ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಆಹ್ವಾನ

Invitation to register as a Civil Defence Volunteer

ಬೆಂ.ಗ್ರಾಂ.ಜಿಲ್ಲೆ: ನನ್ನ ಭಾರತ ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ (Civil Defence Volunteer) ನೋಂದಾಯಿಸಿಕೊಳ್ಳಲು ಯುವಕರಿಗೆ ಇದು ಸಕಾಲವಾಗಿದ್ದು ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆಯಿಂದ (Department of Youth Affairs and Sports) ರಾಷ್ಟ್ರವ್ಯಾಪಿ ಕರೆಯನ್ನು ನೀಡಲಾಗಿದೆ.

ವಿಶೇಷವಾಗಿ ತುರ್ತು ಪರಿಸ್ಥಿತಿಗಳು ಹಾಗೂ ಬಿಕ್ಕಟ್ಟಿನ ಸಮಯದಲ್ಲಿ ಯುವಕರು ದೇಶಕ್ಕೆ ಕೊಡುಗೆಯನ್ನು ನೀಡಲು ಇದು ಉತ್ತಮವಾದ ಅವಕಾಶವಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಉದಯೋನ್ಮುಖ ಭದ್ರತಾ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು, ಬಲವಾದ, ಸಮುದಾಯ ಆಧಾರಿತ ಪ್ರತಿಕ್ರಿಯೆ ಕಾರ್ಯ ವಿಧಾನವನ್ನು ಸ್ಥಾಪಿಸುವ ಕುರಿತು ನಾಗರಿಕ ರಕ್ಷಣಾ ಸ್ವಯಂ ಸೇವಕರು ವ್ಯಾಪಕ ಶ್ರೇಣಿಯ ಸೇವೆಗಳ ಮೂಲಕ ಸ್ಥಳೀಯ ಅಧಿಕಾರಿಗಳೊಂದಿಗೆ ಬೆಂಬಲಿಸುವ ಮೂಲಕ ಉತ್ತಮ ಪಾತ್ರವನ್ನು ವಹಿಸಬೇಕಾಗುತ್ತದೆ.

ಪ್ರಮುಖವಾಗಿ ನನ್ನ ಭಾರತ ಎಂಬುದು ಸಂಘಟಿತ ಪ್ರಯತ್ನದ ಭಾಗವಾಗಿದ್ದು, ನೈಸರ್ಗಿಕ ವಿಕೋಪಗಳು, ಅಪಘಾತಗಳು, ಸಾರ್ವಜನಿಕ ತುರ್ತು ಪರಿಸ್ಥಿತಿಗಳು ಮತ್ತು ಇತರ ಅನಿರೀಕ್ಷಿತ ಸಂದರ್ಭದಲ್ಲಿ ನಾಗರಿಕ ಆಡಳಿತವನ್ನು ಪೂರೈಸುವ ಉತ್ತಮ ತರಬೇತಿ ಪಡೆದು ಸ್ಪಂದಿಸುವ ಮತ್ತು ಸ್ಥಿತಿಸ್ಥಾಪಕತ್ವ ಸ್ವಯಂ ಸೇವಕ ಪಡೆಯನ್ನು ನಿರ್ಮಿಸುವ ಗುರಿಯನ್ನು ಈ ಉಪಕ್ರಮವು ಹೊಂದಿದೆ.

ಜೊತೆಗೆ ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆಗಳು, ಪ್ರಥಮ ಚಿಕಿತ್ಸೆ, ಸಂಚಾರ ನಿರ್ವಹಣೆ, ಜನಸಂದಣಿ ನಿಯಂತ್ರಣ, ಸಾರ್ವಜನಿಕ ಸುರಕ್ಷತೆ ಮತ್ತು ಪುನರ್ವಸತಿ ಕಲ್ಪಿಸುವ ಪ್ರಯತ್ನಗಳಲ್ಲಿ ಸಹಾಯ ಮಾಡುವುದು ನನ್ನ ಭಾರತ ರಾಷ್ಟೀಯ ಧ್ಯೇಯಕ್ಕೆ ಕೊಡುಗೆ ನೀಡಲು ಯುವಕರು ಬದ್ಧರಾಗಿರಬೇಕು.

ನನ್ನ ಭಾರತ ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲು ಉತ್ಸಾಹಭರಿತ ಯುವ ನಾಗರಿಕರು ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಬಹುದು.

ಈಗಾಗಲೇ ಸೇವೆಯನ್ನು ಸಲ್ಲಿಸುತ್ತಿರುವ ಸ್ವಯಂ ಸೇವಕರೊಂದಿಗೆ ಎಲ್ಲರೂ ಕಾರ್ಯವನ್ನು ನಿರ್ವಹಿಸಬಹುದು. ಹಾಗೇ ನಿರ್ಣಾಯಕ ಸಂದರ್ಭದಲ್ಲಿ ತ್ವರಿತವಾಗಿ ಕಾರ್ಯ ನಿರ್ವಹಿಸಲು ಪ್ರಾಯೋಗಿಕ ಜೀವರಕ್ಷಕ ಕೌಶಲ್ಯಗಳ ತರಬೇತಿಯನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ನನ್ನ ಭಾರತ ಪೋರ್ಟಲ್ https://mybharat.gov.in ಈ ಅಧಿಕೃತ ಜಾಲತಾಣದ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಹಾಗೂ ಸಹಾಯವಾಣಿ ಸಂಖ್ಯೆ:8328673178 ಗೆ ಸಂಪರ್ಕಿಸಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಯುವ ಅಧಿಕಾರಿ ಕೆ. ಶ್ರಿವಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]