ಬೆಂಗಳೂರು: ರಾಜ್ಯ ಸರಕಾರ ಹಿಂದೂ ಕಾರ್ಯಕರ್ತರ ಮೇಲೆ ದಾಖಲಿಸುತ್ತಿರುವ ಸುಳ್ಳು ಪ್ರಕರಣಗಳನ್ನು ಕೂಡಲೇ ಹಿಂಪಡೆದುಕೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷದ್ (VHP) ಆಗ್ರಹಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಸಂಯೋಜಕ ಗೋವರ್ಧನ್ ಸಿಂಗ್, ಪ್ರಾಂತ ಸಹ ಕಾರ್ಯದರ್ಶಿ ಸುರೇಶ್, ಬೆಂಗಳೂರು ವಿಭಾಗ ಸಂಯೋಜಕ ಶಿವು, ‘ಹಿಂದೂ ಧರ್ಮದ ಸಂಸ್ಕೃತಿ ಯನ್ನು ರಕ್ಷಣೆ ಮಾಡುತ್ತಿರುವ ಹಿಂದೂ ಕಾರ್ಯಕರ್ತರ ಮೇಲೆ ಸರಕಾರ ದಬ್ಬಾಳಿಕೆ ನಡೆಸುತ್ತಿದೆ. ಪೊಲೀಸರ ಮೂಲಕ ದೌರ್ಜನ್ಯ ಮಾಡುತ್ತಿರುವುದು ಖಂಡನೀಯ.
ಅಲ್ಪಸಂಖ್ಯಾತರ ಪರವಾಗಿರುವ ಸರಕಾರ ಮತಬ್ಯಾಂಕ್ ರಾಜಕಾರಣ ಮಾಡುತ್ತಿದೆ’ ಎಂದು ಆರೋಪಿಸಿದರು ಪೊಲೀಸರು ಹಿಂದೂ ಕಾರ್ಯಕರ್ತರಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರದ್ದವಾಗಿದೆ.
ಇದು ಕೇವಲ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಅಲ್ಲ, ಇದು ನಮ್ಮ ಧರ್ಮ, ಸಂಸ್ಕೃತಿಯ ಮೇಲಿನ ದಾಳಿಯಾಗಿದೆ. ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅಧಿಕಾರಿಗಳ ವಿರುದ್ದವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.