಸಲಹೆ ಹಿಡಿಸಿತು. ಆದರೆ ಅವನಿಗೆ ಕುದುರೆ ಸವಾರಿ ಗೊತ್ತಿಲ್ಲ.
ಇದನ್ನು ಹೇಳಿದಾಗ ಕುದುರೆ ಇದಕ್ಕೂ ಸಲಹೆ ಹೇಳಿತು. ನೀನು ನನ್ನ ಬೆನ್ನ ಮೇಲೆ ಕೂರು ನಾನು ಹಗುರವಾಗಿ ಓಡುತ್ತೇನೆ ಎರಡು ಮೂರು ದಿನ ಹೋದರೆ ನಿನಗೆ ಚೆನ್ನಾಗಿ ಅಭ್ಯಾಸವಾಗುತ್ತದೆ ಎಂದಿತು. ಆದರೆ ನನಗೆ ಹತ್ತಲು ಬರುವುದಿಲ್ಲ ಎಂದನು.

ಕುದುರೆ ಉಪಾಯ ಹೇಳಿತು ನನ್ನ ಬೆನ್ನಿಗೆ ಜೀನು ಕಟ್ಟಿ, ಮುಖಕ್ಕೆ ಲಗಾಮು ಹಾಕು. ರೈತ ಅದು ಹೇಳಿದಂತೆ ಮಾಡಿದ ಅದರ ಸಹಾಯದಿಂದ ಕುದುರೆ ಬೆನ್ನ ಏರಿ ಕುಳಿತ. ಹೀಗೆ ಒಂದೆರಡು ಸಲ ಓಡಾಡಿದಾಗ ಮನುಷ್ಯನಿಗೆ ಕುದುರೆ ಸವಾರಿ ರೂಡಿಯಾಯಿತು.

ಮತ್ತೊಂದು ದಿನ, ಕೈಯಲ್ಲಿ ಬಾರು ಕೋಲು ಹಿಡಿದು, ಕುದುರೆ ಹತ್ತಿ ಸವಾರಿ ಮಾಡುತ್ತಾ, ಕೋಣನನ್ನು ಹಿಡಿದು ತರಲು ಕಾಡಿನ ಕಡೆ ಹೋದ.‌ ಕೋಣ ಹುಲ್ಲು ಮೇಯುತ್ತಿತ್ತು. ಕುದುರೆ ಅದರ ಹತ್ತಿರವೇ ಓಡಿತು ಮನುಷ್ಯ ಬಾರು ಕೋಲಿನಿಂದ ಚೆನ್ನಾಗಿ ಹೊಡೆದ, ಮತ್ತೆ ಕುದುರೆ ತಿರುಗಿ ಬಂದು ಕೋಣನ ಹತ್ತಿರವೇ ಓಡಿತು ಮತ್ತೆ ಹೊಡೆದ, ಹೀಗೆ ಮನುಷ್ಯ ಎರಡು ಮೂರು ಸಲ ಹೊಡೆಯುತ್ತಿದ್ದಂತೆ ಕೋಣ ನೆಲಕ್ಕೆ ಬಿತ್ತು. ಆಮೇಲೆ ಅದನ್ನು ಹಗ್ಗದಿಂದ ಕಟ್ಟಿ ತನ್ನ ಮನೆಗೆ ತಂದು ಕಟ್ಟಿ ಹಾಕಿದ.

ಕುದುರೆಗೆ ಬಹಳ ಖುಷಿಯಾಯಿತು ಇನ್ನು ಯಾರ ಹಂಗೂ ಇಲ್ಲ ಆ ಹುಲ್ಲು ಪೂರ್ತಿ ನನ್ನದೇ ಎಂದುಕೊಂಡಿತು. ರೈತ ಹತ್ತಿರ ಬಂದ ಕುದುರೆ ಹೇಳಿತು. ಇನ್ನು ನನ್ನ ಜೀನು ಬಿಚ್ಚಿ , ಲಗಾಮು ತೆಗೆದು ನನ್ನನ್ನು ಮುಕ್ತಗೊಳಿಸು ಎಂದಿತು.

ರೈತ ಗಹಗಹ ನಕ್ಕು ಹೇಳಿದ ಇನ್ನು ನಿನ್ನ ಜೀನು ಬಿಚ್ಚುವುದು ಲಗಾಮು ತೆಗೆವ ತಾಪತ್ರಯ ನನಗಿಲ್ಲ. ನೀನು ಮುಕ್ತನಾಗುವ ಯೋಚನೆಯನ್ನು ಮಾಡಬೇಡ ಅದರಲ್ಲೇ ನಿನ್ನ ಸಂತೋಷ ಇರುವುದು. ನಿನ್ನ ಮೇಲೆ ಕುಳಿತು ನಾನು ಎಲ್ಲಾ ಕಡೆ ಸಂಚರಿಸುತ್ತೇನೆ. ಸವಾರಿ ಮಾಡುವುದು ನನಗೆ ಬಹಳ ಖುಷಿಕೊಡುತ್ತಿದೆ ಆಕಾಶಕ್ಕೆ ಹಾರಿದಷ್ಟು ಸಂತೋಷ ಪುಟಿಯುತ್ತೆ ನನ್ನ ಮನೆಯಲ್ಲಿ ಇರು ಎಂದನು…!!

ಇದನ್ನು ಕೇಳಿದ ಕುದುರೆ ಅಯ್ಯೋ ನಾನೆಂಥ ಮೂರ್ಖ, ಕೋಣನನ್ನು ಹಿಡಿದುಕೊಡಲು ಹೋಗಿ ನಾನೇ ಬಂದು ರೈತನ ಗುಲಾಮನಾದೆನಲ್ಲಾ ಬೇಜಾರು ಮಾಡಿಕೊಂಡಿತು.

‘ಮಾಡಬಾರದ್ದನ್ನು ಮಾಡಿದರೆ ಆಗಬಾರದೇ ಆಗುವುದು’

ಕೃಪೆ: ಸಾಮಾಜಿಕ ಜಾಲತಾಣ

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!