Sri Lakshmi Narasimhaswamy Brahma Rathtsava in Ujjani Hosahalli

ಉಜ್ಜನಿ ಹೊಸಹಳ್ಳಿಯಲ್ಲಿ ವಿಜೃಂಭಣೆಯ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ| Video

ದೊಡ್ಡಬಳ್ಳಾಪುರ: ತಾಲೂಕಿನ ಉಜ್ಜನಿ ಹೊಸಹಳ್ಳಿ (Ujjani Hosahalli) ಗ್ರಾಮದಲ್ಲಿನ ಇತಿಹಾಸ ಪ್ರಸಿದ್ದ ಶ್ರೀಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಇಂದು ಮಧ್ಯಾಹ್ನ ವಿಜೃಂಭಣೆಯಿಂದ ನೆರವೇರಿತು.

ಬ್ರಹ್ಮರಥೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಬೆಳಗ್ಗಿನಿಂದಲೂ ಅಭಿಷೇಕ, ಅರ್ಚನೆ ನೆಡೆದು ಶ್ರೀಲಕ್ಷ್ಮೀನರಸಿಂಹಸ್ವಾಮಿಯನ್ನು ದೇವಾಲಯದಿಂದ ತಂದು ಪಂಚ ಕಳಸ ಊಡಿದ ರಥದಲ್ಲಿ ಪ್ರತಿಸ್ಠಾಪಿಸುತಿದ್ದಂತೆ, ಮಧ್ಯಾಹ್ನ 2.30ಕ್ಕೆ ವೇದಬ್ರಹ್ಮರ ಮಂತ್ರ ಘೋಷಗಳೊಂದಿಗೆ ರಥ ಮುಂದೆ ಸಾಗುತಿದ್ದಂತೆ, ಜಯಘೋಷ ಹಾಕುತ್ತ ಹರಕೆ ಹೊತ್ತ ಭಕ್ತರು ಭಕ್ತಿ ಭಾವದಿಂದ ಬಾಳೆಹಣ್ಣು, ದವನ ಎಸೆದು ಹರಕೆ ತೀರಿಸಿದರು.

ರಥೋತ್ಸವದಲ್ಲಿ ಭಕ್ತರ ಜೈಕಾರ, ತಮಟೆ ವಾದ್ಯಗಳ ಸದ್ದು ಮುಗಿಲು ಮುಟ್ಟುವಂತಿತ್ತು.

ರಥವನ್ನು ಗ್ರಾಮದ ಮುಖ್ಯ ಬೀದಿಯಿಂದ ಗೊಡ್ಡರಾಯಿಕಲ್ಲಿನವರೆಗೆ ಎಳೆದು ತರಲಾಯಿತು

ಬ್ರಹ್ಮರಥೋತ್ಸವದ ಅಂಗವಾಗಿ ರಥ ಹಾಗೂ ಗರ್ಭಗುಡಿಯಲ್ಲಿನ ದೇವರಿಗೆ ವಿಶೇಷವಾಗಿ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

ವಿವಿಧ ಸಮುದಾಯದವತಿಯಿಂದ ಬ್ರಹ್ಮರಥೊತ್ಸವದ ಬರುವ ಭಕ್ತಾಧಿಗಳಿಗೆ ಪಾನಕ, ಮಜ್ಜಿಗೆ, ಹೆಸರುಬೇಳೆ ಹಾಗೂ ಪ್ರಸಾದ ವಿತರಿಸಲು ರಸ್ತೆ ಬದಿಗಳಲ್ಲಿ ಶಾಮಿಯಾನ, ಟೆಂಟ್ ಮತ್ತು ಅರವಂಟಿಕೆಗಳ ವ್ಯವಸ್ಥೆ ಮಾಡಿದ್ದರು.

ಶ್ರೀ ಅಂಬಾಭವಾನಿ ಮರಾರ ಸಂಘದಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾದಂತಹ ಭಾರತೀಯ ಯೋಧರ ಜ್ಞಾಪಕಾರ್ಥವಾಗಿ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.

ಬ್ರಹ್ಮರಥೋತ್ಸವದ ಅಂಗವಾಗಿ ಮೇ.15ರಿಂದ ಮೇ.19ರವರೆಗೆ ಅಭಿಷೇಕ, ಅರ್ಚನೆ, ಮಹಾಗಣಪತಿ ಪೂಜೆ, ಅಂಕುರಾರ್ಪಣೆ, ಧ್ವಜಾರೋಹಣ, ಕಲ್ಯಾಣೋತ್ಸವ, ಧೂಳೋತ್ಸವ, ಪಲ್ಲಕಿ ಉತ್ಸವ, ಡೊಳ್ಳು ಕುಣಿತ, ಉಯ್ಯಾಲೋತ್ಸವ, ಶಯನೋತ್ಸವ, ಗ್ರಾಮೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಇಂದು ಸಂಜೆ ಗುಂಡಮ್ಮ ಕಥಾ ಅಥವಾ ಸಾಸಲು ಚಿನ್ನಮ್ಮ ಕಥಾ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.

ಹೊಸಹಳ್ಳಿ ಗ್ರಾಮದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿಯ ದೇವಾಲಯ ಪುರಾಣ ಪ್ರಸಿದ್ದಿ ದೇವಾಲಯವಾಗಿದೆ. ಪ್ರತಿ ವರ್ಷ ನಡೆಯುವ ಜಾತ್ರೆಯಲ್ಲಿ ಭಕ್ತಾಧಿಗಳು ತಮ್ಮ ಇಚ್ಚಾನುಸಾರ ದೇವಸ್ಥಾನದ ಅಭಿವೃದ್ದಿಗೆ ಶ್ರಮಿಸುತ್ತಾರೆ.

ರಥೋತ್ಸವದ ಮೂರು ದಿನ ಮುಂಚಿತವಾಗಿ ವಿವಿಧ ಸಮುದಾಯದ ಭಕ್ತರು ಬಂದು ರಥೋತ್ಸವಕ್ಕೆ ಬೇಕಾದ ಸಿದ್ದತೆಯಲ್ಲಿ ತೊಡಗುತ್ತಾರೆ.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!