IPL tournament restarts from today

ಇಂದಿನಿಂದ IPL ಪಂದ್ಯಾವಳಿ ರೀಸ್ಟಾರ್ಟ್: KKR ವಿರುದ್ಧ ಸೆಣೆಸಲು RCB ಸಜ್ಜು

ಬೆಂಗಳೂರು: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ತಾರಕ್ಕಕ್ಕೇರಿದ ಹಿನ್ನೆಲೆಯಲ್ಲಿ ಮೇ-8ರಂದು ಸ್ಥಗಿತಗೊಂಡಿದ್ದ ಐಪಿಎಲ್ (IPL) ಪಂದ್ಯಾವಳಿ ಬೆಂಗಳೂರಿನಲ್ಲಿ ಇಂದು ಪುನರಾರಂಭವಾಗಲಿದೆ.

ಅತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಕೋಲ್ಕತ್ತಾ ನೈಟ್ ರೈಡ‌ರ್ಸ್ (KKR) ತಂಡವನ್ನು ಎದುರಿಸಲಿದೆ.

ಈಗಾಗಲೇ 11 ಪಂದ್ಯಗಳನ್ನು ಆಡಿರುವ ಆರ್‌ಸಿಬಿ ತಂಡವು 8 ಪಂದ್ಯಗಳನ್ನು ಗೆದ್ದು, ಟೇಬಲ್ ಟಾಪರ್ ಆಗಿರುವ ಗುಜರಾತ್ ತಂಡದಷ್ಟೇ ಅಂಕಗಳನ್ನು ಪಡೆದಿದ್ದರೂ ಕಡಿಮೆ ರನ್‌ ರೇಟ್ ಹಿನ್ನೆಲೆಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಕೋಲ್ಕತ್ತಾ ತಂಡವನ್ನು ಮಣಿಸಿ, ಮತ್ತೆ ಟೇಬಲ್ ಟಾಪರ್ ಸ್ಥಾನದತ್ತ ಪಾಟೀದಾರ್ ಪಡೆ ಕಣ್ಣಿಟ್ಟಿದೆ.

ಮತ್ತೊಂದೆಡೆ 11 ಅಂಕಗಳನ್ನು ಗಳಿಸಿ ಸದ್ಯ 6ನೇ ಸ್ಥಾನದಲ್ಲಿರುವ ಅಜಿಂಕ್ಯಾ ರಹಾನೆ ತಂಡವು ಈ ಪಂದ್ಯವನ್ನು ಅಷ್ಟೇ ಅಲ್ಲದೆ, ಆಡಲು ಬಾಕಿ ಉಳಿದಿರುವ ಇನ್ನೊಂದು ಪಂದ್ಯವನ್ನೂ ಹೆಚ್ಚಿನ ಅಂತರದಲ್ಲಿ ಹೇಗಾದರೂ ಗೆದ್ದು ಪ್ಲೇ ಆಫ್‌ನಲ್ಲಿ ಸ್ಥಾನ ಗಿಟ್ಟಿಸಬೇಕೆನ್ನುವ ಉತ್ಸಾಹದಲ್ಲಿಈಗಾಗಿಈ ಆವೃತ್ತಿಯ ಮೊದಲ ಪಂದ್ಯದಲ್ಲೇ ಈಡೆನ್ ಗಾಡೆರ್ನ್ಸ್‌ನಲ್ಲಿ ಮಾಚ್-22ರಂದು ಅತಿಥೇಯ ಕೋಲ್ಕತ್ತಾವನ್ನು ಮಣಿಸಿದ ಆರ್‌ಸಿಬಿ ಶುಭಾರಂಭಮಾಡಿತ್ತು.

ಶನಿವಾರ ಆರ್‌ಸಿಬಿಯನ್ನು ಅದರ ತವರಿನಲ್ಲೇ ಮಣಿಸಿ ಸೇಡು ತೀರಿಸಿಕೊಳ್ಳಬೇಕೆಂಬ ಹಠ ಕೋಲ್ಕತ್ತಾ ತಂಡದ್ದಾಗಿದೆ.

ಮಾರ್ಚ್-28ರಂದು ಗುಜರಾತ್ ವಿರುದ್ದ ನಡೆದ ಪಂದ್ಯದಲ್ಲೂ ಆರ್‌ಸಿಬಿ ಗೆಲುವು ಪಡೆದಿತ್ತು. ಆದರೆ ತನ್ನ ಮೂರನೇ ಪಂದ್ಯದಲ್ಲಿ ಗುಜರಾತ್ ವಿರುದ್ದ ಪರಾಭವಗೊಂಡಿತ್ತು. ಆ ನಂತರದ ಪಂದ್ಯದಲ್ಲಿ ಮುಂಬೈ ವಿರುದ್ದ 12 ರನ್ ಗೆಲುವು ಸಾಧಿಸಿತು.

ಏಪ್ರಿಲ್-10ರಂದು ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಸೋತಿದ್ದ ಆರ್‌ಸಿಬಿ, ಆ ಬಳಿಕ 13ರಂದು ರಾಜಸ್ಥಾನ ವಿರುದ್ದ ಗೆದಿತ್ತು, ಏಪ್ರಿಲ್-13ರಂದು ಪಂಜಾಬ್ ವಿರುದ್ಧ ಅದರ ತವರು ನೆಲದಲ್ಲಿ ಆರ್‌ಸಿಬಿ ಪಂದ್ಯವನ್ನು ಕಳೆದು ಕೊಂಡಿತ್ತು. ಆದರೆ ಆ ಬಳಿಕ ರಾಯಲ್ ಚಾಲೆಂಜರ್ಸ್ ಸತತ ವಾಗಿ ನಾಲ್ಕು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು.

ಏಪ್ರಿಲ್-20ರಂದು ಪಂಜಾಬ್ ವಿರುದ್ಧ, ಏಪ್ರಿಲ್ -24ರಂದು ರಾಜಸ್ಥಾನ ವಿರುದ್ದ, ಏಪ್ರಿಲ್-27ರಂದು ಡೆಲ್ಲಿ ವಿರುದ್ದ ಹಾಗೂ ಮೇ-3ರಂದು ಚೆನ್ನೈ ವಿರುದ್ದವೂ ಆರ್‌ಸಿಬಿ ಗೆದ್ದು ಗೆಲುವಿನ ನಗೆ ಬೀರಿದ್ದು, ಇದೇಗ ಐಪಿಎಲ್ ಪುನರಾರಂಭದ ಮೊದಲ ಪಂದ್ಯದಲ್ಲಿ ಮತ್ತೆ 5 ಕೋಲ್ಕತ್ತಾ ವಿರುದ್ಧ ಗೆದ್ದು ಪ್ಲೇ ಆಫ್ ಗುಂಪಿನ ಅಗ್ರಸ್ಥಾನದತ್ತ ತನ್ನ ಚಿತ್ತ ನೆಟ್ಟಿದೆ.

ಈ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್‌ಸಿಬಿ ವಿರುದ್ಧ ಸೋಲು ಕಂಡಿದ್ದ ಕೋಲ್ಕತ್ತಾ ತಂಡ ಇದೀಗ ಆರನೇ ಸ್ಥಾನದಲ್ಲಿದ್ದು, ಪ್ಲೇ ಆಫ್ ಕನಸು ಅದರ ಪಾಲಿಗೆ ಇನ್ನೂ ಕೂಡಾ ಕಬ್ಬಿಣದ ಕಡಲೆ. ಅದು ರಾಜಸ್ಥಾನ ವಿರುದ್ಧ ಎರಡು ಪಂದ್ಯಗಳಲ್ಲಿ, ಹೈದರಾಬಾದ್ ವಿರುದ್ದ ಒಂದು, ಚೆನ್ನೈ ವಿರುದ್ಧ ಒಂದು ಮತ್ತು ಡೆಲ್ಲಿ ವಿರುದ್ಧ ತಲಾ ಒಂದು ಪಂದ್ಯ ಗೆದು ಲಾ ಒಂದು ಪಂದ್ಯ ಗೆದ್ದು ಗೆದ್ದು ಹಾಗೂ ಹಾಗೂ ಪಂಜಾಬ್ ವಿರುದ್ಧ ಪಂದ್ಯ ರದ್ದಾಗಿದ್ದ ಕಾರಣಕ್ಕೆ 1 ಅಂಕ ಗಳಿಸಿ, ಅಂಕಪಟ್ಟಿಯಲ್ಲಿ ಒಟ್ಟು 11 ಅಂಕಗಳನ್ನಷ್ಟೇ ಸಂಪಾದಿಸಲು ಶಕ್ತವಾಗಿದೆ.

ಈಗಾಗಿ ಬೆಂಗಳೂರಿನಲ್ಲಿ ಆರ್‌ಸಿಬಿ ವಿರುದ್ದದ ಪಂದ್ಯವೂ ಕೋಲ್ಕತ್ತಾ ಪಾಲಿಗೆ ನಿಜಕ್ಕೂ ಸವಾಲಿನದ್ದೇ ಆಗಿದೆ.

ಫೋಟೋ ಕೃಪೆ: RCB, KKR X

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!