ಪಾಕ್ ಜತೆ ಕದನ ವಿರಾಮ: ಬಿವೈ ವಿಜಯೇಂದ್ರ – ಸಂತೋಷ್ ಲಾಡ್ ನಡುವೆ ಟ್ವಿಟ್ ಸಮರ

Ceasefire: Tweet war between BY Vijayendra and Santosh Lad

ಬೆಂಗಳೂರು: ಪಾಕಿಸ್ತಾನದ ಉಗ್ರರ ದಾಳಿ ಹಿನ್ನಲೆ ನಡೆದ ಆಪರೇಷನ್ ಸಿಂಧೂರ (Operation Sindoora) ಕಾರ್ಯಾಚರಣೆಯನ್ನು ಕೇಂದ್ರ ಸರ್ಕಾರ ಏಕಾಏಕಿ ಕದನ ವಿರಾಮದ (Ceasefire) ಘೋಷಿಸಿರುವ ಬಗ್ಗೆ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವೆ ತೀವ್ರವಾದ ಮಾತಿನ ಸಮರ ನಡೆಯುತ್ತಿದೆ.

ಇದೇ ವಿಚಾರವಾಗಿ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಸಚಿವ ಸಂತೋಷ್ ಲಾಡ್ (Santosh lad), ಕದನ ವಿರಾಮದ ಕುರಿತು ಭಾರತೀಯರಲ್ಲಿನ ಅಸಮಾಧಾನ, ಟ್ರಂಪ್ ಮಧ್ಯಸ್ಥಿಕೆ ಸೇರಿದಂತೆ ಅಗತ್ಯ, ಅನಿವಾರ್ಯತೆ ಸೇರಿದಂತೆ ಅನೇಕ ಪ್ರಶ್ನೆಗಳಿಗೆ ಪ್ರಧಾನಿ ಮೋದಿ (Pm Modi) ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದರು.

ಇದಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟ್ವಿಟ್ ಮಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿಚಾರಗಳ ಕುರಿತು ಭಾರತದ ಸಿರಿ ಕಿರೀಟ ಕಾಶ್ಮೀರವನ್ನು ಅಸ್ಥಿರಗೊಳಿಸಿದ್ದು ಯಾರು?

ರಕ್ಷಣೆ ಇಲ್ಲದ ಅಸಹಾಯಕ ಪರಿಸ್ಥಿತಿಯಲ್ಲಿ ಲಕ್ಷಾಂತರ ಮೂಲ ನಿವಾಸಿ ಕಾಶ್ಮೀರಿ ಪಂಡಿತರ ಕುಟುಂಬಗಳು ಕೊಲೆ, ಅತ್ಯಾಚಾರದ ದೌರ್ಜನ್ಯಗಳನ್ನು ಅನುಭವಿಸಿ ಕಾಶ್ಮೀರ ತೊರೆಯುವಂತಾಗಲು ಕಾರಣರಾದವರಾರು?

ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಬಿಟ್ಟುಕೊಟ್ಟವರಾರು? ಅವಕಾಶವಿದ್ದರೂ POK ಆಕ್ರಮಿಸಿಕೊಳ್ಳದೇ ಕೈಚೆಲ್ಲಿದವರಾರು? ಕಾಂಗ್ರೆಸ್ ಹಾಗೂ ಅದರ ಸ್ವಾರ್ಥ ಆಡಳಿತ ಇದಕ್ಕೆಲ್ಲ ಕಾರಣ ಎನ್ನುವುದು ದೇಶದ ಜನತೆಗೆ, ಜಗತ್ತಿಗೇ ತಿಳಿದ ಸತ್ಯ ಎಂದು ಹರಿಹಾಯ್ದಿದ್ದರು.

ಮತ್ತೆ ಈ ಟ್ವಿಟ್ಗೆ ಪ್ರತಿ ಟ್ವಿಟ್ ಮಾಡಿರುವ ಸಚಿವ ಸಂತೋಷ್ ಲಾಡ್, ಭಾರತದ ಸಿರಿ ಕಿರೀಟ ಕಾಶ್ಮೀರದ ಪೆಹೆಲ್ಗಾಮ್ ನ ಬೈಸನ್ ವ್ಯಾಲಿಯಲ್ಲಿ ಸರಿಯಾದ ಭದ್ರತಾ‌ ಸಿಬ್ಬಂದಿಯನ್ನು ನಿಯೋಜಿಸಿದೆ ಬೇಜವಾಬ್ದಾರಿ ಮೆರೆದವರು ಯಾರು?

ಕಾಶ್ಮೀರಿ ಪಂಡಿತರ ಮೇಲಾದ ದೌರ್ಜನ್ಯಗಳನ್ನು ಕೇವಲ ಚುನಾವಣಾ ಪ್ರಚಾರದ ಸರಕಾಗಿಸಿಕೊಂಡು ಅವರ ಭಾವನೆಗಳೊಂದಿಗೆ ಆಟವಾಡುತ್ತಿರುವವರು ಯಾರು?

ಪಾಕ್ ಆಕ್ರಮಿತ ಕಾಶ್ಮೀರವನ್ನು ಪುನಃ ಪಡೆದುಕೊಳ್ಳುವ ಅವಕಾಶವಿದ್ದಾಗಲೂ ಕೈಚೆಲ್ಲಿದ ಮಹಾನುಭಾವ ಯಾರು ಎಂಬುದು ಇಡೀ ದೇಶ ಹಾಗೂ ಜಗತ್ತಿಗೇ ಬಟಾಬಯಲಾದ ಸತ್ಯ.

ಪ್ರಜಾಪ್ರಭುತ್ವದಲ್ಲಿ ಕುಟುಂಬ ರಾಜಕಾರಣದ ವಿರೋಧಿ ಎಂದು ಬಿಂಬಿಸುವ ರೀತಿಯಲ್ಲಿ ಮೆರೆದ ತಾವು ಇಂದಿಗೂ ನಿಮ್ಮ ತಂದೆಯ ಹೆಸರಿಲ್ಲದೇ ಚಲಾವಣೆಯಾಗದ ನಾಣ್ಯ ಎಂಬ ಸತ್ಯ ನಮಗಿಂತ ನಿಮ್ಮದೇ ಅಧ್ಯಕ್ಷಗಿರಿ ಸಹಿಸುತ್ತಿರುವ ಬಿಜೆಪಿ ಕರ್ನಾಟಕ ನಿರಾಶ್ರಿತರಿಗೆ ಚೆನ್ನಾಗಿ ಗೊತ್ತಿದೆ.

ಭಾರತದ ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಾವು ಹಾಗೂ ನಮ್ಮ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ಜೊತೆ ಗಟ್ಟಿಯಾಗಿ‌ ನಿಲ್ಲುತ್ತಲೇ ಬಂದಿದ್ದೇವೆ. ಈ ವಿಷಯದಲ್ಲಿ ನಮ್ಮ ದೇಶದ ವೀರ ಯೋಧೆ ಸೋಫಿಯಾ ಖುರೇಷಿಯವರನ್ನು ಪಾಪಿ ಪಾಕಿಸ್ತಾನಿಗಳೊಂದಿಗೆ ಹೋಲಿಸಿ, ವಿಕೃತವಾಗಿ ಉಡಾಫೆ ಮಾತಾಡುವ ನಿಮ್ಮ ಬಿಜೆಪಿ ಪಕ್ಷದವರಿಂದ ಕಲಿಯುವಂತಹ ಯಾವ ಹರಕತ್ತು ನಮ್ಮ ಕಾಂಗ್ರೆಸ್ ಪಕ್ಷಕ್ಕಿಲ್ಲ.

ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವ ಎಲ್ಲ ಶಕ್ತಿ ನಮ್ಮ ರಕ್ಷಣಾ ಪಡೆಗಳಿಗಿದ್ದರೂ ಸಹ ಯಾರದೋ ಅಪ್ಪಣೆಗೆ ತಲೆಬಾಗಿ ಶರಣಾದದ್ದು ಯಾವ ಪುರುಷಾರ್ಥಕ್ಕಾಗಿ ಎಂದು ಶತಕೋಟಿ ಭಾರತೀಯರೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳುತ್ತಿದ್ದಾರೆ.

ದೇಶದ ಜನರ ಭಾವನೆಗಳಿಗೆ ವಿರುದ್ಧವಾಗಿ, ನಮ್ಮ ಅಮಾಯಕ ಸಹೋದರಿಯರ ಸಿಂಧೂರ ಅಳಿಸಿದ ಪಾಪಿಗಳನ್ನು ನಿರ್ಮೂಲನೆ ಮಾಡುವುದನ್ನು ಬಿಟ್ಟು ಕದನವಿರಾಮ ಘೋಷಿಸಿದ್ದನ್ನು ಸಹ ನಿಮ್ಮಂತಹ ಅಪ್ಪನ ಹೆಸರನ್ನು ಟ್ರಂಪ್ ಕಾರ್ಡ್ ಮಾಡಿಕೊಂಡು ಬದುಕುತ್ತಿರುವವರೆಲ್ಲ ಬಹುಪರಾಕ್ ಹೇಳಿಕೊಂಡು ತಿರುಗುತ್ತಿರುವುದನ್ನು ನೋಡಿದರೆ ಭಾರತೀಯರು ನಿಮಗೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂಬುದನ್ನು ಮೇಲಿನವರನ್ನು ಮೆಚ್ಚಿಸಲು ಒಟಗುಟ್ಟುವುದನ್ನು ಬಿಟ್ಟು ಅರ್ಥ ಮಾಡಿಕೊಳ್ಳುವುದು ಒಳಿತು.

ಕೊನೆಗೊಂದು ಮಾತು, ಆಪರೇಶನ್ ಸಿಂಧೂರದ ಹೆಸರಲ್ಲಿ ರೀಲ್ಸ್ ಶೋಕಿ ಮಾಡುತ್ತ, ಇಂತಹ ಸೂಕ್ಷ್ಮ ವಿಚಾರವನ್ನು ಸಹ ಚುನಾವಣೆ ಸರಕಾಗಿ ಬಳಸಿಕೊಳ್ಳುವ ನಿಮ್ಮ ಪಕ್ಷದ ನಾಚಿಕೆಗೇಡಿತನಕ್ಕೆ ನಿಮ್ಮ ಪಕ್ಷವೇ ಸಾಟಿ ಬಿಡಿ! ಎಂದಿದ್ದಾರೆ.

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]