We did not do politics like BJP when Prayagraj was stampede: DK Suresh

ಪ್ರಯಾಗರಾಜ್ ಕಾಲ್ತುಳಿತ ಆದಾಗ ಬಿಜೆಪಿಯವರಂತೆ ನಾವು ರಾಜಕೀಯ ಮಾಡಿಲ್ಲ: ಡಿಕೆ ಸುರೇಶ್

ಬೆಂಗಳೂರು: “ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಜನ ಮೃತಪಟ್ಟಿರುವ ದುರ್ಘಟನೆ ಆಕಸ್ಮಿಕವಾಗಿ ನಡೆದಿದೆ. ಈ ದುರ್ಘಟನೆಗೆ ವಿಷಾದ ವ್ಯಕ್ತಪಡಿಸಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಬೇಕೇ ಹೊರತು ಇದರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು ಎಂದು ನಿಕಟಪೂರ್ವ ಸಂಸದ ಡಿಕೆ ಸುರೇಶ್ (DK Suresh) ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಆರ್ ಸಿವಿ ಗೆಲುವಿನ ಸಂಭ್ರಮದಲ್ಲಿನ ಕಾಲ್ತುಳಿತಕ್ಕೆ ಸರ್ಕಾರವೇ ಹೊಣೆ ಎಂಬ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಸಂಭ್ರಮಾಚರಣೆ ವೇಳೆ ಇಂತಹ ದುರಂತ ಸಂಭವಿಸಬಾರದಿತ್ತು. 18 ವರ್ಷಗಳಲ್ಲಿ ಮೂರು ಬಾರಿ ಐಪಿಎಲ್ ಫೈನಲ್ ತಲುಪಿದ್ದರೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ಬಾರಿ ರಾಜ್ಯದಲ್ಲಿ ಮಾತ್ರವಲ್ಲ ದೇಶದಾದ್ಯಂತ ಈ ಗೆಲುವಿಗೆ ಅಭಿಮಾನಿಗಳು ಪ್ರಾರ್ಥನೆ ಮಾಡಿದ್ದರು.

ಆರ್ ಸಿಬಿ ತಂಡ ಗೆಲುವಿನ ಸಂಭ್ರಮಾಚರಣೆಯಲ್ಲಿ 11 ಮಂದಿ ಮೃತಪಟ್ಟಿರುವುದು ಅವರ ಕುಟುಂಬಕ್ಕೆ ಕರಾಳ ದಿನವಾಗಿದ್ದು, ಕ್ರೀಡಾ ಕ್ಷೇತ್ರಕ್ಕೆ ಕಪ್ಪು ಚುಕ್ಕೆ. ಈ ಕಾರ್ಯಕ್ರಮಕ್ಕೆ ಸ್ವಲ್ಪ ಕಾಲಾವಕಾಶ ಪಡೆದು ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಆಯೋಜಿಸಬೇಕಿತ್ತು. ಆತುರದಲ್ಲಿ ಆದ ಸಂಭ್ರಮಾಚರಣೆ ದುರ್ಘಟನೆಗೆ ಕಾರಣವಾಗಿದೆ. ಇದರ ತನಿಖೆ ಮಾಡಿ ಲೋಪದೋಷಗಳನ್ನು ಸರಿಪಡಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ.

ರಾಜಕೀಯ ಮಾಡುವುದಾದರೆ ಬೇರೆ ದುರಂತಗಳ ಬಗ್ಗೆಯೂ ಚರ್ಚೆ ಮಾಡಬೇಕಾಗುತ್ತದೆ

ಜನರ ದಟ್ಟಣೆ ಊಹಿಸುವಲ್ಲಿ ಸರ್ಕಾರ ವಿಫಲವಾಯಿತೇ ಎಂದು ಕೇಳಿದಾಗ, ಇಷ್ಟೇ ಜನ ಬರುತ್ತಾರೆ ಎಂದು ಊಹಿಸಲು ಯಾರಿಗೂ ಸಾಧ್ಯವಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಸಾಮರ್ಥ್ಯವೇ 35 ಸಾವಿರ. ಆದರೆ ನಿನ್ನೆ ಕ್ರೀಡಾಂಗಣದ ಬಳಿ 2 ಲಕ್ಷ ಜನ ಸೇರಿದ್ದರು. ಹೀಗಾಗಿ ಯಾರ ನಿಯಂತ್ರಣಕ್ಕೂ ಸಿಗಲಿಲ್ಲ.

ಇಂತಹ ಪರಿಸ್ಥಿತಿಯಲ್ಲಿ ಎಷ್ಟೇ ಜನ ಪೊಲೀಸರನ್ನು ನಿಯೋಜಿಸಿದರೂ ನಿಯಂತ್ರಣ ಕಷ್ಟ. ಮಾಧ್ಯಮಗಳ ವರದಿ ಪ್ರಕಾರ 4-5 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಇದು ಆಕಸ್ಮಿಕವಾದ ಘಟನೆ. ಈ ಘಟನೆಯನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ.

ಉತ್ತರ ಪ್ರದೇಶದ ಪ್ರಯಾಗರಾಜ್ ಕಾಲ್ತುಳಿತ ಘಟನೆ ನಡೆದಾಗ ನಾವು ರಾಜಕೀಯ ಮಾಡಲಿಲ್ಲ. ಎಲ್ಲಾ ಮುಂಜಾಗೃತ ಕ್ರಮ ಕೈಗೊಂಡಿದ್ದರೂ ಆದ ದುರ್ಘಟನೆ ನಡೆದಾಗ ಕಾಂಗ್ರೆಸ್ ರಾಜಕೀಯ ಮಾಡಲಿಲ್ಲ.

ಈ ದುರಂತದಲ್ಲಿ ಸರ್ಕಾರದ ಪಾಲುದಾರಿಕೆ ಇದ್ದರೆ ಇವರು ಟೀಕೆ ಮಾಡುವುದು ಸರಿ. ಸರ್ಕಾರದ ಪಾಲುದಾರಿಕೆ ಇಲ್ಲದಿರುವಾಗ ಟೀಕೆ ಮಾಡುವುದು ಎಷ್ಟು ಸರಿ? ಸರ್ಕಾರ ಅಭಿಮಾನಿಗಳಿಗೆ ಬರಬೇಡಿ ಎಂದು ಹೇಳಲು ಸಾಧ್ಯವಿಲ್ಲ.

ಒಟ್ಟಾರೆ ಈ ದುರ್ಘಟನೆ ಆಗಿದ್ದು, ಇದಕ್ಕೆ ವಿಷಾದ ವ್ಯಕ್ತಪಡಿಸಿ, ಮುಂದೆ ಎಲ್ಲರೂ ಸೇರಿ ಈ ರೀತಿ ನಡೆಯದಂತೆ ಎಚ್ಚರ ವಹಿಸಬೇಕಾಗುತ್ತದೆ. ಅದು ನಮ್ಮ ಕರ್ತವ್ಯ. ರಾಜಕೀಯವನ್ನೇ ಮಾಡುತ್ತೇನೆ ಎನ್ನುವುದಾದರೆ, ದೇಶದಲ್ಲಿ ನಡೆದಿರುವ ಇತರೆ ದುರ್ಘಟನೆಗಳ ಬಗ್ಗೆಯೂ ಚರ್ಚೆ ಮಾಡಬೇಕಾಗುತ್ತದೆ.

ದೇಶದ ಪ್ರಧಾನಮಂತ್ರಿಗಳು ಸಂತಾಪ ಸೂಚಿಸಿದ್ದಾರೆ. ಅಭಿಮಾನಿಗಳ ಸಂತೋಷ, ದುಃಖ, ಮೃತರ ಕುಟುಂಬದ ನೋವಿನಲ್ಲಿ ನಾವು ಇರಬೇಕಾಗುತ್ತದೆ ಎಂದು ತಿಳಿಸಿದರು.

ಇದು ಸಚಿವರ ಕುಟುಂಬ ಸದಸ್ಯರ ಕಾರ್ಯಕ್ರಮವಾಗಿತ್ತು ಎಂದು ಕೇಳಿದಾಗ, “ಬಿಜೆಪಿಯವರಿಗೆ ಕೆಲಸ ಇಲ್ಲ, ಇಷ್ಟು ದಿನ ಮಲಗಿದ್ದವರು ಈಗ ಎದ್ದಿದ್ದಾರೆ” ಎಂದು ತಿಳಿಸಿದರು.

ಶಿವಕುಮಾರ್ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೇನು ನೈತಿಕತೆ ಇದೆಯೇ?

ಡಿಕೆ ಶಿವಕುಮಾರ್ ಅವರ ಪ್ರಚಾರದ ಗೀಳಿಗೆ ಈ ದುರಂತ ಸಂಭವಿಸಿದೆ ಎಂಬ ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ನಾಲಿಗೆ ಸುಳ್ಳು ಹೇಳುವುದರಲ್ಲಿ ಎತ್ತಿದ ಕೈ. ಅವರು ರಾತ್ರಿ ಒಂದು ಹೇಳಿದರೆ, ಬೆಳಗ್ಗೆ ಒಂದು ಹೇಳುತ್ತಾರೆ. ಅವರಿಗೆ ಡಿಕೆ ಶಿವಕುಮಾರ್ ಬಗ್ಗೆ ಮಾತನಾಡುವ ನೈತಿಕತೆ ಏನಿದೆ? ನೈತಿಕತೆ ಇಲ್ಲದ ವ್ಯಕ್ತಿ ಹೇಳಿಕೆ ಬಗ್ಗೆ ಮಾತನಾಡುವುದು ಅಸಂಬದ್ಧ.

ಕುಮಾರಸ್ವಾಮಿ ಅವರು ಮಾಡಿರುವ ಅನಾಹುತಗಳಿಗೆ ಮೊದಲು ರಾಜೀನಾಮೆ ನೀಡಲಿ, ಆಮೇಲೆ ಬೇರೆಯವರ ರಾಜೀನಾಮೆ ಕೇಳಲಿ. ಮೋದಿ ಅವರು ಮೊದಲು ಕುಮಾರಸ್ವಾಮಿ ಅವರನ್ನು ಸಂಪುಟದಿಂದ ಕೈಬಿಡಲಿ. ನೈತಿಕತೆ, ಪ್ರಾಮಾಣಿಕತೆ ಭಾಷಣ ಮಾಡುವುದಾದರೆ, ಮೊದಲು ಅವರು ರಾಜೀನಾಮೆ ಕೊಟ್ಟು ಮಾತನಾಡಲಿ.

ಕೇವಲ ಗೀಳಿಗಾಗಿ ಮಾತನಾಡುವುದಲ್ಲ. ಅವರು ಬೆಂಗಳೂರು ಮುಳುಗಿ ಹೋಯಿತು ಎಂದಿದ್ದರು, ಈಗ ಅವರು ಕೂತ ಮೇಲೆ ದೆಹಲಿ ಮುಳುಗಿತು, ಬಾಂಬೆ ಮುಳುಗಿಲ್ಲವೇ. ರಾಜ್ಯದಲ್ಲಿ ಏನೇ ಆದರೂ ಅದಕ್ಕೆ ಡಿಕೆ ಶಿವಕುಮಾರ್ ಕಾರಣವೇ? ಬೇರೆಯವರ ಮನೆಯಲ್ಲಿ ಏನಾದರೂ ಶಿವಕುಮಾರ್ ಕಾರಣ ಎಂದು ಹೇಳುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು. ಅವರನ್ನು ಪ್ರಮುಖ ನಾಯಕ ಎಂದು ಪರಿಗಣಿಸಿ, ಅವರ ಹೇಳಿಕೆ ಬಗ್ಗೆ ಚರ್ಚಿಸುವುದೇ ವ್ಯರ್ಥ ಎಂದು ತಿರುಗೇಟು ನೀಡಿದರು.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!