State V-Karave protest in Doddaballapur condemning Kamal Haasan's statement

ಕಮಲ್​ ಹಾಸನ್ ಹೇಳಿಕೆ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ರಾಜ್ಯ ವಿ-ಕರವೇ ಪ್ರತಿಭಟನೆ

ದೊಡ್ಡಬಳ್ಳಾಪುರ: ತಮಿಳು ನಟ ಕಮಲ್​ ಹಾಸನ್ (Kamal Haasan) ಅವರು ಕನ್ನಡ ಭಾಷೆಯ ಬಗ್ಗೆ​ ವಿವಾದಾತ್ಮಕ ಹೇಳಿಕೆ ಕೊಟ್ಟು ವಿವಾದಕ್ಕೆ ಗುರಿಯಾಗಿದ್ದಾರೆ.

ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ ಎಂದು ಹೇಳಿದ ಅವರ ಹೇಳಿಕೆ ಬಗ್ಗೆ, ಕ್ಷಮೆ ಕೋರದೇ ಇರುವ ಉದ್ಧಟತನ ಈಗ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಕಮಲ್​ ಹಾಸನ್​ ಅವರ ಹೊಸ ಚಿತ್ರ ಥಗ್​ ಲೈಫ್​ ಚಿತ್ರದ ಪ್ರೊಮೋಷನ್ಸ್​ಗೆ ಚಿತ್ರತಂಡ ಕಾರ್ಯಕ್ರಮ ನಡೆಸಿತ್ತು. ಆ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್ ನಟ ಶಿವರಾಜ್ ಕುಮಾರ್ (Shiva Rajkumar) ಸಹ ಭಾಗಿಯಾಗಿದ್ರು.

ಶಿವರಾಜ್​ ಕುಮಾರ್​ ಅವರ ಎದುರಲ್ಲೇ ಕಮಲ್ ಹಾಸನ್ ಹೀಗೆ ಕನ್ನಡದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಕ್ಕೆ ಭಾರಿ ಆಕ್ರೋಶಗಳು ಕೇಳಿ ಬಂದಿವೆ.

ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ(ರಿ) ರಾಜ್ಯ ಸಮಿತಿ ಮತ್ತು ಜಲ್ಲಾ ಸಮಿತಿ ಹಾಗೂ ತಾಲ್ಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥಾಪಕ ಅಧ್ಯಕ್ಷ ಎ.ನಂಜಪ್ಪ, ನಮ್ಮ ಕನ್ನಡ ನಾಡಿಗೆ ಲಿಪಿಯ ಗ್ರಂಥವಿದೆ, 2500 ವರ್ಷಗಳ ಇತಿಹಾಸವಿದೆ. ಕಮಲ್ ಹಾಸನ್ ಒಬ್ಬ ಅವಿವೇಕಿ ಅವನಿಗೆ ಇತಿಹಾಸದ ಬಗ್ಗೆ ಗೊತ್ತಿಲ್ಲ, ತನ್ನ ಚಿತ್ರದ ಪ್ರಚಾರದ ಕಾರ್ಯಕ್ರಮದಲ್ಲಿ ಈ ರೀತಿಯ ಒಂದು ಹೇಳಿಕೆ ನೀಡಿದ್ದಾನೆ.

ಯಾರೇ ಆಗಲಿ ಕನ್ನಡದ ವಿರುದ್ಧ ಕನ್ನಡ ನಾಡಿನ ನೆಲ ಜಲ ಭಾಷೆ ಗಡಿ ವಿರುದ್ಧ ಹಗುರವಾಗಿ ಮಾತನಾಡಿದರೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಹಿಸುವುದಿಲ್ಲ, ಕಮಲ್ ಹಾಸನ್ ಕರ್ನಾಟಕ ಜನತೆಗೆ ಕ್ಷಮೆಯಾಚಿಸಬೇಕು, ಇಲ್ಲವಾದಲ್ಲಿ ನಮ್ಮ ಕನ್ನಡ ನಾಡಿನಲ್ಲಿ ತಮಿಳು ಚಿತ್ರಗಳನ್ನು ಬಿಡುಗಡೆ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂಬ ಎಚ್ಚರಿಕೆ ನೀಡಿದರು.

ಹಿರಿಯ ಹೋರಾಟಗಾರ, ರಾಜ್ಯ ಸಮಿತಿಯ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಹನುಮಂತರೆಡ್ಡಿ ಮಾತನಾಡಿ, ತಮಿಳು ಚಿತ್ರ ನಟ ಕಮಲಹಾಸನ್ ಗೆ ಮಾನ ಮರ್ಯಾದೆ ಇಲ್ಲ. ಇಲ್ಲಿನ ಅನ್ನ ತಿಂದು, ಇಲ್ಲಿನ ನೀರು ಕುಡಿದು, ಕನ್ನಡದ ಬಗ್ಗೆ ಗೊತ್ತಿಲ್ಲದೆ ಪೂರ ಹುಚ್ಚನಂತೆ ಮಾತನಾಡಿದ್ದಾನೆ.

ಇತಿಹಾಸದ ಪುಟಗಳನ್ನು ತೆಗೆದು ನೋಡಲಿ ಅವನಿಗೆ ತಿಳಿಯುವುದು ಯಾವ ಬಾಷೆ ಅಗ್ರಸ್ಥಾನದ ಭಾಷೆ ಎಂದು ತಿಳಿಯುವುದು. ಈ ತರಹದ ಹೇಳಿಕೆಗಳನ್ನು ನೀಡಿದರೆ ಕನ್ನಡಿಗರು ಸಹಿಸುವುದಿಲ್ಲ, ಮುಂದಿನ ದಿನಗಳಲ್ಲಿ ನಿಮ್ಮ ವಿರುದ್ಧ ಉಗ್ರ ಹೋರಾಟದ ಜೊತೆಗೆಷ ಕಾನೂನು ರೀತಿಯ ಕ್ರಮ ಜರುಗಿಸುವ ಕುರಿತು ಎಲ್ಲಾ ರೀತಿಯ ಕ್ರಮಗಳನ್ನು ಜರುಗಿಸುವುದಾಗಿ ನುಡಿದರು.

ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರು ಹೆಚ್. ಮಂಜುನಾಥ್ ಮಾತನಾಡಿ, ಮೇರು ನಟ ಡಾಕ್ಟರ್ ರಾಜಕುಮಾರ್ ಅವರ ಪುತ್ರ ಶಿವರಾಜ್ ಕುಮಾರ್ ರವರ ಮುಂದೆ ಕಮಲ್ ಹಾಸನ್ ಈ ರೀತಿ ಕನ್ನಡದ ಕುರಿತು ಹೇಳಿಕೆ ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಹರಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಪ್ರವೀಣ್, ಬಿ.ನಯಾಜ್ ಖಾನ್, ಗಂಗರಾಜು, ಕುಮುದ, ಶಶಿಕಲಾ, ರೇಷ್ಮಾ, ರಾಗಿಣಿ, ಶಾರದಮ್ಮ, ವಿನಯ್, ಕಿರಣ್, ಲಕ್ಷಣ್, ಮಧು, ಚಂದ್ರಶೇಖರಯ್ಯ, ಪಿರ್ ಪಾಷ ಮತ್ತಿತರರಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!