Doddaballapur: Applications invited for Atma Shreshtha Krushika Award

ಬೆಂ.ಗ್ರಾ.ಜಿಲ್ಲೆ: ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿಗೆ ಪೂರ್ವ ಸಿದ್ಧತೆ

ಬೆಂ.ಗ್ರಾಂ.ಜಿಲ್ಲೆ: ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ (Agriculture Department) ಹಲವು ಪೂರ್ವಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಗುಣ ನಿಯಂತ್ರಣ ಸಪ್ತಾಹವನ್ನು ಮೇ 19 ರಿಂದ 23 ರವರೆಗೆ ಆಚರಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಪ್ತಾಹದ ಅಂಗವಾಗಿ ಉಪ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ನಾಲ್ಕು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಮತ್ತು ಕೃಷಿ ಅಧಿಕಾರಿಗಳ ತಂಡವನ್ನು ರಚಿಸಿ, ಜಿಲ್ಲೆಗೆ ವ್ಯಾಪ್ತಿಗೆ ಒಳಪಡುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಮಾರಾಟ ಮಳಿಗೆಗಳ ತಪಾಸಣೆ ಮಾಡಲಾಗುವುದು.

ಜಿಲ್ಲೆಯಲ್ಲಿ ಈವರೆಗೆ 95 ಪರಿಕರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿದ್ದು, 66 ಬಿತ್ತನೆ ಬೀಜದ ಮಾದರಿಗಳು, 36 ರಸಗೊಬ್ಬರ ಮಾದರಿಗಳು ಮತ್ತು 21 ಕೀಟನಾಶಕ ಮಾದರಿಗಳನ್ನು ಸಂಗ್ರಹಿಸಿ ಅವುಗಳ ಗುಣಮಟ್ಟ ಪರಿಶೀಲನೆಗಾಗಿ ಕಳುಹಿಸಿದ್ದು, ಇದರಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ನಕಲಿ ಎಂದು ತಿಳಿದು ಬಂದರೆ ಅಂತಹ ಕಳಪೆ ಗುಣಮಟ್ಟದ ವಸ್ತುಗಳನ್ನು ಖರೀದಿಸದಂತೆ ಜಾಗೃತಿ ಮೂಡಿಸುವ ಸಲುವಾಗಿ ರೈತರಿಗೆ ಸಲಹೆಯನ್ನು ನೀಡಲಾಗುವುದು.

ರೈತರು ಹೊಲಗಳಲ್ಲಿ ಕಂದಕ, ಬದುಗಳನ್ನು ನಿರ್ಮಿಸಿ

ಜಲಾನಯನ ಹಾಗೂ ನರೇಗಾ ಯೋಜನೆಯಡಿ ವ್ಯಾಪ್ತಿಗೆ ಒಳಪಡುವ ಎಲ್ಲಾ ರೈತರು ತಮ್ಮ ಜಮೀನುಗಳಲ್ಲಿ ಇಂಗು ಗುಂಡಿಗಳನ್ನು (5 ಮೀ ಉದ್ದ , 1 ಮೀ ಅಗಲ, 2ಅಡಿ ಆಳ) ನಿರ್ಮಾಣ ಮಾಡಿಕೊಳ್ಳಬೇಕು.

ಈ ರೀತಿಯಲ್ಲಿ ಎಕರೆಗೆ 20 ಕಂದಕಗಳನ್ನು ನಿರ್ಮಿಸಿದರೆ, ಒಂದು ಕಂದಕದಿಂದ 3 ಸಾವಿರ ಲೀಟರ್ ನಂತೆ, ಒಟ್ಟಾರೆ 20 ಕಂದಕದಿಂದ 50 ಸಾವಿರ ಲೀಟರ್ ನೀರನ್ನು ಸಂಗ್ರಹಿಸಬಹುದು. ಹೀಗೆ ವರ್ಷದಲ್ಲಿ ಬೀಳುವ 8 ರಿಂದ 10 ಮಳೆಗೆ ಕನಿಷ್ಠ 5 ಲಕ್ಷ ಲೀಟರ್ ನೀರನ್ನು ಶೇಖರಿಸಬಹುದು.

ಈ ರೀತಿ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಎಲ್ಲಾ ಕೊಳವೆ ಬಾವಿಗಳಲ್ಲಿ ನೀರು ಸಿಗುವ ಲಭ್ಯತೆ ಹೆಚ್ಚಾಗುತ್ತದೆ. ಮಳೆಗಾಲ ಮುಗಿದ ನಂತರ ಟ್ಯಾಂಕರ್ ನೀರಿನ ಮೇಲಿನ ಅವಲಂಬನೆ ಕ್ರಮೇಣ ಕಡಿಮೆಯಗುತ್ತದೆ.

ದೇಸಿ ತಳಿ ಇದ್ದರೆ ನೋಂದಾಯಿಸಿಕೊಳ್ಳಿ

ದೇಸಿ ತಳಿಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಕೃಷಿ ಇಲಾಖೆ ವತಿಯಿಂದ ಸಂರಕ್ಷಣೆ ಮತ್ತು ಉತ್ತೇಜನ ನೀಡಲು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಿದೆ. ದೇಸಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರು ಈ ಕಾರ್ಯಕ್ರಮದ ಉಪಯೋಗ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಿ.

ಆಯಾ ಪ್ರದೇಶದಲ್ಲಿ ಸ್ಥಳೀಯ ಅಥವಾ ಸಾಂಪ್ರಾಯಿಕವಾಗಿ ಕೃಷಿ ಪದ್ಧತಿಯಿಂದ ಅಭಿವೃದ್ಧಿ ಮತ್ತು ನಿರ್ವಹಿಸುವ ತಳಿಗಳನ್ನು ದೇಸಿ ತಳಿಗಳೆಂದು ಕರೆಯಲಾಗುತ್ತದೆ.

ಈ ಕಾರ್ಯಕ್ರಮದಡಿ ಭತ್ತ,ರಾಗಿ, ಜೋಳ, ತೊಗರಿ, ಹುರುಳಿ, ಅವರೆ, ಅಲಸಂದೆ, ಮಡಕಿಕಾಳು,ಹುಚ್ಚೆಳ್ಳು, ಕಸುಬೆ, ಎಳ್ಳು, ನವಣೆ, ಸಾಮೆ, ಊದಲು, ಕೊರಲೆ ಮತ್ತು ಬರಗು ಆಯ್ಕೆಯಾದ ಬೆಳೆಗಳಾಗಿವೆ.

ಹಾಗೇ ಜಾನುವಾರು ಸಾಕಾಣಿಕೆ, ಕೊಟ್ಟಿಗೆ ಗೊಬ್ಬರ, ಎರೆಹುಳು ಗೊಬ್ಬರ ಮತ್ತು ಇತರೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರೈತರನ್ನು ಕೃಷಿ ಇಲಾಖೆಯು ಪ್ರೋತ್ಸಾಹಿಸಲಾಗುತ್ತದೆ. ಸಲಹಾ ಸಮಿತಿ ಶಿಫಾರಸ್ಸು ಮಾಡುವ ಇತರೆ ಬೆಳೆಗಳಲ್ಲಿ ದೇಸಿ ತಳಿಗಳನ್ನು ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬಹುದು.

ದೇಸಿ ತಳಿಗಳನ್ನು ರಕ್ಷಿಸಿ ಮತ್ತು ಪರಂಪರೆ ಮುಂದುವರೆಸುತ್ತಿರುವ ರೈತರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಲು ಜೀವವೈವಿಧ್ಯತೆಯನ್ನು ಬೆಂಬಲಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪೋಷಿಸಲು ಸಹಕಾರಿಯಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!