Environment Day celebrated at Nalanda High School and Little Angels Anantha Schools

ದೊಡ್ಡಬಳ್ಳಾಪುರ: ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ

ದೊಡ್ಡಬಳ್ಳಾಪುರ; ನಗರದ ಪ್ರತಿಷ್ಠಿತ ಶಾಲೆಗಳಾದ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day) ಪ್ರಯುಕ್ತ ಕಳೆದ ನಾಲ್ಕು ದಿನಗಳಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಈ ದಿನ ಪರಿಸರ ದಿನಾಚರಣೆಯ ಸಮಾರೋಪ ಸಮಾರಂಭವನ್ನು ಶಾಲಾ ಕಾರ್ಯದರ್ಶಿ ಅನುರಾಧ ಕೆ ಆರ್ ಅವರು ಗಿಡ ನೆಟ್ಟು, ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಪರಿಸರ ದಿನಾಚರಣೆ ಜೂನ್ 5 ಮಾತ್ರವಲ್ಲದೆ ನಮ್ಮ ಜೀವನದ ಭಾಗವಾಗಿ ಸದಾ ಕಾಲ ಪರಿಸರ ರಕ್ಷಣೆ ಮಾಡುವುದರ ಬಗ್ಗೆ ನಮ್ಮ ಚಿಂತನೆ ಹಾಗೂ ಕಾಯಕವಾಗಬೇಕು ಎಂದರು.

ಈ ವರ್ಷದ ವಿಶ್ವ ಪರಿಸರ ದಿನಾಚರಣೆಯ ಥೀಮ್ ನಂತೆ ಪ್ಲಾಸ್ಟಿಕ್ ಮಾಲಿನ್ಯವನ್ನು ಅಂತ್ಯ (putting an end to plastic pollution) ಗೊಳಿಸುವ ಬಗ್ಗೆ ಪ್ರತಿಯೊಬ್ಬರೂ ಯೋಚಿಸಿ ಪ್ಲಾಸ್ಟಿಕ್ ಬ್ಯಾಗ್, ಬಾಟಲ್, ತಟ್ಟೆ, ಚಮಚ, ತಿಂಡಿ ಬಾಕ್ಸ್ ಗಳ ಬದಲಿಗೆ ಬಟ್ಟೆ ಚೀಲಗಳು, ಸ್ಟೀಲ್ ಬಾಟಲ್ ,ಚಮಚ, ತಟ್ಟೆ, ತಿಂಡಿ ಬಾಕ್ಸ್ ಗಳನ್ನು ಉಪಯೋಗಿಸಿ ಹಂತ ಹಂತವಾಗಿ ಏಕ ಬಳಕೆ ಪ್ಲಾಸ್ಟಿಕ್ ಮಾರಿಯಿಂದ ಬಿಡುಗಡೆ ಹೊಂದುವಂತೆ ಸಂದೇಶ ನೀಡಿದರು.

ಖ್ಯಾತ ಪರಿಸರ ಲೇಖಕರಾದ ಕೆ ಪಿ ಪೂರ್ಣಚಂದ್ರ ತೇಜಸ್ವಿಯವರು ಹೇಳಿದಂತೆ “ಪ್ರಕೃತಿ ನಮ್ಮ ಬದುಕಿನ ಭಾಗವಲ್ಲ.. ಆದರೆ ನಾವು ಪ್ರಕೃತಿಯ ಒಂದು ಭಾಗ ಅಷ್ಟೇ” ಎಂಬ ಪ್ರಜ್ಞೆ ನಮ್ಮಲ್ಲಿರಬೇಕು ಎಂದರು.

ಕಾರ್ಯಕ್ರಮದ ಅಂಗವಾಗಿ ಸೋಮವಾರದಿಂದ ಪ್ರತಿದಿನವೂ ಪರಿಸರ ಜಾಗೃತಿಯ ಕುರಿತಂತೆ ಗಿಡ ಬೆಳೆಸುವುದು, ಲೀಫ್ ಕ್ರಾಫ್ಟ್, ಪರಿಸರ ಗೀತೆಗಳನ್ನು ಹಾಡುವುದು, ಪರಿಸರ ಜಾಗೃತಿ ಬಗ್ಗೆ ವರ್ಣ ಚಿತ್ರ ಬಿಡಿಸುವುದು ಹಾಗೂ ಪರಿಸರದ ಬಗ್ಗೆ ವಿವಿಧ ವೇಷಭೂಷಣಗಳ ಪ್ರದರ್ಶನಗಳನ್ನು ಶಾಲೆಗಳಲ್ಲಿ ಏರ್ಪಡಿಸಲಾಗಿತ್ತು.

ಪರಿಸರ ಮಾಲಿನ್ಯದಿಂದಾಗುವ ಅನಾಹುತಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ರಚಿಸಿದ್ದ ಬೃಹತ್ ವರ್ಣ ಚಿತ್ರಗಳನ್ನು ಪ್ರದರ್ಶಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ತಾವೇ ಬೆಳೆದ ಗಿಡಗಳನ್ನು ಜೋಡಿಸಿ ಹಸಿರೇ ಉಸಿರು ಮತ್ತು ಗೋ ಗ್ರೀನ್ (Go Green )ಎಂದು ಸಂದೇಶವನ್ನು ಸಾರಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಶಾಲೆಗಳ ಮುಖ್ಯ ಶಿಕ್ಷಕರಾದ ಸುನಿತಾ ಪಿ, ಅನಿತಾ ಕೆ ಪಿ, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!