I understand Kamal Haasan's love and concern for Tamil: BY Vijayendra

ಕಮಲಹಾಸನ್ ಅವರಿಗೆ ತಮಿಳಿನ ಕುರಿತ ಪ್ರೀತಿ, ಕಾಳಜಿ ನನಗೆ ಅರ್ಥವಾಗುತ್ತದೆ: ಬಿವೈ ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ಸಿಗರು ಅಧಿಕಾರ ಇದೆ ಎಂದು ದರ್ಪದಿಂದ ಮೆರೆದರೆ, ಅದಕ್ಕೆ ಉತ್ತರ ಕೊಡುವ ದಿನಗಳು ಹತ್ತಿರ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಎಚ್ಚರಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರಕಾರ ಇವತ್ತು ಇರುತ್ತದೆ, ನಾಳೆ ಹೋಗುತ್ತದೆ. ಅಧಿಕಾರ ಶಾಶ್ವತವಲ್ಲ. ವಿಪಕ್ಷದವರಿಗೆ ಅವರದೇ ಆದ ಗೌರವ ಇದೆ. ಆ ಗೌರವಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳುವುದು ಆಡಳಿತ ಪಕ್ಷದವರ ಕರ್ತವ್ಯ ಎಂದು ಗಮನ ಸೆಳೆದರು.

ಸರಕಾರ ಈಗಲಾದರೂ ಎಚ್ಚತ್ತುಕೊಳ್ಳಲಿ. ವಿಪಕ್ಷ ನಾಯಕರನ್ನು ಹೆದರಿಸುವುದು, ನಮ್ಮ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸುವುದನ್ನು ಕೈಬಿಡಿ ಎಂದು ಆಗ್ರಹಿಸಿದರು.

ಮಂಗಳೂರಿನಲ್ಲಿ ಹತ್ಯೆ ಬಳಿಕ ಶಾಂತಿ ಸಭೆ ನಡೆಸಿಲ್ಲ ಎಂಬ ಕುರಿತ ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದ ಅವರು, ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಗೃಹ ಸಚಿವರು ಮಂಗಳೂರಿನಲ್ಲಿ ಪ್ರಮುಖರ ಸಭೆ ನಡೆಸಿದ್ದರು. ಅವರು ಸುಹಾಸ್ ಶೆಟ್ಟಿ ಮನೆಗೆ ಭೇಟಿ ಕೊಡುವ ವಿಷಯ ತಿಳಿದು ಒಂದು ಕೋಮಿನ ಮುಖಂಡರು ಬಂದು ಗೃಹ ಸಚಿವರನ್ನು ಮುತ್ತಿಗೆ ಹಾಕಿದ್ದ ಮಾಹಿತಿ ಇದೆ.

ಸುಹಾಸ್ ಶೆಟ್ಟಿ ಮನೆಗೆ ಭೇಟಿ ಕೊಡದಂತೆ ಬೆದರಿಕೆ ಹಾಕಿದ್ದರು. ಸಚಿವರು ಹೆದರಿ ವಾಪಸ್ ಬಂದಿದ್ದಾರೆಂದರೆ ಯಾವ ಸೌಹಾರ್ದದ ಬಗ್ಗೆ ನೀವು ಚರ್ಚೆ ಮಾಡುತ್ತೀರಿ ಎಂದು ಕೇಳಿದರು.

ಸಿದ್ದರಾಮಯ್ಯನವರ ಈ ಸರಕಾರ ಅಲ್ಪಸಂಖ್ಯಾತರ ಓಲೈಕೆ ಮತ್ತು ಅವರನ್ನು ಖುಷಿ ಪಡಿಸಲು ಇದೆಯೇ ಹೊರತು ಕಾನೂನು- ಸುವ್ಯವಸ್ಥೆ ಚೆನ್ನಾಗಿರಬೇಕು; ರಾಜ್ಯದಲ್ಲಿ ಶಾಂತಿಯುತ ವಾತಾವರಣ ಇರಬೇಕೆಂಬ ಕಿಂಚಿತ್ತೂ ಕಾಳಜಿ ಅವರಿಗೆ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ರಾಜ್ಯ ರಾಜಕಾರಣದ ಮಹತ್ತರ ತಿರುವು

ರಾಜ್ಯ ರಾಜಕಾರಣವು ಮುಂದಿನ ದಿನಗಳಲ್ಲಿ ಮಹತ್ತರ ತಿರುವು ಪಡೆದುಕೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಸ್ವತಃ ಸಿದ್ದರಾಮಯ್ಯನವರು ಬಿ.ಕೆ.ಹರಿಪ್ರಸಾದ್ ಅವರ ಮನೆಗೆ ಹೋಗಿದ್ದಾರೆ. ಮುಂದಿನ ದಿನಗಳ ಘಟನೆಗಳನ್ನು ಕಾದು ನೋಡಿ ಎಂದು ಹೇಳಿದರು.

ಕಮಲಹಾಸನ್ ಕಾಳಜಿ ನನಗೆ ಅರ್ಥವಾಗುತ್ತದೆ..

ನಟ ಕಮಲಹಾಸನ್ ಅವರಿಗೆ ತಮಿಳಿನ ಕುರಿತ ಪ್ರೀತಿ, ಕಾಳಜಿ ನನಗೆ ಅರ್ಥವಾಗುತ್ತದೆ. ಅವರಿಗೆ ತಮಿಳು ಭಾಷೆ ಬಗ್ಗೆ ಪ್ರೇಮ ಇದೆಯೆಂದು ಕನ್ನಡ ಭಾಷೆ ಬಗ್ಗೆ ಇಂಥ ಹೇಳಿಕೆ ಕೊಡುವುದು ಖಂಡಿತ ಸರಿಯಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಕನ್ನಡ ಮತ್ತು ತಮಿಳು ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಕಮಲಹಾಸನ್ ಅವರ ಹೇಳಿಕೆಯಿಂದ ಕನ್ನಡಿಗರಿಗೆ ನೋವುಂಟಾಗಿದೆ.

ಅನೇಕ ಪ್ರತಿಕ್ರಿಯೆಗಳ ಬಳಿಕ ಕೂಡ ಕ್ಷಮೆ ಕೇಳುವುದಿಲ್ಲ ಎಂದಿರುವುದು ದುರಹಂಕಾರದ ನಡೆ ಎಂದು ಖಂಡಿಸಿದರು. ಕಮಲಹಾಸನ್ ಅವರು ಈ ರೀತಿ ವಿಷಬೀಜ ಬಿತ್ತಬಾರದು ಎಂದು ತಿಳಿಸಿದರು.

ಬಿಜೆಪಿ ಮುಖಂಡರ ಬೆದರಿಕೆ, ಬ್ಲ್ಯಾಕ್‍ಮೇಲ್‍ಗೆ ಹೆದರೆವು

ಹೋರಾಟದ ಸಂದರ್ಭದಲ್ಲಿ ನಮ್ಮ ಹಿರಿಯರು, ವಿಧಾನಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಅವರು ಭಾಷಣದಲ್ಲಿ, ಅಲ್ಲಿನ ಜಿಲ್ಲಾಧಿಕಾರಿಗಳ ಬಗ್ಗೆ ಕೆಲವು ಮಾತುಗಳನ್ನು ಆಡಿದ್ದರು. ಬಳಿಕ ರವಿಕುಮಾರ್ ಅವರು ತಮ್ಮ ಮಾತಿಗೆ ವಿಷಾದವನ್ನೂ ವ್ಯಕ್ತಪಡಿಸಿದ್ದಾರೆ. ಆದರೂ, ಕಾಂಗ್ರೆಸ್ ಸರಕಾರದ ಕುಮ್ಮಕ್ಕಿನಿಂದ ದೂರು ಪಡೆದು ಎಫ್‍ಐಆರ್ ಮಾಡಿದ್ದಾರೆ.

ರವಿಕುಮಾರ್ ಅವರ ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ; ಅಲ್ಲದೆ ಬೆದರಿಸುವ ಕೆಲಸ ಈ ಸರಕಾರಕ್ಕೆ ಶೋಭೆ ತರುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಸರಕಾರಕ್ಕೆ ಪ್ರಾಮಾಣಿಕತೆ ಇದ್ದಲ್ಲಿ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಗೂಂಡಾ ವರ್ತನೆ ತೋರಿದವರ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆ ಮಾಡಬೇಕಿತ್ತು. ಅಧಿಕಾರಿಗಳು ಕಣ್ಮುಚ್ಚಿ ಕೂತ ಬಗ್ಗೆ ತನಿಖೆ ಮಾಡಿಸಬೇಕಿತ್ತು. ಅದನ್ನು ಬಿಟ್ಟು ಹಿಂದುಳಿದ, ದಲಿತ ನಾಯಕರನ್ನು ಗುರಿಯನ್ನಾಗಿ ಮಾಡುತ್ತಿದ್ದಾರೆ.

ಬಿಜೆಪಿ ಮುಖಂಡರನ್ನು ಬೆದರಿಸುವುದು, ಬ್ಲ್ಯಾಕ್‍ಮೇಲ್ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇವ್ಯಾವುದಕ್ಕೂ ಬಿಜೆಪಿ ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸದೃಢ ಸಂಘಟನೆಗೆ ರಾಜ್ಯಾದ್ಯಂತ ಪ್ರವಾಸ

ಸಂಘಟನೆಯನ್ನು ಬಲಪಡಿಸುವುದು ಹಾಗೂ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಕಣ್ಮುಂದೆ ಇಟ್ಟುಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಇಂದಿನ ಕೋರ್ ಕಮಿಟಿ ಸಭೆಯಲ್ಲಿ ನಾವು ಚರ್ಚಿಸಲಿದ್ದೇವೆ ಎಂದು ತಿಳಿಸಿದರು.

ಪಕ್ಷದ ರಾಜ್ಯ ಉಸ್ತುವಾರಿಗಳಾದ ಡಾ.ರಾಧಾಮೋಹನ್‍ದಾಸ್ ಅಗ್ರವಾಲ್ ಅವರ ನೇತೃತ್ವದಲ್ಲಿ ಕಳೆದ 2 ದಿನಗಳಿಂದ ಅನೇಕ ಸಭೆಗಳು ನಡೆದಿವೆ. ನಿನ್ನೆ ರಾಜ್ಯ ಎಸ್‍ಟಿ ಮೋರ್ಚಾ, ಮಹಿಳಾ ಮೋರ್ಚಾ, ಯುವ ಮೋರ್ಚಾಗಳ ಪ್ರಮುಖರ ಸಭೆ ನಡೆದಿದೆ. ಇವತ್ತು ಬೇರೆ ಬೇರೆ ಸಮುದಾಯಗಳ ಪ್ರಮುಖರ ಸಭೆ ನಡೆಯಲಿದೆ ಎಂದು ತಿಳಿಸಿದರು.

ಮಧ್ಯಾಹ್ನ ಭೋಜನದ ನಂತರ ರಾಜ್ಯದ ಕೋರ್ ಕಮಿಟಿ ಸಭೆ ಆಯೋಜಿಸಿದ್ದೇವೆ. ಕಳೆದ ಕೆಲವು ತಿಂಗಳುಗಳಿಂದ ಈ ರಾಜ್ಯದಲ್ಲಿರುವ ಭ್ರಷ್ಟ, ಜನವಿರೋಧಿ, ರೈತ ವಿರೋಧಿ ಸರಕಾರದ ವಿರುದ್ಧ ಹಾಗೂ ಬೆಲೆ ಏರಿಕೆಯ ಸಿದ್ದರಾಮಯ್ಯರ ನೇತೃತ್ವದ ಸರಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದ ಕುರಿತು ಕೋರ್ ಕಮಿಟಿ ಸಭೆಯು ಚರ್ಚಿಸಲಿದೆ ಎಂದು ಹೇಳಿದರು.

ಗುಲ್ಬರ್ಗ ಜಿಲ್ಲಾ ಪ್ರವಾಸದಲ್ಲಿದ್ದ ನಮ್ಮ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿಗೃಹದಲ್ಲಿ ಬಂಧನ ಮಾಡಿ, ಕಾಂಗ್ರೆಸ್ ಪುಡಾರಿಗಳನ್ನು ಅಲ್ಲಿಗೆ ಕರೆತಂದು ಅವರ ಮೇಲೆ ಹಲ್ಲೆ ಮಾಡುವ ಪ್ರಯತ್ನ ನಡೆದಿತ್ತು. ಇದನ್ನು ಖಂಡಿಸಿ ಗುಲ್ಬರ್ಗದಲ್ಲಿ ಮೊನ್ನೆ ನಾನು ಮತ್ತು ನಮ್ಮ ಪಕ್ಷದ ಪ್ರಮುಖರು ಕಾಂಗ್ರೆಸ್ ಸರಕಾರ ಮತ್ತು ಅಲ್ಲಿನ ಉಸ್ತುವಾರಿ ಸಚಿವರ ವಿರುದ್ಧ ಹೋರಾಟ ಮಾಡಿದ್ದೇವೆ. ನಮ್ಮ ಈ ಹೋರಾಟವು ಯಶಸ್ವಿಯಾಗಿದೆ ಎಂದು ತಿಳಿಸಿದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]