ಕದನವಿರಾಮ: ಬಿಜೆಪಿಯ ಯುವಕರಿಗೆ ಸಂತೋಷ್ ಲಾಡ್ ಕೈ ಮುಗಿದು ಮನವಿ..!

Ceasefire: Santosh Lad appeals to BJP youth..!

ಬೆಂಗಳೂರು: ಪಾಕಿಸ್ತಾನದ ವಿರುದ್ಧ ಯಾವ ಕಾರಣಕ್ಕಾಗಿ ರಾತ್ರೋರಾತ್ರಿ ಕದನ ವಿರಾಮ (Ceasefire) ಮಾಡಿದ್ದೀರಿ?, ಟ್ರಂಪ್ ಕಾಶ್ಮೀರ ವಿಚಾರವಾಗಿ ಪದೇ ಪದೇ ಮಾತಾಡುತ್ತಿದ್ದರು ಪ್ರಧಾನಿ ಮೋದಿ (PM Modi) ಮಾತಾಡುತ್ತಿಲ್ಲ, ಬಿಜೆಪಿಯವರು (BJP) ತಿರಂಗಾ ಯಾತ್ರೆ ಮಾಡುವ ಬದಲು ಡೊನಾಲ್ಡ್ ಟ್ರಂಪ್ (Donald Trump) ಪರವಾಗಿ ಯಾತ್ರೆ ಮಾಡಲಿ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad) ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 22 ದಿನಗಳಿಂದ ಏನೆಲ್ಲಾ ನಡೆದಿದೆ ಎಂಬುದು ಜನರ ಮುಂದಿದೆ. ನಮ್ಮ ಭಾರತೀಯ ಸೇನೆ ದೇಶದ ಹಿತದೃಷ್ಟಿ ಕಾಪಾಡಿವೆ. ಪಾಕಿಸ್ತಾನದ ವಿರುದ್ಧ ನಮ್ಮ ಸೇನೆ ಮೇಲುಗೈ ಸಾಧಿಸಿದೆ. ಅದಕ್ಕಾಗಿ ಭಾರತೀಯ ಸೇನೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ದೇಶದ ಜನತೆಗೆ ಪ್ರಧಾನಿ ಮೋದಿ ಉತ್ತರ ಕೊಡಬೇಕು

ಉಗ್ರರ ಸಂಹಾರ ಅಂತೇಳಿ ಪಾಕಿಸ್ತಾನದ ವಿರುದ್ಧ ಯಾವ ಕಾರಣಕ್ಕಾಗಿ ಕದನ ವಿರಾಮ ಮಾಡಿದ್ದೀರಿ? ಈ ಪ್ರಶ್ನೆಗೆ ಪ್ರಧಾನಿ ಮೋದಿ ಉತ್ತರ ಕೊಡಬೇಕು. ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಸಂದರ್ಭದಲ್ಲಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಕದನ ವಿರಾಮ ಘೋಷಣೆ ಮಾಡುತ್ತಾರೆ. ಎರಡು ದೇಶದ ನಡುವೆ ಟ್ರಂಪ್ ಹೇಳಿದ ರೀತಿಯಲ್ಲಿ ವ್ಯಾಪಾರಕ್ಕಾಗಿ ಯುದ್ಧ ನಿಲ್ಲಿಸಲಾಯ್ತೇ?.

ಹಾಗಾದರೆ ಇದು ರಾಜಕೀಯಕ್ಕೆ ಮಾಡಿದ ಯುದ್ಧವೇ? ಅಥವಾ ನಮ್ಮ ದೇಶ ನಡೆಸುತ್ತಿರುವುದು ಟ್ರಂಪ್ ಅವರಾ? ಎಂದು ಪ್ರಶ್ನಿಸಿದರು.

ಏಪ್ರಿಲ್ 22 ರಂದು ಪ್ರಧಾನಿ ನರೇಂದ್ರ ಮೋದಿ ಸೌದಿಯಿಂದ ವಾಪಸ್ ಬರ್ತಾರೆ. ಆದರೆ ಪತ್ರಿಕಾಗೋಷ್ಠಿ ನಡೆಸಲ್ಲ, ಬದಲಾಗಿ ಬಿಹಾರ ಚುನಾವಣಾ ಪ್ರಚಾರಕ್ಕೆ ಹೋಗ್ತಾರೆ. ಸರ್ವ ಪಕ್ಷ ಸಭೆಗೂ ಗೈರಾಗಿದ್ದಾರೆ. ನಾನು ಸುಪ್ರೀಂ, ಯಾವ ಸಭೆಗೆ ಭಾಗಿಯಾಗಲ್ಲ ಎಂಬ ಸಂದೇಶವೇ ಯಾವ ಸಂದೇಶವನ್ನು ಪ್ರಧಾನಿ ಮೋದಿ ಕೊಡಲು ಹೊರಟಿದ್ದಾರೆ ಎಂದು ಪ್ರಶ್ನಿಸಿದರು.

11 ವರ್ಷದಿಂದ ಮೋದಿ ಕ್ಯಾಮೆರಾ ಬಿಟ್ರೆ ನ್ಯೂಸ್ ಚಾನಲ್ ಬೇರೆ ತೋರಿಸಲ್ಲ, ರೆಕಾರ್ಡ್ ಆಗಿರುವ ವಿಡಿಯೋವನ್ನು ಪ್ರಸಾರ ಮಾಡಲಾಗ್ತಿದೆ. ಅದನ್ನು ದೇಶದ ಜನರು ನೋಡಬೇಕಾದ ಸ್ಥಿತಿ ಇದೆ. ಕೋವಿಡಲ್ಲೂ ಮೋದಿ ವಿಡಿಯೋ, ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನೀರು ಬಂದ್ರೂ ಮೋದಿ ವಿಡಿಯೋ.

ಉಗ್ರರ ದಾಳಿ ಕುರಿತು ಇಂಟಲಿಜೆನ್ಸ್ ಮಾಹಿತಿ

ಕೇಂದ್ರ ಸರ್ಕಾರದಿಂದ ಯಾವುದೇ ತಪ್ಪು ಆಗಿಲ್ಲ ಎಂದು ಬಿಂಬಿಸುವುದೇ ಕೆಲಸವಾಗಿದೆ. ಹಾಗಾದರೆ ಭದ್ರತಾ ಲೋಪ ಆಗಿದ್ದೇನು..? ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆಯುತ್ತೆ ಎಂದು ಇಂಟಲಿಜೆನ್ಸ್ ವರದಿ ಇದೆ. ಮತ್ತೆ ಸರ್ಕಾರ ಯಾಕ್ ಸುಮ್ನೆ ಕೂತ್ಕೊಂಡ್ ಇತ್ತು. ಇದರ ಬಗ್ಗೆ ಯಾರ್ ಮಾತನಾಡಬೇಕು..? ಎಲ್ ಚರ್ಚೆ ಆಗಬೇಕು.

ಪುಲ್ವಾಮ ದಾಳಿ ಕೂಡ ಇದೇ ರೀತಿ ಆಯ್ತು. ಮತ್ತೆ ಇದು ಪ್ರಚಾರಕ್ಕೆ ನಡೆಸಿದ ಯುದ್ಧವೆ..? ರಾಜಕೀಯಕ್ಕಾಗಿ ನಡೆಸಿದ ಯುದ್ದವೇ..? ಇದಕ್ಕೆ ಸ್ಪಷ್ಟೀಕರಣ ನೀಡಬೇಕಲ್ವಾ.. ಇಡೀ ದೇಶದ ಜನತೆಗೆ ಉತ್ತರ ಕೊಡಬೇಕಿದೆ.

ಬಿಜೆಪಿ ಯುವಕರಲ್ಲಿ ಮನವಿ

ಒಂದು ದಿನ ಮುಂಚೆ ರೆಕಾರ್ಡ್ ಮಾಡಿರುವ ವಿಡಿಯೋ ನೋಡಬೇಕಾದ ಅನಿವಾರ್ಯತೆ ದೇಶಕ್ಕೆ ಬಂದಿದೆ, ಬಿಜೆಪಿ ಯುವಕರಲ್ಲಿ ಮನವಿ ಮಾಡ್ತಿನಿ, ಬಿಜೆಪಿ ಮುಖಂಡರನ್ನು ಪ್ರಶ್ನೆ ಮಾಡಿ, ಈ ದೇಶದ ಪ್ರಧಾನಮಂತ್ರಿ ಅವರು 11 ವರ್ಷದ ಆದ್ರೂ ಒಂದ್ ಪ್ರಸ್ಮೀಟ್ ಮಾಡಲ್ಲ. 7 ತಾರೀಖು ರೆಕಾರ್ಡ್ ಆಗಿರೋದು, 8 ನೇ ತಾರೀಖಿನಂದು ಪ್ರಸಾರ ಆಗುತ್ತೆ. ಅದೇ ಟೈಮಲ್ ಪಾಕಿಸ್ತಾನ ಭಾರತದ ಮೇಲೆ ದಾಳಿ ಮಾಡುತ್ತೆ. ಮತ್ತೆ ರಾತ್ರೋರಾತ್ರಿ ಯಾವ ಕಾರಣಕ್ಕೆ ಕದನವಿರಾಮ ಘೋಷಣೆ ಆಯ್ತು ಅಂತ ಬಿಜೆಪಿ ಯುವಕರು ದೇಶಕ್ಕಾಗಿ ಬಿಜೆಪಿ ಮುಖಂಡರನ್ನು ಪ್ರಶ್ನೆ ಮಾಡಿ.

ಏನ್ ಬರೀ ಭಾಷಣಗಳು ಬಿಹಾರ ಎಲೆಕ್ಷನ್ಗೆ ಹೋಗಿ ಪಾಕಿಸ್ತಾನವನ್ನು ಮುಗಿಸಿ ಬಿಡ್ತಿನಿ ಅಂದ್ರೂ, ಇವತ್ತಿಗೂ ಅದೇ ಹೇಳ್ತಾ ಇದ್ದಾರೆ.

ರಷ್ಯಾ ಉಕ್ರೇನ್ ಯುದ್ದವನ್ನು ಪ್ರಧಾನಿ ನರೇಂದ್ರ ಮೋದಿ ನಿಲ್ಲಿಸಿದ್ದರು ಎಂದು ಹೇಳಲಾಗ್ತಿದೆ. ಆದರೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ಟ್ರಂಪ್ ನಿಲ್ಲಿಸಿದ್ದಲ್ವಾ? ಪಹಲ್ಗಾಮ್ ಭಯೋತ್ಪಾದಕರು ಸಿಕ್ಕಿದ್ರಾ? ವ್ಯಾಪಾರಕ್ಕಾಗಿ ಕದನ ವಿರಾಮ ಮಾಡಲಾಯ್ತೇ? ಪಾಕಿಸ್ತಾನ ಮತ್ತು ಭಾರತವನ್ನು ಟ್ರಂಪ್ ಸಮಾನವಾಗಿ ನೋಡಿಕೊಳ್ಳಲು ಅವಕಾಶ ಸಿಕ್ಕಂತಾಯಿತು.

ಪಾಕಿಸ್ತಾನಕ್ಕೆ ನೀಡಲಾದ ಐಎಂಎ ಫಂಡಿಂಗ್ ಅಮೇರಿಕಾದ ಪಾಲು ಹೆಚ್ಚಾಗಿದೆ. ಮತ್ತೆ ಪ್ರಧಾನಿ ಮೋದಿ ಅಮೇರಿಕಾದ ಚುನಾವಣೆಯಲ್ಲಿ ಟ್ರಂಪ್ ಪರ ಪ್ರಚಾರ ಮಾಡಿದ್ದಾರೆ. ಜಾಸ್ತಿ ಪ್ರೆಂಡ್ ಅಲ್ವಾ.. ಮಾತಾಡೋಕ್ ತುಂಬಾ ಇದೆ. ಈ ಎಲ್ಲಾ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಈಗಾಗಲೇ ಹೇಳಿದ್ದಾರೆ ವಿಶೇಷ ಅಧಿವೇಶನನ್ನು ಕರೆಯಿರಿ ಎಂದು ಆಗ್ರಹಿಸಿದರು.

ಸೇನಾ ಮುಖ್ಯಸ್ಥರಾದ ಸೋಫಿಯಾ ಖುರೇಷಿ ವಿರುದ್ಧ ಬಿಜೆಪಿ ಮಧ್ಯ ಪ್ರದೇಶದ ನಾಯಕ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿ, ಇದು ನಾಚಿಕೆಗೇಡುತನ ಇದರ ಬಗ್ಗೆ ಯಾರೂ ಟ್ವೀಟ್ ಮಾಡುವುದಿಲ್ಲ.

ಮಧ್ಯ ಪ್ರದೇಶ ಹೈಕೋರ್ಟ್ ಇದೀಗ ಎಫ್ ಐ ಆರ್ ಮಾಡಲು ಸೂಚಿಸಿದೆ. ಸೋಫಿಯಾ ಖುರೇಷಿ ಈ ದೇಶವನ್ನು ಪ್ರತಿನಿಧಿಸುತ್ತಾರೆ. ಏನು ಬೇಕಾದರೂ ಮಾತನಾಡಬಹುದು ಈ ದೇಶದಲ್ಲಿ ಎಂಬಂತಾಗಿದೆ.

ರಾಜಕೀಯ

ಪ್ರಜಾಪ್ರಭುತ್ವಕ್ಕೆ ಮಾದರಿಯಾದ ಎಂಕೆ ಸ್ಟಾಲಿನ್‌ ನಡೆ..!

ಪ್ರಜಾಪ್ರಭುತ್ವಕ್ಕೆ ಮಾದರಿಯಾದ ಎಂಕೆ ಸ್ಟಾಲಿನ್‌ ನಡೆ..!

ತಮ್ಮ ಸರ್ಕಾರವನ್ನು ಕೆಳಗಿಳಿಸಿ, ಅನ್ಯ ಪಕ್ಷದ ಹೊಸ ಸರ್ಕಾರ ಅಧಿಕಾರಕ್ಕೆ ಬಂದರೆ, ಸದಾ ಅವರನ್ನು ಕೆಳಗಿಳಿಸಲು ಸುಳ್ಳು ಪ್ರಚಾರ ಮಾಡುತ್ತಾ, ಸಾಂವಿಧಾನಿಕ ಬಿಕ್ಕಟ ಸೃಷ್ಟಿಸಲು ಕಾಯುವ ಪಕ್ಷಗಳ ನಡುವೆ ಎಂಕೆ ಸ್ಟಾಲಿನ್ (MK Stalin)

[ccc_my_favorite_select_button post_id="121840"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]