Mussanje Matu movie turns 17: This is what Sudeep said

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಬೆಂಗಳೂರು: ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ ಕಳೆದಿದೆ.

2008 ಮೇ 16 ರಂದು ಬಿಡುಗಡೆಯಾಗಿದ್ದ ಮುಸ್ಸಂಜೆ ಮಾತು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಕಂಡಿತ್ತು. ಮುಸ್ಸಂಜೆ ಮಹೇಶ್ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸುರೇಶ್‌ ಜೈನ್ ನಿರ್ಮಿಸಿದ್ದರು.

ಈ ಸಿನಿಮಾ ಸಿನಿಮಾ ಚಿತ್ರರಸಿಕರ ಮನ ಗೆದ್ದಿದ್ದಲ್ಲದೇ, ಸುದೀಪ್ ಅವರ ವೃತ್ತಿ ಜೀವನಕ್ಕೆ ತಿರುವ ನೀಡಿತ್ತು. ಹಿನ್ನೆಲೆಯಲ್ಲಿ ಇಂದು ನಟ ಸುದೀಪ್ ವಿಡಿಯೋ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸುದೀಪ್, ಮುಸ್ಸಂಜೆ ಮಾತು ಸಿನಿಮಾ ನನ್ನ ವೃತ್ತಿ ಜೀವನದಲ್ಲಿ ದೊಡ್ಡ ಸ್ಥಾನದಲ್ಲಿ ನಿಲ್ಲುವಂತದ್ದು. ವೃತ್ತಿ ಬದುಕಿಗೆ ಹೊಳಪು ನೀಡಿದೆ. ಅಂತಹ ಅದ್ಭುತ ಸಿನಿಮಾ ಬಿಡುಗಡೆಯಾಗಿ 17 ವರ್ಷ ಕಳೆದರು ಇಂದಿಗೂ ಏನಾಗಲಿ ಮುಂದೆ ಸಾಗು ನೀ ಹಾಡು ಎಲ್ಲರ ಎದೆಯಾಳದಲ್ಲಿದೆ.

ವಿಶೇಷ ಎಂದರೆ ಏನಾಗಲಿ ಮುಂದೆ ಸಾಗು ನೀ ಹಾಡು ನನ್ನ ಅಮ್ಮ ಸಾಯುವವರೆಗೂ ಅವರ ಕಾಲರ್ ಟ್ಯೂನ್ ಆಗಿತ್ತು. ತಂದೆಯದ್ದೂ ಇಂದಿಗೂ ಅದೇ ಕಾಲರ್ ಟ್ಯೂನ್.

ಲಕ್ಷಾಂತರ ಮನಸ್ಸುಗಳಿಗೆ ಸ್ಫೂರ್ತಿ ತುಂಬಿದ ಹಾಡಿನಲ್ಲಿ ನಾನು ಅಭಿನಯಿಸಿರುವುದು ನನಗೆ ಹೆಮ್ಮೆ ಮೂಡಿಸುತ್ತದೆ.

ಮುಸ್ಸಂಜೆ ಮಾತು ಸಿನಿಮಾ ನನ್ನ ವೃತ್ತಿ ಜೀವನದಲ್ಲಿ ದೊಡ್ಡ ಸ್ಥಾನದಲ್ಲಿ ನಿಲ್ಲುವಂತದ್ದು. ವೃತ್ತಿ ಬದುಕಿಗೆ ಹೊಳಪು ನೀಡಿದೆ. ಅಂತಹ ಅದ್ಭುತ ಸಿನಿಮಾ ಬಿಡುಗಡೆಯಾಗಿ 17 ವರ್ಷ ಗತಿಸಿದರೂ ಇಂದಿಗೂ ಏನಾಗಲಿ ಮುಂದೆ ಸಾಗು ನೀ ಹಾಡು ಎಲ್ಲರ ಎದೆಯಾಳದಲ್ಲಿದೆ ಎಂದಿದ್ದಾರೆ.

ವಿಶೇಷ ಎಂದರೆ ಏನಾಗಲಿ ಮುಂದೆ ಸಾಗು ನೀ ಹಾಡು ನನ್ನ ಅಮ್ಮ ಸಾಯುವವರೆಗೂ ಅವರ ಕಾಲರ್ ಟ್ಯೂನ್ ಆಗಿತ್ತು. ತಂದೆಯದ್ದೂ ಇಂದಿಗೂ ಅದೇ ಕಾಲರ್ ಟ್ಯೂನ್. ಲಕ್ಷಾಂತರ ಮನಸ್ಸುಗಳಿಗೆ ಸ್ಫೂರ್ತಿ ತುಂಬಿದ ಹಾಡಿನಲ್ಲಿ ನಾನು ಅಭಿನಯಿಸಿರುವುದು ನನಗೆ ಹೆಮ್ಮೆ ಮೂಡಿಸುತ್ತದೆ ಎಂದಿದ್ದಾರೆ.

ಮುಸ್ಸಂಜೆ ಮಾತು ಸಿನಿಮಾ ಶೂಟಿಂಗ್ ಸಮಯದಲ್ಲಿ ನಾನು ದಪ್ಪಗಾಗಿದ್ದೆ. ಆದರೆ, ರೇಡಿಯೊ ಜಾಕಿ ಪಾತ್ರ ಮಾಡುವಾಗ ಬೆಂಗಳೂರಿನಲ್ಲಿರುವ ಎಲ್ಲ ರೇಡಿಯೊ ಜಾಕಿಗಳನ್ನು ಭೇಟಿಯಾಗಿದ್ದೆ.

ಅವರ ಉಡುಗೆ ತೊಡುಗೆಗಳು ನನ್ನ ಆಕರ್ಷಿಸಿದ್ದವು. ಸಡಿಲವಾದ ಶರ್ಟ್, ಪ್ಯಾಂಟ್ ತೊಡುತ್ತಿದ್ದರು. ಆದರೆ, ದಪ್ಪಗಿದ್ದ ನನಗೆ ಆ ಉಡುಗೆಗಳು ಹೊಂದುತ್ತಿರಲಿಲ್ಲ. ನಂತರ ಸಾಕಷ್ಟು ವರ್ಕೌಟ್ ಮಾಡಿ ತುಂಬಾ ತೆಳ್ಳಗಾಗಿದ್ದೆ. ಆ ಪಾತ್ರದಲ್ಲಿ ನನ್ನನ್ನು ಜನ ಸ್ವೀಕರಿಸಿದ್ದು ಅದ್ಭುತವಾಗಿದ್ದು ಎಂದಿದ್ದಾರೆ.

ಇಂದಿಗೂ ಕನ್ನಡ ಸಿನಿಪ್ರಿಯರು ಗುನುಗುವಂತ ಅದ್ಭುತ ಹಾಡನ್ನು ನೀಡಿದ್ದ ಸಂಗೀತ ನಿರ್ದೇಶಕ ವಿ ಶ್ರೀಧ‌ರ್ ಅವರಿಗೆ, ಹಾಗೂ ನಿರ್ದೇಶಕ ಮುಸ್ಸಂಜೆ ಮಹೇಶ್, ನಟಿ ರಮ್ಯ, ಅನು ಪ್ರಭಾಕ‌ರ್ ಸೇರಿದಂತೆ ಚಿತ್ರತಂಡದವನ್ನು, ರೇಡಿಯೊ ಜಾಕಿಗಳನ್ನು ಸುದೀಪ್ ಸ್ಮರಿಸಿಕೊಂಡು ಧನ್ಯವಾದ ಸಲ್ಲಿಸಿದ್ದಾರೆ.

ರಾಜಕೀಯ

ಮಾತುಕತೆಗೆ ದೆಹಲಿಗೆ ಬನ್ನಿ: ಧರಣಿ ನಿರತ ಅಂಗನವಾಡಿ ನೌಕರರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ

ಮಾತುಕತೆಗೆ ದೆಹಲಿಗೆ ಬನ್ನಿ: ಧರಣಿ ನಿರತ ಅಂಗನವಾಡಿ ನೌಕರರಿಗೆ ಕೇಂದ್ರ ಸಚಿವ ಹೆಚ್.ಡಿ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಡ್ಯದಲ್ಲಿ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಜತೆ ನವದೆಹಲಿಯಿಂದ ದೂರವಾಣಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು, ಮಾತುಕತೆಗೆ ಬರುವಂತೆ ನವದೆಹಲಿಗೆ ಆಹ್ವಾನಿಸಿದ್ದಾರೆ.

[ccc_my_favorite_select_button post_id="116929"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಸೇರಿ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

[ccc_my_favorite_select_button post_id="116728"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!