This era is definitely not an era of war: PM Modi

ಈ ಯುಗ ಖಂಡಿತಾ ಯುದ್ಧದ ಯುಗವಲ್ಲ: ಪ್ರಧಾನಿ ಮೋದಿ

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ( Narendra Modi) ಅವರು ದೇಶವನ್ನುದ್ದೇಶಿಸಿ ಮಾತನಾಡಿದರು.

ಈ ವೇಳೆ ಪಹಲ್ಗಾಮ್ ದಾಳಿ ವೈಯಕ್ತಿಕವಾಗಿ ನನ್ನನ್ನು ಕಾಡುತ್ತಿತ್ತು. ಹೀಗಾಗಿ ಉಗ್ರರನ್ನು ಮಣ್ಣಲ್ಲೇ ಮಣ್ಣಾಗಿಸಲು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟೆವು. ಸೈನಿಕರ ಪರಾಕ್ರಮ ದೇಶದ ಸ್ತ್ರೀಯರಿಗೆ ಸಮರ್ಪಿತ ಎಂದು ಹೇಳಿದರು.

ಭಾರತೀಯ ಸೇನಾಪಡೆ, ಬೇಹುಗಾರಿಕಾ ತಂಡಕ್ಕೆ ಸಲ್ಯೂಟ್. ಪ್ರತೀ ಭಾರತೀಯನ ಪರವಾಗಿ ಸೈನಿಕರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ದೇಶದ ಸಾಮರ್ಥ್ಯ ಮತ್ತು ಸಂಯಮ ಎರಡನ್ನೂ ನೋಡಿದ್ದೇವೆ ಎಂದರು.

ಆಪರೇಷನ್ ಸಿಂಧೂರ ನ್ಯಾಯದ ಪ್ರತಿಜ್ಞೆ

ಹೆಣ್ಣು ಮಕ್ಕಳ ಸಿಂಧೂರ ಅಳಿಸಿದ್ರೆ ಏನಾಗುತ್ತೆ ಅನ್ನೋದು ಗೊತ್ತಾಗುತ್ತದೆ. ಆಪರೇಷನ್ ಸಿಂಧೂರ ನ್ಯಾಯದ ಪ್ರತಿಜ್ಞೆ. ಉಗ್ರರು ಭಾರತ ಇಂಥಾ ದೊಡ್ಡ ನಿರ್ಧಾರ ತೆಗೆದುಕೊಳ್ಳುತ್ತೆ ಅಂತ ಯೋಚಿಸಿರಲಿಲ್ಲ. ಡ್ರೋನ್ ದಾಳಿಯಿಂದ ಉಗ್ರರ ಕಟ್ಟಡ ಅಲ್ಲ ಅವರ ಆತ್ಮವಿಶ್ವಾಸ ಕೂಡ ಕುಸಿದಿದೆ ಎಂದು ಹೇಳಿದರು.

ದೇಶ ಒಂದಾದರೆ ದೊಡ್ಡ ದೊಡ್ಡ ನಿರ್ಧಾರಗಳು ಸಾಧ್ಯ ಪಾಕಿಸ್ತಾನದ ಡೋನ್, ಮಿಸೈಲ್‌ಗಳನ್ನು ಹೊಡೆದುರುಳಿಸಿದ್ದನ್ನು ಇಡೀ ಜಗತ್ತು ಗಮನಿಸಿದೆ. ಪಾಕಿಸ್ತಾನವು ಭಾರತದ ಗಡಿ ಮೇಲೆ ದಾಳಿ ಮಾಡಿತ್ತು. ಆದರೆ ನಾವು ಪಾಕಿಸ್ತಾನದ ಹೃದಯಕ್ಕೆ ದಾಳಿ ಮಾಡಿದೆವು. ಪಾಕಿಸ್ತಾನಕ್ಕೆ ತುಂಬಾ ಹೆಮ್ಮೆಯಿದ್ದ ಏರ್‌ಬೇಸ್‌ಗಳನ್ನು ಧ್ವಂಸ ಮಾಡಿದೆವು. ಉಗ್ರರ ಕೇಂದ್ರ ಕಚೇರಿಗಳನ್ನು ಕೂಡ ಧ್ವಂಸ ಮಾಡಿದ್ದೇವೆ ಎಂದರು.

ಕದನ ವಿರಾಮ ಅಲ್ಪ ವಿರಾಮವಷ್ಟೇ

ಉದ್ವಿಗ್ನತೆ ಕಡಿಮೆ ಮಾಡಲು ಪಾಕಿಸ್ತಾನವು ಹಲವು ದೇಶಗಳ ಮುಂದೆ ಮನವಿ ಮಾಡಿಕೊಂಡಿತ್ತು. ಡಿಜಿಎಂಓಗಳ ಮೂಲಕ ಕದನ ವಿರಾಮಕ್ಕೆ ಬೇಡಿಕೊಂಡಿತ್ತು.

ಪಾಕಿಸ್ತಾನದ ಕಡೆಯಿಂದ ಮುಂದೇ ಯಾವುದೇ ಭಯೋತ್ಪಾದಕ ಘಟನೆ ನಡೆಯುವುದಿಲ್ಲ ಎಂದ ಕಾರಣ, ಭಾರತ ಇದನ್ನು ಗಮನಿಸಿತು. ಆದರೆ ಇದು ಕದನ ವಿರಾಮ ಅಲ್ಪ ವಿರಾಮವಷ್ಟೇ, ಮುಂದಿನ ದಿನಗಳಲ್ಲಿ ಪಾಕಿಸ್ತಾನದ ನಡೆಯನ್ನು ಗಮನಿಸುತ್ತೇವೆ.

ಬೆದರಿಕೆಯನ್ನು ಭಾರತ ಸಹಿಸುವುದಿಲ್ಲ

ಅಣ್ವಸ್ತ್ರ ದಾಳಿಯ ಬೆದರಿಕೆಯನ್ನು ಭಾರತ ಸಹಿಸುವುದಿಲ್ಲ. ಅಣ್ವಸ್ತ್ರದ ನೆರಳಿನಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಸಹಿಸಲ್ಲ. ಭಯೋತ್ಪಾದನೆಯ ಬುಡಸಮೇತ ಕಿತ್ತು ಹಾಕುತ್ತೇವೆ. ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆಗೆ ಸ್ಪಷ್ಟವಾದ ಸಾಕ್ಷಿ ಸಿಕ್ಕಿದೆ. ರಣರಂಗದಲ್ಲಿ ಪ್ರತಿ ಬಾರಿಯೂ ನಾವು ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ್ದೇವೆ. ಮೇಕ್ ಇನ್ ಇಂಡಿಯಾ ಶಕ್ತಿ ಇಡೀ ವಿಶ್ವಕ್ಕೆ ಅರಿವಾಗಿದೆ.

ಯುದ್ಧದ ಯುಗವಲ್ಲ

ಈ ಯುಗ ಖಂಡಿತಾ ಯುದ್ಧದ ಯುಗವಲ್ಲ. ಪಾಕಿಸ್ತಾನ ಸರ್ಕಾರ ಹಾಗೂ ಅಲ್ಲಿನ ಸೈನ್ಯ ಯಾವ ರೀತಿ ಉಗ್ರವಾದಕ್ಕೆ ಗೊಬ್ಬರ, ನೀರು ನೀಡುತ್ತಿದ್ದಾರೆ ಎಂಬುದು ಬಯಲಾಗಿದೆ.

ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ಸಾಧ್ಯವಿಲ್ಲ

ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ಸಾಧ್ಯವಿಲ್ಲ. ರಕ್ತ ಹಾಗೂ ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಭಯೋತ್ಪಾದನೆ ಬಿಟ್ಟು ಮಾತುಕತೆ ಬನ್ನಿ, ಶಾಂತಿಯ ಮಾರ್ಗ ಶಕ್ತಿಯೊಂದಿಗೆ ಮಾತ್ರ ಸಾಧ್ಯ.

ವಿಶ್ವ ಸಮುದಾಯಕ್ಕೆ ಹೇಳುವುದಾದರೆ ಮುಂದೆ ಪಾಕಿಸ್ತಾನದ ಜೊತೆ ಮಾತುಕತೆಯಾದ್ರೆ ಅದು ಉಗ್ರವಾದದ ವಿಚಾರ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತ್ರ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!