ಕಸದ ಶುಲ್ಕದ ಮೂಲಕ ಬೆಂಗಳೂರಿನ ಜನರಿಂದ ಹಣ ಲೂಟಿ: ಆರ್‌.ಅಶೋಕ ಆರೋಪ

If the sanctity of Chamundeshwari temple is violated, 'Chamundeshwari Chalo'; R. Ashoka

ಬೆಂಗಳೂರು: ಬೆಂಗಳೂರಿನಲ್ಲಿ ಕಸದ ಸೆಸ್‌ ಹೆಸರಿನಲ್ಲಿ ಕಾಂಗ್ರೆಸ್‌ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಇಡೀ ಬೆಂಗಳೂರನ್ನು ಸರ್ಕಾರ ದುಬಾರಿ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಹಣ ಉಳಿದಿಲ್ಲ. ಹಿಂದೆ ಇದ್ದ ತುಘಲಕ್‌ ಕೂಡ ಹಾಕದಷ್ಟು ತೆರಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಮೇಲೆ ಹಾಕಿದ್ದಾರೆ.

ಕಸ ವಿಲೇವಾರಿ ಮಾಡಲು ಕೂಡ ತೆರಿಗೆ ಹಾಕಲಾಗಿದೆ. 30*40 ಅಡಿ ವಿಸ್ತೀರ್ಣದ ಮನೆಗೆ 120 ರೂ. ಇದ್ದ ಕಸದ ತೆರಿಗೆಯನ್ನು 720 ರೂ. ಮಾಡಿದ್ದಾರೆ. ಅಂದರೆ 500% ರಷ್ಟು ಹೆಚ್ಚಾಗಿದೆ. ಅಪಾರ್ಟ್‌ಮೆಂಟ್‌ ನಿವಾಸಿಗಳು ಕಸವನ್ನು ಅವರೇ ವಿಲೇವಾರಿ ಮಾಡಿಕೊಳ್ಳುತ್ತಿದ್ದು, ಅವರಿಗೆ ಕಸದ ಸೆಸ್‌ 1,800 ರೂ. ನಿಂದ 18,000 ರೂ. ಗೆ ಹೆಚ್ಚಿಸಲಾಗಿದೆ ಎಂದು ದೂರಿದರು.

ಮಾಲ್‌ಗಳಲ್ಲಿ 3,600 ರೂ. ಇದ್ದ ಕಸದ ಸೆಸ್‌ 52,500 ರೂ. ಆಗಿದ್ದು, 14,483% ಹೆಚ್ಚಿದೆ. ಆಸ್ಪತ್ರೆಗಳಲ್ಲಿ ಕಸದ ಸೆಸ್‌ 9,600 ರೂ. ನಿಂದ 2,75,000 ರೂ. ಆಗಿದೆ. 50*80 ವಿಸ್ತೀರ್ಣದ ಖಾಲಿ ನಿವೇಶನಗಳಿಗೆ 600 ರೂ. ನಿಂದ 5,400 ರೂ. ಆಗಿದೆ. ಕಸವೇ ಉತ್ಪತ್ತಿ ಆಗದ ಜಾಗದಲ್ಲಿ ಬಿಬಿಎಂಪಿಯಿಂದ ದುಡ್ಡು ಉತ್ಪತ್ತಿ ಮಾಡಲಾಗುತ್ತಿದೆ ಎಂದರು.

ಜಮೀನುಗಳಿಗೆ ಬಳಕೆದಾರರ ಶುಲ್ಕ 3,600 ರೂ. ನಿಂದ 67,000 ರೂ. ಆಗಿ 1,761% ಹೆಚ್ಚಾಗಿದೆ. 110 ಹಳ್ಳಿಗಳಲ್ಲಿ ಲಕ್ಷಾಂತರ ಜಮೀನುಗಳಿವೆ. ಅವುಗಳ ಮಾಲೀಕರು ಲಕ್ಷಾಂತರ ರೂಪಾಯಿ ಕಸದ ಸೆಸ್‌ ಪಾವತಿಸಬೇಕಿದೆ.

ಬಳಕೆದಾರರ ಶುಲ್ಕವನ್ನು ನಾವು ಪಾವತಿಸುವುದಿಲ್ಲ ಎಂದು ಬೆಂಗಳೂರಿನ 2,800 ಜನರು ಆನ್‌ಲೈನ್‌ ಆಂದೋಲನ ಆರಂಭಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರ ಬಿಬಿಎಂಪಿಯ ಮೂಲಕ ಜನರನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕಳೆದೆರಡು ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಜನರು ಅತಿ ಹೆಚ್ಚು ತೆರಿಗೆ ಪಾವತಿಸುತ್ತಿದ್ದರೂ, ಅಭಿವೃದ್ಧಿಗೆ ಹಣ ನೀಡದೆ ತೆರಿಗೆ ವಸೂಲಿ ಮಾಡಲಾಗುತ್ತಿದೆ ಎಂದರು.

ನೀತಿ ಆಯೋಗದ ಸಭೆಗೆ ಗೈರು

ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಆರೋಪ ಮಾಡುವ ಸಿಎಂ ಸಿದ್ದರಾಮಯ್ಯನವರು ನೀತಿ ಆಯೋಗದ ಸಭೆಗೆ ಹೋಗಿಲ್ಲ. ರಾಜಸ್ತಾನದ ಕಾಂಗ್ರೆಸ್‌ ಸಭೆಗೆ, ರಾಹುಲ್‌ ಗಾಂಧಿಯ ಭೇಟಿಗೆ ಅವರಿಗೆ ಸಮಯ ಇದೆ. ಆದರೆ ನೀತಿ ಆಯೋಗದ ಸಭೆಗೆ ಹೋಗಲು ಇವರಿಗೆ ಸಮಯವಿಲ್ಲ.

ಅಲ್ಲಿ ಹೋಗಿ ಅನುದಾನ ಕೇಳದೆ, ಹಾದಿಬೀದಿಯಲ್ಲಿ ಆರೋಪ ಮಾಡುತ್ತಿದ್ದಾರೆ. ಕ್ರಿಕೆಟ್‌ ಸ್ಟೇಡಿಯಂಗೆ ಹೋಗಿ ಸಮೋಸ, ಕಡ್ಳೆಪುರಿ ತಿನ್ನಲು ಸಮಯ ಇರುವ ಇವರಿಗೆ, ಕೇಂದ್ರ ಸರ್ಕಾರದ ಬಳಿ ಹೋಗಲು ಸಮಯ ಇಲ್ಲ ಎಂದರು.

ಪ್ರತಿ ಮುಖ್ಯಮಂತ್ರಿಗೆ ಹದಿನೈದಿಪ್ಪತ್ತು ನಿಮಿಷ ಸಮಯ ನೀಡಲಾಗುತ್ತದೆ. ಇದನ್ನು ಬಳಸಿಕೊಂಡು ರಾಜ್ಯದ ಜನರ ಪರವಾಗಿ ಮಾತಾಡಬಹುದಿತ್ತು. ಇನ್ನು ಮುಂದೆ ಅನುದಾನ ನೀಡಿಲ್ಲ ಎಂದು ದೂರಿದರೆ ಇವರನ್ನು ನಂಬಲೇಬಾರದು. ಇವರಿಗೆ ರಾಜ್ಯದ ಜನರ ಬಗ್ಗೆ ಕಾಳಜಿ ಇಲ್ಲ ಎಂದರು.

ರಾಜ್ಯದ ವಿವಿಧೆಡೆ ಮಳೆ ಹಾನಿಯಾಗಿದ್ದು, ಒಬ್ಬ ಸಚಿವರೂ ಸಂತ್ರಸ್ತರನ್ನು ಭೇಟಿ ಮಾಡಿಲ್ಲ. ಯಾವುದೇ ಜಿಲ್ಲಾ ಉಸ್ತುವಾರಿ ಸಚಿವರು ಮಳೆ ಹಾನಿ ಪ್ರದೇಶಕ್ಕೆ ಹೋಗಿಲ್ಲ. ಬೆಂಗಳೂರಿನಲ್ಲಿ ಸರ್ಕಾರದಿಂದ ಪರಿಶೀಲನೆ ನಡೆಸಿದ ನಂತರ ಒಂದು ರೂಪಾಯಿ ಪರಿಹಾರ ಬಿಡುಗಡೆ ಮಾಡಿಲ್ಲ.

ಸಿಲ್ಕ್‌ ಬೋರ್ಡ್‌ ವೃತ್ತದ ಅಭಿವೃದ್ಧಿಗೂ ಅನುದಾನ ನೀಡಿಲ್ಲ. ಬೆಳೆ ಹಾನಿಯಾದ ರೈತರಿಗೆ ಸಾಂತ್ವನ ಹೇಳಲು ಸಚಿವರು ಮುಂದಾಗಿಲ್ಲ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಕೂಡಲೇ ಸಚಿವರು ಭೇಟಿ ನೀಡಬೇಕು. ಸಿಎಂ ಸಿದ್ದರಾಮಯ್ಯ ಎಲ್ಲ ಜಿಲ್ಲಾಧಿಕಾರಿಗಳ ಸಭೆ ಕರೆದು ಪರಿಹಾರ ಕಾರ್ಯಾಚರಣೆ ನಡೆಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ವಿರೋಧ ಪಕ್ಷವನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ. ಸರ್ಕಾರ ಅಕ್ರಮಗಳನ್ನು ಇನ್ನಷ್ಟು ಬಯಲಿಗೆ ಎಳೆಯುತ್ತೇವೆ. ನಾವು ಬಿಡುಗಡೆ ಮಾಡಿದ ಚಾರ್ಜ್‌ಶೀಟ್‌ ಪುಸ್ತಕದಿಂದಾಗಿ ಸರ್ಕಾರ ಭಯ ಬಿದ್ದಿದೆ ಎಂದರು.

ಕೋವಿಡ್‌ ನಿಯಂತ್ರಣಕ್ಕೆ ಕ್ರಮ ವಹಿಸಿ

ರಾಜ್ಯದಲ್ಲಿ ಕೋವಿಡ್‌ ಮತ್ತೆ ಹರಡುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಅಲೆಸುತ್ತಾರೆ. ಆದ್ದರಿಂದ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್‌ ವಾರ್ಡ್‌ ಆರಂಭಿಸಿ, ಔಷಧಿ ಪೂರೈಸಬೇಕು. ಯಾವುದೇ ಖರ್ಚನ್ನು ರೋಗಿಗಳಿಂದ ಭರಿಸಬಾರದು. ಸರ್ಕಾರವೇ ಪೂರ್ತಿ ವೆಚ್ಚ ಭರಿಸಬೇಕು ಎಂದು ಆರ್.ಅಶೋಕ ಒತ್ತಾಯಿಸಿದರು.

ಮಂಡ್ಯದಲ್ಲಿ ಸಾರಿಗೆ ಇಲಾಖೆಯ ಪೊಲೀಸರ ನಿರ್ಲಕ್ಷ್ಯದಿಂದಾಗಿ ಮಗು ಮೃತಪಟ್ಟಿದೆ. ಇದು ಪೊಲೀಸ್‌ ಇಲಾಖೆಯಲ್ಲಿ ಶಿಸ್ತಿಲ್ಲ ಎಂಬುದಕ್ಕೆ ಸಾಕ್ಷಿ. ಪೊಲೀಸರ ಬಳಿ ವಾಕಿಟಾಕಿ ಇದೆ. ಆದರೂ ಏಕಾಏಕಿ ಹೋಗಿ ರಸ್ತೆಯಲ್ಲಿ ಸವಾರರನ್ನು ಅಡ್ಡ ಹಾಕುತ್ತಾರೆ.

ಸಾರಿಗೆ ಇಲಾಖೆಯ ಪೊಲೀಸರು ಜನರನ್ನು ಹೊಡೆಯಲು ಅವಕಾಶವಿಲ್ಲ. ಮಗು ಪೊಲೀಸರಿಂದಲೇ ಸತ್ತಿರುವುದರಿಂದ ಆ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರಾಜಕೀಯ

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ; ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ; ಮುಖ್ಯಮಂತ್ರಿ ಸಿದ್ದರಾಮಯ್ಯ

ಆರ್ಥಿಕವಾಗಿ ಶಕ್ತಿಯಿಲ್ಲದವರಿಗೆ ಗ್ಯಾರಂಟಿ ಯೋಜನೆಗಳನ್ನು ಸಮಾನವಾಗಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ತಾರತಮ್ಯವಿಲ್ಲದೇ ನೀಡಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121806"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]