ಮಳೆ‌ ನೀರಿನಿಂದ ಅವಾಂತರ; ಡಿಸಿಎಂ ಡಿಕೆ ಶಿವಕುಮಾರ್ ಭೇಟಿ

Rainwater disruption; DCM DK Shivakumar visits

ಬೆಂಗಳೂರು: “ಮಳೆ ನೀರಿನಿಂದ ಉಂಟಾಗುವ ಅವಘಡಗಳನ್ನು ತಪ್ಪಿಸಲು ಮೊದಲೇ ಸಜ್ಜಾಗಿದ್ದೆವು. ನಾವು ಶೇ. 70 ರಷ್ಟು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ನಿವಾರಣೆ ಮಾಡಿದ್ದೇವೆ. ಈಗಾಗಲೇ ಇಡೀ ಬೆಂಗಳೂರಿನಾದ್ಯಂತ 197 ಕಿಮೀ ಉದ್ದದ ಮಳೆನೀರುಗಾಲುವೆ ನಿರ್ಮಾಣದ ಕೆಲಸ ನಡೆಯುತ್ತಿದೆ.” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಹೇಳಿದರು.

ಬಿಬಿಎಂಪಿ ಮುಖ್ಯ ಕಚೇರಿಯ ವಾರ್ ರೂಮಲ್ಲಿ ಮಾಧ್ಯಮದವರ ಜತೆ ಸೋಮವಾರ ಸಂಜೆ ಮಾತನಾಡಿದರು.

“ನಾನು ಬೆಂಗಳೂರಿನ ಜವಾಬ್ದಾರಿ ತೆಗೆದುಕೊಂಡ ನಂತರ ಮಳೆ ನೀರಿನಿಂದ ತೊಂದರೆಗೆ ಒಳಗಾಗುತ್ತಿದ್ದ 210 ಪ್ರದೇಶಗಳನ್ನು ಗುರುತಿಸಲಾಯಿತು. 166 ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ನಿವಾರಣೆ ‌ಮಾಡಲಾಗಿದೆ. ಇನ್ನು 44 ಪ್ರದೇಶಗಳಲ್ಲಿ ಕೆಲಸ ಬಾಕಿಯಿದ್ದು ಇದರಲ್ಲಿ 24 ಪ್ರದೇಶಗಳಲ್ಲಿ ಕೆಲಸ ನಡೆಯುತ್ತಿದೆ.

ಸಂಚಾರಿ ಪೊಲೀಸರು ಮಳೆ ಬಂದಾಗ ಸಮಸ್ಯೆ ಉಂಟಾಗುವ 132 ಪ್ರದೇಶಗಳನ್ನು ಗುರುತಿಸಿದ್ದಾರೆ. ಇದರಲ್ಲಿ ಏಪ್ರಿಲ್ ವೇಳೆಗೆ 82 ಪ್ರದೇಶಗಳಲ್ಲಿ ಸಮಸ್ಯೆ ನಿವಾರಣೆ ಮಾಡಿದ್ದೇವೆ. 41 ಕೆಲಸಗಳು ಬಾಕಿ ಉಳಿದಿವೆ. ಮಳೆನೀರುಗಾಲುವೆಗೆ ಎಂದೇ 2 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ” ಎಂದು ಹೇಳಿದರು.

“ಮಳೆ ಎಂಬುದು ಪ್ರಕೃತಿಯ ನಿಯಮ. ನಾವು ಜನಸಾಮಾನ್ಯರ ಬದುಕಿನ ಬಗ್ಗೆ ಕಾಳಜಿ ಹೊಂದಿದ್ದೇವೆ. ಉಂಟಾಗಿರುವ ಸಮಸ್ಯೆಗಳನ್ನು ನಿವಾರಣೆ ಮಾಡಲು ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಬೆಂಗಳೂರಿನ ಜನತೆ ಯಾವುದೇ ಕಾರಣಕ್ಕೂ ಗಾಬರಿಗೆ ಒಳಗಾಗುವುದು ಬೇಡ” ಎಂದರು.

“ದುರಾದೃಷ್ಟವಶಾತ್ ಮಹಿಳೆಯೊಬ್ಬರ ಮೇಲೆ ಖಾಸಗಿ ಪ್ರದೇಶದಲ್ಲಿದ್ದ ಕಟ್ಟಡದ ಗೋಡೆ ಬಿದ್ದು ಮೃತಪಟ್ಟಿದ್ದಾರೆ. ನಮಗೂ ನಮ್ಮ ಜವಾಬ್ದಾರಿಯ ಬಗ್ಗೆ ಅರಿವಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಸಿಲ್ಕ್‌ ಬೋರ್ಡ್, ಹೆಬ್ಬಾಳದ‌ ನಂತರದ‌ ಭಾಗ, ಯಲಹಂಕ ಇಲ್ಲೆಲ್ಲೇ ಹೆಚ್ಚು ಮಳೆ ಸುರಿದಿದೆ. ಇಲ್ಲಿ ಒಂದೆರಡು ಕಡೆ ರೈಲ್ವೇ ಅಂಡರ್ ಪಾಸ್ ಕೆಲಸ ನಡೆಯುತ್ತದೆ. ಆದ ಕಾರಣ ನೀರು ನಿಂತು ಹೆಚ್ಚು ತೊಂದರೆಯಾಗುತ್ತಿದೆ. ಆದ್ದರಿಂದ ಆ ಇಲಾಖೆಯವರ ಜೊತೆ ಸಮನ್ವಯ ಸಾಧಿಸಿ ಕೆಲಸ ಮಾಡಲಾಗುವುದು” ಎಂದರು.

ಹತಾಶೆಯ ಮನುಷ್ಯರು

ಕುಮಾರಸ್ವಾಮಿ ಗ್ರೇಟರ್ ಬೆಂಗಳೂರಲ್ಲ ಲೂಟರ್ ಬೆಂಗಳೂರು ಎಂದು ಕರೆದಿರುವ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಹಾಗೂ ಬಿಜೆಪಿಯ ನಾಯಕರು ಹತಾಶೆಯ ಮನುಷ್ಯರು” ಎಂದರು.

ನಿಮ್ಮನ್ನ ಅಥವಾ ಸರ್ಕಾರವನ್ನು ನೋಡಿ ಹತಾಶೆಗೆ ಒಳಗಾಗಿದ್ದಾರೆಯೇ ಎಂದಾಗ, “ನಾನು ಹಾಗೂ ಸರ್ಕಾರ ಎರಡೂ ನೋಡಿ ಹತಾಶರಾಗಿದ್ದಾರೆ. ನಾವು ಇಷ್ಟೊಂದು ಸಾಧನೆ ಮಾಡಿದ್ದೇವೆ. ಅವರಿಗೆ ಏನನ್ನೂ ಹೇಳಿಕೊಳ್ಳಲು ಆಗುತ್ತಿಲ್ಲವಲ್ಲ. ಜೋಕರ್ ಆಟವಾಡಲು ನನಗೆ ಚಾನ್ಸ್ ಸಿಗಲಿಲ್ಲವಲ್ಲ ಎಂದು ಸಂಕಟ” ಎಂದರು.

ಡಿಕೆ ಶಿವಕುಮಾರ್ ರಿಯಲ್‌ ಎಸ್ಟೇಟ್‌ ಮಾಡುವವರು ಎನ್ನುವ ಬಿಜೆಪಿಯವರ ಟೀಕೆಯ ಬಗ್ಗೆ ಕೇಳಿದಾಗ, “ನಾನು ಇಲ್ಲಿ ಅದನ್ನು ಮಾತನಾಡುವುದಿಲ್ಲ. ಬೇರೆ ವೇದಿಕೆಯಲ್ಲಿ ಮಾತನಾಡುತ್ತೇನೆ. ಆರ್.ಅಶೋಕ್ ಹಾಗು ವಿರೋಧ ಪಕ್ಷದ ಯಾರನ್ನಾದರೂ ಕರೆಯಿರಿ ಮಾಧ್ಯಮಗಳ ಮುಂದೆಯೇ ಚರ್ಚೆ ನಡೆಸೋಣ” ಎಂದು ತಿರುಗೇಟು ನೀಡಿದರು.

ಸವಾಲಿಗೆ ನಾನು ಸಿದ್ಧನಿದ್ದೇನೆ

ಗ್ರೇಟರ್‌ ಬೆಂಗಳೂರು ವಾಟರ್ ಬೆಂಗಳೂರಾಗಿದೆ ಎನ್ನುವ ವಿಪಕ್ಷಗಳ ಟೀಕೆಗಳ ಬಗ್ಗೆ ಕೇಳಿದಾಗ,‌ “ನಾವು ಬೆಂಗಳೂರಿನ‌ ಎಷ್ಟು ಸಮಸ್ಯೆಗಳನ್ನು ನಿವಾರಣೆ ಮಾಡಿದ್ದೇವೆ ಎಂಬುದರ ಬಗ್ಗೆ ನಮ್ಮ ಜೊತೆ ಚರ್ಚೆಗೆ ಅವರುಗಳು ಬರಲಿ.‌‌ ಕೇವಲ ಆರೋಪ ಮಾಡಿ ಹಿಟ್ ಅಂಡ್ ರನ್ ಮಾಡುವುದಲ್ಲ.‌ ಅವರು ಪಟ್ಟಿ ಮಾಡಿಕೊಂಡು ಬರಲಿ. ನಾವು ಸುಮ್ಮನೇ ಕುಳಿತಿದ್ದೇವ ಎಂಬುದು ತಿಳಿಯಲಿ” ಎಂದು ಹೇಳಿದರು.

ನೀವು ಸವಾಲು ಹಾಕಲು ತಯಾರಿದ್ದೀರಾ ಎಂದು ಕೇಳಿದಾಗ, “ನಾನು ಯಾವಾಗಲೂ ‌ತಯಾರಿದ್ದೇನೆ. ಮಾಧ್ಯಮಗಳಲ್ಲಿಯೇ ಇದಕ್ಕೆ ವೇದಿಕೆ ಸಿದ್ಧ ಮಾಡಿ” ಎಂದರು.

ವಿರೋಧ ಪಕ್ಷಗಳು ಬೆಂಗಳೂರಿನ ಸ್ಥಿತಿಗೆ ಕಾಂಗ್ರೆಸ್ ಕಾರಣ ಎಂದು ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ಅವರ ಕಾಲದಲ್ಲಿ ಏನಾಗಿದೆ ಎಂಬುದನ್ನು ವಿಪಕ್ಷಗಳು ನೋಡಿಕೊಳ್ಳಲಿ.‌ ನಾವಾದರು ಶೇ.70 ರಷ್ಟು ಪ್ರದೇಶಗಳಲ್ಲಿ ಸಮಸ್ಯೆಗಳನ್ನು ನಿವಾರಣೆ ಮಾಡಿದ್ದೇವೆ. ಬೆಂಗಳೂರು ಯೋಜಿತವಾದ ನಗರವಲ್ಲ. ಆದರೂ ನಾವು ನಮ್ಮ ಕರ್ತವ್ಯ ಮಾಡುತ್ತೇವೆ” ಎಂದರು.

ಸಮಸ್ಯೆ ‌ನಿವಾರಣೆಗೆ ಏನಾದರೂ ಯೋಜನೆಗಳಿವೆಯೇ ಎಂದು ಕೇಳಿದಾಗ, ‌”ಈ ಮೊದಲೇ ನಾವು ಯೋಜನೆ ರೂಪಿಸಿದ್ದೆವು. ಅಧಿಕಾರಿಗಳು ಚೆನ್ನಾಗಿ ಕೆಲಸ ಮಾಡಿದ್ದಾರೆ. ಅದರ ಬಗ್ಗೆ ನನಗೂ ಸಂತಸವಿದೆ. ಅನೇಕ ಅಧಿಕಾರಿಗಳು ತೊಂದರೆಗೆ ಒಳಗಾದ ಸ್ಥಳದಲ್ಲಿದ್ದು ಕೆಲಸ ಮಾಡಿದ್ದಾರೆ” ಎಂದರು.

ರಸ್ತೆಗಳ ಅಗಲೀಕರಣ ಮಾಡಿ ಸಮಸ್ಯೆಗಳಿಗೆ ಮುಕ್ತಿ ಹಾಡಬಹುದೇ ಎಂದು ಕೇಳಿದಾಗ, “ರಸ್ತೆ ‌ಅಗಲೀಕರಣಕ್ಕೆ‌‌ ಅಕ್ಕಪಕ್ಕದ ಕಟ್ಟಡಗಳನ್ನು ಒಡೆಯಬೇಕಾಗುತ್ತದೆ. ಇದು ಸಾಕಷ್ಟು ವೆಚ್ಚದಾಯಕ‌.‌

ಈಗ ಮೇಲ್ಸೆತುವೆ ಹಾಗೂ ಟನಲ್‌ ರಸ್ತೆಗಳೇ ಪರಿಹಾರ. ಜೊತೆಗೆ ಪರ್ಯಾಯ ಮಾರ್ಗಗಳನ್ನು ಸಹ ಹುಡುಕಾಟ ನಡೆಸುತ್ತಿದ್ದೇವೆ. 1 ಲಕ್ಷ‌ ಕೋಟಿಗೂ ಅಧಿಕ ಹಣವನ್ನು ಮೆಟ್ರೋ, ಫೆರಿಫೆರಲ್‌ ರಿಂಗ್‌ ರಸ್ತೆ, ಬೆಂಗಳೂರು ಅಭಿವೃದ್ಧಿಗೆ ನಾವು ಹೂಡಿಕೆ ಮಾಡಿದ್ದೇವೆ” ಎಂದರು.

ಪದೇ,‌ ಪದೇ ಮರಗಳು ಬೀಳುತ್ತಿವೆ ಎನ್ನುವುದರ ಬಗ್ಗೆ ಕೇಳಿದಾಗ, “ಮರ‌ ಪಕೃತಿಯ ಅಂಶ. ಸಡಿಲಗೊಂಡ ಮರ, ಒಣಗಿದ ಕೊಂಬೆಗಳನ್ನು ತೆರವುಗೊಳಿಸಲು ತಂಡವೊಂದು ಪ್ರತಿದಿನ ಕೆಲಸ ಮಾಡುತ್ತಿರುತ್ತದೆ. ಒಂದು ಮರವನ್ನು ಏಕಾಏಕಿ ಕತ್ತರಿಸಲು ಆಗುವುದಿಲ್ಲ. ನಾಳೆ ಯಾವ ರೀತಿ ಗಾಳಿ ಬರುತ್ತದೆ ಎಂಬುದು ಯಾರಿಗೂ ಗೊತ್ತಾಗಲ್ಲ. ಟೀಕೆ ಇದ್ದೇ ಇರುತ್ತವೆ. ನಾವು ಕೇವಲ ಕೆಲಸ ಮಾಡುತ್ತೇವೆ” ಎಂದರು.

ಮಾನ್ಯತಾ ಟೆಕ್‌ ಪಾರ್ಕ್ ಒತ್ತುವರಿ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ವಿಪತ್ತು ನಿರ್ವಹಣಾ ಕೇಂದ್ರಕ್ಕೂ ಎಚ್ಚರಿಕೆ ನೀಡಿದ್ದೆವು. ಈಗ ಅಲ್ಲಿ ಬಗೆದು ನೀರು ಹರಿಯಲು ಅವಕಾಶ ನೀಡಲಾಗಿದೆ.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]