Criticism dies, work remains: DCM DK Shivakumar

ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ದೇವರು, ಧರ್ಮ ಬಿಜೆಪಿಯವರ ಆಸ್ತಿಯೇ? ಪೂಜೆಯನ್ನು ಬಿಜೆಪಿಯವರು ಮಾತ್ರ ಮಾಡುವುದೇ? ನೀರಿಗೆ, ಗಾಳಿಗೆ, ಬೆಳಕಿಗೆ ಜಾತಿ ಇದೆಯೇ?” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು. ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

“ನಾವು ಏನೇ ಮಾಡಿದರೂ ಬಿಜೆಪಿಯವರು ಟೀಕೆ ಮಾಡುತ್ತಾರೆ. ಕೆಆರ್ ಎಸ್ ಬಳಿ ಕಾವೇರಿ ಆರತಿ ಕಾರ್ಕ್ರಮ ಮಾಡಲು ಮುಂದಾಗಿದ್ದೇವೆ. ಇದಕ್ಕೆ ಪೂರ್ವಭಾವಿಯಾಗಿ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾರ್ಯಕ್ರಮ ಮಾಡಲಾಯಿತು. ಸುಮಾರು 25 ಸಾವಿರ ಜನರು ಭಾಗವಹಿಸಿದ್ದರು. ಸ್ಥಳೀಯ ಶಾಸಕರು ಇದನ್ನು ನೋಡಿ ಗಾಬರಿಯಾಗಿದ್ದರು.

ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ರೈತ ಸಂಘದವರು ಟೀಕೆ ಮಾಡುತ್ತಿದ್ದಾರೆ. ಅವರನ್ನು ಕರೆದು ಮಾತನಾಡಲಾಗುವುದು. ಟೀಕೆಗಳನ್ನು ಯಾರೂ ನಿಲ್ಲಿಸಲು ಸಾಧ್ಯವಿಲ್ಲ, ಟೀಕೆಗಳಿಲ್ಲದೇ ಯಾವುದೇ ಕೆಲಸಗಳು ಆಗುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಸಮಾಜವನ್ನು ತೆಗೆದುಕೊಂಡು ಹೋಗಲಾಗುವುದು” ಎಂದರು.

ರಾಜೀವ್ ಗಾಂಧಿಯವರ ಹತ್ಯೆಯಿಂದ ದೇಶಕ್ಕೆ ದೊಡ್ಡ ನಷ್ಟ

“ರಾಜೀವ್ ಗಾಂಧಿ ಅವರ ಹತ್ಯೆಯಿಂದ ಸ್ತ್ರೀ ಶಕ್ತಿಗೆ, ಯುವ ಪೀಳಿಗೆ ಹಾಗೂ ಇಡೀ ದೇಶಕ್ಕೆ ದೊಡ್ಡ ನಷ್ಟವಾಗಿದೆ. ರಾಜೀವ್ ಗಾಂಧಿ ಅವರ ಬಗ್ಗೆ ಇಡೀ ಪ್ರಪಂಚದಲ್ಲಿಯೇ ಸಾಕಷ್ಟು ಒಲವಿತ್ತು. ಅವರನ್ನು ಇತರೇ ರಾಷ್ಟ್ರಗಳು ಅತ್ಯಂತ ಗೌರವದಿಂದ ನೋಡುತ್ತಿದ್ದರು. ಅಷ್ಟರ ಮಟ್ಟಿಗೆ ಅವರು ತಮ್ಮ ಆಧುನಿಕ ಚಿಂತನೆಗಳಿಂದ ಪ್ರಭಾವ ಬೀರಿದ್ದರು.

ಇವರಿಂದ 18 ವರ್ಷಕ್ಕೆ ಮತದಾನದ ಹಕ್ಕು ದೊರೆಯಿತು, ಮಹಿಳೆಯರಿಗೆ ಸ್ಥಳೀಯ ಸಂಸ್ಥೆಯಲ್ಲಿ ಶೇ. 50 ರಷ್ಟು ಮೀಸಲಾತಿ ನೀಡಿದರು. ಪಕ್ಷಾಂತರ ವಿರೋಧಿ ಕಾಯ್ದೆಗೆ ಕಾನೂನು ತಂದರು. ದೆಹಲಿಗೆ ರಾಜ್ಯದ ಸ್ಥಾನಮಾನ ನೀಡಿದರು. ಹೀಗೆ ಹಲವಾರು ಕ್ರಾಂತಿಕಾರಕ ಬದಲಾವಣೆಗಳನ್ನು ಜಾರಿಗೆ ತಂದವರು ರಾಜೀವ್ ಗಾಂಧಿ” ಎಂದು ಹೇಳಿದರು.

“ಮೊದಲು ಒಂದು ಲ್ಯಾಂಡ್ ಲೈನ್ ಫೋನ್ ಸಂಪರ್ಕ ಪಡೆದುಕೊಳ್ಳಲು ಸಂಸದರಿಂದ ಪತ್ರ ಪಡೆಯಬೇಕಿತ್ತು. ʼಯುವ ಕಾಂಗ್ರೆಸ್ ಅಧ್ಯಕ್ಷನಾದ ನಿನ್ನನು ಹೇಗೆ ಸಂಪರ್ಕಿಸುವುದುʼ ಎಂದು ಹೇಳಿ ಜಾಫರ್ ಷರೀಫ್ ಅವರು ನನಗೆ ಫೋನ್ ಸಂಪರ್ಕ ಕೊಡಿಸಿದರು.

ಸೆಲ್ ಫೋನ್ ತಂತ್ರಜ್ಞಾನ ಭಾರತಕ್ಕೆ ಬರಲು ರಾಜೀವ್ ಗಾಂಧಿ ಅವರು ಹಾಗೂ ಅವರಿಗೆ ಸಲಹೆಗಾರರಾಗಿದ್ದ ಸ್ಯಾಮ್ ಪಿತ್ರೋಡ ಅವರು ಕಾರಣ” ಎಂದರು.

ಕಾವೇರಿ ಗಲಭೆ ವೇಳೆ ಎನ್ ಪಿಎಸ್ ಶಾಲೆಯಲ್ಲಿದ್ದ ಕಂಪ್ಯೂಟರ್ ಗಳನ್ನು ಸುಟ್ಟು ಹಾಕಲಾಯಿತು. ಆಗ 1.50 ಲಕ್ಷ ಬೆಲೆ ಬಾಳುತ್ತಿತ್ತು. ಈಗ 15- 20 ಸಾವಿರಕ್ಕೆಲ್ಲ ದೊರೆಯುತ್ತಿದೆ. ಐಟಿ ಕ್ರಾಂತಿಗೆ ನಾಂದಿ ಹಾಡಿದ ಆಧುನಿಕತೆಯ ಹರಿಕಾರ ರಾಜೀವ್ ಗಾಂಧಿ” ಎಂದು ಬಣ್ಣಿಸಿದರು.

“ನನ್ನನ್ನು ಚನ್ನಪಟ್ಟಣದಿಂದ ಬೆಂಗಳೂರಿನ ತನಕ ಕಾರಿನಲ್ಲಿ ಜೊತೆಯಾಗಿ ಕರೆದುಕೊಂಡು ಬಂದ ರಾಜೀವ್ ಗಾಂಧಿ ಅವರು ರಾಜ್ಯದ ಪರಿಸ್ಥಿತಿಯ ಬಗ್ಗೆ ಅವಲೋಕಿಸಿದರು. ನನ್ನ ಬಳಿ ಚರ್ಚೆ ಮಾಡಿದರು. ಅಂದು ರಾತ್ರಿ ಏನು ಮಾತುಕತೆಯಾಯಿತು ಎಂದು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ವಿರೇಂದ್ರ ಪಾಟೀಲ್ ಅವರು ಅಂದು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು ಆದರೆ ಅವರ ಆರೋಗ್ಯ ಪರಿಸ್ಥಿತಿ ಚೆನ್ನಾಗಿರಲಿಲ್ಲ. ಇದನ್ನು ಗಮನಿಸಿದ ಅವರು ಮರಳಿ ಹೋಗುವಾಗ ವಿಮಾನ ನಿಲ್ದಾಣದಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದು ತಿಳಿಸಿದರು” ಎಂದರು.

“ಮುಖ್ಯಮಂತ್ರಿ ಸ್ಥಾನ ಬದಲಾವಣೆ ನಂತರ ಒಂದಷ್ಟು ಗಲಾಟೆಗಳು ನಡೆಯಿತು. ಈ ವೇಳೆ ರಾಜೀವ್ ಗಾಂಧಿ ಅವರು ಹೈದರಾಬಾದ್ ಗೆ ತೆರಳಿದರು. ನಾನು, ರಮೇಶ್, ಗುತ್ತೇದಾರ್, ಬಂಗಾರಪ್ಪ ಅವರು ಹೈದರಾಬಾದ್ ಗೆ ತೆರಳಿದವು.

ನಾನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದೆ. ಅಂದು ಬಂಗಾರಪ್ಪ ಅವರಿಗೆ ರಾಜೀವ್ ಗಾಂಧಿ ಅವರು ಸೂಚನೆ ನೀಡಿದರು. ʼಎಲ್ಲಾ ಜಾತಿಯ ಯುವಕರನ್ನು ಗುರುತಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಜಿಲ್ಲೆಗೆ ಇಬ್ಬರು ಆದರೂ ಚಿಂತೆ ಮಾಡಬೇಡಿʼ ಎಂದು ತಿಳಿಸಿದರು.

ಈ ಕಾರಣಕ್ಕೆ ನಮಗೆಲ್ಲ ಮೊದಲ ಬಾರಿಗೆ ಅವಕಾಶ ಸಿಕ್ಕಿತು. ಮೊಟ್ಟ ಮೊದಲ ಬಾರಿಗೆ ಬಿ.ಕೆ.ಹರಿಪ್ರಸಾದ್ ಅವರಿಗೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನ ನೀಡಿದರು. ರಾಜ್ಯದಿಂದ ವಿರೋಧವಿದ್ದರು ರಾಜ್ಯಸಭೆಗೆ ಇವರನ್ನು ಆಯ್ಕೆ ಮಾಡಿದರು” ಎಂದರು.

“ಭಯೋತ್ಪಾದನೆಯಿಂದ ನಮ್ಮ ನಾಗರಿಕರು ಮರಣ ಹೊಂದಿದರು. ಅದಾದ ನಂತರ ನಮ್ಮ ಸೇನಾಪಡೆಗಳು ತಕ್ಕ ಉತ್ತರ ನೀಡಿದರು. ಆಗ ನಿಮ್ಮೆಲ್ಲರ ಬೆಂಬಲದಿಂದ ತಿರಂಗಾ ಯಾತ್ರೆ ನಡೆಸಲಾಯಿತು. ನಮ್ಮ ಪದಾಧಿಕಾರಿಗಳು, ನಾಯಕರು ಬೆಂಗಳೂರಿಗೆ ಗೌರವ ತರುವ ರೀತಿಯಲ್ಲಿ ಯಾತ್ರೆ ಆಯೋಜಿಸಲಾಯಿತು. ರಾಹುಲ್ ಗಾಂಧಿ ಅವರು ಸಹ ಬೆಂಗಳೂರಿನಲ್ಲಿ ಅತ್ಯುತ್ತಮ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು” ಎಂದು ಹೇಳಿದರು.

“ಕೇವಲ ನಾನು, ಜಮೀರ್ ಅಹಮದ್, ಕೃಷ್ಣಬೈರೇಗೌಡ ಅವರು ಸೇರಿ ಸರ್ಕಾರದ ಎರಡು ವರ್ಷದ ಸಂಭ್ರಮ ಮಾಡಿಲ್ಲ. ರಾಜ್ಯದ ಎಲ್ಲಾ ಕಾರ್ಯಕರ್ತರು, ಶಾಸಕರು, ಮಂತ್ರಿಗಳು ಸೇರಿ ಮಾಡಿದ ಸಂಭ್ರಮ. ಈ ಎರಡು ವರ್ಷದ ಯಶಸ್ಸಿನಲ್ಲಿ ಪಕ್ಷದ ಎಲ್ಲರ ಪಾತ್ರವಿದೆ” ಎಂದು ಹೇಳಿದರು.

ಗ್ಯಾರಂಟಿ ಸಮಿತಿಗಳಿಂದ ಪಟ್ಟಾ ಖಾತೆ ಹಂಚಿಕೆ

“ಮುಂದಿನ ದಿನಗಳಲ್ಲಿ ಪಟ್ಟಾ ಖಾತೆ ಹಂಚಿಕೆಯನ್ನು ಅಧಿಕಾರಿಗಳು ಹಂಚಿಕೆ ಮಾಡುವುದಿಲ್ಲ. ಬದಲಾಗಿ ಪ್ರತಿ ಕ್ಷೇತ್ರದ ಗ್ಯಾರಂಟಿ ಸಮಿತಿಯ ಸದಸ್ಯರು ಜನರಿಗೆ ಖಾತೆಗಳನ್ನು ಹಂಚಿಕೆ ಮಾಡುತ್ತಿದ್ದಾರೆ. ಬೆಂಗಳೂರು ನಗರದಲ್ಲಿಯೂ ಇ- ಸ್ವತ್ತು ಖಾತೆಗಳ ಡಿಜೀಟಲೀಕರಣ ಮಾಡಲಾಗುತ್ತಿದೆ.

ಇಲ್ಲಿಯೂ ಅದೇ ರೀತಿ ಹಂಚಿಕೆ ಮಾಡಲಾಗುವುದು. ಬಿಬಿಎಂಪಿ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಈಗ ಗ್ರೇಟರ್ ಬೆಂಗಳೂರು ಜಾರಿಗೆ ಬಂದಿದೆ. ಶೀಘ್ರದಲ್ಲಿಯೇ ಚುನಾವಣೆ ನಡೆಯಲಿದೆ. ಮುಂದಕ್ಕೆ ಶಾಸಕರಾಗಬೇಕು ಎನ್ನುವ ಆಲೋಚನೆ ಇದ್ದವರು ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಬೇಕು” ಎಂದರು.

“ಭಯೋತ್ಪಾದಕ ದಾಳಿ ಬಗ್ಗೆ ಚರ್ಚೆ ನಡೆಯುತ್ತಿವೆ. ಬಿ.ಕೆ.ಹರಿಪ್ರಸಾದ್ ಅವರು ಹೇಳುವಂತೆ ಲೈನ್ ಆಫ್ ಕಂಟ್ರೋಲ್ ಇಂದ ಪೆಹಲ್ಗಾಮ್ ಗೆ ಬರುವುದಕ್ಕೆ ಬರುವುದಕ್ಕೆ ಹತ್ತು ದಿನವಾಗುತ್ತದೆ ಎಂದು ಹೇಳಲಾಗುತ್ತದೆ. ಇದೆಲ್ಲಾ ನಡೆದಿದ್ದು ನಿಜವೇ ಎಂದು ನಾವು ಅಧ್ಯಯನ ಮಾಡಬೇಕಿದೆ. ನಮಗೆ ಪಕ್ಷಕ್ಕಿಂತ ದೇಶ ಮುಖ್ಯ. ಇದರ ಬಗ್ಗೆ ನೀವು ನಾವು ತಿಳಿದುಕೊಳ್ಳಬೇಕಿದೆ” ಎಂದರು.

ಮಾಧ್ಯಮ ಪ್ರತಿಕ್ರಿಯೆ

ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮ ಹಾಗೂ ನಂತರ ಮಾಧ್ಯಮಗಳಿಗೆ ಡಿಸಿಎಂ ಅವರು ಪ್ರತಿಕ್ರಿಯೆ ನೀಡಿದರು.

ಜಿ. ಪರಮೇಶ್ವರ್ ಅವರ ಸಂಸ್ಥೆಗಳ ಮೇಲೆ ಇಡಿ ದಾಳಿ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನಾನು ಮಾಹಿತಿ ಪಡೆದು ಮಾತನಾಡುತ್ತೇನೆ. ಪರಮೇಶ್ವರ್ ಅವರು ಅತ್ಯಂತ ಸರಳ ವ್ಯಕ್ತಿ. ಅವರು ಯಾವುದೇ ತಪ್ಪು ಮಾಡಿರಲು ಸಾಧ್ಯವಿಲ್ಲ.” ಎಂದರು.

ಬೆಂಗಳೂರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿರುವುದನ್ನು ಬಿಜೆಪಿ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಅವರ ಕಾಲದಲ್ಲಿ ಆಗಿರುವ ತಪ್ಪುಗಳನ್ನು ನಾವು ಸರಿ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ರಾಜಕೀಯ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ಮುಸ್ಲಿಮರಿಗೆ ಮೀಸಲು ಹೆಚ್ಚಳ ಮಾಡಿರುವುದು ಅಪಚಾರ: ಆರ್‌ ಅಶೋಕ ಕಿಡಿ

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ (R Ashoka)

[ccc_my_favorite_select_button post_id="109571"]
ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ ‘ಕ್ವಿನ್ ಸಿಟಿ’ ಕುರಿತು ಎಡಿಬಿ ಉನ್ನತ ನಿಯೋಗಕ್ಕೆ ಪ್ರಾತ್ಯಕ್ಷಿಕೆ ಪ್ರಸ್ತುತಿ

ದೊಡ್ಡಬಳ್ಳಾಪುರ-ಡಾಬಸ್ ಪೇಟೆ ನಡುವೆ ನಿರ್ಮಾಣವಾಗಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಕ್ವಿನ್ ಸಿಟಿ’ (Kwin City) ಯೋಜನೆ ಬಗ್ಗೆ ಏಷ್ಯನ್ ಡೆವಲಪ್ಮೆಂಟ್

[ccc_my_favorite_select_button post_id="109562"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಪ್ರೇಯಸಿಯ ಕೊಂದು ಗೋವಾ ಕಾಡಿಗೆಸೆದ ಪಾಗಲ್ ಪ್ರೇಮಿ.. ಬೆಂಗಳೂರಲ್ಲಿ ಬಂಧನ..!

ಮದುವೆಯಾಗಲು ಬೆಂಗಳೂರಿನಿಂದ ಗೋವಾಕ್ಕೆ ತೆರಳಿದ್ದ ಪ್ರೇಮಿಗಳಿಬ್ಬರ ನಡುವೆ ಉಂಟಾದ ಸಣ್ಣ ಮನಸ್ತಾಪದಿಂದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ (Murder)

[ccc_my_favorite_select_button post_id="109448"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]