Doddaballapura: Neglect of Kannada on hoardings.. Demand for action

ದೊಡ್ಡಬಳ್ಳಾಪುರ: ಹೋರ್ಡಿಂಗ್ಸ್‌ಗಳಲ್ಲಿ ಕನ್ನಡದ ನಿರ್ಲಕ್ಷ್ಯ.. ಕ್ರಮಕ್ಕೆ ಕರವೇ ಆಗ್ರಹ

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯೊಳಗಿನ ಹೋರ್ಡಿಂಗ್ಸ್ ಗಳಲ್ಲಿ (Hoardings) ಕನ್ನಡವನ್ನು (Kannada) ಸಂಪೂರ್ಣ ನಿರ್ಲಕ್ಷಿಸಿರುವ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಕರವೇ ಪ್ರವೀಣ್ ಕುಮಾರ್ ಶೆಟ್ಟಿ (Karave Praveen Kumar Shetty) ಬಣದ ಕಾರ್ಯಕರ್ತರು ಕಠಿಣ ಕ್ರಮಕ್ಕೆ ಒತ್ತಾಯಿಸಿ, ಪೌರಾಯುಕ್ತರಿಗೆ ದೂರು ನೀಡಿದ್ದಾರೆ.

ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ (Rajaghatta Ravi) ಅವರ ನೇತೃತ್ವದಲ್ಲಿ ಪೌರಾಯುಕ್ತ ಕಾರ್ತೀಕ್ ಈಶ್ವರ್ ಅವರಿಗೆ ಮನವಿ ಪತ್ರ ನೀಡಲಾಗಿದೆ.

ಈ ಕುರಿತು ಮಾತನಾಡಿದ ಮುಖಂಡರು ನಗರಸಭೆ ವ್ಯಾಪ್ತಿಯಲ್ಲಿ ಹಲವಾರು ಹೋರ್ಡಿಂಗಗಳಿದ್ದು ಅದರಲ್ಲಿ ಪ್ರದರ್ಶಿಸುವ ಜಾಹೀರಾತುಗಳಲ್ಲಿ ಪ್ರಮುಖವಾಗಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.

ಫಲಕದ ತುಂಬಾ ಆಂಗ್ಲ ಭಾಷೆ ರಾರಾಜಿಸುತ್ತಿರುತ್ತದೆ. ಹಾಗೂ ಕೆಲವು ಫಲಕಗಳಲ್ಲಿ ಅಶ್ಲೀಲ ಚಿತ್ರಗಳು ಸಾರ್ವಜನಿಕರಿಗೆ ವಿಶೇಷವಾಗಿ ಮಹಿಳೆಯರಿಗೆ ತೀವ್ರ ಮುಜುಗರ ತರಿಸುವಂತಿರುತ್ತವೆ. ಅಲ್ಲಿ ಮಹಿಳೆಯರು ಓಡಾಡಲು ಕೂಡ ಮುಜುಗರವಾಗುತ್ತದೆ.

ಆದ ಕಾರಣ ನಗರಸಭೆ ಈ ಕೂಡಲೇ ಸಂಬಂಧಪಟ್ಟ ಫಲಕಗಳ ಮಾಲೀಕರಿಗೆ ತುರ್ತು ಸಭೆ ನಡೆಸಿ, ಅವರು ಕಡ್ಡಾಯವಾಗಿ ಕನ್ನಡ ಭಾಷೆ ಹಾಗೂ ಅಶ್ಲೀಲವೆನಿಸುವ ಜಾಹೀರಾತುಗಳಿಗೆ ಸಂಬಂಧಿಸಿದಂತೆ ನಿಯಮ ಪಾಲಿಸಲು ಆದೇಶಿಸಬೇಕು.

ಅಲ್ಲದೆ ಈಗಾಗಲೇ ಕನ್ನಡ ಬಾಷೆ ನಿರ್ಲಕ್ಷಿಸಿರುವ ಜಾಹೀರಾತುಗಳನ್ನು ತೆರವುಗೊಳಿಸಬೇಕು, ಇಲ್ಲವಾದಲ್ಲಿ ಕರವೇ ನೇರ ಕಾರ್ಯಾಚರಣೆಯ ಮೂಲಕ ತೆರವುಗೊಳಿಸುತ್ತದೆ. ನಂತರದ ಯಾವುದೇ ಪರಿಣಾಮಗಳಿಗೂ ನಗರಸಭೆಯೇ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಮುಖಂಡರಾದ ಶ್ರೀ ನಗರ ಮನು, ವಕೀಲರಾದ ಮುನಿರಾಜ್, ಸುಬ್ರಮಣಿ, ಕೋಡಳ್ಳಿ ಬಾಬು, ಮೋಹನ್, ಮಂಜುನಾಥ್, ಡಿ.ಕ್ರಾಸ್ ಬಾಲು,
ಹಮೀದ್, ಆದಿಲ್ ಇದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!