ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ.200 ಕೋಟಿ ಅನುದಾನ ಬಿಡುಗಡೆ; ಸಚಿವ ಸಂತೋಷ ಲಾಡ್

Initial Rs. 200 crore for flood control and water utilization work; Minister Santosh Lad

ಧಾರವಾಡ: ಧಾರವಾಡ ಜಿಲ್ಲೆಯ ಎರಡು ಪ್ರಮುಖ ಹಳ್ಳಗಳಾದ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆ ಸಿದ್ಧಗೊಳಿಸಿದ್ದು, ಶಾಶ್ವತ ಪರಿಹಾರ ಕ್ರಮಕೈಗೊಳ್ಳಲು ಆರಂಭಿಕವಾಗಿ ರೂ.200 ಕೋಟಿ ಹಣ ಸರ್ಕಾರದಿಂದ ಈಗಾಗಲೇ ಬಿಡುಗಡೆ ಆಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh lad) ಅವರು ಹೇಳಿದರು.

ಅವರು ಗುರುವಾರ ನವಲಗುಂದ ತಾಲೂಕಿನ ಯಮನೂರು ಗ್ರಾಮದ ಸೇತುವೆ ಹತ್ತಿರ ಬೆಣ್ಣಿಹಳ್ಳದ ನಾಲೆಯನ್ನು ವೀಕ್ಷಣೆ ಮಾಡಿದ ನಂತರ ಮಾತನಾಡಿದರು.

ಬೆಣ್ಣೆಹಳ್ಳದಿಂದ ಧಾರವಾಡ ಗದಗ ಮತ್ತು ಹಾವೇರಿ ಜಿಲ್ಲೆಗಳ 6 ತಾಲೂಕುಗಳ 56 ಹಳ್ಳಿಗಳು ಬಾಧಿತವಾಗುತ್ತವೆ. ಬೆಣ್ಣಿಹಳ್ಳವು ಈ ಮೂರು ಜಿಲ್ಲೆಗಳ 148 ಕಿ.ಮೀ ಉದ್ದದಲ್ಲಿ ಹರಿಯುತ್ತದೆ. ಇದು ಸುಮಾರು 4800 ಚದರ ಕಿ.ಮೀ ಜಲಾನಯನ ಪ್ರದೇಶವನ್ನು ಹೊಂದಿದೆ ಎಂದು ಸಚಿವರು ಹೇಳಿದರು.

2012 ರಲ್ಲಿ ನೀರಾವರಿ ತಜ್ಞ ಡಾ.ಜಿ.ಎಸ್.ಪರಮಶಿವಯ್ಯ ಅವರು ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕುರಿತು ನೀಡಿದ ಅಧ್ಯಯನ ವರದಿಯನ್ನು ಸರಕಾರ ಪರಿಶೀಲಿಸಿದೆ. ಅದರ ಆಧಾರದ ಮೇಲೆ ನೀರಾವರಿ ನಿಗಮದ ವರದಿ ಪಡೆದು ಅನುಷ್ಠಾಗೊಳಿಸುತ್ತದೆ ಎಂದು ಸಚಿವರು ಹೇಳಿದರು.

ಸ್ಥಳೀಯ ಶಾಸಕರಾದ ಎನ್.ಎಚ್,ಕೋನರಡ್ಡಿ ಅವರ ನಿರಂತರ ಪ್ರಯತ್ನ ಹಾಗೂ ಒತ್ತಾಯದ ಫಲವಾಗಿ ಮಾನ್ಯ ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ರೂ. 200 ಕೋಟಿಗಳ ಅನುದಾನ ನೀಡಿ, ಹಣ ಬಿಡುಗಡೆ ಮಾಡಿದ್ದಾರೆ. ಕಾಮಗಾರಿಗೆ ಟೆಂಡರ್ ಕರೆಯಲಾಗಿದ್ದು, ಅಂತಿಮ ಹಂತದಲ್ಲಿದೆ ಮಳೆಗಾಲ ಮುಗಿದ ನಂತರ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.

ಯಮನೂರ ಸೇತುವೆ ಹತ್ತಿರ ಸಾರ್ವಜನಿಕರ ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಮುಖ್ಯವಾಗಿ ಬೆಣ್ಣಿಹಳ್ಳ ದಡದಲ್ಲಿ ಸ್ನಾನಘಟ್ಟ, ಉತ್ತಮ ರಸ್ತೆ, ಹೂಳು ಹಳ್ಳಕ್ಕೆ ಬರದಂತೆ ಮಾಡಲು ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಪ್ರವಾಹ, ವಿಪತ್ತು ನಿರ್ವಹಣೆಗೆ ಅಗತ್ಯ ನೆರವು

ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಮಳೆಗಾಲದಲ್ಲಿ ಉಂಟಾಗುವ ಹಳ್ಳಗಳ ಪ್ರವಾಹ, ಅತಿವೃಷ್ಟಿ ಸಮಸ್ಯೆಗಳನ್ನು ಸಮರ್ಪಕವಾಗಿ ಎದುರಿಸಿ, ಯಾವುದೇ ಜನ ಜಾನುವಾರ ಹಾನಿ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈಗಾಗಲೇ ಜಿಲ್ಲಾಮಟ್ಟದಲ್ಲಿ ಸಭೆ ಜರುಗಿಸಿ, ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕೇಂದ್ರ ಸ್ಥಾನ ಬಿಡದಂತೆ ಮತ್ತು ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೋರದಂತೆ ನಿರ್ದೇಶಿಸಿ, ಎಚ್ಚರಿಕೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಪ್ರವಾಹ ಪರಿಸ್ಥಿತಿ ಎದುರಿಸಲು ಅನುವಾಗುವಂತೆ ನವಲಗುಂದ ಪಟ್ಟಣದಲ್ಲಿ ಅಗ್ನಿಶಾಮಕ ದಳದ ತಾತ್ಕಾಲಿಕ ನಿಲ್ದಾಣ ತೆರೆಯಲಾಗಿದೆ. ಬೋಟ್ ಸೇರಿದಂತೆ ಎಲ್ಲ ಜೀವ ರಕ್ಷಕ ಪರಿಕರಗಳನ್ನು ಪೂರೈಸಲಾಗಿದೆ. ಸ್ಥಳೀಯ ಈಜುಗಾರರನ್ನು, ಸ್ವಯಂಸೇವಕರ ತಂಡಗಳನ್ನು ಗ್ರಾಮ ಮಟ್ಟದಲ್ಲಿ ರಚಿಸಲಾಗಿದೆ. ಸ್ಥಳೀಯರ ಸಹಭಾಗಿತ್ವದಲ್ಲಿ ತಕ್ಷಣ ಸ್ಪಂದಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಯೋಜನೆ ರೂಪಿಸಿ, ಅನುಷ್ಠಾನಗೊಳಿಸಿದ್ದಾರೆ ಎಂದು ಅವರು ಹೇಳಿದರು.

ನವಲಗುಂದ ತಾಲೂಕಿನಲ್ಲಿ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳ ಎರಡು ಹಳ್ಳಗಳು ಹರಿದು, ಇದೇ ತಾಲೂಕಿನಲ್ಲಿ ಕೂಡಿ, ಮುಂದೆ ಗದಗ ಜಿಲ್ಲೆಗೆ ಹೋಗುವುದರಿಂದ ಪ್ರವಾಹ ಹೆಚ್ಚಿನ ಮಟ್ಟದಲ್ಲಿರುತ್ತದೆ. ಅದಕ್ಕಾಗಿ ಪ್ರವಾಹ ಪರಿಸ್ಥಿತಿ ಎದುರಿಸಲು ಪ್ರತ್ಯೇಕ 10 ತಂಡಗಳನ್ನು ರಚಿಸಿ, ಸನ್ನದಗೊಳಿಸಲು ಸಚಿವರು ನಿರ್ದೇಶಿಸಿದರು.

ಈಗಾಗಲೇ ಜನರ ಸಂರಕ್ಷಣೆಗೊಸ್ಕರ ಐದು ತಂಡವನ್ನು ಸಿದ್ಧ ಮಾಡಲಾಗಿದೆ. ಅವರು ನವಲಗುಂದ ತಾಲೂಕಿನಲ್ಲಿ ದಿನದ 24 ಗಂಟೆ ಸಿದ್ಧರಿರುತ್ತಾರೆ. ಒಂದೂ ಜೀವ ಹಾನಿ ಆಗಬಾರದು ಎಂದು ಮೊದಲೆ ವ್ಯವಸ್ಥೆ ಮಾಡಿಕೊಳ್ಳುವ ದೃಷ್ಠಿಯಿಂದ ಐದು ತಂಡಗಳು ಸಿದ್ದಪಡಿಸಲಾಗಿದೆ. ಮುಂದಿನ ಮೂರು ತಿಂಗಳು ಬೇರೆ ಭಾಗದಲ್ಲಿ ಮಳೆ ಆದರೂ ಇಲ್ಲಿನ ಪರಿಸ್ಥಿತಿ ತೊಂದರೆಗೆ ಉಂಟಾಗಬಹುದು ಎಂದು ಎಲ್ಲಿಯವರೆಗೆ ಮಳೆಯ ಆತಂಕ ಇರುತ್ತದೆಯೋ ಅಲ್ಲಿಯವರೆಗೆ ಈ ಐದು ತಂಡಗಳು ಜನರ ಸಂರಕ್ಷಣೆಗೆ ಇರುತ್ತಾರೆ ಎಂದು ಹೇಳಿದರು.

ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದ್ದು, ಇದಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಪ್ರತಿ ಜಿಲ್ಲೆಯಲ್ಲಿರುವ ಉಸ್ತುವಾರಿ ಸಚಿವರು ಮತ್ತು ಶಾಸಕರು, ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ಬರುವ ಪ್ರತಿಯೊಂದು ಪ್ರವಾಹ ಪೀಡಿತ ಪ್ರದೇಶಗಳನ್ನು ಮತ್ತು ಹಳ್ಳಗಳನ್ನು ಪರೀಕ್ಷಿಸಿ, ವರದಿ ಸಲ್ಲಿಸಬೇಕೆಂದು ಹೇಳಿದ್ದಾರೆ. ಅದರಂತೆ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಬೆಣ್ಣಿಹಳ್ಳ ಹಾಗೂ ತುಪ್ಪರಿಹಳ್ಳದ ಪ್ರವಾಹ ಪೀಡತವಾಗಬಹುದಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ್ದಾರೆ. ನವಲಗುಂದ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪ್ರವಾಹ ಪೀಡತ ಪ್ರದೇಶಗಳನ್ನು ತೋರಿಸಿ, ವಿವರಿಸಲಾಗಿದೆ ಎಂದು ಅವರು ಹೇಳಿದರು.

ಪ್ರತಿ ವರ್ಷವೂ ಬೆಣ್ಣಿಹಳ್ಳ ಪ್ರವಾಹವಾಗುವದರಿಂದ, ಇದನ್ನು ನಿಯಂತ್ರಿಸಿ ಶಾಶ್ವತ ಪರಿಹಾರ ಕಾಣಲು ಮಾನ್ಯ ಮುಖ್ಯಮಂತ್ರಿಗಳು ಅಗತ್ಯ ಅನುದಾನ ನೀಡುವ ಭರವಸೆ ನೀಡಿ, ಈಗಾಗಲೇ ಕಳೆದ ಬಜೆಟ್‍ನಲ್ಲಿ ರೂ. 200 ಕೋಟಿ ಅನುದಾನ ನೀಡಿದ್ದಾರೆ. ಕಾಮಗಾರಿಯನ್ನು ಮಳೆಗಾಲದ ಗಂಭೀರತೆ ನೋಡಿಕೊಂಡು ಸಧ್ಯದಲ್ಲಿ ಆರಂಭಿಸಲಾಗುವುದು. ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣಕ್ಕೆ ಹಾಗೂ ಲಭ್ಯ ನೀರಿನ ಸದ್ಭಳಕೆಗೆ ಅಂದಾಜು ರೂ.1600 ಕೋಟಿ ಅನುದಾನದ ಅಗತ್ಯವಿದ್ದು, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿಯವರ ಮೂಲಕ ಕೇಂದ್ರ ಸರ್ಕಾರದ ಅನುದಾನ ತರಲು ವಿನಂತಿಸಲಾಗುವುದು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಅವರು ತಿಳಿಸಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಧಿಕವಾಗಿರುವದರಿಂದ ಜಿಲ್ಲೆಯ ಬಹುತೇಕ ಭಾಗದಲ್ಲಿ ಬಿತ್ತನೆ ಆರಂಭವಾಗಿರುವುದಿಲ್ಲ. ರೈತರಿಗೆ ಅಗತ್ಯವಿರುವ ಬೀಜ, ರಸಗೊಬ್ಬರಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದೆ.

ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ ಹಾಗೂ ಇತರ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರವಾಹದಲ್ಲಿನ ಜೀವ ರಕ್ಷಣೆ ಕುರಿತ ಅಣುಕ ಪ್ರದರ್ಶನ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ನೀಲಮ್ಮನ ಕೆರೆಯಲ್ಲಿ ಪ್ರವಾಹದ ಮುನ್ನಚ್ಚರಿಕೆ ಕುರಿತು ನೀರಿನಲ್ಲಿ ಮುಳುಗಿದವರವನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಅಣುಕ ಪ್ರದರ್ಶನದ ಮೂಲಕ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಾಗರಿಕರ ರಕ್ಷಣೆಯ ತಾಲೀಮು ನಡೆಸಲಾಯಿತು.

ನೀರಿನಲ್ಲಿ ಮುಳುಗಿರುವ ಹಾಗೆ ಸಂದರ್ಭವನ್ನು ಸೃಷ್ಟಿಸುವ ಮೂಲಕ ಕಾಲ್ಪನಿಕ ತುರ್ತು ಪರಿಸ್ಥಿತಿ ಸೃಷ್ಟಿಸಿ, ಅಗ್ನಿಶಾಮಕ ದಳದ ಎಲ್ಲ ಸಿಬ್ಬಂದಿಗಳು ಸೇರಿ ತಾಲೀಮು ನಡೆಸಿದರು.

ಕೇರೆಯಲ್ಲಿ ಇಬ್ಬರು ವ್ಯಕ್ತಿಗಳು ಬಿದ್ದಿರುವ ಹಾಗೆ ಸನ್ನಿವೇಶ ಸೃಷ್ಟಿಮಾಡಲಾಗಿತ್ತು. ಬಿದ್ದವರನ್ನು ತಕ್ಷಣ ರಕ್ಷಿಸಲು ಅಗ್ನಿಶಾಮಕ ದಳದವರು ಹಡಗಿನ ಮುಖಾಂತರ ಹೋಗಿ ಲೈವ್ ಜಾಕೆಟ್‍ನ್ನು ಆ ವ್ಯಕ್ತಿಗಳಿಗೆ ಎಸೆದು ನಂತರ ಅಗ್ನಿಶಾಮಕ ಸಿಬ್ಬಂದಿಯವರು ನೀರಿನಲ್ಲಿ ಇಳಿದು ಅವರನ್ನು ಹಡಗಿನಲ್ಲಿ ಹಾಕಿಕೊಂಡು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಬಂದರು.

ವೈದ್ಯರು ತಕ್ಷಣ ಅವರನ್ನು ಮಲಗಿಸಿ, ಉಸಿರಾಡುತ್ತಿದ್ದಾರೋ ಇಲ್ಲವೋ ಎಂದು ಪರಿಶೀಲಿಸಿ, ಅವರಿಗೆ ಸಿಪಿಆರ್ ಮಾಡಿದರು. ಮತ್ತು ಜನರಿಗೂ ಸಹ ಇಂತಹ ಸಂದರ್ಭದಲ್ಲಿ ಯಾವ ರೀತಿ ಸಿಪಿಆರ್‍ನ್ನು ಮಾಡಬೇಕೆಂದು ತಿಳಿಸಿದರು. ನಂತರ ಆ ವ್ಯಕ್ತಿಯಗಳನ್ನು ಸ್ಟ್ರಚರ್ ಮೂಲಕ ಆಸ್ಪತ್ರೆಗೆ ಸಾಗಿಸಿದರು.

ನವಲಗುಂದ ಕ್ಷೇತ್ರ ವ್ಯಾಪ್ತಿಯಲ್ಲಿನ ಬೆಣ್ಣಿಹಳ್ಳ ಬದಿಯ ಹಳ್ಳಿಗಳ ಜನರಿಗೆ ಮಳೆಗಾಲದಲ್ಲಿ ಅನಾನುಕೂಲ ಆಗಬಹುದು ಎಂದು ಮುಂಜಾಗ್ರತಾ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ನಾವು, ಜಿಲ್ಲಾಡಳಿತ, ಶಾಸಕರು ಸೇರಿ ಜನರಿಗೆ ಜಾಗೃತಿ ಮೂಡಿಸಲು ಅಗ್ನಿಶಾಮಕ ಇಲಾಖೆಯಿಂದ ಅಣುಕು ಪ್ರದರ್ಶನ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೆÇಲೀಸ್ ಅಧೀಕ್ಷಕ ಡಾ. ಗೋಪಾಲ ಎಮ್.ಬ್ಯಾಕೋಡ್, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಬೃಹತ ನೀರಾವರಿ ಇಲಾಖೆಯ ಎಇಇ ರವೀಂದ್ರ ಜಾಲಗಾರ, ನವಲಗುಂದ ತಹಶೀಲ್ದಾರ ಸುಧೀರ ಸಾವುಕಾರ, ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ, ಅಗ್ನಿಶಾಮಕ ದಳದ ಅಧಿಕಾರಿ ಅಮೃತ ಮತ್ತು ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ನವಲಗುಂದ ತಾಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘ಜೆಡಿಎಸ್ 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘ಜೆಡಿಎಸ್ 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ಮೇ.8 ರಂದು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ಪಕ್ಷದ 25 ನೇ ವರ್ಷದ ರಜತ ಮಹೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ.

[ccc_my_favorite_select_button post_id="121780"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]