H.D.Kumaraswamy reviews progress of Ministry of Heavy Industries and Steel

ಬೃಹತ್‌ ಕೈಗಾರಿಕೆ, ಉಕ್ಕು ಸಚಿವಾಲಯ ಪ್ರಗತಿ ಪರಿಶೀಲನೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ:‌ ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ನವದೆಹಲಿಯಲ್ಲಿ ಮಂಗಳವಾರ ತಮ್ಮ ಉಸ್ತುವಾರಿಯ ಎರಡೂ ಸಚಿವಾಲಯಗಳ ಉನ್ನತ ಅಧಿಕಾರಿಗಳ ಜತೆ ಪ್ರತ್ಯೇಕವಾಗಿ ಪರಿಶೀಲನಾ ಸಭೆಗಳನ್ನು ನಡೆಸಿದರು.

ಎರಡೂ ಸಚಿವಾಲಯಗಳಲ್ಲಿ ನಡೆಯುತ್ತಿರುವ ಅಭಿವೃಧ್ಧಿ ಕಾರ್ಯಕ್ರಮಗಳು ಹಾಗೂ ಈಗಾಗಲೇ ಅನುಷ್ಠಾನಕ್ಕೆ ತರಲಾಗಿರುವ ಮಹತ್ವದ ಕಾರ್ಯಕ್ರಮಗಳ ಬಗ್ಗೆ ಸಚಿವರು ಕೂಲಂಕಶವಾಗಿ ಚರ್ಚೆ ನಡೆಸಿದರು.

ಬೃಹತ್‌ ಕೈಗಾರಿಕೆ ಸಚಿವಾಲಯ

ಬೃಹತ್‌ ಕೈಗಾರಿಕೆ ಸಚಿವಾಲಯದ ಸಭೆಯಲ್ಲಿ ಕೇಂದ್ರ ಸಚಿವರು ಎಲೆಕ್ಟ್ರಿಕ್‌ ವಾಹನಗಳ ಬಳಕೆ ಕುರಿತಾದ ಪಿಎಂ ಇ ಡ್ರೈವ್‌ ಹಾಗೂ ಉತ್ಪಾದನಾ ಸಂಪರ್ಕ ಸೌಲಭ್ಯ (PLI) ಕಾರ್ಯಕ್ರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಕೆಲ ನಿರ್ದಿಷ್ಟ ಸೂಚನೆಗಳನ್ನು ನೀಡಿದರು.

ರಸ್ತೆ ಸಾರಿಗೆ ಕ್ಷೇತ್ರದಲ್ಲಿ ವಾಯು ಮಾಲಿನ್ಯವನ್ನು ಗಣನೀಯ ಪ್ರಮಾಣದಲ್ಲಿ ಕುಗ್ಗಿಸಬೇಕಾಗಿದ್ದು, ಆ ದಿಸೆಯಲ್ಲಿ ಪ್ರಧಾನಿಗಳು ನಿಗದಿ ಮಾಡಿರುವ ಗುರಿಗಳನ್ನು ಮುಟ್ಟುವ ಬಗ್ಗೆ ಸಚಿವರು ಅಧಿಕಾರಿಗಳ ಜತೆ ಚರ್ಚಿಸಿದರು. ಹೆಚ್ಚೆಚ್ಚು ಪ್ರಮಾಣದಲ್ಲಿ ಎಲೆಕ್ಟ್ರಿಕ್‌ ವಾಹಗಳ ಬಳಕೆಯನ್ನು ಉತ್ತೇಜಿಸುವುದು, ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ, ಇನ್ನಿತರೆ ಮೂಲಸೌಕರ್ಯ ಅಭಿವೃದ್ಧಿ ಕುರಿತೂ ಅಧಿಕಾರಗಳು ಸಚಿವರಿಗೆ ಮಾಹಿತಿ ನೀಡಿದರು.

ಮೇಕ್‌ ಇನ್‌ ಇಂಡಿಯಾ ಹಾಗೂ ಆತ್ಮನಿರ್ಭರ ಭಾರತ ಯೋಜನೆಗಳ ಅಡಿಯಲ್ಲಿ ದೇಶಿಯವಾಗಿ ಎಲೆಕ್ಟಿಕ್‌ ವಾಹನಗಳನ್ನು ಅಗತ್ಯ ಪ್ರಮಾಣದಲ್ಲಿ ತಯಾರಿಸುವುದಕ್ಕೆ ಸಚಿವಾಲಯ ಹೆಚ್ಚು ಉತ್ತೇಜನ ನೀಡಬೇಕು ಎಂದು ಸಚಿವರು ಒತ್ತಿ ಹೇಳಿದರು.

ಉಕ್ಕು ಸಚಿವಾಲಯ

ಉಕ್ಕು ಸಚಿವಾಲಯದ ಸಭೆಯಲ್ಲಿ ವಿಶೇಷವಾಗಿ ಸಾರ್ವಜನಿಕ ವಲಯದ ಸ್ಥಾವರಗಳ ಕಾರ್ಯನಿರ್ವಹಣೆ ಬಗ್ಗೆ ಸಚಿವರು ಹೆಚ್ಚು ಮಾಹಿತಿ ಪಡೆದುಕೊಂಡರು.

ಈಗಾಗಲೇ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಉಕ್ಕು ಉತ್ಪಾದಕ ಕಂಪನಿಗಳ ಪ್ರಗತಿ ಹಾಗೂ ಉತ್ಪಾದಕತೆಯ ಕ್ಷಮತೆ ಬಗ್ಗೆ ಸಚಿವ ಕುಮಾರಸ್ವಾಮಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೆ, ಉಕ್ಕು SAIL ವಿಸ್ತರಣೆ ಹಾಗೂ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (ವೈಜಾಗ್ ಸ್ಟೀಲ್) ಕಾರ್ಯಕ್ಷಮತೆ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು.

ರೂ.11,400 ಕೋಟಿ ಪರಿಹಾರ ಪ್ಯಾಕೇಜ್ ನೀಡಿದ ನಂತರ ಕಾರ್ಖಾನೆ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬ ಬಗ್ಗೆ ಸಚಿವರು ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ಅಲ್ಲದೆ; ಉಕ್ಕು ಕ್ಷೇತ್ರದಲ್ಲಿ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸಲೇಬೇಕೆಂಬ ಪ್ರಧಾನಿಗಳ ಸಂಕಲ್ಪವನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಒತ್ತು ಕೊಡಬೇಕು. ಮತ್ತೂ ಗ್ರೀನ್‌ ಸ್ಟೀಲ್‌ ತಯಾರಿಕೆಗೆ ಹೆಚ್ಚಿನ ಮಾರ್ಗೋಪಾಯಗಳನ್ನು ಕಂಡುಕೊಂಡು ಸಹಯೋಗಗಳನ್ನು ಬಲಪಡಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಲೋಹಶಾಸ್ತ್ರದಲ್ಲಿ ಅದರಲ್ಲಿಯೂ ಪ್ರಮುಖವಾಗಿ ಕಬ್ಬಿಣ, ಉಕ್ಕು ವಲಯದಲ್ಲಿ ಆಗುತ್ತಿರುವ ಸಂಶೋಧನೆ ಮತ್ತು ಅಭಿವೃದ್ಧಿಯ ಬಗ್ಗೆ ಅಧಿಕಾರಿಗಳು ಸಚಿವರಿಗೆ ವಿವರಣೆ ನೀಡಿದರು.

ಲೋಹ ತಂತ್ರಜ್ಞಾನ ಸಂಶೋಧನೆ ಮತ್ತು ಅಭಿವೃದ್ಧಿ ಸೊಸೈಟಿ (SRTMI) ಯನ್ನು ಕೇಂದ್ರವಾಗಿ ಇರಿಸಿಕೊಂಡು ಕಾರ್ಯಪ್ರವೃತ್ತವಾಗಿದ್ದೇವೆ. CSIRO ಮತ್ತು ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯ ಸೇರಿದಂತೆ ಆಸ್ಟ್ರೇಲಿಯಾದ ಸಂಸ್ಥೆಗಳೊಂದಿಗೆ ಸಹಯೋಗದ ಚರ್ಚೆಗಳನ್ನು ನಡೆಸುತ್ತಿದ್ದು, ಹೈಡ್ರೋಜನ್ ಆಧಾರಿತ ಗ್ರೀನ್‌ ಸ್ಟೀಲ್ ಉತ್ಪಾದನೆ ಮತ್ತು ಇಂಗಾಲರಹಿತೀಕರಣದ ಕಡೆಗೆ ವ್ಯೂಹಾತ್ಮಕ ಹೆಜ್ಜೆಗಳನ್ನು ಇಡಲಾಗುತ್ತಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಬೃಹತ್‌ ಕೈಗಾರಿಕೆ ಸಚಿವಾಲಯದ‌ ಸಭೆಯಲ್ಲಿ ಕಾರ್ಯದರ್ಶಿ ಕಮರನ್‌ ರಿಜ್ವಿ, ಜಂಟಿ ಕಾರ್ಯದರ್ಶಿ ಸುನೀಲ್‌ ಮಿತ್ತಲ್ ಹಾಗೂ ಉಕ್ಕು ಸಚಿವಾಲಯದ ಸಭೆಯಲ್ಲಿ ಹಣಕಾಸು ಸಲಹೆಗಾರರೂ ಆಗಿರುವ ಹೆಚ್ಚುವರಿ ಕಾರ್ಯದರ್ಶಿ ಅಶಿಶ್‌ ಚಟರ್ಜಿ, ಜಂಟಿ ಕಾರ್ಯದರ್ಶಿ ಅಭಿಜಿತ್‌ ನರೇಂದ್ರ ಸಭೆಯಲ್ಲಿ ಭಾಗಿಯಾಗಿದ್ದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!