Ishtalinga Mahapuja in Doddaballapura

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದಲ್ಲಿ ಇಷ್ಟಲಿಂಗ ಮಹಾಪೂಜೆ

ದೊಡ್ಡಬಳ್ಳಾಪುರ (Doddaballapura): ವೀರಶೈವ, ಲಿಂಗಾಯಿತ ಎರಡೂ ಒಂದೇ ಎನ್ನುವುದು ಸರ್ವವಿಧಿತ. ಆದರೆ, ರಾಜಕೀಯ ಹಾಗೂ ಮತ್ತಿತರರ ಕಾರಣಗಳಿಂದಾಗಿ ಸಮುದಾಯ ಒಳ ಪಂಗಡಗಳಾಗಿ ಕವಲು ದಾರಿಯಲ್ಲಿ ಸಾಗಿ ಶಕ್ತಿ ಕುಂದಿಸುವ ಕೆಲಸವಾಗುತ್ತಿದೆ. ಈ ದಿಸೆಯಲ್ಲಿ ವೀರಶೈವ, ಲಿಂಗಾಯಿತ ಎಲ್ಲ ಪಂಗಡಗಳು ಒಂದಾಗಿ ಕುಂದಿಸುವ ಕೆಲಸವಾಗುತ್ತಿದೆ. ಈ ದಿಸೆಯಲ್ಲಿ ಸಮುದಾಯದ ಘನತೆ ಹೆಚ್ಚಿಸಬೇಕಿದೆ ಎಂದು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗತತ್ವಾದ ಹೇಳಿದರು.

ನಗರದ ಬಸವ ಭವನದಲ್ಲಿ ದೊಡ್ಡಬಳ್ಳಾಪುರ ತಾಲೂಕು ವೀರಶೈವ ಲಿಂಗಾಯಿತ ಸಮಾಜ ಹಾಗೂ ಅಖಿಲಭಾರತ ವೀರಶೈವ ಲಿಂಗಾಯಿತ ಮಹಾಸಭಾದ ನೇತೃತ್ವದಲ್ಲಿ ನಡೆದ ಇಷ್ಟಲಿಂಗ ಮಹಾಪೂಜೆ ಹಾಗೂ ಭಾವೈಕ್ಯ ಧರ್ಮ ಸಮಾರಂಭದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ವೀರಶೈವ, ಲಿಂಗಾಯಿತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ಪ್ರಥಮ ಸ್ಥಾನದಲ್ಲಿದೆ. ಸಮುದಾಯದ ಹಿರಿಯರ ಮಾರ್ಗದರ್ಶನದಲ್ಲಿ ಇಂದಿನ ಯುವ ಸಮುದಾಯ ಮುನ್ನಡೆಯುತ್ತಿರುವುದು ಉತ್ತಮ ಬೆಳವಣಿಗೆ ಆದರೆ, ಒಳ ಪಂಗಡಗಳ ಹೆಸರಿನಲ್ಲಿ ವೀರಶೈವ, ಲಿಂಗಾಯಿತ ಬೇರೆ ಮಾಡುವ ಹುನ್ನಾರಗಳು ನಡೆಯುತ್ತಿವೆ.

ಸಮುದಾಯದ ಹಿರಿಯರಾದ ಶ್ಯಾಮನೂರು ಶಿವಶಂಕರಪ್ಪ ಶಂಕರ ಬಿದರಿ ಸಹ ವೀರಶೈವ, ಲಿಂಗಾಯಿತ ಎರಡೂ ಒಂದೇ ಎಂದು ಪ್ರತಿವಾದಿಸಿದ್ದಾರೆ.

ವೀರಶೈವ, ಲಿಂಗಾಯಿತ ಧರ್ಮದಲ್ಲಿ ಎಲ್ಲಾ ಧರ್ಮಗಳ ಸಾರವನ್ನು ಒಳ ಗೊಂಡಿದೆ. ಆದರಿಂದ ಬೇರ್ಪಟ್ಟು ಏನೂ ಸಾಧಿಸಲಾ ಗುವುದಿಲ್ಲ. ಸಂಘಟಿತರಾಗಿದ್ದರೆ ಮಾತ್ರ ಎಲ್ಲವನ್ನೂ ಸಾಧಿಸಲು ಸಾಧ್ಯ. ಆದರೆ, ಪಂಗಡಗಳನ್ನು ಬೇರೆ ಮಾಡುವ ಜನರ ಮಾತಿಗೆ ಬೆಲೆ ನೀಡಬೇಡಿ. ಒಕ್ಕೂಟ ದಿಂದ ಬೇರೆ ಹೋಗಬೇಡಿ ಎಂದು ಹೇಳಿದರು.

ಲಿಂಗಪೂಜೆ ಮರೆಯಬೇಡಿ: ದೇಶಕ್ಕೆ ಸಂವಿಧಾನವಿದ್ದಂತೆ ನಮ್ಮ ವೀರಶೈವ, ಲಿಂಗಾಯಿತ ಸಮುದಾಯಕ್ಕೆ ಜಗದ್ಗುರು ರೇಣುಕಾಚಾರೈರ ಹಾಗೂ ಬಸವಣ್ಣನವರ ತತ್ವ ಸಿದ್ಧಾಂತಗಳ ಸಂವಿಧಾನವಿದೆ. 125 ಶತಮಾನದಲ್ಲಿ ಬಸವಣ್ಣನವರು ಸಹ ಇಷ್ಟಲಿಂಗ ಧರಿಸಿ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದರು.

ರೇಣುಕಾಚಾರ್ಯರ ಹಾಗೂ ಬಸವಣ್ಣನವರ ಕಾಲದಂತೆ ನಮ್ಮ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಕಾರ್ಯ ನಡೆಯುತ್ತಲೇ ಬಂದಿದೆ. ಲಿಂಗಧಾರಣೆಯನ್ನು ಶ್ರದ್ದೆಯಿಂದ ಮಾಡಿ, ಸ್ನಾನದ ಸಮಯದಲ್ಲಿಯೂ ಅದಕ್ಕೆ ಅಭಿಷೇಕದಂತೆ ಶುಭ್ರ ಮಾಡಿ, ಆಚರಣೆಯನ್ನು ನೆರವೇರಿಸಬೇಕಿದೆ ಎಂದರು.

ರಾಜಕೀಯ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನನಗೆ ಅಧಿಕೃತ ಸರ್ಕಾರಿ ನಿವಾಸ ಕೊಡಿ ಎಂದು ಈವರೆಗೂ ರಾಜ್ಯ ಸರ್ಕಾರಕ್ಕೆ ಆರು ಬಾರಿ ಪತ್ರ ಬರೆದಿದ್ದೇನೆ: ಆರ್ ಅಶೋಕ (R Ashoka)

[ccc_my_favorite_select_button post_id="111165"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!