Lakhs of rupees in tax arrears; Officials lock down Movie theater..!

ಲಕ್ಷಾಂತರ ರೂ. ತೆರಿಗೆ ಬಾಕಿ; ಚಿತ್ರಮಂದಿರಕ್ಕೆ ಬೀಗ ಜಡಿದ ಅಧಿಕಾರಿಗಳು..!

ಕೊರಟಗೆರೆ: ಲಕ್ಷಾಂತರ ರೂ. ತೆರಿಗೆ ಹಣ ಪಾವತಿ ಮಾಡದ ಆರೋಪದ ಹಿನ್ನೆಲೆಯಲ್ಲಿ ಪಟ್ಟಣದ ಶ್ರೀ ಶಿವಗಂಗ ಚಿತ್ರ ಮಂದಿರ (Shivaganga Movie theater), ಕಲ್ಯಾಣಮಂಟಪ (Wedding hall) ಹಾಗೂ ಹೋಟೆಲ್ ಗೆ (Hotel) ಬೀಗ ಹಾಕಿ, ಸೀಲ್ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.

ಪಟ್ಟಣದ ಮುಖ್ಯರಸ್ತೆಯಲ್ಲಿರುವ ಶ್ರೀ ಶಿವಗಂಗಚಿತ್ರಮಂದಿರ, ಕಲ್ಯಾಣ ಮಂಟಪ, ಹೋಟೆಲ್ ಗಳಿಗೆ ಪಟ್ಟಣ ಪಂಚಾಯಿತಿ ನೋಟಿಸ್ ನೀಡಿದ್ದು, ಮಾಲೀಕರು ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬೀಗಜಡಿದು, ಬಂದ್ ಮಾಡಿಸಿದ್ದಾರೆ.

ಅನೇಕ ಬಾರಿ ನೋಟಿಸ್ ನೀಡಿದರು ಸುಮಾರು 10ಲಕ್ಷ ರೂಗಳಷ್ಟು ತೆರಿಗೆ ಹಣವನ್ನು ಪಾವತಿ ಮಾಡದೆ ನಿರ್ಲಕ್ಷ್ಯ ವಹಿಸಿದ್ದ ಮಾಲೀಕರಿಗೆ ಎಚ್ಚರಿಕೆ ನೀಡುವ ಮೂಲಕ ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿ ಉಮೇಶ್ ತೆರಿಗೆ ಹಣ ಪಾವತಿ ಮಾಡುವವರೆಗೂ ಚಿತ್ರಮಂದಿರ ಸೇರಿದಂತೆ ಕಲ್ಯಾಣ ಮಂಟಪ ಮತ್ತು ಹೋಟೆಲ್ ನಡೆಸದಂತೆ ಕ್ರಮಕೈಗೊಂಡಿದ್ದಾರೆ.

ಈ ಸಂಧರ್ಭದಲ್ಲಿ ಪಟ್ಟಣ ಪಂಚಾಯಿತಿ ಹೆಲ್ತ್ ಇನ್ಸ್ಪೆಕ್ಟರ್ ಮಹಮ್ಮದ್ ಹುಸೇನ್, ಆರ್‌ಐ ವೇಣುಗೋಪಾಲ್, ಶೈಲೇಂಧ್ರ, ವೆಂಕಟೇಶ್ ಸೇರಿದಂತೆ ಸಿಬ್ಬಂದಿಗಳು ಇದ್ದರು.

ನೋಟಿಸ್ ನೀಡಿಲ್ಲ

ಯಾವುದೇ ನೋಟಿಸ್ ನೀಡದೇ ಏಕಾಏಕಿ ಬಂದು ಪಟ್ಟಣ ಪಂಚಾಯಿತಿಯವರು ಬೀಗ ಹಾಕಿಸಿ ಬಾಗಿಲು ಮುಚ್ಚಿಸಿದ್ದು, ಚಿತ್ರಮಂದಿರಕ್ಕೆ ಇಂದು ಶುಕ್ರವಾರ ವಾದಕಾರಣ ಚಲನಚಿತ್ರವನ್ನು ಪ್ರರ್ದಶನ ಮಾಡಲಾಗಿತ್ತು, ಸಿನಿಮಾ ವೀಕ್ಷಣೆಗೆ ಬಂದ ಪ್ರೇಕ್ಷಕರು ವಾಪಾಸ್ಸು ಹೋಗಿದ್ದರಿಂದ ನಮಗೆ ನಷ್ಟ ಉಂಟಾಗಿದೆ ಎಂದು ಚಿತ್ರಮಂದಿರದ ವ್ಯವಸ್ಥಾಪಕ ಆರೋಪಿಸಿದ್ದಾರೆ.

ನೋಟಿಸ್ ನಲ್ಲಿರುವ ಪ್ರಕಾರ ಕಳೆದ 3 ದಿನಗಳ ಹಿಂದೆ ನೋಟಿಸ್ ನೀಡಬೇಕಿತ್ತು ಆದರೆ ಗುರುವಾರ ನೋಟಿಸ್ ಅಂಟಿಸಿ ಮರುದಿನ ಏಕಾಏಕಿ ಬಂದು ಗಡುವು ನೀಡದೆ ಬಾಗಿಲು ಮುಚ್ಚಿಸುವ ಕೆಲಸ ಮಾಡಿದ್ದಾರೆ.

ನಮಗೆ ಇಲ್ಲಿಯವರೆಗೂ ಯಾವುದೇ ನೋಟಿಸ್ ಬಂದಿಲ್ಲ, ಕೋರ್ಟ್ ನಲ್ಲಿ ತಡೆಯಾಜ್ಞೆ ಇರುವ ಕಾರಣ ಕಂದಾಯ ಕಟ್ಟಿಲ್ಲ. ಕೋರ್ಟ್ ಆದೇಶದ ಬಳಿಕ ಪಟ್ಟಣಪಂಚಾಯಿತಿಗೆ ಕಂದಾಯ ಪಾವತಿಸುತ್ತೇವೆ ಎಂದು ವ್ಯವಸ್ಥಾಪಕ ಅನಿಲ್ ಕುಮಾರ್ ಹೇಳಿದ್ದಾರೆ.

ಅನೇಕ ಬಾರಿ ನೋಟಿಸ್

ಅನೇಕ ಬಾರಿ ನೋಟಿಸ್ ನೀಡಿದರೂ ಸರಿಯಾದ ರೀತಿ ತೆರಿಗೆ ಹಣಪಾವತಿ ಮಾಡಿದೆ ಸುಮಾರು 10ಲಕ್ಷ ರೂಪಾಯಿಗಳಷ್ಟು ಹಣ ಬಾಕಿ ಉಳಿಸಿಕೊಂಡಿದ್ದರು.

ಕಳೆದ ಬಾರಿ ಮಾಲೀಕರ ಮನವಿಗೆ ಕಾಲಾವಕಾಶ ನೀಡಿದ್ದು, ಆದರೆ ಮತ್ತೊಮ್ಮೆ ನೋಟಿಸ್ ನೀಡಲು ಬಂದಾಗ ನಿರಾಕರಿಸಿರುತ್ತಾರೆ ಆದ ಕಾರಣಕ್ಕೆ ಬಾಗಿಲು ಹಾಕಿಸುವ ಕೆಲಸ ಮಾಡಿದ್ದೇವೆ.

ಪಟ್ಟಣದ ಅಂಗಡಿ, ಮಳಿಗೆಗಳ ಮಾಲೀಕರು ಬಾಕಿ ಉಳಿಸಿಕೊಂಡಿರುವ ಕಂದಾಯವನ್ನು ಪಾವತಿಸಲು ಈ ಮೂಲಕ ಮನವಿ ಮಾಡುತ್ತೇವೆ ಎಂದು ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿ ಕೆ.ಎಸ್ ಉಮೇಶ್ ಹೇಳಿದ್ದಾರೆ.

ರಾಜಕೀಯ

ಸಿಎಂ ಸ್ಥಾನದ ವಿಚಾರ ನಮಗೇ ಗಾಬರಿಯಿಲ್ಲ ನಿಮಗ್ಯಾಕೆ: ಖಾಸಗಿ ಸುದ್ದಿವಾಹಿನಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಕ್ಕರ್

ಸಿಎಂ ಸ್ಥಾನದ ವಿಚಾರ ನಮಗೇ ಗಾಬರಿಯಿಲ್ಲ ನಿಮಗ್ಯಾಕೆ: ಖಾಸಗಿ ಸುದ್ದಿವಾಹಿನಿಗಳಿಗೆ ಡಿಸಿಎಂ ಡಿ.ಕೆ.

ಈ ಹಿಂದೆ ನನ್ನ ಬಳಿ ಆಯ್ಕೆ ಇಲ್ಲ ಎಂದು ಹೇಳಿದ್ದಿರಿ, ಈಗಲೂ ನೀವು ಅದೇ ಸ್ಥಿತಿಯಲ್ಲಿದ್ದೀರಾ ಎಂದು ಕೇಳಿದಾಗ, “ನಿಮಗೆ ನಮ್ಮ ವಿಚಾರದಲ್ಲಿ ಯಾಕೆ ಗಾಬರಿ? ಈ ವಿಚಾರದಲ್ಲಿ ನಮಗೆ ಗಾಬರಿಯಿಲ್ಲ”: ಡಿಸಿಎಂ ಡಿ.ಕೆ.

[ccc_my_favorite_select_button post_id="110952"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!