ದೊಡ್ಡಬಳ್ಳಾಪುರ: ಮಾಸಾಶನ ನಿಯಮ ಮಾರ್ಪಾಡಿಗೆ ಕಲಾವಿದರ ಒತ್ತಾಯ

Doddaballapura: Artists demand change in Pension rules

ದೊಡ್ಡಬಳ್ಳಾಪುರ: ಕಲಾವಿದರು (Artists) ಮಾಸಾಶನ ಪಡೆಯಲು ವರ್ಷಗಟ್ಟಲೇ ವಿಳಂಬವಾಗುತ್ತಿದ್ದು, ಈ ದಿಸೆಯಲ್ಲಿ ಕಲಾವಿದರ ಸಂಕಷ್ಟಗಳನ್ನು ಅರ್ಥ ಮಾಡಿಕೊಂಡು, ಕಲಾವಿದರಿಗೆ ನೆರವು ನೀಡಲು ಸರ್ಕಾರ ಮುಂದಾಗಬೇಕಿದೆ ಎಂದು ಕಲಾವಿದರ ಸಂಘದಿಂದ ಒತ್ತಾಯಿಸಲಾಗುತ್ತಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘ ಒತ್ತಾಯಿಸಿದೆ.

ನಗರದ ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದ ಕಾರ್ಯಾಲಯ ಕಲಾಭವನದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಸಂಘದ ಪ್ರಮುಖರು, ಕಲಾವಿದರು ಈಗಾಗಲೇ ಪಡೆಯುತ್ತಿರುವ ಬೇರೆ ರೀತಿಯ ಮಾಸಾಶನ ನಿಲ್ಲಿಸಿ, ಕಲಾವಿದರ ಮಾಸಾಶನ ಪಡೆಯಲು ಸಹ ವರ್ಷಗಟ್ಟಲೇ ಕಾಯಬೇಕಿದ್ದು, ಯಾವುದೇ ರೀತಿಯ ಮಾಸಾಶನ ದೊರೆಯದೇ ಕಲಾವಿದರು ಮಾಸಾಶನದಿಂದ ವಂಚಿತರಾಗಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ

ಸರ್ಕಾರ ಕಲಾವಿದರಿಗೆ 2500 ರೂ.ಗಳ ಮಾಸಾಶನ ನೀಡುತ್ತಿದೆ. ಇದಕ್ಕೆ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ 58 ವರ್ಷ ತುಂಬಿದ ನಂತರ ಅರ್ಜಿ ಹಾಕಬೇಕು. ಮಾಸಾಶನಕ್ಕೆ ಅರ್ಜಿ ಹಾಕಿದ ಮೂರ್ನಾಲ್ಕು ವರ್ಷದ ನಂತರ ಮಾಸಾಶನ ಮಂಜೂರು ಅಗುತ್ತಿದೆ. ಅದರೆ ಅರ್ಜಿ ಹಾಕುವಾಗಲೇ ಇಲಾಖೆಯವರು ಕಂದಾಯ ಇಲಾಖೆಯಿಂದ ನಿಡುವ ವೃದ್ಧಾಪ್ಯ ವೇತನ ಪಡೆಯಬಾರದೆಂದೂ, ಒಂದು ವೇಳೆ ಪಡೆಯುತ್ತಿದ್ದರೂ ಅದನ್ನು ನಿಲ್ಲಿಸಿ, ಅರ್ಜಿ ಹಾಕಬೇಕೆಂದೂ ಹೇಳಿದ್ದಾರೆ.

ಇತ್ತ ಕಲಾವಿದರ ಮಾಸಾಸನವೂ ಇಲ್ಲದೆ ವೃದ್ಧಾಪ್ಯ ವೇತನವೂ ಇಲ್ಲದೆ ಕಲಾವಿದರು ತೊಂದರೆ ಅನುಭವಿಸುತ್ತಿದ್ದಾರೆ.

ಅರ್ಜಿ ಹಾಕಿದ ನಾಲ್ಕೈದು ವರ್ಷದ ನಂತರ ಮಾಸಾಶನ ಮಂಜೂರಾಗುತ್ತಿದೆ. ಈ ದಿಸೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಮಂಜೂರು ಮಾಡಿದ ನಂತರ. ವೃದ್ಧಾಪ್ಯ ವೇತನ ನಿಲ್ಲಿಸಿ, ನಂತರ ಕಲಾವಿದರಿಗೆ ಮಾಸಾಶನ ಬಿಡುಗಡೆ ಮಾಡಬೇಕೆಂದು ಕಲಾವಿದರ ಸಂಘ ಒತ್ತಾಯಿಸುತ್ತಿದೆ‌.

ಕಲಾವಿದರ ಮಾಸಾಶನಕ್ಕೆ ಅರ್ಜಿ ಹಾಕುವ ಮೊದಲೇ ಕಂದಾಯ ಇಲಾಖೆಯಿಂದ ನೀಡುವ 1,200 ವೃದ್ಧಾಪ್ಯ ವೇತನ ನಿಲ್ಲಿಸುವ ನಿಯಮ ಬದಲಿಸಬೇಕು. ಈ ಬಗ್ಗೆ ಇಲಾಖೆಯ ನಿರ್ದೆಶಕರು ಹಾಗೂ ಸಚಿವರು ಪರಿಸೀಲಿಸಿ ಮರು ಅದೇಶ ಮಾಡಬೇಕು ಎಂದರು.

ಶೀಘ್ರ ಸಂದರ್ಶನ ನಡೆಸಿ

ಕಲಾವಿದರ ಮರಣಾ ನಂತರ ಕಲಾವಿದರ ಪತ್ನಿಯರಿಗೆ ನೀಡುವ ವಿಧವಾ ವೇತನ. ಕೇವಲ 500 ಮಾತ್ರ ಆದರೆ ಅದೇ ಕಂದಾಯ ಇಲಾಖೆಯು ನೀಡುವ ವಿಧವಾ ವೇತನ 1,200 ರೂ ಆಗಿದೆ. ಗ್ಯಾರಂಟಿ ಯೋಜನೆಯ ಎಲ್ಲಾ ಮಹಿಳೆಯರಿಗೂ 2,000 ಬರುತ್ತಿದ್ದು, ಇದರಿಂದ ಕಲಾವಿದರ ಪತ್ನಿಯರಿಗೆ ನೀಡುವ ವಿಧವಾ ವೇತನ ಬಹಳ ಕಡಿಮೆ ಇದ್ದು, ಯಾರೂ ಸಹ ವಿಧವಾವೇತನ ಪಡೆಯಲು ಅರ್ಜಿಗಳನ್ನೇ ಸಲ್ಲಿಸದಂತಾಗಿದ್ದು, ಕಲಾವಿದರಿಗೆ ಅವಮಾನ ಮಾಡಿದಂತೆ ಅಗಿದೆ.

ಈ ದಿಸೆಯಲ್ಲಿ ಸರ್ಕಾರ ಗಮನ ಹರಿಸಿ ಕಲಾವಿದರಿಗೆ ನೀಡುವ ಮಾಸಾಶನದ ಮೊತ್ತ 2,500 ಗಳನ್ನೇ ಕಲಾವಿದರ ಮರಣದ ನಂತರ. ಅವರ ಪತ್ನಿಯರಿಗೂ ನೀಡುವ ಬಗ್ಗೆ ಸರ್ಕಾರ ಮರು ಆದೇಶ ಮಾಡಬೇಕು. ಇನ್ನು ಬಹಳಷ್ಟು ಕಲಾವಿದರು ಅನಾರೋಗ್ಯಕ್ಕೆ ತುತ್ತಾಗಿ, ಸಂಕಷ್ಟದಲ್ಲಿರುತ್ತಾರೆ. ಅಂತಹವರು, ಸಲ್ಲಿಸಿರುವ ಅರ್ಜಿಗಳು ಮಂಜೂರು ಮಾಡಲು ವರ್ಷಗಳೇ ಕಳೆಯುತ್ತವೆ.

ಇತ್ತ ವೃದ್ಯಾಪ್ಯ ವೇತನವೂ ಇಲ್ಲ ಅತ್ತ ಮಾಸಾಶನವೂ ಇಲ್ಲವಾಗಿ ಕಲಾವಿದರು ತ್ರಿಶಂಕು ಸ್ಥಿತಿಯಲ್ಲಿ ಇರಬೇಕಾದ ಸ್ಥಿತಿ ಬಂದಿದೆ. ಇನ್ನೂ ಕೆಲವು ಸಂದರ್ಭಗಳಲ್ಲಿ ಮಾಸಾಶನಕ್ಕೆ ಅರ್ಜಿಗಳನ್ನು ಹಾಕಿರುವ ಕಲಾವಿದರು ಅದು ಮಂಜೂರಾಗಿ ಬರುವ ಮುಂಚೆಯೇ ಕಲಾವಿದರು ನಿಧನರಾಗಿರುವ ಉದಾಹರಣೆಗಳಿವೆ.

ಅರ್ಜಿ ಹಾಕಿರುವ ಕಲಾವಿದರಿಗೆ ಶೀಘ್ರ ಸಂದರ್ಶನಗಳನ್ನು ನಡೆಸಿ, ಅರ್ಹರಿಗೆ ಕೂಡಲೇ ಮಾಸಾಶನ ಮಂಜೂರು ಮಾಡಲು ಕ್ರಮ ಕೈಗೊಳ್ಳುವ ಮೂಲಕ ಸರ್ಕಾರ ಕಲಾವಿದರ ಹಿತ ಕಾಯಬೇಕೆಂದು ಕಲಾವಿದರ ಸಂಘದಿಂದ ಮನವಿ ಮಾಡಲಾಗುತ್ತಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎನ್ನುವ ಕಲಾವಿದರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೂನ್ 3ರಂದು ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳ ರಾಜ್ಯ ಒಕ್ಕೂಟದಿಂದ ಹಮ್ಮಿಕೊಂಡಿರುವ ವಿಧಾನ ಸೌಧ ಚಲೋ ಬೃಹತ್ ಸಾಂಸ್ಕೃತಿಕ ಹೋರಾಟಕ್ಕೆ ಸಂಘವು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಾಗುತ್ತಿದೆ ಎಂದರು.

ಕಲೆಯನ್ನು ನಂಬಿರುವ ಕಲಾವಿದರು

ಕಲೆಯನ್ನು ನಂಬಿರುವ ಬಹುತೇಕ ಕಲಾವಿದರು ಬಡ ಹಾಗೂ ಆರ್ಥಿಕವಾಗಿ ಹಿಂದುಳಿದವರು, ಹಿಂದುಳಿದ ಸಮುದಾಯದವರಾಗಿದ್ದಾರೆ. ಕಲಾವಿದರು ಹತ್ತಾರು ಸಾವಿರ ಖುರ್ಚು ಮಾಡಿಕೊಂಡು ಕಲಾ ಪ್ರದರ್ಶನ ನೀಡಬೇಕಾಗಿದೆ.

ಕಲಾವಿದರು ಅನಾರೋಗ್ಯಗೊಂಡರೆ ಅವರಿಗೆ ಯಾವುದೇ ನೆರವು ಇರುವುದಿಲ್ಲ. ಈ ದಿಸೆಯಲ್ಲಿ ಸರ್ಕಾರ ಮಾಸಾಶನದ ವಯಸ್ಸನ್ನು 50 ವರ್ಷಕ್ಕೆ ಸೀಮಿತವಾಗಿಸಬೇಕು. ಕಲಾವಿದರಿಗೆ 3 ಸಾವಿರ ರೂ ನೀಡುವ ಭರವಸೆ ಇನ್ನೂ ಈಡೇರಿಲ್ಲ. ಇಂದಿನ ಪರಿಸ್ಥಿತಿಗೆ ತಕ್ಕಂತೆ ಮಾಸಾಶನ 5 ಸಾವಿರ ರೂಗೆ ಏರಿಸಬೇಕು ಎಂದರು.

ಅಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ. ಸಂಘಗಳಿಗೆ ಧನ ಸಹಾಯಗಳು ಸಹ ಬರುತ್ತಿಲ್ಲ. ಕಲಾವಿದರು ಮರಣ ಹೊಂದಿದಾಗಲೂ ಸಹ ಹಣಕ್ಕೆ ಕೊರತೆಯಾಗುವ ಸ್ಥಿತಿ ಇದ್ದು, ಅಂತ್ಯಕ್ರಿಯೆಗೆ 10 ಸಾವಿರ ರೂ ನೀಡಬೇಕಿದೆ ಎಂದು ಕಲಾವಿದರು ಒತ್ತಾಯಿಸಿದರು.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]