ಬೆಂಗಳೂರು: ಇತ್ತೀಚಿಗೆ ಬಿಜೆಪಿ (BJP) ನಾಯಕರಿಗೆ ಅದೇನ್ ಆಗಿದ್ದೀಯೋ ಒಬ್ಬರಲ್ಲ ಒಬ್ಬರು ಬೇಕಾಬಿಟ್ಟಿ ವಿವಾದಾತ್ಮಕ ಹೇಳಿಕೆ ನೀಡಿ ಕಾನೂನು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.
ಅಂತೆಯೇ ಕಲಬುರ್ಗಿ ಚಲೋ ರ್ಯಾಲಿಯಲ್ಲಿ ಮಹಿಳಾ ಜಿಲ್ಲಾಧಿಕಾರಿ ಕುರಿತಂತೆ ಬೇಕಾಬಿಟ್ಟಿಯಾಗಿ ಅವಹೇಳನಕಾರಿಯಾಗಿ ಬಂಧನದ ಆತಂಕಕ್ಕೆ ಒಳಗಾಗಿದ್ದ ಎಂಎಲ್ಸಿ ರವಿ ಕುಮಾರ್ ಅವರಿಗೆ ನ್ಯಾಯಾಲಯ ರಿಲೀಫ್ ನೀಡಿದೆ.
ರವಿಕುಮಾರ್ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದೆಂದು ಸೂಚಿಸಿರುವ ನ್ಯಾಯಾಲಯ, ವಿಚಾರಣೆಗೆ ಹಾಜರಾಗುವಂತೆ ರವಿಕುಮಾರ್ ಅವರಿಗೆ ಕಟ್ಟಿನ ಸೂಚನೆ ನೀಡಿದೆ ಎಂದು ವರದಿಯಾಗಿದೆ.
ಚಪ್ಪಾಳೆ ಕಿಟ್ಟಿಸಲು ಹೋಗಿ ಎಡವಟ್ಟು
ಮೇ 24 ರಂದು ಬಿಜೆಪಿಯ ”ಕಲಬುರಗಿ ಚಲೋ” ಪ್ರತಿಭಟನೆ ವೇಳೆ ಆಯೋಜಿಸಲಾದ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ರವಿಕುಮಾರ್, ʻʻಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿ ಡಿಸಿ ಕಚೇರಿಯೂ ತನ್ನ ಸ್ವಾತಂತ್ರ್ಯ ಕಳೆದುಕೊಂಡಿದೆ. ಡಿಸಿ ಮೇಡಂ ಅವರು (ಕಾಂಗ್ರೆಸ್) ಹೇಳುವುದನ್ನು ಕೇಳುತ್ತಿದ್ದಾರೆ.
ಈ ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲʼʼ ಎಂದು ಹೇಳಿದ್ದರು. ಈ ವೇಳೆ ಜನರ ಚಪ್ಪಾಳೆಗೆ ಪ್ರತಿಕ್ರಿಯಿಸಿ, ನಿಮ್ಮ ಚಪ್ಪಾಳೆ ನೋಡಿದರೆ, ʻಡಿಸಿ ಬಹುಶಃ ಪಾಕಿಸ್ತಾನದಿಂದ ಬಂದಿದ್ದಾರೆʼ ಎಂದೂ ಅವಹೇಳನ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಖಾಸಗಿ ವ್ಯಕ್ತಿಯೀರ್ವರು ರವಿಕುಮಾರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಿದ್ದರು ಅಲ್ಲದೆ. ಐಎಎಸ್ ಅಧಿಕಾರಿಗಳ ಸಂಘ ಖಂಡನೆ ವ್ಯಕ್ತಪಡಿಸಿತ್ತು.
ಬಳಿಕ ಯೂಟರ್ನ್ ಹೊಡೆದ ರವಿಕುಮಾರ್ ತಮ್ಮ ಹೇಳಿಕೆಗೆ ವಿಷಾಧವ್ಯಕ್ತಪಡಿಸಿದ್ದರು