DK Suresh elected unopposed as director of Bamul

ಬಮುಲ್ ನಿರ್ದೇಶಕ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ಸ್ಪರ್ಧೆ.. ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿಕೆ ಸುರೇಶ್ (DK Suresh) ಅವರು ಶನಿವಾರ ನಾಮಪತ್ರ ಸಲ್ಲಿಸಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದರು.

“ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಹಾಲು ಒಕ್ಕೂಟದ ಕನಕಪುರ ನಿರ್ದೇಶಕ ಸ್ಥಾ‌ನಕ್ಕೆ ಸ್ಪರ್ಧಿಸಿದ್ದೇನೆ” ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು.

ವಿಶ್ರಾಂತಿ ಅವಧಿ ಮುಗಿಸಿದ ಮೇಲೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಕಣ್ಣಿಟ್ಟಿದ್ದಾರೆ ಎಂದು ಕೇಳಿದಾಗ, “ಸಧ್ಯಕ್ಕೆ ಕೆಎಂಎಫ್ ವಿಚಾರ ಚರ್ಚೆಯಲ್ಲಿಲ್ಲ. ಕಳೆದ 10 ವರ್ಷಗಳಿಂದ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ, ನಿರ್ದೇಶಕರುಗಳಾಗಿ ನಮ್ಮ ಪಕ್ಷದ ಮುಖಂಡರು ಸೇವೆ ಸಲ್ಲಿಸಿದ್ದಾರೆ. ‌ಹಾಗಾಗಿ ಇದರಲ್ಲಿ ವಿಶೇಷತೆ ಏನೂ ಇಲ್ಲ. ನಾನು ಅವರೆಲ್ಲರ ಜೊತೆ ಇರಬೇಕು ಎಂದು ಒತ್ತಾಯ ಮಾಡಿದ ಕಾರಣಕ್ಕೆ ಜೊತೆಯಾಗಿ ನಿಂತಿದ್ದೇನೆ” ಎಂದರು.

“ಪಕ್ಷದ ನಾಯಕರು, ಮುಖಂಡರ‌ ಬಳಿ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದೇನೆ. ಕೆಲವೊಂದು ವಿಚಾರಗಳಲ್ಲಿ ಅವರ ಮಾತುಗಳಿಗೂ ನಾವು ಗೌರವ ನೀಡಬೇಕಾಗುತ್ತದೆ. ಎಲ್ಲರ ಸಲಹೆ ಸೂಚನೆ ಮೇರೆಗೆ ಅರ್ಜಿ ಸಲ್ಲಿಸಿದ್ದೇನೆ” ಎಂದರು.

ಚನ್ನಪಟ್ಟಣ ಉಪಚುನಾವಣೆಗೆ ಒಪ್ಪದ ನೀವು ಈಗ ನಿರ್ದೇಶಕ ಸ್ಥಾನಕ್ಕೆ ಒಪ್ಪಿರುವುದು ಕುತೂಹಲಕ್ಕೆ ಕಾರಣವಾಗಿ ಎಂದು ಕೇಳಿದಾಗ, “ಜಿಲ್ಲೆಯ ಶಾಸಕರು, ಮಾಜಿ ನಿರ್ದೇಶಕರು, ಅಧ್ಯಕ್ಷರುಗಳು, ಅನೇಕ‌ ಜಿಲ್ಲೆಯ ನಾಯಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದಾಗ ನಾನು ಅವರ ಮಾತುಗಳಿಗೆ ಪಕ್ಷದ ಕಾರ್ಯಕರ್ತನಾಗಿ ತಲೆಬಾಗಬೇಕಾಗುತ್ತದೆ. ಹಿರಿಯರ ಮಾತುಗಳನ್ನು ಸ್ವೀಕಾರ ಮಾಡಿದ್ದೇನೆ, ಕಾದು ನೋಡೋಣ” ಎಂದರು.

ನಿಮ್ಮ ವಿರುದ್ಧ ಅಭ್ಯರ್ಥಿ ಹಾಕುವ ಬಗ್ಗೆ ರಾಮನಗರದಲ್ಲಿ ಸಭೆ ನಡೆಸಲಾಗುತ್ತಿದೆ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದು ತಿಳಿಸಿದರು.

ಅಶೋಕ್ ಅವರಿಗೆ ಯೋಗ್ಯತೆ, ಅರ್ಹತೆ ಇದೆ

ಬಿಡದಿ ಟೌನ್ ಶಿಪ್ ಕುರಿತು ಆರ್.ಅಶೋಕ್ ಸೇರಿದಂತೆ ಅನೇಕರಿಂದ ನಿಮ್ಮ ಮೇಲೆ ಭೂಕಬಳಿಕೆ ಆರೋಪದ ಕುರಿತು ಕೇಳಿದಾಗ, “ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ಅವರಿಗೆ ಎಲ್ಲಾ ಮಾಹಿತಿಯನ್ನು ಪಡೆಯಲು ಯೋಗ್ಯತೆ ಮತ್ತು ಅರ್ಹತೆಯಿದೆ. ಒಂದು ವೇಳೆ ಇಲ್ಲ ಎಂದರೆ ನಾನು ಅವರಿಗೆ ಮಾಹಿತಿ ನೀಡುತ್ತೇನೆ. ಕಬಳಿಕೆ ಕುರಿತು ನಾನು ಮಾತನಾಡಬೇಕು ಎಂದರೆ ಉತ್ತರಹಳ್ಳಿಯ ಬಗ್ಗೆ ಮಾತನಾಡಬೇಕಾಗುತ್ತದೆ” ಎಂದರು.

ಕುಮಾರಸ್ವಾಮಿ ಆಶಯದಂತೆ ನಮ್ಮ ಕೆಲಸ

ರೈತರ ವಿರೋಧದ ಬಗ್ಗೆ ಕೇಳಿದಾಗ, “ನಾವು ಯಾವುದೇ ಭೂಸ್ವಾಧೀನ ಪ್ರಕ್ರಿಯೆ ನಡೆಸಿಲ್ಲ. ಈ ಹಿಂದೆ ಕುಮಾರಸ್ವಾಮಿ ಅವರು ಮಾಡಿದ್ದನ್ನು ಮುಂದುವರೆಸಲಾಗಿದೆ.

ಕುಮಾರಸ್ವಾಮಿ ಅವರ ಆಶಯದಂತೆ ಉಪನಗರಗಳು ರಚನೆಯಾಗಬೇಕು ಎಂದು ಅವರದೇ ಸರ್ಕಾರದ ಅವಧಿಯಲ್ಲಿ ತೀರ್ಮಾನವಾಗಿತ್ತು. ಅದನ್ನು ನಾವು ಮುಂದುವರೆಸುತ್ತಿದ್ದೇವೆ. ರೈತರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಹಾಗೂ ನಮ್ಮ ಪಕ್ಷದ ಉದ್ದೇಶ ಕೂಡ ಇದಾಗಿದೆ.

ಉಪಮುಖ್ಯಮಂತ್ರಿಯವರು ಆ ಭಾಗದ ರೈತರಿಗೆ ಖಂಡಿತವಾಗಿ ನ್ಯಾಯ ಒದಗಿಸಿ‌ಕೊಡುತ್ತಾರೆ. ಇದು ನಮ್ಮ ಜವಾಬ್ದಾರಿ ಕೂಡ” ಎಂದು ಹೇಳಿದರು.

ಶಾಸಕ ಬಾಲಕೃಷ್ಣ, ರಂಗನಾಥ್, ಶರತ್ ಬಚ್ಚೇಗೌಡ, ಎಂಎಲ್ಸಿ ಎಸ್ ರವಿ, ಕಾಂಗ್ರೆಸ್ ಮುಖಂಡರಾದ ಬಿ ವಿ ಶ್ರೀನಿವಾಸ್, ಆರ್ ಕೆ ರಮೇಶ್ ಮತ್ತಿತರರು ಜತೆಗಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಜ.29 ರಿಂದ ಗ್ಯಾರಂಟಿ ಯೋಜನೆಗಳ ಕುಂದುಕೊರತೆ ಸಭೆ

ದೊಡ್ಡಬಳ್ಳಾಪುರ: ಜ.29 ರಿಂದ ಗ್ಯಾರಂಟಿ ಯೋಜನೆಗಳ ಕುಂದುಕೊರತೆ ಸಭೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಯ (Guarantee scheme) ಶಿಬಿರಗಳನ್ನು ಇದೇ ತಿಂಗಳ 29 ರಿಂದ ಆರಂಭಿಸಲಾಗುತ್ತಿದೆ.

[ccc_my_favorite_select_button post_id="118757"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ.. ಕಾರಣ ಕೇಳುದ್ರೆ ಶಾಕ್ ಆಗ್ತೀರಾ..!!

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ.. ಕಾರಣ ಕೇಳುದ್ರೆ ಶಾಕ್ ಆಗ್ತೀರಾ..!!

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ***** ಕಾಲೋನಿಯಲ್ಲಿ ನಡೆದಿದೆ.

[ccc_my_favorite_select_button post_id="118746"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!