Doddaballapura: Artists demand change in Pension rules

ದೊಡ್ಡಬಳ್ಳಾಪುರ: ಮಾಸಾಶನ ನಿಯಮ ಮಾರ್ಪಾಡಿಗೆ ಕಲಾವಿದರ ಒತ್ತಾಯ

ದೊಡ್ಡಬಳ್ಳಾಪುರ: ಕಲಾವಿದರು (Artists) ಮಾಸಾಶನ ಪಡೆಯಲು ವರ್ಷಗಟ್ಟಲೇ ವಿಳಂಬವಾಗುತ್ತಿದ್ದು, ಈ ದಿಸೆಯಲ್ಲಿ ಕಲಾವಿದರ ಸಂಕಷ್ಟಗಳನ್ನು ಅರ್ಥ ಮಾಡಿಕೊಂಡು, ಕಲಾವಿದರಿಗೆ ನೆರವು ನೀಡಲು ಸರ್ಕಾರ ಮುಂದಾಗಬೇಕಿದೆ ಎಂದು ಕಲಾವಿದರ ಸಂಘದಿಂದ ಒತ್ತಾಯಿಸಲಾಗುತ್ತಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘ ಒತ್ತಾಯಿಸಿದೆ.

ನಗರದ ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದ ಕಾರ್ಯಾಲಯ ಕಲಾಭವನದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಸಂಘದ ಪ್ರಮುಖರು, ಕಲಾವಿದರು ಈಗಾಗಲೇ ಪಡೆಯುತ್ತಿರುವ ಬೇರೆ ರೀತಿಯ ಮಾಸಾಶನ ನಿಲ್ಲಿಸಿ, ಕಲಾವಿದರ ಮಾಸಾಶನ ಪಡೆಯಲು ಸಹ ವರ್ಷಗಟ್ಟಲೇ ಕಾಯಬೇಕಿದ್ದು, ಯಾವುದೇ ರೀತಿಯ ಮಾಸಾಶನ ದೊರೆಯದೇ ಕಲಾವಿದರು ಮಾಸಾಶನದಿಂದ ವಂಚಿತರಾಗಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ

ಸರ್ಕಾರ ಕಲಾವಿದರಿಗೆ 2500 ರೂ.ಗಳ ಮಾಸಾಶನ ನೀಡುತ್ತಿದೆ. ಇದಕ್ಕೆ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ 58 ವರ್ಷ ತುಂಬಿದ ನಂತರ ಅರ್ಜಿ ಹಾಕಬೇಕು. ಮಾಸಾಶನಕ್ಕೆ ಅರ್ಜಿ ಹಾಕಿದ ಮೂರ್ನಾಲ್ಕು ವರ್ಷದ ನಂತರ ಮಾಸಾಶನ ಮಂಜೂರು ಅಗುತ್ತಿದೆ. ಅದರೆ ಅರ್ಜಿ ಹಾಕುವಾಗಲೇ ಇಲಾಖೆಯವರು ಕಂದಾಯ ಇಲಾಖೆಯಿಂದ ನಿಡುವ ವೃದ್ಧಾಪ್ಯ ವೇತನ ಪಡೆಯಬಾರದೆಂದೂ, ಒಂದು ವೇಳೆ ಪಡೆಯುತ್ತಿದ್ದರೂ ಅದನ್ನು ನಿಲ್ಲಿಸಿ, ಅರ್ಜಿ ಹಾಕಬೇಕೆಂದೂ ಹೇಳಿದ್ದಾರೆ.

ಇತ್ತ ಕಲಾವಿದರ ಮಾಸಾಸನವೂ ಇಲ್ಲದೆ ವೃದ್ಧಾಪ್ಯ ವೇತನವೂ ಇಲ್ಲದೆ ಕಲಾವಿದರು ತೊಂದರೆ ಅನುಭವಿಸುತ್ತಿದ್ದಾರೆ.

ಅರ್ಜಿ ಹಾಕಿದ ನಾಲ್ಕೈದು ವರ್ಷದ ನಂತರ ಮಾಸಾಶನ ಮಂಜೂರಾಗುತ್ತಿದೆ. ಈ ದಿಸೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಮಂಜೂರು ಮಾಡಿದ ನಂತರ. ವೃದ್ಧಾಪ್ಯ ವೇತನ ನಿಲ್ಲಿಸಿ, ನಂತರ ಕಲಾವಿದರಿಗೆ ಮಾಸಾಶನ ಬಿಡುಗಡೆ ಮಾಡಬೇಕೆಂದು ಕಲಾವಿದರ ಸಂಘ ಒತ್ತಾಯಿಸುತ್ತಿದೆ‌.

ಕಲಾವಿದರ ಮಾಸಾಶನಕ್ಕೆ ಅರ್ಜಿ ಹಾಕುವ ಮೊದಲೇ ಕಂದಾಯ ಇಲಾಖೆಯಿಂದ ನೀಡುವ 1,200 ವೃದ್ಧಾಪ್ಯ ವೇತನ ನಿಲ್ಲಿಸುವ ನಿಯಮ ಬದಲಿಸಬೇಕು. ಈ ಬಗ್ಗೆ ಇಲಾಖೆಯ ನಿರ್ದೆಶಕರು ಹಾಗೂ ಸಚಿವರು ಪರಿಸೀಲಿಸಿ ಮರು ಅದೇಶ ಮಾಡಬೇಕು ಎಂದರು.

ಶೀಘ್ರ ಸಂದರ್ಶನ ನಡೆಸಿ

ಕಲಾವಿದರ ಮರಣಾ ನಂತರ ಕಲಾವಿದರ ಪತ್ನಿಯರಿಗೆ ನೀಡುವ ವಿಧವಾ ವೇತನ. ಕೇವಲ 500 ಮಾತ್ರ ಆದರೆ ಅದೇ ಕಂದಾಯ ಇಲಾಖೆಯು ನೀಡುವ ವಿಧವಾ ವೇತನ 1,200 ರೂ ಆಗಿದೆ. ಗ್ಯಾರಂಟಿ ಯೋಜನೆಯ ಎಲ್ಲಾ ಮಹಿಳೆಯರಿಗೂ 2,000 ಬರುತ್ತಿದ್ದು, ಇದರಿಂದ ಕಲಾವಿದರ ಪತ್ನಿಯರಿಗೆ ನೀಡುವ ವಿಧವಾ ವೇತನ ಬಹಳ ಕಡಿಮೆ ಇದ್ದು, ಯಾರೂ ಸಹ ವಿಧವಾವೇತನ ಪಡೆಯಲು ಅರ್ಜಿಗಳನ್ನೇ ಸಲ್ಲಿಸದಂತಾಗಿದ್ದು, ಕಲಾವಿದರಿಗೆ ಅವಮಾನ ಮಾಡಿದಂತೆ ಅಗಿದೆ.

ಈ ದಿಸೆಯಲ್ಲಿ ಸರ್ಕಾರ ಗಮನ ಹರಿಸಿ ಕಲಾವಿದರಿಗೆ ನೀಡುವ ಮಾಸಾಶನದ ಮೊತ್ತ 2,500 ಗಳನ್ನೇ ಕಲಾವಿದರ ಮರಣದ ನಂತರ. ಅವರ ಪತ್ನಿಯರಿಗೂ ನೀಡುವ ಬಗ್ಗೆ ಸರ್ಕಾರ ಮರು ಆದೇಶ ಮಾಡಬೇಕು. ಇನ್ನು ಬಹಳಷ್ಟು ಕಲಾವಿದರು ಅನಾರೋಗ್ಯಕ್ಕೆ ತುತ್ತಾಗಿ, ಸಂಕಷ್ಟದಲ್ಲಿರುತ್ತಾರೆ. ಅಂತಹವರು, ಸಲ್ಲಿಸಿರುವ ಅರ್ಜಿಗಳು ಮಂಜೂರು ಮಾಡಲು ವರ್ಷಗಳೇ ಕಳೆಯುತ್ತವೆ.

ಇತ್ತ ವೃದ್ಯಾಪ್ಯ ವೇತನವೂ ಇಲ್ಲ ಅತ್ತ ಮಾಸಾಶನವೂ ಇಲ್ಲವಾಗಿ ಕಲಾವಿದರು ತ್ರಿಶಂಕು ಸ್ಥಿತಿಯಲ್ಲಿ ಇರಬೇಕಾದ ಸ್ಥಿತಿ ಬಂದಿದೆ. ಇನ್ನೂ ಕೆಲವು ಸಂದರ್ಭಗಳಲ್ಲಿ ಮಾಸಾಶನಕ್ಕೆ ಅರ್ಜಿಗಳನ್ನು ಹಾಕಿರುವ ಕಲಾವಿದರು ಅದು ಮಂಜೂರಾಗಿ ಬರುವ ಮುಂಚೆಯೇ ಕಲಾವಿದರು ನಿಧನರಾಗಿರುವ ಉದಾಹರಣೆಗಳಿವೆ.

ಅರ್ಜಿ ಹಾಕಿರುವ ಕಲಾವಿದರಿಗೆ ಶೀಘ್ರ ಸಂದರ್ಶನಗಳನ್ನು ನಡೆಸಿ, ಅರ್ಹರಿಗೆ ಕೂಡಲೇ ಮಾಸಾಶನ ಮಂಜೂರು ಮಾಡಲು ಕ್ರಮ ಕೈಗೊಳ್ಳುವ ಮೂಲಕ ಸರ್ಕಾರ ಕಲಾವಿದರ ಹಿತ ಕಾಯಬೇಕೆಂದು ಕಲಾವಿದರ ಸಂಘದಿಂದ ಮನವಿ ಮಾಡಲಾಗುತ್ತಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎನ್ನುವ ಕಲಾವಿದರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೂನ್ 3ರಂದು ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳ ರಾಜ್ಯ ಒಕ್ಕೂಟದಿಂದ ಹಮ್ಮಿಕೊಂಡಿರುವ ವಿಧಾನ ಸೌಧ ಚಲೋ ಬೃಹತ್ ಸಾಂಸ್ಕೃತಿಕ ಹೋರಾಟಕ್ಕೆ ಸಂಘವು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಾಗುತ್ತಿದೆ ಎಂದರು.

ಕಲೆಯನ್ನು ನಂಬಿರುವ ಕಲಾವಿದರು

ಕಲೆಯನ್ನು ನಂಬಿರುವ ಬಹುತೇಕ ಕಲಾವಿದರು ಬಡ ಹಾಗೂ ಆರ್ಥಿಕವಾಗಿ ಹಿಂದುಳಿದವರು, ಹಿಂದುಳಿದ ಸಮುದಾಯದವರಾಗಿದ್ದಾರೆ. ಕಲಾವಿದರು ಹತ್ತಾರು ಸಾವಿರ ಖುರ್ಚು ಮಾಡಿಕೊಂಡು ಕಲಾ ಪ್ರದರ್ಶನ ನೀಡಬೇಕಾಗಿದೆ.

ಕಲಾವಿದರು ಅನಾರೋಗ್ಯಗೊಂಡರೆ ಅವರಿಗೆ ಯಾವುದೇ ನೆರವು ಇರುವುದಿಲ್ಲ. ಈ ದಿಸೆಯಲ್ಲಿ ಸರ್ಕಾರ ಮಾಸಾಶನದ ವಯಸ್ಸನ್ನು 50 ವರ್ಷಕ್ಕೆ ಸೀಮಿತವಾಗಿಸಬೇಕು. ಕಲಾವಿದರಿಗೆ 3 ಸಾವಿರ ರೂ ನೀಡುವ ಭರವಸೆ ಇನ್ನೂ ಈಡೇರಿಲ್ಲ. ಇಂದಿನ ಪರಿಸ್ಥಿತಿಗೆ ತಕ್ಕಂತೆ ಮಾಸಾಶನ 5 ಸಾವಿರ ರೂಗೆ ಏರಿಸಬೇಕು ಎಂದರು.

ಅಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ. ಸಂಘಗಳಿಗೆ ಧನ ಸಹಾಯಗಳು ಸಹ ಬರುತ್ತಿಲ್ಲ. ಕಲಾವಿದರು ಮರಣ ಹೊಂದಿದಾಗಲೂ ಸಹ ಹಣಕ್ಕೆ ಕೊರತೆಯಾಗುವ ಸ್ಥಿತಿ ಇದ್ದು, ಅಂತ್ಯಕ್ರಿಯೆಗೆ 10 ಸಾವಿರ ರೂ ನೀಡಬೇಕಿದೆ ಎಂದು ಕಲಾವಿದರು ಒತ್ತಾಯಿಸಿದರು.

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!