Zilla Panchayat, Taluk Panchayat election tour: B.Y. Vijayendra

ಕಾಲ್ತುಳಿತ ಪ್ರಕರಣ: ಹೈಕೋರ್ಟ್ ಜಡ್ಜ್ ತನಿಖೆ, ರೂ.50 ಲಕ್ಷ ಪರಿಹಾರಕೊಡಲು ವಿಜಯೇಂದ್ರ ಆಗ್ರಹ

ಬೆಂಗಳೂರು: ಆರ್‍‌ಸಿಬಿ (RCB) ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಕುರಿತು ಕಾರ್ಯನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು, ಮೃತರಿಗೆ ಕನಿಷ್ಠ 50 ಲಕ್ಷ ಪರಿಹಾರ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಆಗ್ರಹಿಸಿದ್ದಾರೆ.

ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿ ಸಂಖ್ಯೆ 101ರಲ್ಲಿ ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದರು.

ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ವಿಶ್ಲೇಷಿಸಿದರು.

ತೆಲಂಗಾಣದಲ್ಲಿ ಈಚೆಗೆ ಅಲ್ಲು ಅರ್ಜುನ್ ಅವರ ಸಿನಿಮಾ ಬಿಡುಗಡೆ ವೇಳೆ ತುಳಿತಕ್ಕೆ ಒಳಗಾಗಿ ಸಾವು ನೋವಾಗಿತ್ತು. ಅಲ್ಲಿ ಕೂಡ ಕಾಂಗ್ರೆಸ್ ಸರಕಾರ ಇತ್ತು. ಅಲ್ಲು ಅರ್ಜುನ್ ಅವರನ್ನು ಬಂಧಿಸಲಿಲ್ಲವೇ ಎಂದು ಕೇಳಿದರು.

ನಿನ್ನೆಯ ದುರ್ಘಟನೆಗೆ ರಾಜ್ಯ ಸರಕಾರವೇ ಸಂಪೂರ್ಣ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು. ಲಂಡನ್‍ನಲ್ಲೋ, ದುಬೈನಲ್ಲೋ ಇರುವ ಆರ್‍ಸಿಬಿ ಮಾಲೀಕರು ಕೂಡ ಇದಕ್ಕೆ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು.

ಕೇರಳದಲ್ಲಿ ಆನೆ ತುಳಿತದಿಂದ ಸಾವಾದರೆ ಆನೆ ಕರ್ನಾಟಕದ್ದು ಎಂದು 25 ಲಕ್ಷ ಪರಿಹಾರ ಘೋಷಿಸಿದ್ದರು ಎಂದು ಗಮನ ಸೆಳೆದರು.

ಒಬ್ಬ ಮ್ಯಾಜಿಸ್ಟ್ರೇಟ್ ರಿಂದ ತನಿಖೆ ನಡೆದರೆ ಅಪರಾಧಿ ಸ್ಥಾನದಲ್ಲಿ ಇರುವ ಮುಖ್ಯಮಂತ್ರಿಗಳು, ಮಂತ್ರಿಮಂಡಲದ ಸದಸ್ಯರನ್ನು ತನಿಖೆ ಮಾಡಲಾಗದು ಎಂದು ನುಡಿದರು. ಮುಖ್ಯಮಂತ್ರಿಗಳು ಒಬ್ಬ ಮ್ಯಾಜಿಸ್ಟ್ರೇಟ್ ರಿಂದ ತನಿಖೆಗೆ ಆದೇಶಿಸಿದ್ದಾರೆ. ಅದರ ಅರ್ಥ ಏನು ಎಂದು ಕೇಳಿದರು. ವೈಫಲ್ಯಕ್ಕೆ ಹೊಣೆ ಹೊರಲು ಸರಕಾರ ಸಿದ್ಧವಿಲ್ಲ. ಇವರಿಗೆ ಜನಪರ ಕಾಳಜಿ ಬದಲು ಪ್ರಚಾರದ ಹುಚ್ಚೇ ಪ್ರಮುಖವೆನಿಸಿದೆ ಎಂದು ಟೀಕಿಸಿದರು.

ಆರ್‍ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ 13 ವರ್ಷದ ಬಾಲಕನೂ ಸೇರಿ 11 ಜನರು ಮೃತಪಟ್ಟಿದ್ದಾರೆ. ರಾಜ್ಯ ಸರಕಾರವು ಇಷ್ಟೊಂದು ಆತುರಾತುರವಾಗಿ ಈ ಸಂಭ್ರಮಾಚರಣೆಯನ್ನು ಯಾಕೆ ಆಯೋಜಿಸಿತ್ತು? ಬೇರೆ ಯಾರಾದರೂ ಆಯೋಜಿಸಿದ್ದರೆ ಸರಕಾರ ಅನುಮತಿ ಕೊಟ್ಟದ್ದೇಕೆ? ಪೂರ್ವತಯಾರಿ ಇಲ್ಲದೇ ನಿನ್ನೆಯೇ ಸಂಭ್ರಮಾಚರಣೆಗೆ ಅವಕಾಶ ಮಾಡಿಕೊಟ್ಟಿದ್ದೇಕೆ ಎಂದು ಕೇಳಿದರು.

ಅಮಾನವೀಯ ನಡೆ ಖಂಡನಾರ್ಹ

ಸಾವಿನ ಸಂಖ್ಯೆ ಐದಾರರ ಕುರಿತ ಮಾಹಿತಿ ಟಿ.ವಿಗಳಲ್ಲಿ ಬರುತ್ತಿದ್ದರೂ ಉಪ ಮುಖ್ಯಮಂತ್ರಿಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಪ್ ಮುತ್ತಿಕ್ಕಿದ್ದರು. ವಿಧಾನಸೌಧದಲ್ಲಿ ಆಡಳಿತ ಪಕ್ಷದವರ ಸೆಲ್ಫಿಗಳ ಭರಾಟೆ ಮುಂದುವರೆದಿತ್ತು. ರಾಜ್ಯ ಸರಕಾರದ ಇಷ್ಟೊಂದು ಅಮಾನವೀಯ ನಡವಳಿಕೆ ಖಂಡನಾರ್ಹ ಎಂದು ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ ವಿಧಾನಸೌಧದ ಮುಂದೆ ಸಂಭ್ರಮಾಚರಣೆ ಮಾಡುವ ಅಗತ್ಯ ಏನಿತ್ತು? ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಇರುವಾಗ ವಿಧಾನಸೌಧದ ಮುಂದೆ ಕಾರ್ಯಕ್ರಮ ಆಯೋಜಿಸಲು ಡಿಸಿಎಂ ತೀರ್ಮಾನಿಸಿದರೇ? ಮುಖ್ಯಮಂತ್ರಿ ತಿಳಿಸಿದರೇ? ಯಾವಾಗ ಇದು ತೀರ್ಮಾನ ಆಗಿದೆ? ಎಂದು ಸ್ಪಷ್ಟಪಡಿಸಲು ಆಗ್ರಹಿಸಿದರು.

ದುರ್ಘಟನೆಯ ಬಳಿಕ ಆರ್‍ಸಿಬಿ ಟೀಂ ವಿಧಾನಸೌಧಕ್ಕೆ ಹೊರಡುವ ಮುಂಚಿತವಾಗಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಆರಂಭವಾಗಿತ್ತು. ಒಬ್ಬಿಬ್ಬರು ಸತ್ತ ಮಾಹಿತಿ ಇದ್ದರೂ ವಿಧಾನಸೌಧದ ಮುಂದೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರು ಸಂಭ್ರಮಾಚರಣೆ ಮಾಡುವ ಅವಶ್ಯಕತೆ ಏನಿತ್ತು? ಯಾಕೆ ಅದನ್ನು ಬದಲಿಸಲಿಲ್ಲ? ಸಾವಿನ ಮಾಹಿತಿ ಇದ್ದರೂ ವಿಧಾನಸೌಧದ ಮುಂದೆ ಸಂಭ್ರಮಾಚರಣೆ ಮುಂದುವರೆಸಿದ್ದೇಕೆ ಎಂದು ಕೇಳಿದರು.

30-40 ಸಾವಿರ ಜನರನ್ನು ನಿರೀಕ್ಷಿಸಿದ್ದೆವು. ಒಂದೂವರೆಯಿಂದ 2 ಲಕ್ಷ ಜನ ಬಂದರು ಎಂದು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಹೇಳಿದ್ದು, ಇದು ವೈಫಲ್ಯದ ಸ್ಪಷ್ಟ ಉದಾಹರಣೆ ಎಂದು ವಿಶ್ಲೇಷಿಸಿದರು.

ಸಂಖ್ಯೆಯ ಕುರಿತು ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳಿಗೆ ಸ್ಪಷ್ಟತೆ ಇರಲಿಲ್ಲ. ಆಂಬುಲೆನ್ಸ್, ಮಹಿಳಾ ಪೊಲೀಸರು, ಸ್ಟ್ರೆಚರ್‍ಗಳು, ಸಮರ್ಪಕ ಪೊಲೀಸ್ ವ್ಯವಸ್ಥೆ ಇರಲಿಲ್ಲ ಎಂದ ಅವರು, ವಿಧಾನಸೌಧದ ಬಳಿ ದುರ್ಘಟನೆ ಆಗಿಲ್ಲ; ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಮಾತ್ರ ದುರ್ಘಟನೆ ಆಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದು ನುಣುಚಿಕೊಳ್ಳುವ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಟೀಕಿಸಿದರು.

ಕಬ್ಬನ್ ಪಾರ್ಕ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ಸರಕಾರದ ಬೇಜವಾಬ್ದಾರಿಯಿಂದ 11 ಅಮಾಯಕರು ಪ್ರಾಣ ಕಳಕೊಂಡಿದ್ದಾರೆ. ಇದರ ಸಮರ್ಪಕ ತನಿಖೆ ಆಗಲೇಬೇಕಿದೆ.

ರಾಜ್ಯ ಸರಕಾರ ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ಸಿಟ್ಟಿಂಗ್ ಹೈಕೋರ್ಟ್ ಜಡ್ಜ್‍ರಿಂದ ತನಿಖೆ ಮಾಡಿಸಿ ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ರಾಜ್ಯ ಸರಕಾರ ಸಮರ್ಪಕ ನಿರ್ಧಾರ ಮಾಡಲಿ ಎಂದು ಒತ್ತಾಯವನ್ನು ಮುಂದಿಟ್ಟರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!