ರಕ್ಷಣೆ ನೀಡುವಂತೆ ರಾಜ್ಯಪಾಲರ ಮೊರೆ ಹೋದ ಬಿಜೆಪಿ ನಾಯಕರು..!

BJP leaders appealed to the Governor for protection..!

ಬೆಂಗಳೂರು; ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಕುರಿತು ಅವಹೇಳನಕಾರಿ ಪದ ಬಳಕೆ ಹಿನ್ನೆಲೆಯಲ್ಲಿ, ಪ್ರಿಯಾಂಕ್‌ ಖರ್ಗೆ ಬೆಂಬಲಿಗರು ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalvadi Narayanaswamy) ಅವರಿಗೆ ಮುತ್ತಿಗೆ ಹಾಕಿ, ಕಾರಿಗೆ ಬಣ್ಣ ಸುರಿದು, ಹೈಡ್ರಾಮ ಸೃಷ್ಟಿಸಿದ್ದಾರೆ

ಈ ಕುರಿತಂತೆ ಬಿಜೆಪಿ ಮುಖಂಡರು ಇಂದು ರಾಜಭವನದಲ್ಲಿ ರಾಜ್ಯಪಾಲರಿಗೆ ರಕ್ಷಣೆ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka), ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದಾರೆ ಎಂದು ಆರೋಪಿಸಿದ್ದಾರೆ‌

ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ಕಾರಿನ ಮೇಲೆ ಕಾಂಗ್ರೆಸ್‌ ಗೂಂಡಾಗಳು ದಾಳಿ ಮಾಡಿದ್ದಾರೆ. ಸರ್ಕಾರ ಮಾಡಿರುವ ತಪ್ಪುಗಳ ವಿರುದ್ಧ ನಾರಾಯಣಸ್ವಾಮಿ ಮಾತಾಡಿದ್ದಾರೆ. ಆದರೆ ಅವರ ಮೇಲೆ ಹಲ್ಲೆ ಮಾಡಲು ಯತ್ನಿಸಲಾಗಿದೆ. ಇದೇ ರೀತಿ ಸಿ.ಟಿ.ರವಿ ಅವರ ಮೇಲೂ ದಾಳಿ ಮಾಡಲಾಗಿತ್ತು. ಪೊಲೀಸರು ನಾರಾಯಣಸ್ವಾಮಿ ಅವರಿಗೆ ರಕ್ಷಣೆ ನೀಡಿಲ್ಲ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಟ್ಟಿಲ್ಲ ಎಂದು ದೂರಿದರು.

ನಾರಾಯಣಸ್ವಾಮಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಕಾರಿನ ಮೇಲೆ ಬಣ್ಣ, ಮೊಟ್ಟೆ ಹಾಕಲಾಗಿದೆ. ಕೊಲೆ ಬೆದರಿಕೆ ಹಾಕಲಾಗಿದೆ. ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದು ಪ್ರತಿಪಕ್ಷ ನಾಯಕರ ಕರ್ತವ್ಯ. ಅದನ್ನು ಅವರು ಸರಿಯಾಗಿಯೇ ಮಾಡಿದ್ದಾರೆ.

ನಾಯಿ ಬೊಗಳಿದರೆ ಸ್ವರ್ಗ ಹಾಳಾಗಲ್ಲ ಎಂಬುದು ಗಾದೆ ಮಾತು ಅಷ್ಟೆ. ಕಲಬುರ್ಗಿಯಲ್ಲಿ ಇದು ಹೊಸದಲ್ಲ. ಇದು ಪ್ರತಿ ದಿನದ ಕಾಯಕವಾಗಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಇದರ ಹಿಂದೆ ಇದ್ದಾರೆ ಎಂದರು.

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಾನೂನು ಕೈಗೆ ತೆಗೆದುಕೊಳ್ಳುವ ಅಧಿಕಾರವನ್ನು ಯಾರು ನೀಡಿದ್ದಾರೆ? ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಗೂಂಡಾಗಿರಿ ಮಾಡುತ್ತಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ.

ನಾರಾಯಣಸ್ವಾಮಿ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು. ಪೊಲೀಸರು ಹಾಗೂ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]