This era is definitely not an era of war: PM Modi

ಈ ಯುಗ ಖಂಡಿತಾ ಯುದ್ಧದ ಯುಗವಲ್ಲ: ಪ್ರಧಾನಿ ಮೋದಿ

ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ( Narendra Modi) ಅವರು ದೇಶವನ್ನುದ್ದೇಶಿಸಿ ಮಾತನಾಡಿದರು.

ಈ ವೇಳೆ ಪಹಲ್ಗಾಮ್ ದಾಳಿ ವೈಯಕ್ತಿಕವಾಗಿ ನನ್ನನ್ನು ಕಾಡುತ್ತಿತ್ತು. ಹೀಗಾಗಿ ಉಗ್ರರನ್ನು ಮಣ್ಣಲ್ಲೇ ಮಣ್ಣಾಗಿಸಲು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟೆವು. ಸೈನಿಕರ ಪರಾಕ್ರಮ ದೇಶದ ಸ್ತ್ರೀಯರಿಗೆ ಸಮರ್ಪಿತ ಎಂದು ಹೇಳಿದರು.

ಭಾರತೀಯ ಸೇನಾಪಡೆ, ಬೇಹುಗಾರಿಕಾ ತಂಡಕ್ಕೆ ಸಲ್ಯೂಟ್. ಪ್ರತೀ ಭಾರತೀಯನ ಪರವಾಗಿ ಸೈನಿಕರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ದೇಶದ ಸಾಮರ್ಥ್ಯ ಮತ್ತು ಸಂಯಮ ಎರಡನ್ನೂ ನೋಡಿದ್ದೇವೆ ಎಂದರು.

ಆಪರೇಷನ್ ಸಿಂಧೂರ ನ್ಯಾಯದ ಪ್ರತಿಜ್ಞೆ

ಹೆಣ್ಣು ಮಕ್ಕಳ ಸಿಂಧೂರ ಅಳಿಸಿದ್ರೆ ಏನಾಗುತ್ತೆ ಅನ್ನೋದು ಗೊತ್ತಾಗುತ್ತದೆ. ಆಪರೇಷನ್ ಸಿಂಧೂರ ನ್ಯಾಯದ ಪ್ರತಿಜ್ಞೆ. ಉಗ್ರರು ಭಾರತ ಇಂಥಾ ದೊಡ್ಡ ನಿರ್ಧಾರ ತೆಗೆದುಕೊಳ್ಳುತ್ತೆ ಅಂತ ಯೋಚಿಸಿರಲಿಲ್ಲ. ಡ್ರೋನ್ ದಾಳಿಯಿಂದ ಉಗ್ರರ ಕಟ್ಟಡ ಅಲ್ಲ ಅವರ ಆತ್ಮವಿಶ್ವಾಸ ಕೂಡ ಕುಸಿದಿದೆ ಎಂದು ಹೇಳಿದರು.

ದೇಶ ಒಂದಾದರೆ ದೊಡ್ಡ ದೊಡ್ಡ ನಿರ್ಧಾರಗಳು ಸಾಧ್ಯ ಪಾಕಿಸ್ತಾನದ ಡೋನ್, ಮಿಸೈಲ್‌ಗಳನ್ನು ಹೊಡೆದುರುಳಿಸಿದ್ದನ್ನು ಇಡೀ ಜಗತ್ತು ಗಮನಿಸಿದೆ. ಪಾಕಿಸ್ತಾನವು ಭಾರತದ ಗಡಿ ಮೇಲೆ ದಾಳಿ ಮಾಡಿತ್ತು. ಆದರೆ ನಾವು ಪಾಕಿಸ್ತಾನದ ಹೃದಯಕ್ಕೆ ದಾಳಿ ಮಾಡಿದೆವು. ಪಾಕಿಸ್ತಾನಕ್ಕೆ ತುಂಬಾ ಹೆಮ್ಮೆಯಿದ್ದ ಏರ್‌ಬೇಸ್‌ಗಳನ್ನು ಧ್ವಂಸ ಮಾಡಿದೆವು. ಉಗ್ರರ ಕೇಂದ್ರ ಕಚೇರಿಗಳನ್ನು ಕೂಡ ಧ್ವಂಸ ಮಾಡಿದ್ದೇವೆ ಎಂದರು.

ಕದನ ವಿರಾಮ ಅಲ್ಪ ವಿರಾಮವಷ್ಟೇ

ಉದ್ವಿಗ್ನತೆ ಕಡಿಮೆ ಮಾಡಲು ಪಾಕಿಸ್ತಾನವು ಹಲವು ದೇಶಗಳ ಮುಂದೆ ಮನವಿ ಮಾಡಿಕೊಂಡಿತ್ತು. ಡಿಜಿಎಂಓಗಳ ಮೂಲಕ ಕದನ ವಿರಾಮಕ್ಕೆ ಬೇಡಿಕೊಂಡಿತ್ತು.

ಪಾಕಿಸ್ತಾನದ ಕಡೆಯಿಂದ ಮುಂದೇ ಯಾವುದೇ ಭಯೋತ್ಪಾದಕ ಘಟನೆ ನಡೆಯುವುದಿಲ್ಲ ಎಂದ ಕಾರಣ, ಭಾರತ ಇದನ್ನು ಗಮನಿಸಿತು. ಆದರೆ ಇದು ಕದನ ವಿರಾಮ ಅಲ್ಪ ವಿರಾಮವಷ್ಟೇ, ಮುಂದಿನ ದಿನಗಳಲ್ಲಿ ಪಾಕಿಸ್ತಾನದ ನಡೆಯನ್ನು ಗಮನಿಸುತ್ತೇವೆ.

ಬೆದರಿಕೆಯನ್ನು ಭಾರತ ಸಹಿಸುವುದಿಲ್ಲ

ಅಣ್ವಸ್ತ್ರ ದಾಳಿಯ ಬೆದರಿಕೆಯನ್ನು ಭಾರತ ಸಹಿಸುವುದಿಲ್ಲ. ಅಣ್ವಸ್ತ್ರದ ನೆರಳಿನಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಸಹಿಸಲ್ಲ. ಭಯೋತ್ಪಾದನೆಯ ಬುಡಸಮೇತ ಕಿತ್ತು ಹಾಕುತ್ತೇವೆ. ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆಗೆ ಸ್ಪಷ್ಟವಾದ ಸಾಕ್ಷಿ ಸಿಕ್ಕಿದೆ. ರಣರಂಗದಲ್ಲಿ ಪ್ರತಿ ಬಾರಿಯೂ ನಾವು ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ್ದೇವೆ. ಮೇಕ್ ಇನ್ ಇಂಡಿಯಾ ಶಕ್ತಿ ಇಡೀ ವಿಶ್ವಕ್ಕೆ ಅರಿವಾಗಿದೆ.

ಯುದ್ಧದ ಯುಗವಲ್ಲ

ಈ ಯುಗ ಖಂಡಿತಾ ಯುದ್ಧದ ಯುಗವಲ್ಲ. ಪಾಕಿಸ್ತಾನ ಸರ್ಕಾರ ಹಾಗೂ ಅಲ್ಲಿನ ಸೈನ್ಯ ಯಾವ ರೀತಿ ಉಗ್ರವಾದಕ್ಕೆ ಗೊಬ್ಬರ, ನೀರು ನೀಡುತ್ತಿದ್ದಾರೆ ಎಂಬುದು ಬಯಲಾಗಿದೆ.

ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ಸಾಧ್ಯವಿಲ್ಲ

ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ಸಾಧ್ಯವಿಲ್ಲ. ರಕ್ತ ಹಾಗೂ ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಭಯೋತ್ಪಾದನೆ ಬಿಟ್ಟು ಮಾತುಕತೆ ಬನ್ನಿ, ಶಾಂತಿಯ ಮಾರ್ಗ ಶಕ್ತಿಯೊಂದಿಗೆ ಮಾತ್ರ ಸಾಧ್ಯ.

ವಿಶ್ವ ಸಮುದಾಯಕ್ಕೆ ಹೇಳುವುದಾದರೆ ಮುಂದೆ ಪಾಕಿಸ್ತಾನದ ಜೊತೆ ಮಾತುಕತೆಯಾದ್ರೆ ಅದು ಉಗ್ರವಾದದ ವಿಚಾರ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತ್ರ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]