Hgd

ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ: ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ತಿಳಿಸಿದರು.

ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಎಲೆಕ್ಟ್ರಿಕ್ ಬಸ್ ಹಂಚಿಕೆಯ ಸಂಬಂಧ ಕರ್ನಾಟಕ, ತೆಲಂಗಾಣ, ಗುಜರಾತ್ ಹಾಗೂ ದೆಹಲಿ ರಾಜ್ಯಗಳ ಅಧಿಕಾರಿಗಳ ಜತೆ ಕೇಂದ್ರ ಸಚಿವರು ಸಭೆ ನಡೆಸಿದರು.

ಎಲೆಕ್ಟ್ರಿಕ್ ಬಸ್ ಗಳ ಬಳಕೆ ಹಾಗೂ ಅವುಗಳ ನಿರ್ವಹಣೆಗೆ ಅಗತ್ಯವಾದ ಪೂರಕ ಮೂಲಸೌಕರ್ಯವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು; ಮಾಲಿನ್ಯರಹಿತ ಸಮೂಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ರಾಷ್ಟ್ರೀಯ ಅಗತ್ಯ ಎಂದು ಪ್ರತಿಪಾದಿಸಿದರು.

ಬಸ್ ಹಂಚಿಕೆಯಲ್ಲಿ ಬೇಡಿಕೆ, ಜನಸಂಖ್ಯೆ ಹಾಗೂ ಹಳೆಯ ಬಸ್ ಗಳ ವಿಲೇವಾರಿ ಅಂಶಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕಕ್ಕೆ 4500 ಬಸ್ ಹಂಚಿಕೆ

ಕರ್ನಾಟಕದ ಪರವಾಗಿ ಸಭೆಯಲ್ಲಿ ಹಾಜರಿದ್ದ ಸರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ.ಪ್ರಸಾದ್ ಅವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಾಗಿ (BMTC) 7,000 ಎಲೆಕ್ಟ್ರಿಕ್ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು.

ಕೆಲ ದಿನಗಳ ಹಿಂದೆ ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿದ್ದ ರಾಜ್ಯದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೂಡ ಇಷ್ಟೇ ಸಂಖ್ಯೆಯ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು.

ಈ ಬೇಡಿಕೆ ಹಾಗೂ ಜನಸಂಖ್ಯೆಯನ್ನು ಪರಿಗಣಿಸಿ ಮೊದಲ ಹಂತದಲ್ಲಿಯೇ ಬಿಎಂಟಿಸಿಗೆ 4,500 ಬಸ್ ಗಳನ್ನು ಒದಗಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು. ದೇಶದ ಇತರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರು ನಗರಕ್ಕೆ ಅತ್ಯಧಿಕ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆಯನ್ನು ಅವರು ನೀಡಿದರು.

ಉಳಿದಂತೆ ದೆಹಲಿ ಸಾರಿಗೆ ಸಂಸ್ಥೆ 2800 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಒದಗಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು.

ದೇಶದ ಇತರೆ ನಗರಗಳಿಗೆ ಹೋಲಿಸಿದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನಸಂಖ್ಯೆ ಅಧಿಕವಾಗಿದೆ. ಜತೆಗೆ ಇನ್ನೂ ಕೆಲ ಅಂಶಗಳನ್ನು ಪರಿಗಣಿಸಿ ಬೇಡಿಕೆ ಇಟ್ಟಿರುವಷ್ಟೂ ಸಂಖ್ಯೆಯ ಬಸ್ ಗಳನ್ನು ಹಂಚಿಕೆ ಮಾಡುವಂತೆ ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಳಿದಂತೆ ಸೂರತ್ ನಗರ ಸಾರಿಗೆ ಸಂಸ್ಥೆ 600 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ. ಅಹಮದಾಬಾದ್ ನಗರಕ್ಕೆ 1000 ಬಸ್ ಗಳನ್ನು ಕೇಳಲಾಗಿದ್ದು, ಅಷ್ಟೂ ಬಸ್ ಗಳನ್ನೂ ಹಂಚಿಕೆ ಮಾಡುವುದಕ್ಕೆ ಸಚಿವರು ಒಪ್ಪಿಗೆ ನೀಡಿದರು.

ತೆಲಂಗಾಣದ ರಾಜಧಾನಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆ 2800 ವಿದ್ಯುತ್ ಚಾಲಿತ ಬಸ್ ಗಳಿಗೆ ಬೇಡಿಕೆ ಇಟ್ಟಿತ್ತು, ಆ ಪೈಕಿ 2000 ಬಸ್ ಗಳನ್ನು ಹಂಚಿಕೆ ಮಾಡುವ ಬಗ್ಗೆ ಸಚಿವರು ಭರವಸೆ ನೀಡಿದರು.

ಒಟ್ಟಾರೆಯಾಗಿ ಐದೂ ನಗರಗಳಿಂದ 14,200 ಬಸ್ ಗಳಿಗೆ ಬೇಡಿಕೆ ಬಂದಿತ್ತು. ಆ ಪೈಕಿ 10,900 ಬಸ್ ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದ ಕೇಂದ್ರ ಸಚಿವರು, ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡುವ ಮುನ್ನ ಐದೂ ನಗರಗಳ ಸಾರಿಗೆ ಸಂಸ್ಥೆಗಳು ಡಿಪೋಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವುದು ಸೇರಿದಂತೆ ಅಗತ್ಯವಾದ ಮೂಲಸೌಕರ್ಯವನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು.

ಈಗಾಗಲೇ ಅಸ್ತಿತ್ವದಲ್ಲಿರುವ ಡಿಪೋಗಳನ್ನು ಮೇಲ್ದರ್ಜೆಗೆ ಏರಿಸುವುದು ಹಾಗೂ ಅಗತ್ಯವಾದರೆ ಹೊಸ ಡಿಪೋಗಳನ್ನು ಸ್ಥಾಪಿಸುವ ಬಗ್ಗೆ ತ್ವರಿತಗತಿಯಲ್ಲಿ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿಗೆ ಸಿಕ್ಕಿದ್ದೆಷ್ಟು?

•ಬಿಎಂಟಿಸಿ ಒಟ್ಟು ಬೇಡಿಕೆಯ ಮೂರನೇ ಎರಡರಷ್ಟು (67%) ಬಸ್ ಗಳ ಬೇಡಿಕೆ ಪೂರೈಕೆ

•ಹಂಚಿಕೆ ಮಾಡುತ್ತಿರುವ 10,900 ಬಸ್ ಗಳಲ್ಲಿ 4,500 ಬಸ್ ಗಳು ಬೆಂಗಳೂರಿಗೆ

•ಮೊದಲ ಹಂತದಲ್ಲಿ ಉದ್ಯಾನ ನಗರಿಗೆ ಸಿಂಹಪಾಲು

•ಬೆಂಗಳೂರು ಹೆಚ್ಚು ಜನಸಂಖ್ಯೆಯುಳ್ಳ ನಗರ ಎಂದು ಪರಿಗಣನೆ

•ಸುಮಾರು 800 ಕಿ ಮಿ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್ ಕಾರ್ಯಾಚರಣೆ ನಡೆಸುತ್ತಿದೆ. ಈ ಅಂಶವನ್ನು ಪರಿಗಣಿಸಲಾಗಿದೆ.

ಮಾಲಿನ್ಯರಹಿತ ಸಮೂಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ರಾಷ್ಟ್ರೀಯ ಅಗತ್ಯ. ಈ ಕಾರಣಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಗೆ ಹೆಚ್ಚು ಒತ್ತು ನೀಡಿದ್ದು, ಅವರ ಮಾರ್ಗದರ್ಶನದಲ್ಲಿ ಗುರಿ ಸಾಧಿಸುತ್ತೇವೆ; ಹೆಚ್.ಡಿ. ಕುಮಾರಸ್ವಾಮಿ,
ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!