CM, DCM should resign - R Ashoka

ಡಿಸಿಎಂ ಜನ್ಮದಿನಕ್ಕೆ ಸಿಎಂ‌ ಶುಭಕೋರಿ ಟ್ವಿಟ್ ಮಾಡಿಲ್ಲ: ಆರ್ ಅಶೋಕ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಬೇಕಾದಷ್ಟು ಸಮಸ್ಯೆಗಳಿವೆ‌. ಆದರೆ ವಿರೋಧ ಪಕ್ಷದ ನಾಯಕರು (R Ashoka) ಆ ಕುರಿತು ದನಿ ಎತ್ತದೆ ಕ್ಷುಲ್ಲಕ ವಿಚಾರಗಳನ್ನು ಪ್ರಶ್ನೆ ಮಾಡಿ ಸುದ್ದಿಯಾಗುತ್ತಿದ್ದಾರೆ ಎಂಬ ಆರೋಪ ರಾಜ್ಯದ ಜನರದ್ದಾಗಿದೆ.

ಹೌದು ಈ ಅಂತದ್ದೇ ಆರೋಪಕ್ಕೆ ಸಂಬಂಧಿಸಿದ ವಿಚಾರ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರ ಬತ್ತಳಿಕೆಯಿಂದ ಬಂದಿದೆ.

ವಿಷಯ ಏನಪ್ಪಾ ಅಂದರೆ, ನಿನ್ನೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜನ್ಮದಿನ. ಆದರೆ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶುಭಕೋರಿ ಟ್ವಿಟ್ ಮಾಡಿಲ್ಲ ಎಂಬುದು ವಿಪಕ್ಷ ನಾಯಕನ ತಗಾದೆ.

ಈ ಕುರಿತು ಟ್ವಿಟ್ ಮಾಡಿರುವ ಆರ್ ಅಶೋಕ್, ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ನಡುವಿನ ಸಂಬಂಧ ಚೆನ್ನಾಗಿಲ್ಲ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿರುವ ವಿಷಯ.

ಆದರೆ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಸಿದ್ದರಾಮಯ್ಯನವರು ಕನಿಷ್ಠ ಪಕ್ಷ ಒಂದು ಟ್ವೀಟ್ ಕೂಡ ಮಾಡದಷ್ಟು ಹದಗೆಟ್ಟಿದೆ ಎಂದು ಗೊತ್ತಿರಲಿಲ್ಲ.

ಒಬ್ಬರ ಮುಖ ಒಬ್ಬರು ನೋಡಲಾಗದ ಈ ನಾಯಕರು ರಾಜ್ಯವನ್ನು ಹೇಗೆ ಮುನ್ನಡೆಸುತ್ತಾರೆ? ಕನ್ನಡಿಗರು ಕರ್ನಾಟಕ ಸರ್ಕಾರದಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದಿದ್ದಾರೆ.

ಇನ್ನೂ ಈ ಟ್ವಿಟ್ಗೆ ಅನೇಕರು ಆಕ್ಷೇಪ ವ್ಯಕ್ತಪಡಿಸಿ ಕಾಮೆಂಟ್ ಮಾಡಿದ್ದಾರೆ. ಅವುಗಳಲ್ಲಿ ಪ್ರಮುಖವಾದವು ಇಲ್ಲಿವೆ.

ಕರ್ನಾಟಕದಲ್ಲಿ ವಿರೋಧ ಪಕ್ಷ ಅಸ್ತಿತ್ವ ಕಳೆದುಕೊಂಡಿದೆ, ಯಾವುದೇ ಅಭಿವೃದ್ಧಿ ಕೆಲಸಗಳಿಲ್ಲ, ಯಾವುದೇ ಸರಕಾರಿ ನೇಮಕಾತಿ ಇಲ್ಲಾ ಇದರ ಬಗ್ಗೆ ವಿರೋಧ ಪಕ್ಷ ಧ್ವನಿ ಎತ್ತುತ್ತಿಲ್ಲ.

ಅಯ್ಯೋ ಅಶೋಕ ಇದನೆಲ್ಲ ಗಮನಿಸುವ ನಿಮಗೆ ಮಾತು ಬಾರದ ಕಿವಿಯೂ ಕೇಳಿಸದ ಅಪ್ರಾಪ್ತ ಬಾಲಕಿಯನ್ನು ಬಲತ್ಕಾರ ಮಾಡಿ ಕೊಂದು ಬಿಸಾಕಿದನ್ನು ಕಾಣಲೇ ಇಲ್ಲವೇ
ಅಥವಾ ಕಂಡು ಶವ ರಾಜಕೀಯ ಮಾಡಲು ಅವಕಾಶ ತಪ್ಪಿತು ಎಂಬ ಬೇಸರವೇ?.

ಅಣ್ಣ ಟ್ವಿಟ್ಟರ್ ಹ್ಯಾಂಡಲ್ ಮಾಡ್ತಿರೋವ್ನ ಮೊದ್ಲು ಚೇಂಜ್ ಮಾಡಿ.. ಚೈಲ್ಡ್ ತರ ಇದಕ್ಕೆ ಟ್ವೀಟ್ ಮಾಡ್ಕೊಂಡು ಏನಣ್ಣ ಇದೆಲ್ಲ..

ಆದರೆ ವಿರೋಧ ಪಕ್ಷದ ನಾಯಕರು ಇದನ್ನೆಲ್ಲ ಗಮನಿಸುವಷ್ಟು ನಿರುದ್ಯೋಗಿಗಳು ಅಂತ ಈಗಲೇ ಗೊತ್ತಾಗಿದ್ದು..

ಸ್ವಾಮಿ ಪರ್ಸನಲ್ ಬಿಟ್ಟು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಗಂಭೀರವಾದ ಚಿಂತನೆ ನಡೆಸಿ. ನೀವು ವಿರೋಧ ಪಕ್ಷದ ನಾಯಕರಾಗಿರುವುದು ವಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಲು ಅಲ್ಲ. ನಿಮ್ಮ ಪದವಿಯ ಬಗ್ಗೆ ಜ್ಞಾಪಕ ಇರಲಿ ಮಹಾಸ್ವಾಮಿಗಳೇ.

ನೀನು ಒಬ್ಬ ವಿರೋಧ ಪಕ್ಷದ ನಾಯಕನಾಗಿ ಇರೋದೇ ಒಂದು ಕರ್ಮ 🤦‍♂️🤦‍♂️🤦‍♂️
ರಾಜ್ಯದಲ್ಲಿ ನೂರಾರು ಸಮಸ್ಯೆಗಳು ಇರುವಾಗ ಇದು ಬೇಕಾ…. ಚಿಕ್ಕ ಮಕ್ಕಳು ತರ ಟ್ವೀಟ್ ಮಾಡ್ಕೊಂಡು ಅವನು ವಿಶ್ ಮಾಡಿಲ್ಲಇವನು ವಿಶ್ ಮಾಡಿಲ್ಲ ಅಂತ ಹೇಳ್ತಿಯಲ್ಲ 😂😂😂 ನಾಲಾಯಕ್ ವಿರೋಧ ಪಕ್ಷದ ನಾಯಕ 🤦‍♂️.

ರಾಜ್ಯದ ಅಭಿವೃದ್ಧಿಗಾಗಿ ಏನಾದರೂ ಮಾಡಿ ಅಂದ್ರೆ, ಟ್ವೀಟ್ ಮಾಡಿಕೊಂಡು ಕಾಲಹರಣ ಮಾಡುವ ನಾಲಯಕ ರಾಜಕಾರಣದ ವ್ಯಕ್ತಿಗಳು.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಂಬಂಧ ನಾನೊಂದು ತೀರ, ನೀನೊಂದು ತೀರ ಎಂಬಂತಾಗಿದೆ.

ಪರ ಚಿಂತೆ ಏಕೆ ಅಯ್ಯ
ಪರ ಚಿಂತೆ ಏಕೆ
ನಿಮ್ದ ಅದ್ಜೂಸ್ಟ್ಮೆಂಟ್ ರಾಜಕೀಯ
ಮತ್ತೆ ನಿಮ್ಮ ಒಳ ಜಗಳ ಎಲ್ಲರಿಗೂ ಗೊತ್ತಿದ ಮೇಲೆ
ಅಚಾರವಿಲ್ಲದ ನಾಲ್ಗೆ
ತೇಗಿ ಬೇಡಿ.

DK ge yenu problem illa, nimge yenro problem🤣.

Idu ondhu vishya na?🤦🏻‍♂️🤦🏻‍♂️.

Lolll ಏನ್ರೀ ನಾಚಿಕೆ ಆಗಲ್ವಾ ವಿಪಕ್ಷದ ನಾಯಕನಾಗಿ ಈತರ ಟ್ವೀಟ್ ಮಾಡೋದಕ್ಕೆ?.. ನೇರವಾಗಿ ಬೇಟಿ ಮಾಡಿ ಶುಭಾಶಯ ತಿಳಿಸಿರ್ತಾರೆ ಬಿಡ್ರೀ .. ಮೊದಲು ವಿಪಕ್ಷ ಸ್ಥಾನದಲ್ಲಿ ಕೂತು ಜವಾಬ್ದಾರಿ ವ್ಯಕ್ತಿಯಾಗಿ ನಡೆದುಕೊಳ್ಳಿ… ಒಳಮೀಸಲಾತಿ,ಹೊಸ ನೇಮಕಾತಿ,ನಿರುದ್ಯೋಗ, ರಸ್ತೆ.. ಈತರ ನೂರಾರು ವಿಷಯಗಳಿವೆ ಅವನ್ನ ಪ್ರಶ್ನೆ ಮಾಡಿ…

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!