Ceasefire: Tweet war between BY Vijayendra and Santosh Lad

ಪಾಕ್ ಜತೆ ಕದನ ವಿರಾಮ: ಬಿವೈ ವಿಜಯೇಂದ್ರ – ಸಂತೋಷ್ ಲಾಡ್ ನಡುವೆ ಟ್ವಿಟ್ ಸಮರ

ಬೆಂಗಳೂರು: ಪಾಕಿಸ್ತಾನದ ಉಗ್ರರ ದಾಳಿ ಹಿನ್ನಲೆ ನಡೆದ ಆಪರೇಷನ್ ಸಿಂಧೂರ (Operation Sindoora) ಕಾರ್ಯಾಚರಣೆಯನ್ನು ಕೇಂದ್ರ ಸರ್ಕಾರ ಏಕಾಏಕಿ ಕದನ ವಿರಾಮದ (Ceasefire) ಘೋಷಿಸಿರುವ ಬಗ್ಗೆ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವೆ ತೀವ್ರವಾದ ಮಾತಿನ ಸಮರ ನಡೆಯುತ್ತಿದೆ.

ಇದೇ ವಿಚಾರವಾಗಿ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಸಚಿವ ಸಂತೋಷ್ ಲಾಡ್ (Santosh lad), ಕದನ ವಿರಾಮದ ಕುರಿತು ಭಾರತೀಯರಲ್ಲಿನ ಅಸಮಾಧಾನ, ಟ್ರಂಪ್ ಮಧ್ಯಸ್ಥಿಕೆ ಸೇರಿದಂತೆ ಅಗತ್ಯ, ಅನಿವಾರ್ಯತೆ ಸೇರಿದಂತೆ ಅನೇಕ ಪ್ರಶ್ನೆಗಳಿಗೆ ಪ್ರಧಾನಿ ಮೋದಿ (Pm Modi) ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದರು.

ಇದಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟ್ವಿಟ್ ಮಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿಚಾರಗಳ ಕುರಿತು ಭಾರತದ ಸಿರಿ ಕಿರೀಟ ಕಾಶ್ಮೀರವನ್ನು ಅಸ್ಥಿರಗೊಳಿಸಿದ್ದು ಯಾರು?

ರಕ್ಷಣೆ ಇಲ್ಲದ ಅಸಹಾಯಕ ಪರಿಸ್ಥಿತಿಯಲ್ಲಿ ಲಕ್ಷಾಂತರ ಮೂಲ ನಿವಾಸಿ ಕಾಶ್ಮೀರಿ ಪಂಡಿತರ ಕುಟುಂಬಗಳು ಕೊಲೆ, ಅತ್ಯಾಚಾರದ ದೌರ್ಜನ್ಯಗಳನ್ನು ಅನುಭವಿಸಿ ಕಾಶ್ಮೀರ ತೊರೆಯುವಂತಾಗಲು ಕಾರಣರಾದವರಾರು?

ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಬಿಟ್ಟುಕೊಟ್ಟವರಾರು? ಅವಕಾಶವಿದ್ದರೂ POK ಆಕ್ರಮಿಸಿಕೊಳ್ಳದೇ ಕೈಚೆಲ್ಲಿದವರಾರು? ಕಾಂಗ್ರೆಸ್ ಹಾಗೂ ಅದರ ಸ್ವಾರ್ಥ ಆಡಳಿತ ಇದಕ್ಕೆಲ್ಲ ಕಾರಣ ಎನ್ನುವುದು ದೇಶದ ಜನತೆಗೆ, ಜಗತ್ತಿಗೇ ತಿಳಿದ ಸತ್ಯ ಎಂದು ಹರಿಹಾಯ್ದಿದ್ದರು.

ಮತ್ತೆ ಈ ಟ್ವಿಟ್ಗೆ ಪ್ರತಿ ಟ್ವಿಟ್ ಮಾಡಿರುವ ಸಚಿವ ಸಂತೋಷ್ ಲಾಡ್, ಭಾರತದ ಸಿರಿ ಕಿರೀಟ ಕಾಶ್ಮೀರದ ಪೆಹೆಲ್ಗಾಮ್ ನ ಬೈಸನ್ ವ್ಯಾಲಿಯಲ್ಲಿ ಸರಿಯಾದ ಭದ್ರತಾ‌ ಸಿಬ್ಬಂದಿಯನ್ನು ನಿಯೋಜಿಸಿದೆ ಬೇಜವಾಬ್ದಾರಿ ಮೆರೆದವರು ಯಾರು?

ಕಾಶ್ಮೀರಿ ಪಂಡಿತರ ಮೇಲಾದ ದೌರ್ಜನ್ಯಗಳನ್ನು ಕೇವಲ ಚುನಾವಣಾ ಪ್ರಚಾರದ ಸರಕಾಗಿಸಿಕೊಂಡು ಅವರ ಭಾವನೆಗಳೊಂದಿಗೆ ಆಟವಾಡುತ್ತಿರುವವರು ಯಾರು?

ಪಾಕ್ ಆಕ್ರಮಿತ ಕಾಶ್ಮೀರವನ್ನು ಪುನಃ ಪಡೆದುಕೊಳ್ಳುವ ಅವಕಾಶವಿದ್ದಾಗಲೂ ಕೈಚೆಲ್ಲಿದ ಮಹಾನುಭಾವ ಯಾರು ಎಂಬುದು ಇಡೀ ದೇಶ ಹಾಗೂ ಜಗತ್ತಿಗೇ ಬಟಾಬಯಲಾದ ಸತ್ಯ.

ಪ್ರಜಾಪ್ರಭುತ್ವದಲ್ಲಿ ಕುಟುಂಬ ರಾಜಕಾರಣದ ವಿರೋಧಿ ಎಂದು ಬಿಂಬಿಸುವ ರೀತಿಯಲ್ಲಿ ಮೆರೆದ ತಾವು ಇಂದಿಗೂ ನಿಮ್ಮ ತಂದೆಯ ಹೆಸರಿಲ್ಲದೇ ಚಲಾವಣೆಯಾಗದ ನಾಣ್ಯ ಎಂಬ ಸತ್ಯ ನಮಗಿಂತ ನಿಮ್ಮದೇ ಅಧ್ಯಕ್ಷಗಿರಿ ಸಹಿಸುತ್ತಿರುವ ಬಿಜೆಪಿ ಕರ್ನಾಟಕ ನಿರಾಶ್ರಿತರಿಗೆ ಚೆನ್ನಾಗಿ ಗೊತ್ತಿದೆ.

ಭಾರತದ ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಾವು ಹಾಗೂ ನಮ್ಮ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ಜೊತೆ ಗಟ್ಟಿಯಾಗಿ‌ ನಿಲ್ಲುತ್ತಲೇ ಬಂದಿದ್ದೇವೆ. ಈ ವಿಷಯದಲ್ಲಿ ನಮ್ಮ ದೇಶದ ವೀರ ಯೋಧೆ ಸೋಫಿಯಾ ಖುರೇಷಿಯವರನ್ನು ಪಾಪಿ ಪಾಕಿಸ್ತಾನಿಗಳೊಂದಿಗೆ ಹೋಲಿಸಿ, ವಿಕೃತವಾಗಿ ಉಡಾಫೆ ಮಾತಾಡುವ ನಿಮ್ಮ ಬಿಜೆಪಿ ಪಕ್ಷದವರಿಂದ ಕಲಿಯುವಂತಹ ಯಾವ ಹರಕತ್ತು ನಮ್ಮ ಕಾಂಗ್ರೆಸ್ ಪಕ್ಷಕ್ಕಿಲ್ಲ.

ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವ ಎಲ್ಲ ಶಕ್ತಿ ನಮ್ಮ ರಕ್ಷಣಾ ಪಡೆಗಳಿಗಿದ್ದರೂ ಸಹ ಯಾರದೋ ಅಪ್ಪಣೆಗೆ ತಲೆಬಾಗಿ ಶರಣಾದದ್ದು ಯಾವ ಪುರುಷಾರ್ಥಕ್ಕಾಗಿ ಎಂದು ಶತಕೋಟಿ ಭಾರತೀಯರೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳುತ್ತಿದ್ದಾರೆ.

ದೇಶದ ಜನರ ಭಾವನೆಗಳಿಗೆ ವಿರುದ್ಧವಾಗಿ, ನಮ್ಮ ಅಮಾಯಕ ಸಹೋದರಿಯರ ಸಿಂಧೂರ ಅಳಿಸಿದ ಪಾಪಿಗಳನ್ನು ನಿರ್ಮೂಲನೆ ಮಾಡುವುದನ್ನು ಬಿಟ್ಟು ಕದನವಿರಾಮ ಘೋಷಿಸಿದ್ದನ್ನು ಸಹ ನಿಮ್ಮಂತಹ ಅಪ್ಪನ ಹೆಸರನ್ನು ಟ್ರಂಪ್ ಕಾರ್ಡ್ ಮಾಡಿಕೊಂಡು ಬದುಕುತ್ತಿರುವವರೆಲ್ಲ ಬಹುಪರಾಕ್ ಹೇಳಿಕೊಂಡು ತಿರುಗುತ್ತಿರುವುದನ್ನು ನೋಡಿದರೆ ಭಾರತೀಯರು ನಿಮಗೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂಬುದನ್ನು ಮೇಲಿನವರನ್ನು ಮೆಚ್ಚಿಸಲು ಒಟಗುಟ್ಟುವುದನ್ನು ಬಿಟ್ಟು ಅರ್ಥ ಮಾಡಿಕೊಳ್ಳುವುದು ಒಳಿತು.

ಕೊನೆಗೊಂದು ಮಾತು, ಆಪರೇಶನ್ ಸಿಂಧೂರದ ಹೆಸರಲ್ಲಿ ರೀಲ್ಸ್ ಶೋಕಿ ಮಾಡುತ್ತ, ಇಂತಹ ಸೂಕ್ಷ್ಮ ವಿಚಾರವನ್ನು ಸಹ ಚುನಾವಣೆ ಸರಕಾಗಿ ಬಳಸಿಕೊಳ್ಳುವ ನಿಮ್ಮ ಪಕ್ಷದ ನಾಚಿಕೆಗೇಡಿತನಕ್ಕೆ ನಿಮ್ಮ ಪಕ್ಷವೇ ಸಾಟಿ ಬಿಡಿ! ಎಂದಿದ್ದಾರೆ.

ರಾಜಕೀಯ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

"ಅನಿಲ ಸಿಲಿಂಡರ್ ಗಳು (LPG) ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು

[ccc_my_favorite_select_button post_id="120126"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!