Ceasefire: Tweet war between BY Vijayendra and Santosh Lad

ಪಾಕ್ ಜತೆ ಕದನ ವಿರಾಮ: ಬಿವೈ ವಿಜಯೇಂದ್ರ – ಸಂತೋಷ್ ಲಾಡ್ ನಡುವೆ ಟ್ವಿಟ್ ಸಮರ

ಬೆಂಗಳೂರು: ಪಾಕಿಸ್ತಾನದ ಉಗ್ರರ ದಾಳಿ ಹಿನ್ನಲೆ ನಡೆದ ಆಪರೇಷನ್ ಸಿಂಧೂರ (Operation Sindoora) ಕಾರ್ಯಾಚರಣೆಯನ್ನು ಕೇಂದ್ರ ಸರ್ಕಾರ ಏಕಾಏಕಿ ಕದನ ವಿರಾಮದ (Ceasefire) ಘೋಷಿಸಿರುವ ಬಗ್ಗೆ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವೆ ತೀವ್ರವಾದ ಮಾತಿನ ಸಮರ ನಡೆಯುತ್ತಿದೆ.

ಇದೇ ವಿಚಾರವಾಗಿ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಸಚಿವ ಸಂತೋಷ್ ಲಾಡ್ (Santosh lad), ಕದನ ವಿರಾಮದ ಕುರಿತು ಭಾರತೀಯರಲ್ಲಿನ ಅಸಮಾಧಾನ, ಟ್ರಂಪ್ ಮಧ್ಯಸ್ಥಿಕೆ ಸೇರಿದಂತೆ ಅಗತ್ಯ, ಅನಿವಾರ್ಯತೆ ಸೇರಿದಂತೆ ಅನೇಕ ಪ್ರಶ್ನೆಗಳಿಗೆ ಪ್ರಧಾನಿ ಮೋದಿ (Pm Modi) ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದರು.

ಇದಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟ್ವಿಟ್ ಮಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿಚಾರಗಳ ಕುರಿತು ಭಾರತದ ಸಿರಿ ಕಿರೀಟ ಕಾಶ್ಮೀರವನ್ನು ಅಸ್ಥಿರಗೊಳಿಸಿದ್ದು ಯಾರು?

ರಕ್ಷಣೆ ಇಲ್ಲದ ಅಸಹಾಯಕ ಪರಿಸ್ಥಿತಿಯಲ್ಲಿ ಲಕ್ಷಾಂತರ ಮೂಲ ನಿವಾಸಿ ಕಾಶ್ಮೀರಿ ಪಂಡಿತರ ಕುಟುಂಬಗಳು ಕೊಲೆ, ಅತ್ಯಾಚಾರದ ದೌರ್ಜನ್ಯಗಳನ್ನು ಅನುಭವಿಸಿ ಕಾಶ್ಮೀರ ತೊರೆಯುವಂತಾಗಲು ಕಾರಣರಾದವರಾರು?

ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಬಿಟ್ಟುಕೊಟ್ಟವರಾರು? ಅವಕಾಶವಿದ್ದರೂ POK ಆಕ್ರಮಿಸಿಕೊಳ್ಳದೇ ಕೈಚೆಲ್ಲಿದವರಾರು? ಕಾಂಗ್ರೆಸ್ ಹಾಗೂ ಅದರ ಸ್ವಾರ್ಥ ಆಡಳಿತ ಇದಕ್ಕೆಲ್ಲ ಕಾರಣ ಎನ್ನುವುದು ದೇಶದ ಜನತೆಗೆ, ಜಗತ್ತಿಗೇ ತಿಳಿದ ಸತ್ಯ ಎಂದು ಹರಿಹಾಯ್ದಿದ್ದರು.

ಮತ್ತೆ ಈ ಟ್ವಿಟ್ಗೆ ಪ್ರತಿ ಟ್ವಿಟ್ ಮಾಡಿರುವ ಸಚಿವ ಸಂತೋಷ್ ಲಾಡ್, ಭಾರತದ ಸಿರಿ ಕಿರೀಟ ಕಾಶ್ಮೀರದ ಪೆಹೆಲ್ಗಾಮ್ ನ ಬೈಸನ್ ವ್ಯಾಲಿಯಲ್ಲಿ ಸರಿಯಾದ ಭದ್ರತಾ‌ ಸಿಬ್ಬಂದಿಯನ್ನು ನಿಯೋಜಿಸಿದೆ ಬೇಜವಾಬ್ದಾರಿ ಮೆರೆದವರು ಯಾರು?

ಕಾಶ್ಮೀರಿ ಪಂಡಿತರ ಮೇಲಾದ ದೌರ್ಜನ್ಯಗಳನ್ನು ಕೇವಲ ಚುನಾವಣಾ ಪ್ರಚಾರದ ಸರಕಾಗಿಸಿಕೊಂಡು ಅವರ ಭಾವನೆಗಳೊಂದಿಗೆ ಆಟವಾಡುತ್ತಿರುವವರು ಯಾರು?

ಪಾಕ್ ಆಕ್ರಮಿತ ಕಾಶ್ಮೀರವನ್ನು ಪುನಃ ಪಡೆದುಕೊಳ್ಳುವ ಅವಕಾಶವಿದ್ದಾಗಲೂ ಕೈಚೆಲ್ಲಿದ ಮಹಾನುಭಾವ ಯಾರು ಎಂಬುದು ಇಡೀ ದೇಶ ಹಾಗೂ ಜಗತ್ತಿಗೇ ಬಟಾಬಯಲಾದ ಸತ್ಯ.

ಪ್ರಜಾಪ್ರಭುತ್ವದಲ್ಲಿ ಕುಟುಂಬ ರಾಜಕಾರಣದ ವಿರೋಧಿ ಎಂದು ಬಿಂಬಿಸುವ ರೀತಿಯಲ್ಲಿ ಮೆರೆದ ತಾವು ಇಂದಿಗೂ ನಿಮ್ಮ ತಂದೆಯ ಹೆಸರಿಲ್ಲದೇ ಚಲಾವಣೆಯಾಗದ ನಾಣ್ಯ ಎಂಬ ಸತ್ಯ ನಮಗಿಂತ ನಿಮ್ಮದೇ ಅಧ್ಯಕ್ಷಗಿರಿ ಸಹಿಸುತ್ತಿರುವ ಬಿಜೆಪಿ ಕರ್ನಾಟಕ ನಿರಾಶ್ರಿತರಿಗೆ ಚೆನ್ನಾಗಿ ಗೊತ್ತಿದೆ.

ಭಾರತದ ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಾವು ಹಾಗೂ ನಮ್ಮ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ಜೊತೆ ಗಟ್ಟಿಯಾಗಿ‌ ನಿಲ್ಲುತ್ತಲೇ ಬಂದಿದ್ದೇವೆ. ಈ ವಿಷಯದಲ್ಲಿ ನಮ್ಮ ದೇಶದ ವೀರ ಯೋಧೆ ಸೋಫಿಯಾ ಖುರೇಷಿಯವರನ್ನು ಪಾಪಿ ಪಾಕಿಸ್ತಾನಿಗಳೊಂದಿಗೆ ಹೋಲಿಸಿ, ವಿಕೃತವಾಗಿ ಉಡಾಫೆ ಮಾತಾಡುವ ನಿಮ್ಮ ಬಿಜೆಪಿ ಪಕ್ಷದವರಿಂದ ಕಲಿಯುವಂತಹ ಯಾವ ಹರಕತ್ತು ನಮ್ಮ ಕಾಂಗ್ರೆಸ್ ಪಕ್ಷಕ್ಕಿಲ್ಲ.

ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವ ಎಲ್ಲ ಶಕ್ತಿ ನಮ್ಮ ರಕ್ಷಣಾ ಪಡೆಗಳಿಗಿದ್ದರೂ ಸಹ ಯಾರದೋ ಅಪ್ಪಣೆಗೆ ತಲೆಬಾಗಿ ಶರಣಾದದ್ದು ಯಾವ ಪುರುಷಾರ್ಥಕ್ಕಾಗಿ ಎಂದು ಶತಕೋಟಿ ಭಾರತೀಯರೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳುತ್ತಿದ್ದಾರೆ.

ದೇಶದ ಜನರ ಭಾವನೆಗಳಿಗೆ ವಿರುದ್ಧವಾಗಿ, ನಮ್ಮ ಅಮಾಯಕ ಸಹೋದರಿಯರ ಸಿಂಧೂರ ಅಳಿಸಿದ ಪಾಪಿಗಳನ್ನು ನಿರ್ಮೂಲನೆ ಮಾಡುವುದನ್ನು ಬಿಟ್ಟು ಕದನವಿರಾಮ ಘೋಷಿಸಿದ್ದನ್ನು ಸಹ ನಿಮ್ಮಂತಹ ಅಪ್ಪನ ಹೆಸರನ್ನು ಟ್ರಂಪ್ ಕಾರ್ಡ್ ಮಾಡಿಕೊಂಡು ಬದುಕುತ್ತಿರುವವರೆಲ್ಲ ಬಹುಪರಾಕ್ ಹೇಳಿಕೊಂಡು ತಿರುಗುತ್ತಿರುವುದನ್ನು ನೋಡಿದರೆ ಭಾರತೀಯರು ನಿಮಗೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂಬುದನ್ನು ಮೇಲಿನವರನ್ನು ಮೆಚ್ಚಿಸಲು ಒಟಗುಟ್ಟುವುದನ್ನು ಬಿಟ್ಟು ಅರ್ಥ ಮಾಡಿಕೊಳ್ಳುವುದು ಒಳಿತು.

ಕೊನೆಗೊಂದು ಮಾತು, ಆಪರೇಶನ್ ಸಿಂಧೂರದ ಹೆಸರಲ್ಲಿ ರೀಲ್ಸ್ ಶೋಕಿ ಮಾಡುತ್ತ, ಇಂತಹ ಸೂಕ್ಷ್ಮ ವಿಚಾರವನ್ನು ಸಹ ಚುನಾವಣೆ ಸರಕಾಗಿ ಬಳಸಿಕೊಳ್ಳುವ ನಿಮ್ಮ ಪಕ್ಷದ ನಾಚಿಕೆಗೇಡಿತನಕ್ಕೆ ನಿಮ್ಮ ಪಕ್ಷವೇ ಸಾಟಿ ಬಿಡಿ! ಎಂದಿದ್ದಾರೆ.

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!