Celebrities who are fans of RCB

ಈ ಸಲ ಕಪ್ ನಮ್ದು: RCB ಅಭಿಮಾನ ಮೆರೆದ ಗಣ್ಯರು

ಬೆಂಗಳೂರು: ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆ ಯಂತೆಯೇ 18ನೇ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ.

ಈ ಮೂಲಕ ಕಳೆದ 18 ವರ್ಷಗಳಿಂದ ‘ ಈ ಸಲ ಕಪ್ ನಮ್ದೇ’ ಎಂದು ಗುನುಗುನಿಸುತ್ತಿದ್ದ ಅಭಿಮಾನಿಗಳ ಕನಸನ್ನು ‘ಈ ಸಲ ಕಪ್ ನಮ್ದು‘ ಎನ್ನುವಂತೆ ಸಾಕಾರ ಗೊಳಿಸಿದೆ.

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್ ಗಳ ಅಂತರದಲ್ಲಿ ಮಣಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

ಕಪ್ ಕನಸು ನನಸಾಗುತ್ತಿದ್ದಂತೆ ವಿರಾಟ್ ಕೊಹ್ಲಿ ಸಂಭ್ರಮ ತಾಳಲಾರದೆ ಕಣ್ಣೀರಿಟ್ಟರು. ಈ ಗೆಲುವಿಗೆ ಎಬಿ ಡಿವಿಲಯರ್ಸ್, ಕ್ರಿಸ್‌ಗೇಲ್ ಸಾಕ್ಷಿಯಾದರು.

ಗೆಲುವು ಖಚಿತವಾಗುತ್ತಿದ್ದಂತೆ RCB ಅಭಿಮಾನಿಗಳ ತಾಳ್ಮೆಯ ಕಟ್ಟೆ ಹೊಡೆದು ಹೋಗಿದೆ. ನಡು ರಾತ್ರಿಯೇ ರಸ್ತೆಗಿಳಿದು ಪಟಾಹಿ ಕೊಡೆದು, ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿ ಸಂಭಮಾಚರಣೆ ಮಾಡಿದ್ದಾರೆ.

ಈ ಗೆಲುವಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ತಮಿಳುನಾಡಿನ ಎಲ್‌ಕೆ ಸ್ಟಾಲಿನ್, ತೆಲುಗು ಚಿತ್ರ ನಟ ಅಲ್ಲು ಅರವಿಂದ್ ಸೇರಿದಂತೆ ಅನೇಕರು ಶುಭಕೋರಿ ಟ್ವಿಟ್ ಮಾಡಿ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ‌.

ಸಿಎಂ ಸಿದ್ದರಾಮಯ್ಯ

Rrrrrrrrr…. Cccccccc…. Bbbbbbbbb….

ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಟ್ವಿಟ್ ಮಾಡಿದ್ದಾರೆ.

ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ.

ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ.

ಇದು ಇತಿಹಾಸ ಸೃಷ್ಟಿಸಿದ ದಿನ..
ಕೊನೆಯದಾಗಿ, ಈ ಸಲ ಕಪ್ ನಮ್ದೆ ಎಂದಿದ್ದಾರೆ..

ಡಿಸಿಎಂ ಡಿಕೆ ಶಿವಕುಮಾರ್

ಟಿ-20 ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮಣಿಸಿ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

18 ವರ್ಷಗಳ ಕನಸು ನನಸು ಮಾಡಿದ ಆರ್ ಸಿ ಬಿ ತಂಡಕ್ಕೆ ಹೃತ್ಪೂರ್ವಕ ಶುಭಾಶಯ ಹೇಳಿರುವ ಡಿ ಕೆ ಶಿವಕುಮಾರ್ ಅವರು, “ಈ ಸಲ ಕಪ್ ನಮ್ದೇ..” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಟಿವಿ ಪರದೆ ಮೂಲಕ ಪಂದ್ಯ ವೀಕ್ಷಿಸಿದ ಡಿಸಿಎಂ ಅವರು ಆರ್ ಸಿ ಬಿ ಗೆಲ್ಲುತ್ತಿದ್ದಂತೆ ಸಂಭ್ರಮ ಆಚರಿಸಿದರು.

ಈ ಒಂದು ಶುಭ ದಿನ, ಶುಭ ಘಳಿಗೆಗಾಗಿ ಇಡೀ ಕರ್ನಾಟಕ ಹಂಬಲಿಸಿತ್ತು. ಇದನ್ನು ಸಾಕಾರಗೊಳಿಸಿದ ರಜತ್ ಪಟೀದಾರ್ ಹಾಗೂ ವಿರಾಟ್ ಕೊಹ್ಲಿ ಅವರ ತಂಡಕ್ಕೆ ಮಾಧ್ಯಮ ಹೇಳಿಕೆಯಲ್ಲಿ ಶುಭ ಹಾರೈಸಿದ್ದಾರೆ.

ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ

ಐಪಿಎಲ್ 2025 ಟೂರ್ನಿಯಲ್ಲಿ ರೋಚಕ ಗೆಲುವು ಸಾಧಿಸಿರುವ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಸಲ ಕಪ್ ನಮ್ದು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ತಂಡ ಸ್ಪೂರ್ತಿಯಿಂದ ಆಡಿದ ಪಟಿದಾರ್ ಪಡೆಯನ್ನು ಹಾಗೂ ವಿಶೇಷವಾಗಿ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಅಭಿನಂದಿಸಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ ಆರ್ ಸಿಬಿ ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ.

ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಅಭಿನಂದಿಸುತ್ತೇನೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

“ಈ ಸಲ ಕಪ್ ನಮ್ಮದೇ” 💛♥️

ಅಂತಿಮ #IPL ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಪ್ರಚಂಡ ಗೆಲುವಿನ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ #RCB ತಂಡಕ್ಕೆ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಭಕೋರಿದ್ದಾರೆ.

18 ವರ್ಷಗಳ ಕನ್ನಡಿಗರ ಕಾಯುವಿಕೆ, ದೇಶದ ಕ್ರಿಕೆಟ್ ಅಭಿಮಾನಿಗಳ ಹಾರೈಕೆಗೆ ತಕ್ಕ ಪ್ರತಿಫಲ ದೊರೆತಿದೆ. ತಮ್ಮ ನಿರಂತರ ಪರಿಶ್ರಮ ಹಾಗೂ ವಿರೋಚಿತ ಆಟದೊಂದಿಗೆ ಕನ್ನಡಿಗರ ಮನೆ ಮನ ಗೆದ್ದ ಪ್ರತಿಯೊಬ್ಬ ಆರ್.ಸಿ.ಬಿ ಆಟಗಾರರಿಗೂ ಅನಂತ ಅಭಿನಂದನೆಗಳು.

ಈಗ ವಿಶ್ವ ಕ್ರಿಕೆಟ್ ಪ್ರೇಮಿಗಳೂ ಸಂಭ್ರಮಿಸಿ ಹೇಳುತ್ತಿದ್ದಾರೆ ‘ಕಪ್ ನಮ್ಮದೇ’ ಎಂದು‌ ಟ್ವಿಟ್ ಮಾಡಿದ್ದಾರೆ.

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

ವೆಲ್ಡನ್ @RCBTweets! ಅಚ್ಚರಿಗಳಿಂದ ತುಂಬಿದ ಋತುವಿಗೆ ರೋಮಾಂಚಕ ಅಂತ್ಯ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಶುಭಕೋರಿದ್ದಾರೆ.

ವಿರಾಟ್ ಕೊಹ್ಲಿ, ನೀವು ವರ್ಷಗಳಿಂದ ಈ ಕನಸನ್ನು ಹೊತ್ತುಕೊಂಡಿದ್ದೀರಿ ಮತ್ತು ಇಂದು ರಾತ್ರಿ, ಕಿರೀಟವು ನಿಮಗೆ ನಿಜವಾಗಿಯೂ ಸರಿಹೊಂದುತ್ತದೆ. #KingKohli 👑

ಮುಂದಿನ ಋತುವಿನಲ್ಲಿ ಚೆನ್ನೈ ತಂಡ (CSK) ಬಲವಾದ ಪುನರಾಗಮನವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ಅವರು ಟ್ವಿಟ್ ಮಾಡಿದ್ದಾರೆ.

ಅಲ್ಲು ಅರ್ಜುನ್

ಕಾಯುವಿಕೆ ಮುಗಿಯಿತು. “ಈ ಸಲಾ ಕಪ್ ನಮ್ದೇ!” ಎಂದು ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಶುಭಕೋರಿದ್ದಾರೆ.

ಕೊನೆಗೂ! ❤️ ನಾವು 18 ವರ್ಷಗಳಿಂದ ಈ ದಿನಕ್ಕಾಗಿ ಕಾಯುತ್ತಿದ್ದೇವೆ.
ಆರ್‌ಸಿಬಿಗೆ ಅಭಿನಂದನೆಗಳು! ❤️ ಎಂದವರು ಟ್ವಿಟ್ ಮಾಡಿದ್ದಾರೆ.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!