Stampede during RCB celebrations: R Ashoka writes to National Human Rights Commission

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು: ಆರ್ ಅಶೋಕ ವಾಗ್ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ (R Ashoka) ಸರ್ಕಾರವನ್ನು ಆಗ್ರಹಿಸಿದ್ದಾರೆ.

ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ “ಬ್ರಾಂಡ್ ಬೆಂಗಳೂರು”ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ, ಡಿಸಿಎಂ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಮಧ್ಯ ರಾತ್ರಿಯಿಂದಲೇ ನಗರದ ನಾನಾ ಪ್ರದೇಶಗಳಿಂದ ತಮಗೆ ದೂರವಾಣಿ ಕರೆಗಳ ಮಹಾಪೂರ ಹರಿದು ಬರುತ್ತಿದೆ. ಅನೇಕ ಬಡಾವಣೆಗಳು ಜಲಾವೃತವಾಗಿವೆ, ನೂರಾರು ವಾಹನಗಳು ಪ್ರವಾಹದಲ್ಲಿ ತೇಲಿ ಹೋಗಿವೆ, ಅನಾಥಾಶ್ರಮಕ್ಕೂ ನೀರು ನುಗ್ಗಿದೆ, ಇಡೀ ರಾತ್ರಿ ಜನರು ಜಾಗರಣೆ ಮಾಡುತ್ತಿದ್ದಾರೆ, ಅವರಿಗೆ ಊಟದ ವ್ಯವಸ್ಥೆ ಇಲ್ಲ, ಇಷ್ಟಾದರೂ ಬಿಬಿಎಂಪಿ ನೆರವಿಗೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೊಣೆಗೇಡಿತನದ ಪರಮಾವಧಿ

ಕಳೆದ ಮುಳುಗಡೆಯಾಗಿದ್ದ ಸಾಯಿ ಬಡಾವಣೆ, ನಂದಗೋಕುಲ ಬಡಾವಣೆ ಸೇರಿದಂತೆ ಅನೇಕ ಬಡಾವಣೆಗಳಿಗೆ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಪಾಲಿಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಶಾಶ್ವತ ಪರಿಹಾರದ ಭರವಸೆ ನೀಡಿದ್ದರು. ಆದರೆ, ಅದು ಮಾತಿನಲ್ಲೇ ಉಳಿದು ಈ ಸಲ ಮತ್ತೆ ಆ ಬಡಾವಣೆಗಳು ನೀರಿನಲ್ಲಿ ಮುಳುಗಿವೆ. ಆದರೂ ನಿವಾಸಿಗಳ ಅಳಲು ಕೇಳಲು ಯಾರೂ ಮುಂದಾಗಿಲ್ಲ ಎಂದು ಟೀಕಿಸಿದ್ದಾರೆ.

ಮೂರು ವ್ಯಾಲಿಗಳಲ್ಲೂ ಪ್ರವಾಹ

ಹೆಬ್ಬಾಳ, ಕೋರಮಂಗಲ ಮತ್ತು ವೃಷುಭಾವತಿ ವ್ಯಾಲಿಯಲ್ಲಿ ಪ್ರವಾಹ ಬಂದಿದೆ. ಇನ್ನೂ ಮೂರು – ನಾಲ್ಕು ದಿನ ಭಾರಿ ಮಳೆ ಬೀಳುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಕ್ಷಣ ತುರ್ತು ಪರಿಹಾರ ಕಾರ್ಯಪಡೆ ರಚಿಸಿ, ಸಹಾಯವಾಣಿ ಆರಂಭಿಸಬೇಕು.

ನೀರು ನುಗ್ಗಿರುವ ಮನೆಗಳಿಗೆ ತಲಾ ಕನಿಷ್ಠ ಒಂದು ಲಕ್ಷ ರೂ. ಪರಿಹಾರ ವಿತರಿಸಬೇಕು. ಆ ಮನೆಯವರಿಗೆ ಊಟ, ತಿಂಡಿ ವ್ಯವಸ್ಥೆ ಮಾಡಿ ಎರಡು ತಿಂಗಳಿಗೆ ಆಗುವಷ್ಟು ಪರಿಹಾರ ವಿತರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಅಪಮಾನ

ಹಿಂದಿನ ವರ್ಷದ ಲೋಪಗಳಿಂದ ಪಾಠ ಕಲಿಯದ ಸರ್ಕಾರದ ಬೇಜವಾಬ್ದಾರಿತನದಿಂದ ನಗರದಲ್ಲಿ ಅನಾಹುತ ಸಂಭವಿಸಿದೆ. ಮುಂಚಿತವಾಗಿ ಮೋರಿ, ಚರಂಡಿ, ರಾಜ ಕಾಲುವೆಗಳಲ್ಲಿ ಹೂಳು ತೆಗೆಸುವ ಕೆಲಸ ಮಾಡಬೇಕಿತ್ತು. ನಗರದ ಅನೇಕ ಕಡೆ ವೈಟ್ ಟಾಫಿಂಗ್ ಮತ್ತು ರಿಪೇರಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿನ ಅವಶೇಷಗಳನ್ನು ತೆರವು ಮಾಡಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ.

ಬಿಬಿಎಂಪಿ ಮುನ್ನೆಚ್ಚರಿಕೆ ವಹಿಸದಿರುವುದೇ ಅನಾಹುತಗಳಿಗೆ ಕಾರಣ ಎಂದು ಖುದ್ದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ. ಉಸ್ತುವಾರಿ ಸಚಿವ ಡಿಕೆಶಿ ಅವರ ವೈಫಲ್ಯಕ್ಕೆ ಇದಕ್ಕಿಂತ ಇನ್ಯಾವುದೇ ಸರ್ಟಿಫಿಕೇಟ್ ಬೇಕಾ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಮನೆ ಬಾಗಿಲಿಗೆ ಪರಿಹಾರ ಅಲ್ಲ; ಕೊಳಚೆ ನೀರು

ಕಳೆದ ವರ್ಷ ವಿಧಾನಸಭೆ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಪರಿಹಾರ ಹೆಸರಿನಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿದ್ದ ಶಿವಕುಮಾರ್ ಅವರು, ಸಾರ್ವಜನಿಕರಿಗೆ ಭರವಸೆಗಳ ಮಹಾಪೂರವನ್ನೇ ಹರಿಸಿದ್ದರು. ಈಗ ಅದೆಲ್ಲಾ ಏನಾಯಿತು ಎಂಬ ಉತ್ತರ ನೀಡಬೇಕು. ಅವರು ಪರಿಹಾರ ನೀಡಲಿಲ್ಲ, ಪ್ರವಾಹದ ನೀರು ಮತ್ತು ಕಸದ ರಾಶಿಯನ್ನು ಮನೆಬಾಗಿಲಿಗೆ ತಂದು ಹಾಕಿದ್ದಾರೆ ಎಂದು ಗೇಲಿ ಮಾಡಿದ್ದಾರೆ.

ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ವರ್ತಿಸಿರುವ ಶಿವಕುಮಾರ್ ಅವರು, ಹಿಂದಿನ ಸರ್ಕಾರದ ಲೋಪ ಅನಾಹುತಕ್ಕೆ ಕಾರಣ ಎಂದಿದ್ದಾರೆ. ಆಗಾದರೆ ಎರಡು ವರ್ಷಗಳ ಕಾಲ ಇವರು ಕಡಿದು ಕಟ್ಟೆ ಹಾಕಿದ್ದೇನು? ಇದೇನಾ ಇವರ ಬ್ರಾಂಡ್ ಬೆಂಗಳೂರು? ಹೆಸರಿಗೆ ಮಾತ್ರ ಗ್ರೆಟರ್, ದಿನವೂ ಜನರಿಗೆ ಟಾರ್ಚರ್ ತಪ್ಪಿಲ್ಲ. ಒಂದೇ ಮಳೆಗೆ ಇವರ ಬ್ರಾಂಡ್ ಬೆಂಗಳೂರು ಕೊಚ್ಚಿ ಹೋಯ್ತು. ಜಾಗತಿಕ ಮಟ್ಟದಲ್ಲಿ ಬೆಂಗಳೂರು ಮಾನ ಹರಾಜಾಗಿದೆ ಎಂದು ಅಶೋಕ್ ಕಿಡಿ ಕಾರಿದ್ದಾರೆ.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]