I understand Kamal Haasan's love and concern for Tamil: BY Vijayendra

ಕಮಲಹಾಸನ್ ಅವರಿಗೆ ತಮಿಳಿನ ಕುರಿತ ಪ್ರೀತಿ, ಕಾಳಜಿ ನನಗೆ ಅರ್ಥವಾಗುತ್ತದೆ: ಬಿವೈ ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ಸಿಗರು ಅಧಿಕಾರ ಇದೆ ಎಂದು ದರ್ಪದಿಂದ ಮೆರೆದರೆ, ಅದಕ್ಕೆ ಉತ್ತರ ಕೊಡುವ ದಿನಗಳು ಹತ್ತಿರ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಎಚ್ಚರಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರಕಾರ ಇವತ್ತು ಇರುತ್ತದೆ, ನಾಳೆ ಹೋಗುತ್ತದೆ. ಅಧಿಕಾರ ಶಾಶ್ವತವಲ್ಲ. ವಿಪಕ್ಷದವರಿಗೆ ಅವರದೇ ಆದ ಗೌರವ ಇದೆ. ಆ ಗೌರವಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳುವುದು ಆಡಳಿತ ಪಕ್ಷದವರ ಕರ್ತವ್ಯ ಎಂದು ಗಮನ ಸೆಳೆದರು.

ಸರಕಾರ ಈಗಲಾದರೂ ಎಚ್ಚತ್ತುಕೊಳ್ಳಲಿ. ವಿಪಕ್ಷ ನಾಯಕರನ್ನು ಹೆದರಿಸುವುದು, ನಮ್ಮ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸುವುದನ್ನು ಕೈಬಿಡಿ ಎಂದು ಆಗ್ರಹಿಸಿದರು.

ಮಂಗಳೂರಿನಲ್ಲಿ ಹತ್ಯೆ ಬಳಿಕ ಶಾಂತಿ ಸಭೆ ನಡೆಸಿಲ್ಲ ಎಂಬ ಕುರಿತ ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದ ಅವರು, ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಗೃಹ ಸಚಿವರು ಮಂಗಳೂರಿನಲ್ಲಿ ಪ್ರಮುಖರ ಸಭೆ ನಡೆಸಿದ್ದರು. ಅವರು ಸುಹಾಸ್ ಶೆಟ್ಟಿ ಮನೆಗೆ ಭೇಟಿ ಕೊಡುವ ವಿಷಯ ತಿಳಿದು ಒಂದು ಕೋಮಿನ ಮುಖಂಡರು ಬಂದು ಗೃಹ ಸಚಿವರನ್ನು ಮುತ್ತಿಗೆ ಹಾಕಿದ್ದ ಮಾಹಿತಿ ಇದೆ.

ಸುಹಾಸ್ ಶೆಟ್ಟಿ ಮನೆಗೆ ಭೇಟಿ ಕೊಡದಂತೆ ಬೆದರಿಕೆ ಹಾಕಿದ್ದರು. ಸಚಿವರು ಹೆದರಿ ವಾಪಸ್ ಬಂದಿದ್ದಾರೆಂದರೆ ಯಾವ ಸೌಹಾರ್ದದ ಬಗ್ಗೆ ನೀವು ಚರ್ಚೆ ಮಾಡುತ್ತೀರಿ ಎಂದು ಕೇಳಿದರು.

ಸಿದ್ದರಾಮಯ್ಯನವರ ಈ ಸರಕಾರ ಅಲ್ಪಸಂಖ್ಯಾತರ ಓಲೈಕೆ ಮತ್ತು ಅವರನ್ನು ಖುಷಿ ಪಡಿಸಲು ಇದೆಯೇ ಹೊರತು ಕಾನೂನು- ಸುವ್ಯವಸ್ಥೆ ಚೆನ್ನಾಗಿರಬೇಕು; ರಾಜ್ಯದಲ್ಲಿ ಶಾಂತಿಯುತ ವಾತಾವರಣ ಇರಬೇಕೆಂಬ ಕಿಂಚಿತ್ತೂ ಕಾಳಜಿ ಅವರಿಗೆ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ರಾಜ್ಯ ರಾಜಕಾರಣದ ಮಹತ್ತರ ತಿರುವು

ರಾಜ್ಯ ರಾಜಕಾರಣವು ಮುಂದಿನ ದಿನಗಳಲ್ಲಿ ಮಹತ್ತರ ತಿರುವು ಪಡೆದುಕೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಸ್ವತಃ ಸಿದ್ದರಾಮಯ್ಯನವರು ಬಿ.ಕೆ.ಹರಿಪ್ರಸಾದ್ ಅವರ ಮನೆಗೆ ಹೋಗಿದ್ದಾರೆ. ಮುಂದಿನ ದಿನಗಳ ಘಟನೆಗಳನ್ನು ಕಾದು ನೋಡಿ ಎಂದು ಹೇಳಿದರು.

ಕಮಲಹಾಸನ್ ಕಾಳಜಿ ನನಗೆ ಅರ್ಥವಾಗುತ್ತದೆ..

ನಟ ಕಮಲಹಾಸನ್ ಅವರಿಗೆ ತಮಿಳಿನ ಕುರಿತ ಪ್ರೀತಿ, ಕಾಳಜಿ ನನಗೆ ಅರ್ಥವಾಗುತ್ತದೆ. ಅವರಿಗೆ ತಮಿಳು ಭಾಷೆ ಬಗ್ಗೆ ಪ್ರೇಮ ಇದೆಯೆಂದು ಕನ್ನಡ ಭಾಷೆ ಬಗ್ಗೆ ಇಂಥ ಹೇಳಿಕೆ ಕೊಡುವುದು ಖಂಡಿತ ಸರಿಯಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಕನ್ನಡ ಮತ್ತು ತಮಿಳು ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಕಮಲಹಾಸನ್ ಅವರ ಹೇಳಿಕೆಯಿಂದ ಕನ್ನಡಿಗರಿಗೆ ನೋವುಂಟಾಗಿದೆ.

ಅನೇಕ ಪ್ರತಿಕ್ರಿಯೆಗಳ ಬಳಿಕ ಕೂಡ ಕ್ಷಮೆ ಕೇಳುವುದಿಲ್ಲ ಎಂದಿರುವುದು ದುರಹಂಕಾರದ ನಡೆ ಎಂದು ಖಂಡಿಸಿದರು. ಕಮಲಹಾಸನ್ ಅವರು ಈ ರೀತಿ ವಿಷಬೀಜ ಬಿತ್ತಬಾರದು ಎಂದು ತಿಳಿಸಿದರು.

ಬಿಜೆಪಿ ಮುಖಂಡರ ಬೆದರಿಕೆ, ಬ್ಲ್ಯಾಕ್‍ಮೇಲ್‍ಗೆ ಹೆದರೆವು

ಹೋರಾಟದ ಸಂದರ್ಭದಲ್ಲಿ ನಮ್ಮ ಹಿರಿಯರು, ವಿಧಾನಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಅವರು ಭಾಷಣದಲ್ಲಿ, ಅಲ್ಲಿನ ಜಿಲ್ಲಾಧಿಕಾರಿಗಳ ಬಗ್ಗೆ ಕೆಲವು ಮಾತುಗಳನ್ನು ಆಡಿದ್ದರು. ಬಳಿಕ ರವಿಕುಮಾರ್ ಅವರು ತಮ್ಮ ಮಾತಿಗೆ ವಿಷಾದವನ್ನೂ ವ್ಯಕ್ತಪಡಿಸಿದ್ದಾರೆ. ಆದರೂ, ಕಾಂಗ್ರೆಸ್ ಸರಕಾರದ ಕುಮ್ಮಕ್ಕಿನಿಂದ ದೂರು ಪಡೆದು ಎಫ್‍ಐಆರ್ ಮಾಡಿದ್ದಾರೆ.

ರವಿಕುಮಾರ್ ಅವರ ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ; ಅಲ್ಲದೆ ಬೆದರಿಸುವ ಕೆಲಸ ಈ ಸರಕಾರಕ್ಕೆ ಶೋಭೆ ತರುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಸರಕಾರಕ್ಕೆ ಪ್ರಾಮಾಣಿಕತೆ ಇದ್ದಲ್ಲಿ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಗೂಂಡಾ ವರ್ತನೆ ತೋರಿದವರ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆ ಮಾಡಬೇಕಿತ್ತು. ಅಧಿಕಾರಿಗಳು ಕಣ್ಮುಚ್ಚಿ ಕೂತ ಬಗ್ಗೆ ತನಿಖೆ ಮಾಡಿಸಬೇಕಿತ್ತು. ಅದನ್ನು ಬಿಟ್ಟು ಹಿಂದುಳಿದ, ದಲಿತ ನಾಯಕರನ್ನು ಗುರಿಯನ್ನಾಗಿ ಮಾಡುತ್ತಿದ್ದಾರೆ.

ಬಿಜೆಪಿ ಮುಖಂಡರನ್ನು ಬೆದರಿಸುವುದು, ಬ್ಲ್ಯಾಕ್‍ಮೇಲ್ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇವ್ಯಾವುದಕ್ಕೂ ಬಿಜೆಪಿ ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸದೃಢ ಸಂಘಟನೆಗೆ ರಾಜ್ಯಾದ್ಯಂತ ಪ್ರವಾಸ

ಸಂಘಟನೆಯನ್ನು ಬಲಪಡಿಸುವುದು ಹಾಗೂ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಕಣ್ಮುಂದೆ ಇಟ್ಟುಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಇಂದಿನ ಕೋರ್ ಕಮಿಟಿ ಸಭೆಯಲ್ಲಿ ನಾವು ಚರ್ಚಿಸಲಿದ್ದೇವೆ ಎಂದು ತಿಳಿಸಿದರು.

ಪಕ್ಷದ ರಾಜ್ಯ ಉಸ್ತುವಾರಿಗಳಾದ ಡಾ.ರಾಧಾಮೋಹನ್‍ದಾಸ್ ಅಗ್ರವಾಲ್ ಅವರ ನೇತೃತ್ವದಲ್ಲಿ ಕಳೆದ 2 ದಿನಗಳಿಂದ ಅನೇಕ ಸಭೆಗಳು ನಡೆದಿವೆ. ನಿನ್ನೆ ರಾಜ್ಯ ಎಸ್‍ಟಿ ಮೋರ್ಚಾ, ಮಹಿಳಾ ಮೋರ್ಚಾ, ಯುವ ಮೋರ್ಚಾಗಳ ಪ್ರಮುಖರ ಸಭೆ ನಡೆದಿದೆ. ಇವತ್ತು ಬೇರೆ ಬೇರೆ ಸಮುದಾಯಗಳ ಪ್ರಮುಖರ ಸಭೆ ನಡೆಯಲಿದೆ ಎಂದು ತಿಳಿಸಿದರು.

ಮಧ್ಯಾಹ್ನ ಭೋಜನದ ನಂತರ ರಾಜ್ಯದ ಕೋರ್ ಕಮಿಟಿ ಸಭೆ ಆಯೋಜಿಸಿದ್ದೇವೆ. ಕಳೆದ ಕೆಲವು ತಿಂಗಳುಗಳಿಂದ ಈ ರಾಜ್ಯದಲ್ಲಿರುವ ಭ್ರಷ್ಟ, ಜನವಿರೋಧಿ, ರೈತ ವಿರೋಧಿ ಸರಕಾರದ ವಿರುದ್ಧ ಹಾಗೂ ಬೆಲೆ ಏರಿಕೆಯ ಸಿದ್ದರಾಮಯ್ಯರ ನೇತೃತ್ವದ ಸರಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದ ಕುರಿತು ಕೋರ್ ಕಮಿಟಿ ಸಭೆಯು ಚರ್ಚಿಸಲಿದೆ ಎಂದು ಹೇಳಿದರು.

ಗುಲ್ಬರ್ಗ ಜಿಲ್ಲಾ ಪ್ರವಾಸದಲ್ಲಿದ್ದ ನಮ್ಮ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿಗೃಹದಲ್ಲಿ ಬಂಧನ ಮಾಡಿ, ಕಾಂಗ್ರೆಸ್ ಪುಡಾರಿಗಳನ್ನು ಅಲ್ಲಿಗೆ ಕರೆತಂದು ಅವರ ಮೇಲೆ ಹಲ್ಲೆ ಮಾಡುವ ಪ್ರಯತ್ನ ನಡೆದಿತ್ತು. ಇದನ್ನು ಖಂಡಿಸಿ ಗುಲ್ಬರ್ಗದಲ್ಲಿ ಮೊನ್ನೆ ನಾನು ಮತ್ತು ನಮ್ಮ ಪಕ್ಷದ ಪ್ರಮುಖರು ಕಾಂಗ್ರೆಸ್ ಸರಕಾರ ಮತ್ತು ಅಲ್ಲಿನ ಉಸ್ತುವಾರಿ ಸಚಿವರ ವಿರುದ್ಧ ಹೋರಾಟ ಮಾಡಿದ್ದೇವೆ. ನಮ್ಮ ಈ ಹೋರಾಟವು ಯಶಸ್ವಿಯಾಗಿದೆ ಎಂದು ತಿಳಿಸಿದರು.

ರಾಜಕೀಯ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ (BJP) ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ.

[ccc_my_favorite_select_button post_id="118518"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!