Advice to the government from a 2-time suspended MLA: Puneet Gowda Mallohalli

2 ಬಾರಿ ಅಮಾನತಾಗಿದ್ದ ಶಾಸಕನಿಂದ ಸರ್ಕಾರಕ್ಕೆ ಉಪದೇಶ: ಪುನೀತ್ ಗೌಡ ಮಲ್ಲೋಹಳ್ಳಿ ಲೇವಡಿ

ದೊಡ್ಡಬಳ್ಳಾಪುರ: ಸ್ಪೀಕರ್ ಸ್ಥಾನಕ್ಕೆ ಅಗೌರವವಾಗಿ ವರ್ತಿಸಿ ಎರಡು ಬಾರಿ ವಿಧಾನಸಭೆ ಅಧಿವೇಶನದಿಂದ ಅಮಾನತ್ತಾಗಿದ್ದ ದೊಡ್ಡಬಳ್ಳಾಪುರ ಶಾಸಕ ಸುದ್ದಿಗೋಷ್ಠಿ ನಡೆಸಿ, ಸರಕಾರಕ್ಕೆ ಉಪದೇಶ ನೀಡುತ್ತಿದ್ದಾರೆ ಎಂದು ದೊಡ್ಡಬಳ್ಳಾಪುರ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಪುನೀತ್ ಗೌಡ ಮಲ್ಲೋಹಳ್ಳಿ (Puneet Gowda Mallohalli) ಲೇವಡಿ ಮಾಡಿದ್ದಾರೆ.

ನಿನ್ನೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ಬುಧವಾರ ನಡೆದ ಆರ್.ಸಿ.ಬಿ ಸಂಭ್ರಮಾಚರಣೆ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಸೇರಿದಂತೆ ಅನೇಕ ವಿಚಾರಗಳ ಕುರಿತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಪುನೀತ್ ಗೌಡ ಮಲ್ಲೋಹಳ್ಳಿ ಅವರು ಶಾಸಕ ಧೀರಜ್ ಮುನಿರಾಜು ಅವರಿಗೆ ತಿರುಗೇಟು ನೀಡಿದ್ದು, ಶಾಸಕನಾಗಿ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾದವರು ಮೊದಲು ತಾಲೂಕಿನ ಜನರ ಸಮಸ್ಯೆಗೆ ದನಿಯಾಗುವತ್ತ ಗಮನ ಹರಿಸಲಿ.

ಪಕ್ಷದ ವರಿಷ್ಠರ ಗಮನ ಸೆಳೆಯಲು ಸ್ಪೀಕರ್ ಮೇಲೆ ಪೇಪರ್ ಎಸೆದು, ಅನುಚಿತವಾಗಿ ವರ್ತಿಸಿ, ಆಯ್ಕೆಯಾದ ಎರಡು ವರ್ಷದಲ್ಲಿ ಎರಡು ಬಾರಿ ಅಮಾನತಾಗಿ ದೊಡ್ಡಬಳ್ಳಾಪುರ ತಾಲೂಕಿನ ಮರ್ಯಾದೆ ಕಳೆದಿರುವ ಇವರು, ರಾಜ್ಯದ ಬಡವರ ಆಶಾಕಿರಣವಾಗಿರುವ ಹೆಮ್ಮೆಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮಾತಾಡುತ್ತಾರೆ.

ಈ ಮುಂಚೆ ಕಳೆದ ಯುಗಾದಿ ಹಬ್ಬದ ದಿನ ನಡೆಸಿದ ಸುದ್ದಿಗೋಷ್ಠಿಯಲ್ಲಿ, ಕಾಂಗ್ರೆಸ್ ಸರ್ಕಾರದಿಂದ ದೊಡ್ಡಬಳ್ಳಾಪುರ ತಾಲೂಕಿಗೆ ಅನ್ಯಾಯವಾಗಿಲ್ಲ, ಸಿದ್ದರಾಮಯ್ಯ ಅಪ್ಪಾಜಿ, ಡಿಕೆ ಶಿವಕುಮಾರ್ ಅವರು ಅನುದಾನ ಕೊಟ್ಟಿದ್ದಾರೆ. ನಾನು ಅವರ ವಿರುದ್ಧ ಮಾತಾಡುವುದಿಲ್ಲ ಎಂದಿದ್ದು ಮರೆತು, ಈಗ ಬೇಕಾಬಿಟ್ಟಿಯಾಗಿ ಮಾತಾಡುವುದು ದೊಡ್ಡಬಳ್ಳಾಪುರ ಬಿಜೆಪಿ ಶಾಸಕರ ದ್ವಿಮುಖ ನೀತಿಗೆ ಸಾಕ್ಷಿಯಾಗಿದೆ.

ಹೌದು RCB ಸಂಭ್ರಮಾಚರಣೆ ವೇಳೆ ದುರ್ಘಟನೆ ಸಂಭವಿಸಿದೆ, ಅಭಿಮಾನಿಗಳ ಉತ್ಸಾಹ, ಉನ್ಮಾದದ ಕಾರಣ ಆಗ ಬಾರದ ಘಟನೆ ಆಗಿದೆ. ಮತ್ತೆ ಈಗಾಗದಂತೆ ಜಾಗ್ರತೆ ಎಲ್ಲರೂ ಸೇರಿ ವಹಿಸೋಣ. ಆದರೆ ಇದರಲ್ಲಿ ರಾಜಕೀಯ ಮಾಡ್ತಾ ತಮ್ಮ ಬೇಳೆ ಬೇಯಿಸಿಕೊಳ್ಳುವ ಮನಸ್ಥಿತಿ ಏತಕೆ.

ಅಲ್ಲಸ್ವಾಮಿ ಕೋಟ್ಯಾಂತರ ಜನರ ಭಾವನೆಗೆ ಕಾಂಗ್ರೆಸ್ ಸರ್ಕಾರದ ಸಿಎಂ, ಡಿಸಿಎಂ ಮನ್ನಣೇ ನೀಡಿದ್ದಾರೆ. ಆದರೆ ಉಗ್ರರ ದಾಳಿಯಲ್ಲಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರೆ, ಮೋದಿ ಅವರು ಬಿಹಾರ ಚುನಾವಣೆ ಪ್ರಚಾರಕ್ಕೆ ಹೋಗಿದ್ರಲ್ವಾ ಅವರು ಮಾತ್ರ ಜನನಾಯಕ ಅಲ್ವಾ, 27 ಜನ ಸತ್ತರೆ ನಿಮಗೆ ಲೆಕ್ಕಾ ಇಲ್ವಾ..? ಅಥವಾ ಮೋದಿ ಅವರಿಗೆ ನೈತಿಕತೆ ಇಲ್ವಾ ಎಂದು ಪುನೀತ್ ಗೌಡ ಮಲ್ಲೋಹಳ್ಳಿ ಪ್ರಶ್ನಿಸಿದರು.

ಆಕಸ್ಮಿಕ ಘಟನೆಯ ಕುರಿತು ಇಷ್ಟೇಲ್ಲಾ ಮಾತಾಡುವ ದೊಡ್ಡಬಳ್ಳಾಪುರ ಶಾಸಕ, ಪಹಲ್ಗಾಮ್ ದಾಳಿ ಬಗ್ಗೆ ಯಾಕ್ ಮಾತಾಡಲ್ಲ, 27 ಜನ ಅಮಾಯಕರ ಸಾವು ಸಾವಲ್ಲವೇ.? ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಸಾವನಪ್ಪಿದವರ ಸಾವು ಸಾವಲ್ಲವೇ ಮಾತಾಡಿ ಅದರ ಬಗ್ಗೆ ಕೂಡ ಎಂದು ಹರಿಹಾಯ್ದರು.

ನಮ್ಮ ದೇಶದ ವೀರ ಯೋಧರು ಪಾಪಿ ಪಾಕಿಸ್ತಾನದ ವಿರುದ್ಧ ದಿಟ್ಟ ಹೋರಾಟ ನಡೆಸುತ್ತಿದ್ದರೆ, ಅಮೇರಿಕಾ ಅಧ್ಯಕ್ಷ ಟ್ರಂಪ್ ಮಾತು ಕೇಳಿ ಕದನ ವಿರಾಮ ಘೋಷಿಸಿದರಲ್ಲ ಪ್ರಧಾನಿ ಮೋದಿ ಅವರು ಇದಕ್ಕೆ ಯಾವ ಕಾರಣಕ್ಕೆ ಉತ್ತರ ಕೊಡಿ.

ಮಾಧ್ಯಮಗಳ ಮುಂದೇ ವಿರಾವೇಷದಿಂದ ಮಾತನಾಡುವ ದೊಡ್ಡಬಳ್ಳಾಪುರ ಶಾಸಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಘಾಟಿ ಸುಬ್ರಹ್ಮಣ್ಯಕ್ಕ ಬಂದಾಗ ದೌಡಾಯಿಸಿ ಶಾಲು ಹೊದಿಸಿ ಸನ್ಮಾನ ಮಾಡಿದ್ದು ಮರೆತೋಯ್ತಾ ಎಂದು ವ್ಯಂಗ್ಯವಾಡಿದರು.

ರಾಜಕೀಯ

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ, ನಮಗೆ ಸಿಕ್ಕ

“ಮೇಕೆದಾಟು (Mekedatu) ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="116123"]
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ

[ccc_my_favorite_select_button post_id="116006"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!