The role of forest dwellers in forest protection is immense.

ಗುಡ್ಮಾರ್ನಿಂಗ್ ನ್ಯೂಸ್: ಅರಣ್ಯ ರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಹಿರಿದು

ಹೆಮ್ಮಡಗಾ (ಖಾನಾಪುರ): ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ (Forest dwellers) ಪಾತ್ರ ಹಿರಿದಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆ, ಖಾನಾಪುರ ತಾಲೂಕು ಹೆಮ್ಮಡಗಾದಲ್ಲಿಂದು ಭೀಮಗಢ ಅರಣ್ಯ ವಲಯದ ತಳೇವಾಡಿ (ಗೌವಳಿ) ಗ್ರಾಮದಿಂದ ಸ್ವಯಂ ಪ್ರೇರಿತವಾಗಿ ಕಾಡಿನಿಂದ ಹೊರಗೆ ಬರಲು ಇಚ್ಛಿಸಿರುವ 27 ಕುಟುಂಬಗಳಿಗೆ ಚೆಕ್ ವಿತರಿಸಿ ಮಾತನಾಡಿದ ಅವರು, ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯ ಸಿಬ್ಬಂದಿಯ ಜೊತೆಗೆ ಅರಣ್ಯವಾಸಿಗಳೂ ಮಹತ್ವದ ಪಾತ್ರ ವಹಿಸಿದ್ದಾರೆ ಎಂದರು.

ಮಾನವನ ಹಸ್ತಕ್ಷೇಪ ಇಲ್ಲದಿದ್ದರೆ ಅರಣ್ಯ ಸಮೃದ್ಧವಾಗಿ ಬೆಳೆಯುತ್ತದೆ. ಪ್ರಸಕ್ತ ಕಾಲಘಟ್ಟದಲ್ಲಿ ಅರಣ್ಯದೊಳಗಿನ ವಾಸ ಕಷ್ಟಸಾಧ್ಯ. ಜಗತ್ತು ಆಧುನಿಕವಾಗಿ ಸಾಗುತ್ತಿರುವಾಗ, ದಶಕಗಳಿಂದ ಅರಣ್ಯದಲ್ಲೇ ಮೂಲಸೌಕರ್ಯ ಇಲ್ಲದೆ ಕೆಲವರು ವಾಸಿಸುತ್ತಿದ್ದಾರೆ ಇವರನ್ನು ಮುಖ್ಯವಾಹಿನಿಗೆ ತರುವ ಕಾರ್ಯ ಈಗ ನಡೆಯುತ್ತಿದೆ ಎಂದರು.

ಭೀಮಗಢದ ಅರಣ್ಯ ವ್ಯಾಪ್ತಿಯಲ್ಲಿ 13 ಗ್ರಾಮಗಳಿದ್ದು ಇಲ್ಲಿ ಸುಮಾರು 754 ಕುಟುಂಬಗಳು ವಾಸಿಸುತ್ತಿವೆ. ಈ ಪೈಕಿ ತಳೇವಾಡಿಯ 27 ಕುಟುಂಬಗಳು ಸ್ವಯಂ ಪ್ರೇರಿತರಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ತೀರ್ಮಾನಿಸಿದೆ ಎಂದರು.

ಹಿಂದಿನ ತಲೆಮಾರಿನ ಅರಣ್ಯವಾಸಿಗಳಿಗೆ ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಚೆನ್ನಾಗಿ ತಿಳಿದಿತ್ತು, ಆದರೆ ಇಂದಿನ ಪೀಳಿಗೆಯ ಅರಣ್ಯವಾಸಿಗಳಿಗೆ ಅಷ್ಟು ಪರಿಣತಿ ಇಲ್ಲ. ಹೀಗಾಗಿ ನಾಗರಿಕ ಸಮಾಜದಲ್ಲಿ ಅವರು ಬದುಕು ಕಟ್ಟಿಕೊಳ್ಳಲು ಈ ಸ್ಥಳಾಂತರ ಸಹಕಾರಿಯಾಗಲಿದೆ ಎಂದರು.

ಅರಣ್ಯದೊಳಗಿಂದ ಅರಣ್ಯದ ಹೊರಕ್ಕೆ ವಸತಿ ಪ್ರದೇಶಗಳನ್ನು ಸ್ಥಳಾಂತರ ಮಾಡುವುದರಿಂದ ಅರಣ್ಯ ಮತ್ತು ಅರಣ್ಯ ಸಂಪತ್ತು ವೃದ್ಧಿಸುತ್ತದೆ. ಅರಣ್ಯವಾಗಿಸಿಗಳ ಬದುಕೂ ಹಸನಾಗುತ್ತದೆ ಎಂದು ಹೇಳಿದರು.

ಕಳೆದ ಡಿಸೆಂಬರ್ ತಿಂಗಳಲ್ಲಿ ವಿಧಾನಮಂಡಳದ ಅಧಿವೇಶನ ವೇಳೆ ಭೀಮಗಢಕ್ಕೆ ಭೇಟಿ ನೀಡಿದ್ದಾಗ, ಅರಣ್ಯದೊಳಗೆ ತಲೆಯ ಮೇಲೆ ದಿನಸಿ ಹೊತ್ತು ಬರುತ್ತಿದ್ದ ಮಹಿಳೆಯರನ್ನು ನೋಡಿ, ಕಾರು ನಿಲ್ಲಿಸಿ ಮಾತನಾಡಿಸಿದಾಗ, ಒಬ್ಬರು ತಮ್ಮ ಪತಿಯನ್ನು ಹುಲಿ ಕೊಂದು ಹಾಕಿತು ಎಂದು ದುಃಖ ತೋಡಿಕೊಂಡರೆ, ಮತ್ತೊಬ್ಬ ಮಹಿಳೆ ತಮ್ಮ ಪತಿಯ ಮೇಲೆ ಕರಡಿ ದಾಳಿ ಮಾಡಿ ಶಾಶ್ವತ ಅಂಗವೈಕಲ್ಯ ಉಂಟಾಗಿದೆ ಎಂದರು. ಈ ಘಟನೆ ತಮ್ಮ ಮನ ಕಲಕಿತು ಎಂದರು.

ತಳೇವಾಡಿಗೆ ಭೇಟಿ ನೀಡಿದಾಗ ಅಲ್ಲಿನ ಕುಟುಂಬದ ಸದಸ್ಯರು ಸ್ವಯಂ ಇಚ್ಛೆಯಿಂದ ಕಾಡಿನಿಂದ ಹೊರಗೆ ಹೋಗಲು ತಾವು ಸಿದ್ಧವಿರುವುದಾಗಿ ತಿಳಿಸಿದರು. ನಿಯಮಾನುಸಾರ ಕ್ರಮ ಕೈಗೊಳ್ಳಲು ಸೂಚಿಸಿದ್ದೆ. ಇದು ಅದು ಸಾಕಾರವಾಗಿದೆ ಎಂದರು.

ಪ್ರಥಮ ಹಂತದಲ್ಲಿ ಇಂದು 27 ಕುಟುಂಬಗಳಿಗೆ ನಿಯಮಾನುಸಾರ ಮತ್ತು ಕಾನೂನು ಬದ್ಧವಾಗಿ ಪ್ರಥಮ ಹಂತದಲ್ಲಿ ಒಂದು ಪರಿವಾರದ ಘಟಕಕ್ಕೆ ತಲಾ 10 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಉಳಿದ 5 ಲಕ್ಷ ರೂಪಾಯಿಗಳನ್ನು ಅವರು ಸ್ಥಳಾಂತರ ಪ್ರಕ್ರಿಯೆ ಪೂರ್ಣಗೊಳಿಸಿದ ತರುವಾಯ ನೀಡಲಾಗುವುದು ಎಂದರು.

ಒತ್ತಾಯಪೂರ್ವಕ ಸ್ಥಳಾಂತರ ಅಲ್ಲ

ಒತ್ತಾಯಪೂರ್ವಕವಾಗಿ ಅರಣ್ಯದಿಂದ ಅರಣ್ಯವಾಸಿಗಳನ್ನು ಹೊರಗೆ ಕಳಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಸ್ವಯಂ ಇಚ್ಛೆಯಿಂದ ತಾವೇ ಮುಂದೆ ಬಂದ ಅರಣ್ಯವಾಸಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತದೆ ಎಂದರು.

ಇಂದು ಸ್ಥಳಾಂತರಗೊಳ್ಳುತ್ತಿರುವ ಕುಟುಂಬದ ಸದಸ್ಯರೊಂದಿಗೆ ಸಂವಾದ ನಡೆಸಿದಾಗ, ಅವರು ಅನಾರೋಗ್ಯದ ಸಂದರ್ಭದಲ್ಲಿ ಚಿಕಿತ್ಸೆ ಸಿಗದೆ ತೊಂದರೆ ಅನುಭವಿಸಿದ್ದನ್ನು ತಿಳಿಸಿದರು. ಹೀಗಾಗಿ ಅರಣ್ಯವಾಸಿಗಳು ಮತ್ತು ಅವರ ಮುಂದಿನ ಪೀಳಿಗೆ ಉತ್ತಮ ಜೀವನ ನಡೆಸಲು ಅನುವಾಗುವಂತೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕಳೆದ 20 ವರ್ಷಗಳಿಂದ ಸ್ಥಳಾಂತರದ ಬೇಡಿಕೆ ಇತ್ತು. ಈಶ್ವರ ಖಂಡ್ರೆ ಅವರು ಬಹಳಷ್ಟು ಮುತುವರ್ಜಿ ವಹಿಸಿ ಜನಪರವಾದ ಮಹತ್ವದ ಯೋಜನೆ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಬೇಕು ಎಂದರು.

ಅರಣ್ಯ ಇದ್ದರೆ ಮಾತ್ರ ಮಳೆ, ಬೆಳೆ ಆಗಲು ಸಾಧ್ಯ. ಅರಣ್ಯ ಉಳಿಸಲು ಪ್ರಯತ್ನಿಸಬೇಕು, ಜೊತೆಗೆ ನಾಗರಹೊಳೆ, ಬಂಡೀಪುರದ ರೀತಿಯಲ್ಲಿಯೇ ಇಲ್ಲಿಯೂ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರಕಬೇಕು ಎಂದು ಹೇಳಿದರು.

ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ಇದರ ಯಶಸ್ಸಿನ ಬಳಿಕ, ಇತರ ತಾಂಡಾಗಳ ಜನರೂ ಸ್ವ ಇಚ್ಛೆಯಿಂದ ಕಾಡಿನಿಂದ ಹೊರಬರಲು ಇಚ್ಛಿಸಿದರೆ ಸರ್ಕಾರ ಪ್ರಯತ್ನ ಮಾಡಲಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಖಾನಾಪುರ ಶಾಸಕ ವಿಠ್ಠಲ ಹಲಗೇಕರ್ ಮಾತನಾಡಿ ಇದೊಂದು ಮಹತ್ವದ ಕಾರ್ಯಕ್ರಮ. ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾಗಿ ಒಂದೇ ವರ್ಷದಲ್ಲಿ ಸ್ಥಳಾಂತರ ಕಾರ್ಯಕ್ರಮ ಆರಂಭಿಸಿದ್ದು, ಇಂದು ಚೆಕ್ ವಿತರಿಸುತ್ತಿದ್ದಾರೆ ಅವರಿಗೆ ಅಭಿನಂದನೆ ಸಲ್ಲಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯವನ್ಯಜೀವಿ ಪರಿಪಾಲಕರಾದ ಸುಭಾಷ್ ಮಾಲ್ಕಡೆ, ಕಾಂಪಾ ಮುಖ್ಯ ನಿರ್ವಹಣಾಧಿಕಾರಿ ರಾಧಾ ದೇವಿ, ಜಿಲ್ಲಾಧಿಕಾರಿ ಮಹಮದ್ ರೋಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚೌವ್ಹಾಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತುರಾಜ್ ಮತ್ತಿತರರರು ಪಾಲ್ಗೊಂಡಿದ್ದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!