ಮಾವು ಮಾರಾಟ ಮತ್ತು ಪ್ರದರ್ಶನ: ಐದು ದಿನಗಳ ಕಾಲ ಹಣ್ಣಿನ ರಾಜನ ಹಬ್ಬ

Mango purchasing center established in Bengaluru district.. Price fixing

ಧಾರವಾಡ: ಮಾವು ಬೆಳೆಗಾರರಿಗೆ ಮಾವು ಮಾರಾಟ ಮತ್ತು ವಿವಿಧ ಮಾವುಗಳ ಪ್ರದರ್ಶನಕ್ಕೆ ಅವಕಾಶವಾಗುವಂತೆ ಐದು ದಿನಗಳವರೆಗೆ ತೋಟಗಾರಿಕೆ ಕಚೇರಿ ಆವರಣದಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು (Mango Exhibition and Sales Fair) ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ನಗರದ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಮಾವು ಮೇಳವನ್ನು ಉದ್ಘಾಟಿಸಿ, ಮಾತನಾಡಿದರು.

ಮಾವು ಬೆಳೆಗಾರರಿಂದ ಮತ್ತು ಸಾರ್ವಜನಿಕರಿಂದ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಧಾರವಾಡ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಇದು ಸಹ ಒಂದಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಮಾವು ಮಾರಾಟ ಮೇಳದಲ್ಲಿ ಸುಮಾರು 30 ಜನ ಮಾವು ಬೆಳೆಗಾರರು ಮಳಿಗೆಗಳನ್ನು ಹಾಕಿದ್ದಾರೆ. ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇದು ರೈತರಿಗೆ ಮತ್ತು ಮಾವು ಬೆಳೆಗಾರರಿಗೆ ಅನುಕೂಲವಾಗುತ್ತದೆ.

ಸಾರ್ವಜನಿಕರಿಗೆ ಅದರಲ್ಲೂ ಗ್ರಾಹಕರಿಗೆ ಉತ್ತಮ ಬೆಲೆಗೆ, ರುಚಿಕರವಾದ ಮಾವು ಸಿಗುವುದಕ್ಕೆ ಇದೊಂದು ಸುವರ್ಣ ಅವಕಾಶವಾಗಿದೆ ಎಂದು ಅವರು ತಿಳಿಸಿದರು.

ಧಾರವಾಡ ಜಿಲ್ಲೆಯಲ್ಲಿ, ಮಾವು ಒಂದು ಪ್ರಮುಖ ಬೆಳೆಯಾಗಿದ್ದು, ಒಟ್ಟು 29,610 ಎಕರೆ (11844 ಹೆ) ನಲ್ಲಿ, ಅಂದಾಜು 8,881 ರೈತರು ಮಾವು ಬೆಳೆಯುತ್ತಿದ್ದಾರೆ, ಸಾಂಪ್ರದಾಯಕವಾಗಿ 4 ಟನ್, ಎಕರೆ ಇಳುವರಿ ಬರುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಇಳುವರಿಯಲ್ಲಿ ಕುಂಠಿತವಾಗಿದ್ದು ಸುಮಾರು 1 ಟನ್, ಎಕರೆಯಂತೆ ಜಿಲ್ಲೆಯಿಂದ ಒಟ್ಟು 29,000 ಟನ್ ಇಳುವರಿಯನ್ನು ಅಂದಾಜಿಸಬಹುದಾಗಿದೆ ಎಂದು ಅವರು ಹೇಳಿದರು.

ಧಾರವಾಡ ಜಿಲ್ಲೆಯು ಸಾಂಪ್ರದಾಯಕವಾಗಿ ಮಾವು ಬೆಳೆಯುವ ರಾಜ್ಯದ ಮುಖ್ಯ ಭಾಗವಾಗಿದ್ದು, ಪ್ರಮಖವಾಗಿ ಧಾರವಾಡ, ಕಲಘಟಗಿ, ಹುಬ್ಬಳ್ಳಿ ಮತ್ತು ಕುಂದಗೋಳ ತಾಲೂಕುಗಳಲ್ಲಿ ಮಾವು ಬೆಳೆಯನ್ನು ಬೆಳೆಯಲು ಸೂಕ್ತವಾದ ವಾತಾವರಣವಿರುವುದರಿಂದ ಉತ್ತಮ ಮಾವು ಬೆಳೆಯನ್ನು ಬೆಳೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ರೈತರಿಗೆ ಒಳ್ಳೆಯ ಬೆಲೆ ಸಿಗಬೇಕು ಎಂಬ ಉದ್ದೇಶದಿಂದ ಮೇಳವನ್ನು ಆಯೋಜನೆ ಮಾಡಿದ್ದೇವೆ. ಧಾರವಾಡ ಜಿಲ್ಲೆಗೆ ಸರಕಾರದಿಂದ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಆದೇಶ ನೀಡಿ, ಈಗಾಗಲೇ ಸುಮಾರು 7 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಉದ್ದೇಶಿತ ಮಾವು ಅಭಿವೃದ್ಧಿ ಕೇಂದ್ರವನ್ನು ಧಾರವಾಡ ತಾಲೂಕಿನ ಕುಂಭಾಪುರ ಫಾರ್ಮದಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗುವುದು. ಮಾವು ಅಭಿವೃದ್ಧಿ ಕೇಂದ್ರವು ಜಿಲ್ಲೆಯ ರೈತರಿಗೆ ಮಾತ್ರವಲ್ಲದೇ, ಸುತ್ತಲಿನ ಜಿಲ್ಲೆಗಳಲ್ಲಿ ಮಾವು ಬೆಳೆಯುವ ರೈತರಿಗೂ ಪ್ರಯೋಜನವಾಗಲಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಮಾವು ಅಭಿವೃದ್ಧಿ ಕೇಂದ್ರದಲ್ಲಿ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ, ಹಣ್ಣು ಮಾಡುವುದು, ರೈತರಿಗೆ ಗ್ರೇಡಿಂಗ್ ವ್ಯವಸ್ಥೆ, ಮಾವು ಬೆಳೆಗಳ ತರಬೇತಿ, ರೈತರಿಗೆ ಬೇಕಾದ ಎಲ್ಲ ಮಾಹಿತಿಯನ್ನು ನೀಡುವ ಸಮಗ್ರ ಮಾಹಿತಿ ಕೇಂದ್ರವಾಗಿ ನಿರ್ವಹಿಸುತ್ತದೆ.

ಧಾರವಾಡ ಜಿಲ್ಲೆಯಲ್ಲಿ ಮಾವು ಬೆಳೆಯನ್ನು ಪ್ಯಾಶನ್ ಆಗಿ ತೆಗೆದುಕೊಂಡು ಬೆಳೆಯುವ ಗಾಂವಕರ ಅವರು 100 ವಿಧವಾದ ಮಾವು ಬೆಳೆದಿದ್ದಾರೆ. ಅದರಲ್ಲಿ ಸ್ವರ್ಣರೇಖಾ, ಮಿಯಾಜಾಕಿ ಅದರಲ್ಲಿ ಹೈ ಕ್ವಾಲಿಟಿ, ಅತಿ ಹೆಚ್ಚು ಬೆಲೆ ಇರುವ ಮಾವುಗಳನ್ನು ಬೆಳೆದಿದ್ದಾರೆ. ಮಾರುಕಟ್ಟೆಯಲ್ಲಿ ಅವುಗಳಿಗೆ ಭಾರಿ ಬೇಡಿಕೆ ಇದೆ.

ಮಾವು ಬೆಳೆಗಾರರಿಗೆ ಇದರ ಬಗ್ಗೆ ಮಾಹಿತಿ ನೀಡುವ ಅಗತ್ಯವಿದ್ದು, ತೋಟಗಾರಿಕೆ ಇಲಾಖೆಯಿಂದ ಪ್ರಗತಿಪರ ಮಾವು ಬೆಳೆಗಾರ ರೈತರಿಂದ ಪ್ರಮೋದ ಗಾಂವಕರ ಅವರ ಮಾವಿನ ತೋಟಕ್ಕೆ ಭೇಟಿ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಹಾಪ್ ಕಾಮ್ಸ್ ಅಧ್ಯಕ್ಷ ಸಿದ್ದಣ್ಣ ಪ್ಯಾಟಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಕೃಷಿ ಇಲಾಖೆ ಉಪ ನಿರ್ದೇಶಕ ಕೆ.ಸಿ.ಭದ್ರಣ್ಣವರ, ಹಿರಿಯ ತೋಟಗಾರಿಕೆ ನಿರ್ದೇಶಕ ಇಮ್ತಿಯಾಜ್ ಚಂಗಾಪುರಿ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ತಮ್ಮಣ್ಣ ಗುಂಡಗೋವಿ ಸೇರಿದಂತೆ ಇತರರು ಇದ್ದರು.

ಬಗೆಬಗೆಯ ಮಾವು

ಹಣ್ಣುಗಳ ರಾಜ ಮಾವಿನ ಹಣ್ಣುಗಳ ವಿವಿಧ ಬಗೆಬಗೆಗಳಾದ ಸುಂದರ ಶಾ, ಪೈರಿ, ಜಿರಗಿಮಾವು, ಉಪ್ಪಿನಕಾಯಿ ತಳಿ, ಅರ್ಕಾ ನೀಲಕಿರಣ, ಸುವರ್ಣರೇಖಾ, ಧಾರವಾಡ ರಸಪೂರಿ, ಖಾದರ, ಫರ್ನಾಡಿನ್, ಕಿಶನ ಭಾಗ್, ಫಜಲಿ, ದಿಲಪಸಂದ, ರತ್ನಾ, ಗೂಂಗ, ಹಿಮಸಾಗರ, ಆಮ್ರಪಾಲ, ಲಕನೌ ಸಫೇದ, ನಿರಂಜನ, ಸಿಂಧು, ಕಲಪಡಿ, ನೀಲಗೋವಾ, ಮಲ್ಲಿಕಾ, ಅರ್ಕಾ ಪುನೀತ, ಲಾಂಗ್ರಾ, ನಾಜೂಕ ಪಸಂದ, ಚರಕು ರಸಂ ಮುಂಯಾದ ಹಲವಾರು ತಳಿಗಳ ಮಾವಿನ ಹಣ್ಣುಗಳು ಮಾವು ಮೇಳದಲ್ಲಿ ಸಾರ್ವಜನಿಕರಿಗೆ ಮಾರಟಕ್ಕಾಗಿ ಲಭ್ಯ ಇವೆ.

ಹೆಚ್ಚಾಗಿ ವಿದೇಶಗಳಿಗೆ ಮಾವಿನ ತಳಿಗಳಾದ ಆಪೂಸ್, ನೀಲಮ್ ಕೇಸರ ಹಾಗೂ ಸ್ಥಳಿಯ ತಳಿಗಳನ್ನು ಮಾರಾಟ ಮಾಡಲಾಗುತ್ತಿದೆ.

ಜಿಲ್ಲೆಯ ಕೆಲವು ಮಾವು ಬೆಳೆಗಾರರಾದ ಪ್ರಮೋದ, ಗಾಂವಕರ, ಶಿವನಗೌಡ ಪಾಟೀಲ, ರಾಜೇಂದ್ರ ಪೆÇೀದ್ದಾರ, ಗಿರೀಶ ಕೆರೂರ ಹಾಗೂ ದೇಶಪಾಂಡೆ ಅವರು ಸುಮಾರು 4 ಟನ್ ಮಾವಿನ ಹೆಣ್ಣುಗಳನ್ನು ರೂ. 150 ಕೆಜಿ ಯಂತೆ ಸಿಂಗಾಪುರ, ಅಮೇರಿಕಾ ರಾಷ್ಟ್ರಗಳಿಗೆ ರಫ್ತು ಮಾಡಿದ್ದಾರೆ.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]