ಬೆಂಗಳೂರು: ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್ಸಿಬಿ (RCB) ತಂಡಕ್ಕೆ ಶುಭ ಹಾರೈಕೆಗಳು ಎಂದು ಸಿಎಂ ಸಿದ್ದರಾಮಯ್ಯ (Cmsiddaramaiah) ಹೇಳಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಆರ್ಸಿಬಿ ತಂಡದ ಸೋಲು – ಗೆಲುವು, ಏಳು – ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ – ಸ್ಪೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ.
“ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ”, ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.