Ceasefire: R Ashok hits back at Priyank Kharge's question

ಕದನವಿರಾಮ: ಪ್ರಿಯಾಂಕ್ ಖರ್ಗೆಗೆ ಪ್ರಶ್ನೆಗೆ ಆರ್ ಅಶೋಕ್ ತಿರುಗೇಟು

ಬೆಂಗಳೂರು: ಭಾರತ-ಪಾಕಿಸ್ತಾನದ ಮಧ್ಯೆ ಏರ್ಪಟ್ಟ ಕದನ ವಿರಾಮ ಕುರಿತು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸತ್ಯ ಹೇಳಬೇಕು, ಪಹಲ್ಗಾಂ ದಾಳಿ ನಡೆಸಿದ ನಾಲ್ವರು ಉಗ್ರರು ಈಗ ಎಲ್ಲಿದ್ದಾರೆ? ಎಂಬುದನ್ನು ಹೇಳಲಿ ಎಂದು ಆರ್‌ಡಿಪಿಆರ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಗ್ರಹಿಸಿದ್ದಾರೆ.

ಈ ಕುರಿತು ತಿರುಗೇಟು ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R Ashoka), ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ದೇಶದ್ರೋಹಿಗಳು ನಿಮ್ಮ ಕಾಂಗ್ರೆಸ್ ಕಚೇರಿಯಲ್ಲಿ ಐಟಿ ಸೆಲ್ ನಡೆಸುತ್ತಿದ್ದರಾ ಸಚಿವ ಪ್ರಿಯಾಂಕ್ ಖರ್ಗೆ ಅವರೇ? ಎಂದು ಪ್ರಶ್ನಿಸಿದ್ದಾರೆ.

ಪಹಲ್ಗಾಮ್ ನಲ್ಲಿ ಅಮಾಯಕ ಭಾರತೀಯ ಪ್ರವಾಸಿಗರನ್ನು ಕೊಂದ ಉಗ್ರರು ತರಬೇತಿ ಪಡೆದ ಕೇಂದ್ರಗಳು, ಅಲ್ಲಿ ನೆಲೆಸಿದ್ದ ಅವರ 100ಕ್ಕೂ ಹೆಚ್ಚು ಜಿಹಾದಿ ಸಂಗಡಿಗರು, ಅವರ ತಲೆಗೆ ಮತಾಂಧತೆ ತುಂಬಿದ ಭಯೋತ್ಪಾದಕ ಸಂಘಟನೆಗಳ Most Wanted ನಾಯಕರು, ಅವರು ನಡೆಸುತ್ತಿದ್ದ ಮದರಸಾಗಳು, ಅಲ್ಲಿದ್ದ ಶಸ್ತ್ರಾಸ್ತ್ರ, ಸಂವಹನ ಉಪಕರಣಗಳು, ಅವರಿಗೆ ಬೆಂಬಲವಾಗಿ ನಿಂತಿದ್ದ ಪಾಕಿಸ್ತಾನದ ಸೇನಾ ವಾಯುನೆಲೆಗಳು, ಎಲ್ಲವನ್ನೂ ನಮ್ಮ ಸೇನಾಪಡೆಗಳು ನೆಲಸಮ ಮಾಡಿವೆ.

ಪಾಕಿಸ್ತಾನದ ಆಶ್ರಯದಲ್ಲಿದ್ದ ಉಗ್ರರ ಸಾಮ್ರಾಜ್ಯವೇ ಧೂಳೀಪಟ ಆಗಿರುವಾಗ ಇನ್ನು ಅಲ್ಲಿ ತಲೆ ಎತ್ತಿದ ಹುಳು-ಹುಪ್ಪಟೆಗಳು ಉಳಿಯುತ್ತವೆಯೇ? ಪಹಲ್ಗಾಮ್ ದಾಳಿ ನಡೆಸಿದ ಉಗ್ರರು ಒಂದು ವೇಳೆ ಇನ್ನೂ ಬದುಕಿದ್ದರೆ, ಅವರು, ಪ್ರಪಂಚದ ಯಾವ ಭೂಭಾಗದಲ್ಲಿ, ಪಾತಾಳದಲ್ಲಿ ಅಡಗಿದ್ದರೂ ನಮ್ಮ ಸೇನಾಪಡೆಗಳು, ರಕ್ಷಣಾ ಪಡೆಗಳು ಇಂದಲ್ಲ ನಾಳೆ ಹಿಡಿದೇ ಹಿಡಿಯುತ್ತಾರೆ.

ನಮ್ಮ ಸೇನಾಪಡೆಗಳ ಸಾಮರ್ಥ್ಯದ ಬಗ್ಗೆ ಇನ್ನೂ ಏನಾದರೂ ಅನುಮಾನ ಇದ್ದರೆ ದಯವಿಟ್ಟು ಒಮ್ಮೆ ಪಾಕಿಸ್ತಾನದ ವಾಯು ನೆಲೆಗಳಿಗೆ, ಉಗ್ರರ ಅಡಗುತಾಣಗಳಿಗೆ ಭೇಟಿ ಕೊಟ್ಟು ಬನ್ನಿ.

ರಾಷ್ಟ್ರೀಯ ಭದ್ರತೆ ವಿಚಾರ ನಮ್ಮ ಸೇನಾಪಡೆಗಳ ಬಿಡಿ. ಆದರೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ದೇಶದ್ರೋಹಿಗಳು ಎಲ್ಲಿದ್ದಾರೆ ಎಂದು ಮೊದಲು ಉತ್ತರಿಸಿ ಪುಣ್ಯ ಕಟ್ಟಿಕೊಳ್ಳಿ.

ಫೋರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದು ಸಾಬೀತಾದರೂ ಆ ದೇಶದ್ರೋಹಿಗಳನ್ನು ಸಮರ್ಥನೆ ಮಾಡಿಕೊಂಡರಲ್ಲ, ಬಹುಶಃ ಅವರು ನಿಮಗೆ ಬಹಳ ಬೇಕಾದವರು ಇರಬೇಕು.

ಅಂದು ಗೆದ್ದ ರಾಜ್ಯಸಭಾ ಸದಸ್ಯರು ತಮ್ಮ ತಂದೆ ಖರ್ಗೆ ಅವರ ಪರಮಾಪ್ತರು ಕೂಡ. ಆದ್ದರಿಂದ ಆ ದೇಶದ್ರೋಹಿಗಳು ಎಲ್ಲಿದ್ದಾರೆ ಎಂದು ಬಹುಶಃ ತಮಗೆ ಚೆನ್ನಾಗಿ ಗೊತ್ತಿರಲೇಬೇಕು. ಮೊದಲು ಆ ದೇಶದ್ರೋಹಿಗಳನ್ನು ಹಿಡಿಯಲು ಪೊಲೀಸರಿಗೆ ಸಹಾಯ ಮಾಡಿ ಅವರನ್ನ ಜೈಲಿಗೆ ಅಟ್ಟಿ.

ರಾಷ್ಟ್ರೀಯ ಭದ್ರತೆ ವಿಚಾರದ ಬಗ್ಗೆ ಚರ್ಚೆ ಮಾಡೋದಕ್ಕೆ ಸಂಸತ್ತಿನಲ್ಲಿ ನಿಮ್ಮ ಪಕ್ಷದ ದೊಡ್ಡ ದೊಡ್ಡ ನಾಯಕರು ಇದ್ದಾರೆ. ತಾವು ಮೊದಲು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿದವರನ್ನ ಹುಡುಕಿ, ಅವರ ಹೆಡೆಮುರಿ ಕಟ್ಟಿ ಎಂದು ಹೇಳಿದ್ದಾರೆ.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]