RCB ವಿಜಯೋತ್ಸವದ ವೇಳೆ ಕಾಲ್ತುಳಿತ: BJP-JDS ಆಕ್ರೋಶ, Police ಕಮಿಷನರ್ ಅಮಾನತು ಕುರಿತು ಸಿಎಂ‌ ಸುದೀರ್ಘ ಪ್ರತಿಕ್ರಿಯೆ| Video ನೋಡಿ

Stampede at RCB victory celebration: CM Siddaramaiah's lengthy response

ಮೈಸೂರು: ಆರ್‌ಸಿಬಿ (RCB) ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡು ಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ ಪೊಲೀಸರ ಮೇಲೆ ಸರ್ಕಾರ ಕ್ರಮ ತೆಗೆದುಕೊಂಡಿದೆ.

ಬಿಜೆಪಿ ಹಾಗೂ ಜೆಡಿಎಸ್ ನವರ ಬೇಡಿಕೆಯಂತೆ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ ಎಂದರು. ಅಂತೆಯೇ ಪೊಲೀಸರ ಮೇಲೆಯೂ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ರಮ ಆಯೋಜನೆಗೆ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಷರತ್ತುಬದ್ಧ ಅನುಮತಿ ನೀಡಲಾಗಿತ್ತು ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ

ವಿಧಾನಸೌಧದ ಭದ್ರತೆಯ ದೃಷ್ಟಿಯಿಂದ ಕಾರ್ಯಕ್ರಮ ನಡೆಸದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಪಿಎಆರ್ ನಿಂದ ಷರತ್ತುಬದ್ದ ಅನುಮತಿ ನೀಡಲಾಗಿತ್ತು.

ಷರತ್ತುಗಳನ್ನು ಪಾಲಿಸಿ , ಕಾರ್ಯಕ್ರಮವನ್ನು ಆಯೋಜಿಸುವುದು ಪೊಲೀಸರ ಕರ್ತವ್ಯವಾಗಿತ್ತು. ಈ ಅನುಮತಿ ವಿಧಾನಸೌಧದ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದು, ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆ ಸಂಭವಿಸಿದೆ. ಪೊಲೀಸರು ಸಮರ್ಪಕವಾಗಿ ಇಲ್ಲಿ ಭದ್ರತೆ ಒದಗಿಸಬೇಕಿತ್ತು. ಆದರೆ ಪೊಲೀಸ್ ವ್ಯವಸ್ಥೆ ಸಮರ್ಪಕವಾಗಿರದಿದ್ದ ಕಾರಣ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದರು.

ಕಾಲ್ತುಳಿತದ ಘಟನೆ ಸರ್ಕಾರಕ್ಕೆ ನೋವು ತಂದಿದೆ

ಕಾರ್ಯಕ್ರಮದ ಸ್ಥಳದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಬಗ್ಗೆ ಪೊಲೀಸ್ ಇಲಾಖೆಯಿಂದ ಸಮಗ್ರ ಮಾಹಿತಿ ಕೊಟ್ಟಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಸರ್ಕಾರಿ ಕಾರ್ಯಕ್ರಮವಾಗಿರಲಿಲ್ಲ ಹಾಗೂ ಇದಕ್ಕೆ ನನಗೆ ಆಹ್ವಾನವೂ ಇರಲಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ನವರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ.

ಮಧ್ಯಾಹ್ನ 3.50 ಕ್ಕೆ ಗಾಯಗೊಂಡವರು ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ, ನನಗೆ ಸಂಜೆ 5.45 ಕ್ಕೆ ಕ್ರೀಡಾಂಗಣದ ಬಳಿ ಕಾಲ್ತುಳಿತ ಉಂಟಾಗಿ, ಜನರು ಮೃತಪಟ್ಟಿರುವ ಮಾಹಿತಿ ದೊರೆಯಿತು. ಕಾಲ್ತುಳಿತದ ಘಟನೆ ಘಟಿಸಬಾರದಿತ್ತು. ಬಹಳ ಬೇಸರ ತಂದಿದೆ ಎಂದರು.

ಕ್ರೀಡಾಂಗಣ ಸ್ಥಳಾಂತರದ ಬಗ್ಗೆ ಪರಿಶೀಲಿಸಿ ತೀರ್ಮಾನ

ಕಡಿಮೆ ಸಾರ್ಮಥ್ಯವಿರುವ ಕ್ರಿಕೆಟ್ ಕ್ರೀಡಾಂಗಣವನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಗಮನಹರಿಸಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯ ಸರ್ಕಾರ ಪರಿಶೀಲಿಸಲಿದೆ. ಯಾವ ಸರ್ಕಾರದ ಅವಧಿಯಲ್ಲಿಯೂ ಇಂತಹ ಅಹಿತಕರ ಘಟನೆ ನಡೆಯಬಾರದು. ವೈಯಕ್ತಿಕವಾಗಿ ಈ ಘಟನೆ ಸರ್ಕಾರಕ್ಕೆ ನೋವು ತಂದಿದೆ ಎಂದರು.

ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ

ಈ ಪ್ರಕರಣದಲ್ಲಿ ಪೊಲೀಸರನ್ನು ಬಲಿಪಶು ಮಾಡಲಾಗಿದೆ ಎಂದು ಸಮಾಜಿಕ ಜಾಲತಾಣಗಳಲ್ಲಿ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸ್ ಇಲಾಖೆಯ ಐದು ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. ಗುಪ್ತಚರ ಮುಖ್ಯಸ್ಥರನ್ನು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನು ಬದಲಾಯಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ತಪ್ಪು ಮಾಡಿಲ್ಲ. ಆದರೆ ಘಟನೆ ದು:ಖ ತಂದಿದೆ ಎಂದರು.

ಬಿಜೆಪಿಯ ಇಂತಹ ಇಬ್ಬದಿತನದ ನಿಲುವು

ಹಲವಾರು ವರ್ಷಗಳ ಕನಸನ್ನು ಆರ್ ಸಿ ಬಿ ಕನಸು ನನಸಾಗಿಸಿದ್ದು, ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಅನುಮತಿ ನೀಡದಿರುವುದು ಗೃಹ ಸಚಿವರ ಅಸಮರ್ಪಕತೆಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿಯವರು ಪತ್ರ ಬರೆದಿದ್ದಾರೆ. ಆದರೆ ಈಗ ಘಟನೆಯ ನಂತರ ಸರ್ಕಾರವನ್ನು ದೂರುತ್ತಿದ್ದಾರೆ. ರಾಜ್ಯ ಬಿಜೆಪಿಯ ಇಂತಹ ಇಬ್ಬದಿತನದ ನಿಲುವು ತೋರುತ್ತದೆ ಎಂದರು.

ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ

ಸರ್ಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಹೆಜ್ಜೆ ಇಟ್ಟಿಲ್ಲ. ಹಾಗೂ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ತೆಗೆದುಕೊಂಡಿರುವ ಕಾರಣ, ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ. ಉತ್ತರಪ್ರದೇಶದ ಕುಂಭಮೇಳದ ಸೇತುವೆ ಬಿದ್ದ ಪ್ರಕರಣದಲ್ಲಿ ಜನರು ಮೃತ್ತಪಟ್ಟ ಸಂದರ್ಭದಲ್ಲಿ ಅಲ್ಲಿನ ಮುಖ್ಯಮಂತ್ರಿಗಳು ರಾಜಿನಾಮೆ ನೀಡಿದರೇ? ಬಿಜೆಪಿ ಹಾಗೂ ಜೆಡಿಎಸ್ನವರು ಅಲ್ಲಿನ ಮುಖ್ಯಮಂತ್ರಿಗಳ ರಾಜಿನಾಮೆ ಕೇಳಿದರೇ? ಎಂದು ಮರುಪ್ರಶ್ನಿಸಿದರು.

ಸುಹಾಸ್ ಶೆಟ್ಟಿ ಪ್ರಕರಣದಲ್ಲಿ, ತನಿಖೆಯನ್ನು ಎನ್ ಐ ಎಗೆ ವಹಿಸಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು.

ದಸರಾ ಪೂರ್ವಭಾವಿ ಸಭೆ ಹಾಗೂ ಕೆಡಿಪಿ ಸಭೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಮೈಸೂರಿನಲ್ಲಿ ಕೆಡಿಪಿ ಹಾಗೂ ದಸರಾ ಸಭೆ ನಡೆಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ನರೇಗಾ ಹಣವನ್ನು ಸಕಾಲದಲ್ಲಿ ಬಿಡುಗಡೆ ಮಾಡಲಾಗುವುದಿಲ್ಲ. ಏನ್ ಡಿ ಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಬಯಸಿದಾಗ ರಾಜ್ಯಗಳು ಹಣ ಪಡೆಯಬೇಕಾದ ಪರಿಸ್ಥಿತಿ ಇದೆ ಎಂದರು

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!