Floods in Kalyana Karnataka; H.D. Kumaraswamy urges state government to urgently undertake relief work

ಸಿದ್ದರಾಮಯ್ಯನವರೇ, ನೀವೂ ಮತ್ತು ನಿಮ್ಮ ಸಂಗಡಿಗರ ಸದಾರಮೆ ನಾಟಕ ಸಾಕು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಮಳೆ ಹಾಗೂ ನೆರೆ ಪರಿಸ್ಥಿತಿಯಿಂದ ಜನರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಆರೋಪಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರಾವಳಿ ಜನರ ಕಣ್ಣಲ್ಲಿ ಕಣ್ಣೀರ ಬದಲಿಗೆ ರಕ್ತಕಣ್ಣೀರು ಸುರಿಸಲು ಸರಕಾರ ಹಪಾಹಪಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಕರಾವಳಿ ಭಾಗ ಸೇರಿ ರಾಜ್ಯದ ಉದ್ದಗಲಕ್ಕೂ ನಿರಂತರ ಧಾರಾಕಾರ ಮಳೆ ಜನಜೀವನವನ್ನು ಛಿದ್ರಗೊಳಿಸಿದೆ. ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ, ಕರಾವಳಿಗರ ಕಣ್ಣೀರು ಒರೆಸುವ ಬದಲು ಅವರ ಕಣ್ಣಲ್ಲಿ ‘ರಕ್ತಕಣ್ಣೀರು’ ಸುರಿಯಲಿ ಎಂದು ಹಪಾಹಪಿಸುತ್ತಿದೆ! ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನೆ, ರಸ್ತೆ, ಸೇತುವೆಗಳು ಕುಸಿದಿವೆ. ನಗರ, ಪಟ್ಟಣ, ಹಳ್ಳಿಗಳು ಜಲದಿಗ್ಬಂಧನಕ್ಕೆ ಸಿಲುಕಿ ಜನ ವಿಲವಿಲವೆನ್ನುತ್ತಿದ್ದಾರೆ. ಮೂರಾಬಟ್ಟೆಯಾಗಿರುವ ಅವರ ಬದುಕಿನ ರಕ್ಷಣೆಗೆ ಸರಕಾರದ ಕ್ರಮವೇನು? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

‘ಕೋಟೆ ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಬಡಿದುಕೊಂಡರು’ ಎನ್ನುವಂತೆ ಮಳೆಯಲ್ಲಿ ಬದುಕು ಕೊಚ್ಚಿಹೋದ ಮೇಲೆ ಸಚಿವರಿಗೆ ಹೋಗಿ ಎಂದು ಮುಖ್ಯಮಂತ್ರಿ ಅಪ್ಪಣೆ ಕೊಟ್ಟರೆ ಫಲವೇನು? ಮಳೆ ಬರುವ ಮೊದಲು ಏನು ಮಾಡಿದ್ದೀರಿ? ಇದೇನಾ ಜನಪರ ಆಡಳಿತ? ನುಡಿದಂತೆ ನಡೆಯುವುದು ಎಂದರೆ ಹೀಗೆನಾ? ಎಂದು ಸಚಿವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರಕಾರಕ್ಕೆ ಕರಾವಳಿ ಮಳೆ ಬಗ್ಗೆ ಚಿಂತೆ ಇಲ್ಲ. ಆದರೆ, ಕರಾವಳಿ ಕೊಲೆಗಳ ಬಗ್ಗೆ ಎಲ್ಲಿಲ್ಲದ ಕಾಳಜಿ. ಆ ಕಾಳಜಿ ಕೊಲೆಗಳನ್ನು ಹತ್ತಿಕ್ಕಲಿಕ್ಕಲ್ಲ, ಕೊಲೆಗಳಲ್ಲೂ ‘ರಾಜಕೀಯ ಕೂಳು’ ಬೇಯಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರಕಾರ ಹವಣಿಸುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯಅವರನ್ನು ನೇರವಾಗಿ ಪ್ರಶ್ನಿಸಿರುವ ಕೇಂದ್ರ ಸಚಿವರು; ನೀವು ಎರಡು ವರ್ಷದಿಂದ ಅಧಿಕಾರದಲ್ಲಿದ್ದೀರಿ. ಅನ್ಯಪಕ್ಷಗಳನ್ನು ದೂರುತ್ತಾ ಕಾಲಹರಣ ಮಾಡುತ್ತಿದ್ದೀರಿ. ನೀವು ಅಧಿಕಾರಕ್ಕೆ ಬಂದ ಮೇಲೆ ಕರಾವಳಿ ಭಾಗದಲ್ಲಿ ಎಷ್ಟು ಹತ್ಯೆಗಳಾದವು? ಅವನ್ನು ಹತ್ತಿಕ್ಕಲಿಲ್ಲ ಯಾಕೆ? ಒಂದು ಸಮುದಾಯ ನಿಮ್ಮ ಪಕ್ಷಕ್ಕೆ ನೂರಕ್ಕೆ ನೂರರಷ್ಟು ವೋಟು ಕೊಟ್ಟಿದೆಯಲ್ಲವೇ? ಅವರನ್ನು ರಕ್ಷಿಸಲು ವಿಫಲರಾಗಿರುವ ನೀವು, ಇತರೆ ಕೋಮುಗಳ ಮೇಲೆ ವಿಷ ಕಕ್ಕುತ್ತಿದ್ದೀರಿ!! ಎಂದು ದೂರಿದ್ದಾರೆ.

ಸರ್ವ ಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿ ಪರಿವರ್ತಿಸಿದ್ದೀರಿ! ಎಂದು ಅತ್ಯಂತ ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವರು, ಸಿದ್ದರಾಮಯ್ಯನವರೇ, ನೀವೂ ಮತ್ತು ನಿಮ್ಮ ಸಂಗಡಿಗರ ಸದಾರಮೆ ನಾಟಕ ಸಾಕು. ಕೂಡಲೇ ಕರಾವಳಿಗೆ ಭೇಟಿ ನೀಡಿ. ಮಳೆ, ಕೊಲೆಗಳಿಂದ ತತ್ತರಿಸಿರುವ ಅಲ್ಲಿನ ಜನತೆಗೆ ಧೈರ್ಯ ತುಂಬಿ. ಪ್ರಕೃತಿ ಪ್ರೇರಿತ ಮಳೆ ವಿಕೋಪ, ನಿಮ್ಮ ಪಕ್ಷ ಪ್ರೇಷಿತ ‘ಕೊಲೆ ವಿಕೋಪ’ಕ್ಕೆ ಪರಿಹಾರ ಕಂಡುಕೊಳ್ಳಿ. ಮುಖ್ಯಮಂತ್ರಿಯಾಗಿ ಇದು ನಿಮ್ಮ ತಕ್ಷಣದ ಕರ್ತವ್ಯ ಎಂದು ಸಲಹೆ ಮಾಡಿದ್ದಾರೆ.

ರಾಜಕೀಯ

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ:

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ; ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="115331"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!