ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದಿಂದ ಕಾಣೆಯಾಗುತ್ತಿವೆ 108 ಆಂಬುಲೆನ್ಸ್‌ಗಳು..!

108 ambulances are going missing from Doddaballapur..!

ದೊಡ್ಡಬಳ್ಳಾಪುರ: ಇತ್ತೀಚೆಗಷ್ಟೇ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಮನವಿ, ಒತ್ತಾಯಕ್ಕೆ ಮಣಿದು ಸಕ್ರಿಯವಾಗಿದ್ದ 108 ಆಂಬುಲೆನ್ಸ್‌ಗಳು (108 ambulances) ಮತ್ತೆ ಸದ್ದಿಲ್ಲದೆ ತಾಲೂಕಿನಿಂದ ಕಾಣೆಯಾಗುತ್ತಿವೆ.

ದೊಡ್ಡಬಳ್ಳಾಪುರ ತಾಲೂಕಿನ ನಗರ, ಘಾಟಿ ಮಧುರೆ, ದೊಡ್ಡಬೆಳವಂಗಲ ಹಾಗೂ ಸಾಸಲು ಹೋಬಳಿಯ ಒಟ್ಟು ಐದು 108 ಆಂಬುಲೆನ್ಸ್ ಕಾರ್ಯ ನಿರ್ವಹಿಸಬೇಕಿತ್ತು. ಆದರೆ ಕಾರ್ಯನಿರ್ವವಹಿಸುತ್ತಿರುವುದು ಮೂರು ಮಾತ್ರ..! ಮತ್ತೆ ಉಳಿದ ಅಂಬುಲೆನ್ಸ್ ಎಲ್ಲಿಗೆ ಹೋದವು..? ಕೇಳೋರ್ ಯಾರು..? ಹೇಳೋರ್ ಯಾರು..? ಎಂಬ ಪ್ರಶ್ನೆ ದೊಡ್ಡಬೆಳವಂಗಲ ಮತ್ತು ಸಾಸಲು ಹೋಬಳಿಯ ಜನರದ್ದಾಗಿದೆ.

ಅಂದು ಕರವೇ ಮುಖಂಡರ ಆಕ್ರೋಶಕ್ಕೆ‌ ಮಣಿದ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಕೂಡಲೇ ಹೆಚ್ಚೆತ್ತು 5 ಆಂಬುಲೆನ್ಸ್‌ಗಳನ್ನು ರಸ್ತೆಗೆ ಇಳಿಸಿತ್ತು. ಆದರೆ ನಂತರ..?

ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕಾದ 108 ಆಂಬುಲೆನ್ಸ್ ಕಾಣೆಯಾಯಿತು. ಬಳಿಕ ಸಾಸಲು ಹೋಬಳಿಯ ಅಂಬುಲೆನ್ಸ್ ದುರಸ್ತಿಯ ಕಾರಣ ಗ್ಯಾರೇಜ್ ಸೇರಿ ಸುಮಾರು ಎರಡು ತಿಂಗಳಿಗೂ ಹೆಚ್ಚುಕಾಲ ಕಳೆದಿದೆ. ಉಳಿದಿರುವುದು ಮೂರು ಆಂಬುಲೆನ್ಸ್ ಮಾತ್ರ. ಅವು ಕೂಡ ತುರ್ತು ಸಂದರ್ಭದಲ್ಲಿ ಬಡವರಿಗೆ ಸೌಲಭ್ಯ ದೊರಕುತ್ತಿಲ್ಲ ಎಂಬ ಅರೋಪ ಜನರದ್ದು.

108 ಆಂಬುಲೆನ್ಸ್ ನಿರ್ವಹಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ತುರ್ತು ಸಂದರ್ಭದಲ್ಲಿ ವರದಾನವಾಗ ಬೇಕಿದ್ದ ಅರೋಗ್ಯ ಸುರಕ್ಷಾ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಸಂಪೂರ್ಣವಾಗಿ ಹಳ್ಳಹಿಡಿಯುತ್ತಿದೆ ಎಂಬ ಆಕ್ರೋಶ ಹಲವು ವರ್ಷಗಳಿಂದ ಕೇಳಿಬರುತ್ತಲೇ ಇದೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಟೋಲ್‌ ಸಂಗ್ರಹ ಕೇಂದ್ರಗಳಿಂದ ಆವೃತವಾಗಿ, ವಾಹನಗಳು ಟೋಲ್‌ಗಳಲ್ಲಿ ಹಣ ಕಟ್ಟದೇ ದೊಡ್ಡಬಳ್ಳಾಪುರ ತಾಲೂಕಿಗೆ ಬರಲಾಗದ ಪರಿಸ್ಥಿತಿ ಜನರಿಗೆ ನಿರ್ಮಾಣವಾಗಿದೆ.

ಇದರ ಬೆನ್ನಲ್ಲೇ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಅಪಘಾತ ಪ್ರಕರಣಗಳು ಕೂಡ ತೀವ್ರವಾಗಿದ್ದು, ಗಾಯದ ಮೇಲೆ ಬರೆ ಹೇಳೆದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಖಾಸಗಿ ಆಂಬುಲೆನ್ಸ್ ಹಾವಳಿ ವ್ಯಾಪಕವಾಗಿದ್ದು, ಅಪಘಾತವಲಯಗಳಲ್ಲಿ ಬೆಳಿಗ್ಗೆ 8 ರಿಂದ 11 ಗಂಟೆ ಮತ್ತು ಸಂಜೆ 4 ರಿಂದ 8 ಗಂಟೆಗೆ ಸಮಯದಲ್ಲಿ ಕಾದು ನಿಲ್ಲುತ್ತಿವೆ ಎನ್ನಲಾಗುತ್ತಿವೆ ಎನ್ನಲಾಗುತ್ತಿದೆ.

ದೊಡ್ಡಬಳ್ಳಾಪುರ ತಾಲೂಕಿನ ಕಾರ್ಖಾನೆ ವೃತ್ತ, ರೈಲ್ವೆ ಸ್ಟೇಷನ್ ಸರ್ಕಲ್, ಟಿಬಿ ಸರ್ಕಲ್, ರಾಷ್ಟ್ರೀಯ ಹೆದ್ದಾರಿಯಿಂದ ದೊಡ್ಡಬಳ್ಳಾಪುರಕ್ಕೆ ಸಂಪರ್ಕ ಕಲ್ಪಿಸುವ ಕೊಡಿಗೇಹಳ್ಳಿ ಜಂಕ್ಷನ್, ದಾಬಸ್‌ಪೇಟೆ- ದೇವನಹಳ್ಳಿ ನಡುವಿನ ನಾಗದೇನಹಳ್ಳಿ ಬಳಿ, ಹಿಂದೂಪುರ- ಬೆಂಗಳೂರು ನಡುವಿನ ಗುಂಡಮಗೆರೆ ತಿರುವು, ಮಾಕಳಿ ಬಳಿ ಕಾದು ನಿಂತು ಅಪಘಾತ ಸಂಭವಿಸಿದ ಕೂಡಲೇ ಸರ್ಕಾರಿ 108 ಆಂಬುಲೆನ್ಸ್ ಬರುವ ಮುನ್ನವೇ ಖಾಸಗಿ ಆಸ್ಪತ್ರೆಗೆ ಗಾಯಗೊಂಡವರನ್ನು ದಾಖಲಿಸಲಾಗುತ್ತಿದೆ.

ಇದು ತುರ್ತು ಸಂದರ್ಭದಲ್ಲಿ ಉತ್ತಮ ಕಾರ್ಯವೇ ಆದರೂ, ದೊಡ್ಡಬಳ್ಳಾಪುರದಲ್ಲಿ‌ ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ, ಉಚಿತ ಚಿಕಿತ್ಸೆ ದೊರಕುತ್ತಿದ್ದರೂ, ಖಾಸಗಿ ಆಸ್ಪತ್ರೆ ದಾಖಲಿಸಲಾಗುತ್ತಿರುವ ಕಾರಣ, ಅಪಘಾತಕ್ಕೆ ಒಳಗಾದವರ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗಳಿಗೆ ಲಕ್ಷಾಂತರ ರೂ ಕಟ್ಟಬೇಕಾದ ಅನಿವಾರ್ಯತೆ ಎದುರಾಗಿದೆ ಎಂಬ ಆರೋಪ ವ್ಯಾಪಕವಾಗಿದೆ.

ತುರ್ತು ಸಂದರ್ಭದಲ್ಲಿ 108 ಅಂಬುಲೆನ್ಸ್ ಆದರೆ ಸರ್ಕಾರಿ ಆಸ್ಪತ್ರೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು. ಇದರಿಂದಾಗಿ ಖಾಸಗಿ ಆಸ್ಪತ್ರೆಗಳಿಗೆ ಹಿನ್ನಡೆಯಾಗುತ್ತದೆ. ಅದೇ ಖಾಸಗಿ ಆಂಬುಲೆನ್ಸ್ ಆದರೆ ಖಾಸಗಿ ಆಸ್ಪತ್ರೆಗಳಿಗೆ ಲಾಭ ಎಂಬ ದುರುದ್ದೇಶದಿಂದ 108 ಆಂಬುಲೆನ್ಸ್ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಲು ಶಡ್ಯಂತ್ರರೂಪಿಸುತ್ತಿದ್ದಾರೆ ಎಂಬ ಆರೋಪ ಸಂಘಟನೆಗಳ ಮುಖಂಡರದ್ದು.

ಇದೇ ಕಾರಣಕ್ಕೆ 108 ಆಂಬುಲೆನ್ಸ್ ಸೌಲಭ್ಯ ದೊರಕಿಸಲು ಯಾರು ಕ್ರಮಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶಕ್ಕೆ ಕಾರಣವಾಗಿದೆ.

ಕೂಡಲೇ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಜಾಗೃತಗೊಂಡು, ಕಾಣೆಯಾಗಿರುವ 108 ಆಂಬುಲೆನ್ಸ್‌ಗಳನ್ನು ತಾಲೂಕಿಗೆ ತರಿಸಬೇಕು. ಖಾಸಗಿ ಆಂಬುಲೆನ್ಸ್ ನಿಲ್ಲುವ ಸ್ಥಳಗಳಲ್ಲಿ ಸರ್ಕಾರಿ 108 ಆಂಬುಲೆನ್ಸ್ ನಿಲ್ಲುವಂತಹ ವ್ಯವಸ್ಥೆ ಮಾಡಬೇಕು.

ಇಲ್ಲವಾದಲ್ಲಿ ಹೇಳುವುದಿಲ್ಲ, ಹೇಳುವುದಿಲ್ಲ.. ಸಾಕ್ಷಿ ಅಮೇತ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]