DK Suresh elected unopposed as director of Bamul

ಬಮುಲ್ ನಿರ್ದೇಶಕ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ಸ್ಪರ್ಧೆ.. ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿಕೆ ಸುರೇಶ್ (DK Suresh) ಅವರು ಶನಿವಾರ ನಾಮಪತ್ರ ಸಲ್ಲಿಸಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದರು.

“ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಹಾಲು ಒಕ್ಕೂಟದ ಕನಕಪುರ ನಿರ್ದೇಶಕ ಸ್ಥಾ‌ನಕ್ಕೆ ಸ್ಪರ್ಧಿಸಿದ್ದೇನೆ” ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು.

ವಿಶ್ರಾಂತಿ ಅವಧಿ ಮುಗಿಸಿದ ಮೇಲೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಕಣ್ಣಿಟ್ಟಿದ್ದಾರೆ ಎಂದು ಕೇಳಿದಾಗ, “ಸಧ್ಯಕ್ಕೆ ಕೆಎಂಎಫ್ ವಿಚಾರ ಚರ್ಚೆಯಲ್ಲಿಲ್ಲ. ಕಳೆದ 10 ವರ್ಷಗಳಿಂದ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ, ನಿರ್ದೇಶಕರುಗಳಾಗಿ ನಮ್ಮ ಪಕ್ಷದ ಮುಖಂಡರು ಸೇವೆ ಸಲ್ಲಿಸಿದ್ದಾರೆ. ‌ಹಾಗಾಗಿ ಇದರಲ್ಲಿ ವಿಶೇಷತೆ ಏನೂ ಇಲ್ಲ. ನಾನು ಅವರೆಲ್ಲರ ಜೊತೆ ಇರಬೇಕು ಎಂದು ಒತ್ತಾಯ ಮಾಡಿದ ಕಾರಣಕ್ಕೆ ಜೊತೆಯಾಗಿ ನಿಂತಿದ್ದೇನೆ” ಎಂದರು.

“ಪಕ್ಷದ ನಾಯಕರು, ಮುಖಂಡರ‌ ಬಳಿ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದೇನೆ. ಕೆಲವೊಂದು ವಿಚಾರಗಳಲ್ಲಿ ಅವರ ಮಾತುಗಳಿಗೂ ನಾವು ಗೌರವ ನೀಡಬೇಕಾಗುತ್ತದೆ. ಎಲ್ಲರ ಸಲಹೆ ಸೂಚನೆ ಮೇರೆಗೆ ಅರ್ಜಿ ಸಲ್ಲಿಸಿದ್ದೇನೆ” ಎಂದರು.

ಚನ್ನಪಟ್ಟಣ ಉಪಚುನಾವಣೆಗೆ ಒಪ್ಪದ ನೀವು ಈಗ ನಿರ್ದೇಶಕ ಸ್ಥಾನಕ್ಕೆ ಒಪ್ಪಿರುವುದು ಕುತೂಹಲಕ್ಕೆ ಕಾರಣವಾಗಿ ಎಂದು ಕೇಳಿದಾಗ, “ಜಿಲ್ಲೆಯ ಶಾಸಕರು, ಮಾಜಿ ನಿರ್ದೇಶಕರು, ಅಧ್ಯಕ್ಷರುಗಳು, ಅನೇಕ‌ ಜಿಲ್ಲೆಯ ನಾಯಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದಾಗ ನಾನು ಅವರ ಮಾತುಗಳಿಗೆ ಪಕ್ಷದ ಕಾರ್ಯಕರ್ತನಾಗಿ ತಲೆಬಾಗಬೇಕಾಗುತ್ತದೆ. ಹಿರಿಯರ ಮಾತುಗಳನ್ನು ಸ್ವೀಕಾರ ಮಾಡಿದ್ದೇನೆ, ಕಾದು ನೋಡೋಣ” ಎಂದರು.

ನಿಮ್ಮ ವಿರುದ್ಧ ಅಭ್ಯರ್ಥಿ ಹಾಕುವ ಬಗ್ಗೆ ರಾಮನಗರದಲ್ಲಿ ಸಭೆ ನಡೆಸಲಾಗುತ್ತಿದೆ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದು ತಿಳಿಸಿದರು.

ಅಶೋಕ್ ಅವರಿಗೆ ಯೋಗ್ಯತೆ, ಅರ್ಹತೆ ಇದೆ

ಬಿಡದಿ ಟೌನ್ ಶಿಪ್ ಕುರಿತು ಆರ್.ಅಶೋಕ್ ಸೇರಿದಂತೆ ಅನೇಕರಿಂದ ನಿಮ್ಮ ಮೇಲೆ ಭೂಕಬಳಿಕೆ ಆರೋಪದ ಕುರಿತು ಕೇಳಿದಾಗ, “ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ಅವರಿಗೆ ಎಲ್ಲಾ ಮಾಹಿತಿಯನ್ನು ಪಡೆಯಲು ಯೋಗ್ಯತೆ ಮತ್ತು ಅರ್ಹತೆಯಿದೆ. ಒಂದು ವೇಳೆ ಇಲ್ಲ ಎಂದರೆ ನಾನು ಅವರಿಗೆ ಮಾಹಿತಿ ನೀಡುತ್ತೇನೆ. ಕಬಳಿಕೆ ಕುರಿತು ನಾನು ಮಾತನಾಡಬೇಕು ಎಂದರೆ ಉತ್ತರಹಳ್ಳಿಯ ಬಗ್ಗೆ ಮಾತನಾಡಬೇಕಾಗುತ್ತದೆ” ಎಂದರು.

ಕುಮಾರಸ್ವಾಮಿ ಆಶಯದಂತೆ ನಮ್ಮ ಕೆಲಸ

ರೈತರ ವಿರೋಧದ ಬಗ್ಗೆ ಕೇಳಿದಾಗ, “ನಾವು ಯಾವುದೇ ಭೂಸ್ವಾಧೀನ ಪ್ರಕ್ರಿಯೆ ನಡೆಸಿಲ್ಲ. ಈ ಹಿಂದೆ ಕುಮಾರಸ್ವಾಮಿ ಅವರು ಮಾಡಿದ್ದನ್ನು ಮುಂದುವರೆಸಲಾಗಿದೆ.

ಕುಮಾರಸ್ವಾಮಿ ಅವರ ಆಶಯದಂತೆ ಉಪನಗರಗಳು ರಚನೆಯಾಗಬೇಕು ಎಂದು ಅವರದೇ ಸರ್ಕಾರದ ಅವಧಿಯಲ್ಲಿ ತೀರ್ಮಾನವಾಗಿತ್ತು. ಅದನ್ನು ನಾವು ಮುಂದುವರೆಸುತ್ತಿದ್ದೇವೆ. ರೈತರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಹಾಗೂ ನಮ್ಮ ಪಕ್ಷದ ಉದ್ದೇಶ ಕೂಡ ಇದಾಗಿದೆ.

ಉಪಮುಖ್ಯಮಂತ್ರಿಯವರು ಆ ಭಾಗದ ರೈತರಿಗೆ ಖಂಡಿತವಾಗಿ ನ್ಯಾಯ ಒದಗಿಸಿ‌ಕೊಡುತ್ತಾರೆ. ಇದು ನಮ್ಮ ಜವಾಬ್ದಾರಿ ಕೂಡ” ಎಂದು ಹೇಳಿದರು.

ಶಾಸಕ ಬಾಲಕೃಷ್ಣ, ರಂಗನಾಥ್, ಶರತ್ ಬಚ್ಚೇಗೌಡ, ಎಂಎಲ್ಸಿ ಎಸ್ ರವಿ, ಕಾಂಗ್ರೆಸ್ ಮುಖಂಡರಾದ ಬಿ ವಿ ಶ್ರೀನಿವಾಸ್, ಆರ್ ಕೆ ರಮೇಶ್ ಮತ್ತಿತರರು ಜತೆಗಿದ್ದರು.

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!